ETV Bharat / state

ಪ್ರಸಕ್ತ ಸಾಲಿನಲ್ಲಿ ವಸತಿ ಯೋಜನೆಯಡಿ ಯಾವುದೇ ಹೊಸ ಮನೆ ಗುರಿ ಇಲ್ಲ: ಆದರೆ ನಿವೇಶನ ಹಂಚಿಕೆ ನಿಂತಿಲ್ಲ!

author img

By

Published : Nov 24, 2020, 3:37 PM IST

ಸರ್ಕಾರ ವಿವಿಧ ವಸತಿ ಯೋಜನೆಗಳಡಿ ಪ್ರತಿ ವರ್ಷ ಆಯವ್ಯಯದಲ್ಲಿ ನಿಗದಿಪಡಿಸುವ ಅನುದಾನಕ್ಕೆ ಅನುಗುಣವಾಗಿ ಗ್ರಾಮ ಪಂಚಾಯಿತಿವಾರು, ಸ್ಥಳೀಯ ಸಂಸ್ಥೆಗಳವಾರು ಮನೆಗಳ ಗುರಿ ನಿಗದಿಪಡಿಸಿ ಗ್ರಾಮ ಸಭೆ/ ಆಶ್ರಯ ಸಮಿತಿಗಳ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಿ ವಸತಿ ರಹಿತರಿಗೆ ವಸತಿ ಸೌಕರ್ಯವನ್ನು ಕಲ್ಪಿಸಿಕೊಡಲು ಕ್ರಮ ಕೈಗೊಳ್ಳುತ್ತದೆ.

bnaglore
ನಿವೇಶನ ಹಂಚಿಕೆ

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಅಂದರೆ 2020-21ರಲ್ಲಿ ರಾಜ್ಯ ಸರ್ಕಾರ ವಸತಿ ಯೋಜನೆಯಡಿ ಯಾವುದೇ ಹೊಸ ಮನೆಗಳ ಗುರಿ ನೀಡಿಲ್ಲ. ಸರ್ಕಾರ ವಿವಿಧ ವಸತಿ ಯೋಜನೆಗಳಡಿ ಪ್ರತಿ ವರ್ಷ ಆಯವ್ಯಯದಲ್ಲಿ ನಿಗದಿಪಡಿಸುವ ಅನುದಾನಕ್ಕೆ ಅನುಗುಣವಾಗಿ ಗ್ರಾಮ ಪಂಚಾಯಿತಿವಾರು, ಸ್ಥಳೀಯ ಸಂಸ್ಥೆಗಳವಾರು ಮನೆಗಳ ಗುರಿ ನಿಗದಿಪಡಿಸಿ ಗ್ರಾಮ ಸಭೆ/ ಆಶ್ರಯ ಸಮಿತಿಗಳ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಿ ವಸತಿ ರಹಿತರಿಗೆ ವಸತಿ ಸೌಕರ್ಯವನ್ನು ಕಲ್ಪಿಸಿಕೊಡಲು ಕ್ರಮ ಕೈಗೊಳ್ಳುತ್ತದೆ.

bnaglore
ವಸತಿ ಯೋಜನೆಯಲ್ಲಿ ಈ ವರ್ಷ ಯಾವುದೇ ಹೊಸ ಮನೆ ಗುರಿ ಇಲ್ಲ

ವಿವಿಧ ವಸತಿ ಯೋಜನೆಗಳಾದ ಬಸವ ವಸತಿ, ಯೋಜನೆ ಡಾ. ಬಿ.ಆರ್.ಅಂಬೇಡ್ಕರ್ ನಿವಾಸ ಯೋಜನೆ ( ಗ್ರಾಮೀಣ ಮತ್ತು ನಗರ ), ವಾಜಪೇಯಿ ನಗರ ವಸತಿ ಯೋಜನೆ, ಮುಖ್ಯಮಂತ್ರಿಗಳ ಒಂದು ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆ, ದೇವರಾಜ ಅರಸು ವಸತಿ ಯೋಜನೆ (ಗ್ರಾಮೀಣ ಮತ್ತು ನಗರ) ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆ (ಗ್ರಾಮೀಣ ಮತ್ತು ನಗರ) ಇವು ರಾಜ್ಯ ಸರ್ಕಾರದ ಯೋಜನೆಗಳಾಗಿವೆ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ (ಗ್ರಾಮೀಣ ಮತ್ತು ನಗರ) ಬರುತ್ತದೆ. ಪ್ರಸಕ್ತ ಆರ್ಥಿಕ ವರ್ಷ ಆರಂಭದ ದಿನಗಳಲ್ಲಿ ಕೋವಿಡ್-19 ಮಾರಕ ಸಾಂಕ್ರಾಮಿಕ ರೋಗ ಭೀತಿ ಹಾಗೂ ನೆರೆ ಸಮಸ್ಯೆಯಿಂದಾಗಿ ಎದುರಾದ ಆರ್ಥಿಕ ಸಂಕಷ್ಟದ ಹಿನ್ನೆಲೆ ಯಾವುದೇ ಹೊಸ ಮನೆಗಳ ಗುರಿ ಕೈಗೆತ್ತಿಕೊಳ್ಳಲು ಸರ್ಕಾರ ತೀರ್ಮಾನಿಸಿದೆ.

ನಿವೇಶನ ಹಂಚಿಕೆ:

2020ರಲ್ಲಿ ಮನೆಗಳನ್ನು ನೀಡದಿದ್ದರೂ ನಿವೇಶನ ನೀಡುವ ಕಾರ್ಯವನ್ನು ಸರ್ಕಾರ ಮುಂದುವರಿಸಿದೆ. 2020ರ ಏಪ್ರಿಲ್​ನಿಂದ ಆಗಸ್ಟ್ ತಿಂಗಳ ನಡುವೆ ಒಟ್ಟು 1,696 ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಇಂದಿರಾ ಗ್ರಾಮೀಣ ವಸತಿ ನಿವೇಶನ ಯೋಜನೆಯಡಿ 1,309 ಹಾಗೂ ವಾಜಪೇಯಿ ನಗರ ನಿವೇಶನ ಯೋಜನೆಯಡಿ 387 ನಿವೇಶನ ಹಂಚಿಕೆ ಮಾಡಲಾಗಿದೆ.

ಫಲಾನುಭವಿಗಳ ಆಯ್ಕೆಗೆ ವಿಧಾನ ಅನುಸರಿಸಲಾಗಿದೆ. ಅದರಲ್ಲಿ ಪ್ರಮುಖವಾಗಿ ಅರ್ಜಿದಾರರು ಕಡ್ಡಾಯವಾಗಿ ಮಹಿಳೆ ಆಗಿರಬೇಕು( ಮಾಜಿ ಯೋಧರು, ವಿಧುರರು, ವಿಶೇಷಚೇತನರು ಹಾಗೂ ಹಿರಿಯ ನಾಗರಿಕರು ಆಗಿದ್ದಲ್ಲಿ ಪುರುಷರು ಸಹ ಅರ್ಹರಾಗಿರುತ್ತಾರೆ). ಅರ್ಜಿದಾರರ ಕುಟುಂಬವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದಿದ್ದು, ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದವರು ಆಗಿದ್ದಲ್ಲಿ 32,000 ರೂ.ಕ್ಕಿಂತ ಕಡಿಮೆ ಇರಬೇಕು. ನಗರ ಪ್ರದೇಶದಲ್ಲಿ 87,600 ರೂ.ಗಿಂತ ಒಳಗಿರಬೇಕು. ಅರ್ಜಿದಾರರ ಕುಟುಂಬವು ವಸತಿ ರಹಿತವಾಗಿದ್ದು, ಅರ್ಜಿದಾರರು ಅಥವಾ ಕುಟುಂಬದ ಯಾವುದೇ ಸದಸ್ಯರ ಹೆಸರಿನಲ್ಲಿ ರಾಜ್ಯದ ಯಾವುದೇ ಭಾಗದಲ್ಲಿ ಸ್ವಂತ ಮನೆ ಇರಬಾರದು. ಶಿಥಿಲಗೊಂಡ ಮನೆ ಅಥವಾ ಗುಡಿಸಲಿನಲ್ಲಿ ವಾಸಿಸುತ್ತಿರುವವರು ಅರ್ಜಿ ಸಲ್ಲಿಕೆಗೆ ಅರ್ಹರಾಗಿರುತ್ತಾರೆ.

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ವಸತಿ ಸೌಲಭ್ಯ ಪಡೆಯಲು ಕೇಂದ್ರ ಸರ್ಕಾರದಿಂದ ನೀಡಲಾದ ಸಾಮಾಜಿಕ ಆರ್ಥಿಕ ಮತ್ತು ಜಾತಿ ಜನಗಣತಿ 2011ರ ಪಟ್ಟಿಯಲ್ಲಿ ಹೆಸರು ಇರಬೇಕು. ಡಾ. ಬಿ.ಆರ್.ಅಂಬೇಡ್ಕರ್ ಆವಾಸ್ ಯೋಜನೆಯಡಿ ವಸತಿ ಸೌಲಭ್ಯ ಪಡೆಯಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಕ್ಕೆ ಸೇರಿದವರಾಗಿರಬೇಕು. ಈ ವರ್ಗದ ವಸತಿರಹಿತರಿಗೆ ಬೇಡಿಕೆ ಆಧಾರಿತವಾಗಿ ವಸತಿ ಕಲ್ಪಿಸುವ ಕಾರ್ಯವನ್ನು ಸರ್ಕಾರ ಮಾಡಲಿದೆ.

ವಸತಿ ಯೋಜನೆ ಸಹಾಯಧನ:

ರಾಜ್ಯದಲ್ಲಿ ಚಾಲ್ತಿಯಲ್ಲಿರುವ ವಿವಿಧ ವಸತಿ ಯೋಜನೆಗಳ ಒದಗಿಸುತ್ತಿರುವ ಸಹಾಯಧನದ ವಿವರ ಇಂತಿದೆ.

ಬಸವ ವಸತಿ ಯೋಜನೆಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಕ್ಕೆ ಘಟಕ ವೆಚ್ಚ ಇರುವುದಿಲ್ಲ. ಸಾಮಾನ್ಯ ವರ್ಗಕ್ಕೆ 1.2 ಲಕ್ಷ ರೂ. ನಿಗದಿಪಡಿಸಲಾಗಿದೆ. ಡಾ. ಬಿ.ಆರ್.ಅಂಬೇಡ್ಕರ್ ನಿವಾಸ ಯೋಜನೆ ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ 1.75 ಲಕ್ಷ ಇದ್ದರೆ, ಸಾಮಾನ್ಯ ವರ್ಗಕ್ಕೆ ಇರುವುದಿಲ್ಲ. ನಗರ ಭಾಗದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಘಟಕ ವೆಚ್ಚ 2 ಲಕ್ಷ ರೂ. ಆಗಿದೆ.

ಪ್ರಧಾನಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಭಾಗದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಕ್ಕೆ 1.5 ಲಕ್ಷ ಇದ್ದರೆ, ಸಾಮಾನ್ಯ ವರ್ಗಕ್ಕೆ 12 ಲಕ್ಷ ರೂಪಾಯಿ ಘಟಕ ವೆಚ್ಚ ಇದೆ. ದೇವರಾಜ್ ಅರಸು ವಸತಿ ಯೋಜನೆ ಗ್ರಾಮೀಣ ಹಾಗೂ ನಗರ ಭಾಗದ ಯೋಜನೆಗೆ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಘಟಕ ವೆಚ್ಚ 1.5 ಲಕ್ಷವಾಗಿದ್ದರೆ, ಸಾಮಾನ್ಯ ವರ್ಗಕ್ಕೆ 1.2 ಲಕ್ಷ ಇದೆ. ವಾಜಪೇಯಿ ನಗರ ವಸತಿ ಯೋಜನೆಯಡಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಕ್ಕೆ ಘಟಕ ವೆಚ್ಚ ಇಲ್ಲವಾದರೆ ಸಾಮಾನ್ಯ ವರ್ಗಕ್ಕೆ 1.2 ಲಕ್ಷ ಇದೆ. ಪ್ರಧಾನಮಂತ್ರಿ ಆವಾಸ್​ ಯೋಜನೆ ನಗರ ವಿಭಾಗದಲ್ಲಿ 1.5 ಲಕ್ಷ ರೂ. ಸಾಮಾನ್ಯ ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಘಟಕ ವೆಚ್ಚ ಇದೆ.

ಫಲಾನುಭವಿಗಳಿಗೆ ಅನುಕೂಲ

ವಸತಿ ಸಚಿವ ವಿ.ಸೋಮಣ್ಣ ಪ್ರಕಾರ, ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್ ನಗರ ಯೋಜನೆಯನ್ನು ರಾಜ್ಯ ಸರ್ಕಾರದ ಯೋಜನೆಗಳಾದ ವಾಜಪೇಯಿ ನಗರ ವಸತಿ ಯೋಜನೆ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ನಿವಾಸ ಯೋಜನೆಯೊಂದಿಗೆ ಸಂಯೋಜನೆಗೊಳಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಇದರಿಂದ ಬಡ ಹಾಗೂ ನಿರ್ಗತಿಕ ಫಲಾನುಭವಿಗಳ ನಿವೇಶನ ಹಾಗೂ ಮನೆ ನಿರ್ಮಿಸಿಕೊಳ್ಳುವ ಕನಸು ಈಡೇರಲಿದೆ.

ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ಒಂದು ಸೂರು ಎಂಬ ಕನಸು ನನಸಾಗಿಸಲು ಹಲವು ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿಗೆ ತರುತ್ತಿದ್ದು, ಮುಂದಿನ ನಾಲ್ಕೈದು ವರ್ಷಗಳಲ್ಲಿ ವಸತಿ ರಹಿತರು ಇರದಂತೆ ಮಾಡುವುದು ಸರ್ಕಾರದ ಗುರಿಯಾಗಿದೆ ಎಂದಿದ್ದಾರೆ.

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಅಂದರೆ 2020-21ರಲ್ಲಿ ರಾಜ್ಯ ಸರ್ಕಾರ ವಸತಿ ಯೋಜನೆಯಡಿ ಯಾವುದೇ ಹೊಸ ಮನೆಗಳ ಗುರಿ ನೀಡಿಲ್ಲ. ಸರ್ಕಾರ ವಿವಿಧ ವಸತಿ ಯೋಜನೆಗಳಡಿ ಪ್ರತಿ ವರ್ಷ ಆಯವ್ಯಯದಲ್ಲಿ ನಿಗದಿಪಡಿಸುವ ಅನುದಾನಕ್ಕೆ ಅನುಗುಣವಾಗಿ ಗ್ರಾಮ ಪಂಚಾಯಿತಿವಾರು, ಸ್ಥಳೀಯ ಸಂಸ್ಥೆಗಳವಾರು ಮನೆಗಳ ಗುರಿ ನಿಗದಿಪಡಿಸಿ ಗ್ರಾಮ ಸಭೆ/ ಆಶ್ರಯ ಸಮಿತಿಗಳ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಿ ವಸತಿ ರಹಿತರಿಗೆ ವಸತಿ ಸೌಕರ್ಯವನ್ನು ಕಲ್ಪಿಸಿಕೊಡಲು ಕ್ರಮ ಕೈಗೊಳ್ಳುತ್ತದೆ.

bnaglore
ವಸತಿ ಯೋಜನೆಯಲ್ಲಿ ಈ ವರ್ಷ ಯಾವುದೇ ಹೊಸ ಮನೆ ಗುರಿ ಇಲ್ಲ

ವಿವಿಧ ವಸತಿ ಯೋಜನೆಗಳಾದ ಬಸವ ವಸತಿ, ಯೋಜನೆ ಡಾ. ಬಿ.ಆರ್.ಅಂಬೇಡ್ಕರ್ ನಿವಾಸ ಯೋಜನೆ ( ಗ್ರಾಮೀಣ ಮತ್ತು ನಗರ ), ವಾಜಪೇಯಿ ನಗರ ವಸತಿ ಯೋಜನೆ, ಮುಖ್ಯಮಂತ್ರಿಗಳ ಒಂದು ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆ, ದೇವರಾಜ ಅರಸು ವಸತಿ ಯೋಜನೆ (ಗ್ರಾಮೀಣ ಮತ್ತು ನಗರ) ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆ (ಗ್ರಾಮೀಣ ಮತ್ತು ನಗರ) ಇವು ರಾಜ್ಯ ಸರ್ಕಾರದ ಯೋಜನೆಗಳಾಗಿವೆ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ (ಗ್ರಾಮೀಣ ಮತ್ತು ನಗರ) ಬರುತ್ತದೆ. ಪ್ರಸಕ್ತ ಆರ್ಥಿಕ ವರ್ಷ ಆರಂಭದ ದಿನಗಳಲ್ಲಿ ಕೋವಿಡ್-19 ಮಾರಕ ಸಾಂಕ್ರಾಮಿಕ ರೋಗ ಭೀತಿ ಹಾಗೂ ನೆರೆ ಸಮಸ್ಯೆಯಿಂದಾಗಿ ಎದುರಾದ ಆರ್ಥಿಕ ಸಂಕಷ್ಟದ ಹಿನ್ನೆಲೆ ಯಾವುದೇ ಹೊಸ ಮನೆಗಳ ಗುರಿ ಕೈಗೆತ್ತಿಕೊಳ್ಳಲು ಸರ್ಕಾರ ತೀರ್ಮಾನಿಸಿದೆ.

ನಿವೇಶನ ಹಂಚಿಕೆ:

2020ರಲ್ಲಿ ಮನೆಗಳನ್ನು ನೀಡದಿದ್ದರೂ ನಿವೇಶನ ನೀಡುವ ಕಾರ್ಯವನ್ನು ಸರ್ಕಾರ ಮುಂದುವರಿಸಿದೆ. 2020ರ ಏಪ್ರಿಲ್​ನಿಂದ ಆಗಸ್ಟ್ ತಿಂಗಳ ನಡುವೆ ಒಟ್ಟು 1,696 ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಇಂದಿರಾ ಗ್ರಾಮೀಣ ವಸತಿ ನಿವೇಶನ ಯೋಜನೆಯಡಿ 1,309 ಹಾಗೂ ವಾಜಪೇಯಿ ನಗರ ನಿವೇಶನ ಯೋಜನೆಯಡಿ 387 ನಿವೇಶನ ಹಂಚಿಕೆ ಮಾಡಲಾಗಿದೆ.

ಫಲಾನುಭವಿಗಳ ಆಯ್ಕೆಗೆ ವಿಧಾನ ಅನುಸರಿಸಲಾಗಿದೆ. ಅದರಲ್ಲಿ ಪ್ರಮುಖವಾಗಿ ಅರ್ಜಿದಾರರು ಕಡ್ಡಾಯವಾಗಿ ಮಹಿಳೆ ಆಗಿರಬೇಕು( ಮಾಜಿ ಯೋಧರು, ವಿಧುರರು, ವಿಶೇಷಚೇತನರು ಹಾಗೂ ಹಿರಿಯ ನಾಗರಿಕರು ಆಗಿದ್ದಲ್ಲಿ ಪುರುಷರು ಸಹ ಅರ್ಹರಾಗಿರುತ್ತಾರೆ). ಅರ್ಜಿದಾರರ ಕುಟುಂಬವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದಿದ್ದು, ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದವರು ಆಗಿದ್ದಲ್ಲಿ 32,000 ರೂ.ಕ್ಕಿಂತ ಕಡಿಮೆ ಇರಬೇಕು. ನಗರ ಪ್ರದೇಶದಲ್ಲಿ 87,600 ರೂ.ಗಿಂತ ಒಳಗಿರಬೇಕು. ಅರ್ಜಿದಾರರ ಕುಟುಂಬವು ವಸತಿ ರಹಿತವಾಗಿದ್ದು, ಅರ್ಜಿದಾರರು ಅಥವಾ ಕುಟುಂಬದ ಯಾವುದೇ ಸದಸ್ಯರ ಹೆಸರಿನಲ್ಲಿ ರಾಜ್ಯದ ಯಾವುದೇ ಭಾಗದಲ್ಲಿ ಸ್ವಂತ ಮನೆ ಇರಬಾರದು. ಶಿಥಿಲಗೊಂಡ ಮನೆ ಅಥವಾ ಗುಡಿಸಲಿನಲ್ಲಿ ವಾಸಿಸುತ್ತಿರುವವರು ಅರ್ಜಿ ಸಲ್ಲಿಕೆಗೆ ಅರ್ಹರಾಗಿರುತ್ತಾರೆ.

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ವಸತಿ ಸೌಲಭ್ಯ ಪಡೆಯಲು ಕೇಂದ್ರ ಸರ್ಕಾರದಿಂದ ನೀಡಲಾದ ಸಾಮಾಜಿಕ ಆರ್ಥಿಕ ಮತ್ತು ಜಾತಿ ಜನಗಣತಿ 2011ರ ಪಟ್ಟಿಯಲ್ಲಿ ಹೆಸರು ಇರಬೇಕು. ಡಾ. ಬಿ.ಆರ್.ಅಂಬೇಡ್ಕರ್ ಆವಾಸ್ ಯೋಜನೆಯಡಿ ವಸತಿ ಸೌಲಭ್ಯ ಪಡೆಯಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಕ್ಕೆ ಸೇರಿದವರಾಗಿರಬೇಕು. ಈ ವರ್ಗದ ವಸತಿರಹಿತರಿಗೆ ಬೇಡಿಕೆ ಆಧಾರಿತವಾಗಿ ವಸತಿ ಕಲ್ಪಿಸುವ ಕಾರ್ಯವನ್ನು ಸರ್ಕಾರ ಮಾಡಲಿದೆ.

ವಸತಿ ಯೋಜನೆ ಸಹಾಯಧನ:

ರಾಜ್ಯದಲ್ಲಿ ಚಾಲ್ತಿಯಲ್ಲಿರುವ ವಿವಿಧ ವಸತಿ ಯೋಜನೆಗಳ ಒದಗಿಸುತ್ತಿರುವ ಸಹಾಯಧನದ ವಿವರ ಇಂತಿದೆ.

ಬಸವ ವಸತಿ ಯೋಜನೆಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಕ್ಕೆ ಘಟಕ ವೆಚ್ಚ ಇರುವುದಿಲ್ಲ. ಸಾಮಾನ್ಯ ವರ್ಗಕ್ಕೆ 1.2 ಲಕ್ಷ ರೂ. ನಿಗದಿಪಡಿಸಲಾಗಿದೆ. ಡಾ. ಬಿ.ಆರ್.ಅಂಬೇಡ್ಕರ್ ನಿವಾಸ ಯೋಜನೆ ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ 1.75 ಲಕ್ಷ ಇದ್ದರೆ, ಸಾಮಾನ್ಯ ವರ್ಗಕ್ಕೆ ಇರುವುದಿಲ್ಲ. ನಗರ ಭಾಗದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಘಟಕ ವೆಚ್ಚ 2 ಲಕ್ಷ ರೂ. ಆಗಿದೆ.

ಪ್ರಧಾನಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಭಾಗದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಕ್ಕೆ 1.5 ಲಕ್ಷ ಇದ್ದರೆ, ಸಾಮಾನ್ಯ ವರ್ಗಕ್ಕೆ 12 ಲಕ್ಷ ರೂಪಾಯಿ ಘಟಕ ವೆಚ್ಚ ಇದೆ. ದೇವರಾಜ್ ಅರಸು ವಸತಿ ಯೋಜನೆ ಗ್ರಾಮೀಣ ಹಾಗೂ ನಗರ ಭಾಗದ ಯೋಜನೆಗೆ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಘಟಕ ವೆಚ್ಚ 1.5 ಲಕ್ಷವಾಗಿದ್ದರೆ, ಸಾಮಾನ್ಯ ವರ್ಗಕ್ಕೆ 1.2 ಲಕ್ಷ ಇದೆ. ವಾಜಪೇಯಿ ನಗರ ವಸತಿ ಯೋಜನೆಯಡಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಕ್ಕೆ ಘಟಕ ವೆಚ್ಚ ಇಲ್ಲವಾದರೆ ಸಾಮಾನ್ಯ ವರ್ಗಕ್ಕೆ 1.2 ಲಕ್ಷ ಇದೆ. ಪ್ರಧಾನಮಂತ್ರಿ ಆವಾಸ್​ ಯೋಜನೆ ನಗರ ವಿಭಾಗದಲ್ಲಿ 1.5 ಲಕ್ಷ ರೂ. ಸಾಮಾನ್ಯ ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಘಟಕ ವೆಚ್ಚ ಇದೆ.

ಫಲಾನುಭವಿಗಳಿಗೆ ಅನುಕೂಲ

ವಸತಿ ಸಚಿವ ವಿ.ಸೋಮಣ್ಣ ಪ್ರಕಾರ, ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್ ನಗರ ಯೋಜನೆಯನ್ನು ರಾಜ್ಯ ಸರ್ಕಾರದ ಯೋಜನೆಗಳಾದ ವಾಜಪೇಯಿ ನಗರ ವಸತಿ ಯೋಜನೆ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ನಿವಾಸ ಯೋಜನೆಯೊಂದಿಗೆ ಸಂಯೋಜನೆಗೊಳಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಇದರಿಂದ ಬಡ ಹಾಗೂ ನಿರ್ಗತಿಕ ಫಲಾನುಭವಿಗಳ ನಿವೇಶನ ಹಾಗೂ ಮನೆ ನಿರ್ಮಿಸಿಕೊಳ್ಳುವ ಕನಸು ಈಡೇರಲಿದೆ.

ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ಒಂದು ಸೂರು ಎಂಬ ಕನಸು ನನಸಾಗಿಸಲು ಹಲವು ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿಗೆ ತರುತ್ತಿದ್ದು, ಮುಂದಿನ ನಾಲ್ಕೈದು ವರ್ಷಗಳಲ್ಲಿ ವಸತಿ ರಹಿತರು ಇರದಂತೆ ಮಾಡುವುದು ಸರ್ಕಾರದ ಗುರಿಯಾಗಿದೆ ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.