ಬೆಂಗಳೂರು: ಎಂತಹ ಪರಿಸ್ಥಿತಿಯಲ್ಲಿಯೂ ಕೂಡ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀರ್ಮಾನ ಮಾಡಿದ್ದಾರೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಶಾಸಕರು ಮತ್ತು ಸಚಿವರ ಸಭೆ ನಂತರ ಪ್ರತಿಕ್ರಿಯಿಸಿದ ಅವರು, ಬೆಂಗಳೂರಿನ ಎಲ್ಲ ಶಾಸಕರನ್ನು ಕರೆದು ಸಿಎಂ ಸಭೆ ಮಾಡಿದ್ದಾರೆ. ಈ ವೇಳೆ ಅನೇಕ ಸಲಹೆಗಳನ್ನು ಪಡೆದಿದ್ದಾರೆ. ಎ ಸಿಂಪ್ಟಮ್ಯಾಟಿಕ್ ಇರುವ ಕೇಸ್ಗಳನ್ನು ಕೋವಿಡ್ ಎಂದು ಪರಿಗಣಿಸಲಾಗಿದೆ. ಅವರೆನ್ನೆಲ್ಲಾ ಕೋವಿಡ್ ಕೇರ್ಗಳಿಗೆ ಸ್ಥಳಾಂತರ ಮಾಡಲಾಗುತ್ತದೆ. ಬೇರೆ ರಾಜ್ಯದಿಂದ ಬಂದವರಲ್ಲಿ ಎ ಸಿಂಪ್ಟಮ್ಯಾಟಿಕ್ ಇರುವವರನ್ನೆಲ್ಲ ಕಡ್ಡಾಯವಾಗಿ ಕ್ವಾರಂಟೈನ್ ಮಾಡಲಾಗುವುದು. ಕೊರೊನಾ ರೋಗಿಗಳಿಗೆ ಉತ್ತಮ ಆಹಾರ ನೀಡಲಾಗುತ್ತದೆ ಎಂದರು.
ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮಾತನಾಡಿ, ಲಾಕ್ಡೌನ್ ಮಾಡದಿದ್ದರೆ ಕಠಿಣ ಸೀಲ್ಡೌನ್ ಮಾಡಿ ಎಂದು ಕೆಲವರು ಸಲಹೆ ನೀಡಿದರು. ಮೆಡಿಕಲ್ ಕಾಲೇಜು ಬೆಡ್ಗಳನ್ನು ಕೊರೊನಾಗಾಗಿ ರಿಸರ್ವ್ ಮಾಡಬೇಕೆಂಬ ಸಲಹೆ ಬಂದಿದೆ. ನಗರದಲ್ಲಿ ಸೀಲ್ಡೌನ್ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲಾಗುತ್ತದೆ ಎಂದರು.