ETV Bharat / state

ಪದ್ಮನಾಭನಗರ ಕ್ಷೇತ್ರದಿಂದ ಡಿ.ಕೆ.ಸುರೇಶ್ ಸ್ಪರ್ಧೆ ಬಗ್ಗೆ ಮಾಹಿತಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ

author img

By

Published : Apr 19, 2023, 7:38 PM IST

ಪದ್ಮನಾಭನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬ ವಿಚಾರ ಕುತೂಹಲ ಮೂಡಿಸಿದೆ.

Congress leaders meeting  was held  in Bangalore.
ಬೆಂಗಳೂರಿನಲ್ಲಿ ಖಾಸಗಿ ಹೋಟೆಲ್​​​​ನಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆಯಿತು.

ಬೆಂಗಳೂರು: ಕಾಂಗ್ರೆಸ್ ಪಕ್ಷದ ಬಾಕಿ ಉಳಿದ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆ ಆಗಲಿದ್ದು ಪದ್ಮನಾಭನಗರದಿಂದ ಸಂಸದ ಡಿ.ಕೆ.ಸುರೇಶ್ ಸ್ಪರ್ಧೆ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಖಾಸಗಿ ಹೋಟೆಲ್​​​​ನಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಭೆಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಈಗಾಗಲೇ ಬಹುತೇಕ ಎಲ್ಲ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಬಾಕಿ ಉಳಿದಿರುವ 8 ಕ್ಷೇತ್ರಗಳ ಅಭ್ಯರ್ಥಿಯ ಪಟ್ಟಿ ಇಂದೇ ಪ್ರಕಟವಾಗಲಿದೆ ಎಂದು ತಿಳಿಸಿದರು. ಪದ್ಮನಾಭನಗರ ಕಾಂಗ್ರೆಸ್ ಅಭ್ಯರ್ಥಿ ರಘುನಾಥ ನಾಯ್ಡು ಬಿ ಫಾರ್ಮ್ ಸಮೇತರಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸದ್ಯ ಅಧಿಕೃತ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದ ರಘುನಾಥ್ ನಾಯ್ಡು ನಾಳೆಯೊಳಗೆ ಕ್ಷೇತ್ರದಿಂದ ಸಂಸದ ಡಿ.ಕೆ.ಸುರೇಶ್ ಸ್ಪರ್ಧೆ ಮಾಡುವುದಾದರೆ ತಾವು ಹಿಂದೆ ಸರಿಯಲಿದ್ದಾರೆ.

ಕಾಂಗ್ರೆಸ್ ನಾಯಕರ ಸಭೆ: ಪಕ್ಷದಲ್ಲಿ ಘೋಷಣೆಯಾಗದೇ ಉಳಿದಿರುವ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಸಂಬಂಧ ನಗರದ ಖಾಸಗಿ ಹೋಟೆಲ್​​ನಲ್ಲಿ ರಾಜ್ಯ ನಾಯಕರು ಕಾಂಗ್ರೆಸ್ ವೀಕ್ಷಕರ ಜೊತೆ ಸಭೆ ನಡೆಸಿದ್ದಾರೆ. ಬೆಂಗಳೂರಿನ ಖಾಸಗಿ‌ ಹೊಟೇಲ್​ನಲ್ಲಿ ಸಭೆ ನಡೆದಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಪಕ್ಷದ ವೀಕ್ಷಕರು ಉಪಸ್ಥಿತರಿದ್ದರು. ಚುನಾವಣೆ ಸಿದ್ಧತೆ, ತಂತ್ರಗಾರಿಕೆ ಬಗ್ಗೆ ಸಭೆಯಲ್ಲಿ ಚರ್ಚೆ ಆಗಿದೆ.

ಚುನಾವಣಾ ಅಧಿಕಾರಿಗಳು ಭೇಟಿ, ಪರಿಶೀಲನೆ: ವೀಕ್ಷಕರ ಜೊತೆಗೆ ಕಾಂಗ್ರೆಸ್ ನಾಯಕರ ಸಭೆ ಹಿನ್ನೆಲೆಯಲ್ಲಿ ‌ನಗರದ ಖಾಸಗಿ ಹೋಟೆಲ್​ನಲ್ಲಿ ನಡೆದ ಸಭೆ ಮಧ್ಯೆ ಸ್ಥಳಕ್ಕೆ ಆಗಮಿಸಿದ ಚುನಾವಣಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಭೆಯಲ್ಲಿ ನಡೆಯುವ ಹಾಲ್ ಒಳಗೆ ಹೋಗಲು ಚುನಾವಣಾ ಅಧಿಕಾರಿಗಳ ಪ್ರಯತ್ನ ಮಾಡಿದಾಗ ಕೆಲ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅವರ ಮನವೊಲಿಸಿ ಒಳಗೆ ತೆರಳಿದ ಚುನಾವಣಾ ಆಯೋಗದ ಅಧಿಕಾರಿಗಳು ಹಾಗೂ ಸಿಬ್ಬಂದಿ ಪರಿಶೀಲನೆ ಮುಗಿಸಿ, ವಿಡಿಯೋ ಚಿತ್ರೀಕರಣ ಮಾಡಿಕೊಂಡು ಹೋಗಿದ್ದಾರೆ.

ಪದ್ಮನಾಭನಗರದಿಂದ ಡಿ.ಕೆ.ಸುರೇಶ್ ಕಣಕ್ಕಿಳಿಯುವ ವದಂತಿ ವಿಚಾರಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಮಾತನಾಡಿ, ಈ ವಿಷಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಂಗಳದಲ್ಲಿದೆ. ಇವತ್ತು ರಾತ್ರಿ ಪಟ್ಟಿ ಬಿಡುಗಡೆ ಆಗಲಿದೆ. ಇಂದು ದೇಶದ ಹಲವಾರು ಕಾಂಗ್ರೆಸ್ ನಾಯಕರು ಮೀಟಿಂಗ್‌ನಲ್ಲಿ ಭಾಗವಹಿಸಿದ್ದಾರೆ ಎಂದು ತಿಳಿಸಿದರು.

ಸೂಡಾನ್ ದೇಶದಲ್ಲಿ ಕರ್ನಾಟಕದ ಜನರು ಕಷ್ಟ ಪಡುತ್ತಿದ್ದಾರೆ. ಆದರೆ ಕೇಂದ್ರದ ಸಚಿವರು ಅದರ ಬಗ್ಗೆ ಗಮನ ಹರಿಸುತ್ತಿಲ್ಲ. ಕೇಂದ್ರದ ವಿದೇಶಾಂಗ ಸಚಿವರು ಈ ಬಗ್ಗೆ ಸೈಲೆಂಟ್ ಆಗಿದ್ದಾರೆ. ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ , ಪ್ರಹ್ಲಾದ್ ಜೋಶಿ ರಾಜಕೀಯದಲ್ಲಿ ಬಿಜಿಯಾಗಿದ್ದಾರೆ. ಕರ್ನಾಟಕದ ಜನ ತೊಂದರೆಯಲ್ಲಿದ್ದರೂ ಮುಖ್ಯಮಂತ್ರಿಗಳು ಈ ವಿಚಾರದಲ್ಲಿ ಗಮನ ಹರಿಸುತ್ತಿಲ್ಲ. ಕೂಡಲೇ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಪದ್ಮನಾಭನಗರದಿಂದ ಇಂದು ಕಾಂಗ್ರೆಸ್ ಅಭ್ಯರ್ಥಿಗಳಾಗಿ ರಘುನಾಥ ನಾಯ್ಡು ಹಾಗೂ ಸಂಸದ ಡಿ.ಕೆ.ಸುರೇಶ್ ಇಬ್ಬರಿಂದಲೂ ನಾಮಪತ್ರ ಸಲ್ಲಿಕೆಗೆ ನಿರ್ಧಾರ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಸ್ತಾರೆ. ರಘುನಾಥ ನಾಯ್ಡು ಮತ್ತು ಡಿ.ಕೆ.ಸುರೇಶ್ ಇಬ್ಬರಿಂದಲೂ ಇಂದು ನಾಮಪತ್ರ ಸಲ್ಲಿಕೆಗೆ ನಿರ್ಧಾರ ಮಾಡಿದ್ದೇವೆ. ಹೈಕಮಾಂಡ್ ನಿರ್ಧಾರದ ಬಳಿಕ ಅಂತಿಮ ಕಣದಲ್ಲಿ ಉಳಿಯುವವರು ಯಾರು ಎನ್ನುವುದನ್ನು ನಿರ್ಧರಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ 5ನೇ ಪಟ್ಟಿಯ ಬಹುತೇಕ ಅಭ್ಯರ್ಥಿಗಳು ಇವರು:

ಕೆ.ಆರ್.ಪುರಂ: ಮೋಹನ್ ಬಾಬು
ಮುಳಬಾಗಿಲು: ಡಾ.ಮುದ್ದುಗಂಗಾಧರ್
ಪುಲಕೇಶಿನಗರ: ಎ.ಸಿ.ಶ್ರೀನಿವಾಸ್
ಸಿ.ವಿ.ರಾಮನ್ ನಗರ :ಆನಂದ್ ಕುಮಾರ್
ಮಂಗಳೂರು ಉತ್ತರ: ಇನಾಯಿತ್ ಅಲಿ
ಶಿಡ್ಲಘಟ್ಟ: ರಾಜೀವ್ ಗೌಡ
ಅರಕಲಗೂಡು: ಕೃಷ್ಣೇ ಗೌಡ
ರಾಯಚೂರು ಸಿಟಿ: ಬಾಕಿ ಉಳಿಯಲಿದೆ.

ಇದನ್ನೂಓದಿ: ಸೋಮಣ್ಣ ವರುಣಗೆ ಬಂದಿದ್ದು ಸಿದ್ದುಗೆ ಭಯ ಹುಟ್ಟಿಸಿದೆ: ಪ್ರತಾಪ್ ಸಿಂಹ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಬಾಕಿ ಉಳಿದ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆ ಆಗಲಿದ್ದು ಪದ್ಮನಾಭನಗರದಿಂದ ಸಂಸದ ಡಿ.ಕೆ.ಸುರೇಶ್ ಸ್ಪರ್ಧೆ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಖಾಸಗಿ ಹೋಟೆಲ್​​​​ನಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಭೆಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಈಗಾಗಲೇ ಬಹುತೇಕ ಎಲ್ಲ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಬಾಕಿ ಉಳಿದಿರುವ 8 ಕ್ಷೇತ್ರಗಳ ಅಭ್ಯರ್ಥಿಯ ಪಟ್ಟಿ ಇಂದೇ ಪ್ರಕಟವಾಗಲಿದೆ ಎಂದು ತಿಳಿಸಿದರು. ಪದ್ಮನಾಭನಗರ ಕಾಂಗ್ರೆಸ್ ಅಭ್ಯರ್ಥಿ ರಘುನಾಥ ನಾಯ್ಡು ಬಿ ಫಾರ್ಮ್ ಸಮೇತರಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸದ್ಯ ಅಧಿಕೃತ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದ ರಘುನಾಥ್ ನಾಯ್ಡು ನಾಳೆಯೊಳಗೆ ಕ್ಷೇತ್ರದಿಂದ ಸಂಸದ ಡಿ.ಕೆ.ಸುರೇಶ್ ಸ್ಪರ್ಧೆ ಮಾಡುವುದಾದರೆ ತಾವು ಹಿಂದೆ ಸರಿಯಲಿದ್ದಾರೆ.

ಕಾಂಗ್ರೆಸ್ ನಾಯಕರ ಸಭೆ: ಪಕ್ಷದಲ್ಲಿ ಘೋಷಣೆಯಾಗದೇ ಉಳಿದಿರುವ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಸಂಬಂಧ ನಗರದ ಖಾಸಗಿ ಹೋಟೆಲ್​​ನಲ್ಲಿ ರಾಜ್ಯ ನಾಯಕರು ಕಾಂಗ್ರೆಸ್ ವೀಕ್ಷಕರ ಜೊತೆ ಸಭೆ ನಡೆಸಿದ್ದಾರೆ. ಬೆಂಗಳೂರಿನ ಖಾಸಗಿ‌ ಹೊಟೇಲ್​ನಲ್ಲಿ ಸಭೆ ನಡೆದಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಪಕ್ಷದ ವೀಕ್ಷಕರು ಉಪಸ್ಥಿತರಿದ್ದರು. ಚುನಾವಣೆ ಸಿದ್ಧತೆ, ತಂತ್ರಗಾರಿಕೆ ಬಗ್ಗೆ ಸಭೆಯಲ್ಲಿ ಚರ್ಚೆ ಆಗಿದೆ.

ಚುನಾವಣಾ ಅಧಿಕಾರಿಗಳು ಭೇಟಿ, ಪರಿಶೀಲನೆ: ವೀಕ್ಷಕರ ಜೊತೆಗೆ ಕಾಂಗ್ರೆಸ್ ನಾಯಕರ ಸಭೆ ಹಿನ್ನೆಲೆಯಲ್ಲಿ ‌ನಗರದ ಖಾಸಗಿ ಹೋಟೆಲ್​ನಲ್ಲಿ ನಡೆದ ಸಭೆ ಮಧ್ಯೆ ಸ್ಥಳಕ್ಕೆ ಆಗಮಿಸಿದ ಚುನಾವಣಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಭೆಯಲ್ಲಿ ನಡೆಯುವ ಹಾಲ್ ಒಳಗೆ ಹೋಗಲು ಚುನಾವಣಾ ಅಧಿಕಾರಿಗಳ ಪ್ರಯತ್ನ ಮಾಡಿದಾಗ ಕೆಲ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅವರ ಮನವೊಲಿಸಿ ಒಳಗೆ ತೆರಳಿದ ಚುನಾವಣಾ ಆಯೋಗದ ಅಧಿಕಾರಿಗಳು ಹಾಗೂ ಸಿಬ್ಬಂದಿ ಪರಿಶೀಲನೆ ಮುಗಿಸಿ, ವಿಡಿಯೋ ಚಿತ್ರೀಕರಣ ಮಾಡಿಕೊಂಡು ಹೋಗಿದ್ದಾರೆ.

ಪದ್ಮನಾಭನಗರದಿಂದ ಡಿ.ಕೆ.ಸುರೇಶ್ ಕಣಕ್ಕಿಳಿಯುವ ವದಂತಿ ವಿಚಾರಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಮಾತನಾಡಿ, ಈ ವಿಷಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಂಗಳದಲ್ಲಿದೆ. ಇವತ್ತು ರಾತ್ರಿ ಪಟ್ಟಿ ಬಿಡುಗಡೆ ಆಗಲಿದೆ. ಇಂದು ದೇಶದ ಹಲವಾರು ಕಾಂಗ್ರೆಸ್ ನಾಯಕರು ಮೀಟಿಂಗ್‌ನಲ್ಲಿ ಭಾಗವಹಿಸಿದ್ದಾರೆ ಎಂದು ತಿಳಿಸಿದರು.

ಸೂಡಾನ್ ದೇಶದಲ್ಲಿ ಕರ್ನಾಟಕದ ಜನರು ಕಷ್ಟ ಪಡುತ್ತಿದ್ದಾರೆ. ಆದರೆ ಕೇಂದ್ರದ ಸಚಿವರು ಅದರ ಬಗ್ಗೆ ಗಮನ ಹರಿಸುತ್ತಿಲ್ಲ. ಕೇಂದ್ರದ ವಿದೇಶಾಂಗ ಸಚಿವರು ಈ ಬಗ್ಗೆ ಸೈಲೆಂಟ್ ಆಗಿದ್ದಾರೆ. ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ , ಪ್ರಹ್ಲಾದ್ ಜೋಶಿ ರಾಜಕೀಯದಲ್ಲಿ ಬಿಜಿಯಾಗಿದ್ದಾರೆ. ಕರ್ನಾಟಕದ ಜನ ತೊಂದರೆಯಲ್ಲಿದ್ದರೂ ಮುಖ್ಯಮಂತ್ರಿಗಳು ಈ ವಿಚಾರದಲ್ಲಿ ಗಮನ ಹರಿಸುತ್ತಿಲ್ಲ. ಕೂಡಲೇ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಪದ್ಮನಾಭನಗರದಿಂದ ಇಂದು ಕಾಂಗ್ರೆಸ್ ಅಭ್ಯರ್ಥಿಗಳಾಗಿ ರಘುನಾಥ ನಾಯ್ಡು ಹಾಗೂ ಸಂಸದ ಡಿ.ಕೆ.ಸುರೇಶ್ ಇಬ್ಬರಿಂದಲೂ ನಾಮಪತ್ರ ಸಲ್ಲಿಕೆಗೆ ನಿರ್ಧಾರ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಸ್ತಾರೆ. ರಘುನಾಥ ನಾಯ್ಡು ಮತ್ತು ಡಿ.ಕೆ.ಸುರೇಶ್ ಇಬ್ಬರಿಂದಲೂ ಇಂದು ನಾಮಪತ್ರ ಸಲ್ಲಿಕೆಗೆ ನಿರ್ಧಾರ ಮಾಡಿದ್ದೇವೆ. ಹೈಕಮಾಂಡ್ ನಿರ್ಧಾರದ ಬಳಿಕ ಅಂತಿಮ ಕಣದಲ್ಲಿ ಉಳಿಯುವವರು ಯಾರು ಎನ್ನುವುದನ್ನು ನಿರ್ಧರಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ 5ನೇ ಪಟ್ಟಿಯ ಬಹುತೇಕ ಅಭ್ಯರ್ಥಿಗಳು ಇವರು:

ಕೆ.ಆರ್.ಪುರಂ: ಮೋಹನ್ ಬಾಬು
ಮುಳಬಾಗಿಲು: ಡಾ.ಮುದ್ದುಗಂಗಾಧರ್
ಪುಲಕೇಶಿನಗರ: ಎ.ಸಿ.ಶ್ರೀನಿವಾಸ್
ಸಿ.ವಿ.ರಾಮನ್ ನಗರ :ಆನಂದ್ ಕುಮಾರ್
ಮಂಗಳೂರು ಉತ್ತರ: ಇನಾಯಿತ್ ಅಲಿ
ಶಿಡ್ಲಘಟ್ಟ: ರಾಜೀವ್ ಗೌಡ
ಅರಕಲಗೂಡು: ಕೃಷ್ಣೇ ಗೌಡ
ರಾಯಚೂರು ಸಿಟಿ: ಬಾಕಿ ಉಳಿಯಲಿದೆ.

ಇದನ್ನೂಓದಿ: ಸೋಮಣ್ಣ ವರುಣಗೆ ಬಂದಿದ್ದು ಸಿದ್ದುಗೆ ಭಯ ಹುಟ್ಟಿಸಿದೆ: ಪ್ರತಾಪ್ ಸಿಂಹ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.