ETV Bharat / state

ರಾಜ್ಯದಲ್ಲಿ ಬಿತ್ತನೆ ಬೀಜ, ರಸಗೊಬ್ಬರದ ಕೊರತೆಯಿಲ್ಲ : ಕೃಷಿ ಸಚಿವ ಬಿ ಸಿ ಪಾಟೀಲ್ ಸ್ಪಷ್ಟನೆ

author img

By

Published : Jul 16, 2021, 5:51 PM IST

ಅಕ್ರಮ ಕಂಡು ಬಂದಲ್ಲಿ ರೈತರಿಗೆ ಅನ್ಯಾಯವೆಸಗುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಮುಂಗಾರು ಹಂಗಾಮಿನಲ್ಲಿ ಈ ಬಾರಿ 77 ಲಕ್ಷ ಹೆಕ್ಟೇರ್ ಗುರಿ ಹೊಂದಲಾಗಿದೆ. ಈವರೆಗೆ 44.18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಂದರೆ 57.38% ಶೇಕಡವಾರು ಬಿತ್ತನೆಯಾಗಿದೆ. ಈ ಬಾರಿ 6 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜಕ್ಕೆ ಬೇಡಿಕೆಯಿದೆ..

Minister BC Patel
ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು : ಸೂಕ್ಷ್ಮ ನೀರಾವರಿ ಯೋಜನೆಯಡಿ ಎಲ್ಲಾ ವರ್ಗದ ರೈತರಿಗೆ ಈ ಹಿಂದೆ ನೀಡುತ್ತಿದ್ದ ಸಬ್ಸಿಡಿಯನ್ನು ಅದೇ ಮಾದರಿಯಲ್ಲಿ ಮುಂದುವರೆಸುತ್ತಿರುವುದಾಗಿ ಕೃಷಿ ಸಚಿವ ಬಿ ಸಿ ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಕೃಷಿ ಅಧಿಕಾರಿಗಳ ಜತೆ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ, ಜಿಲ್ಲೆಗಳಲ್ಲಿನ ಪ್ರಗತಿ ಕುರಿತು ಸಭೆ ನಡೆಸಿದರು.

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್​, ಈ ಹಿಂದೆ ಎಲ್ಲಾ ವರ್ಗದ 2 ಹೆಕ್ಟೇರ್ ಭೂಮಿಯುಳ್ಳ ರೈತರಿಗೆ 90%ರಷ್ಟು, 5 ಹೆಕ್ಟೇರ್ ಭೂಮಿಯುಳ್ಳ ರೈತರಿಗೆ 45% ರಷ್ಟು ಸಬ್ಸಿಡಿ ನೀಡಲಾಗುತ್ತಿತ್ತು. ಸಿಎಂ ಆದೇಶದಂತೆ ಇದೀಗ ಮತ್ತೆ ಅದೇ ಹಳೆಯ ಮಾದರಿಯ ಸಬ್ಸಿಡಿಯನ್ನು ಮುಂದುವರೆಸಲಾಗುತ್ತಿದೆ. 5 ಹೆಕ್ಟೇರ್ ಮೇಲ್ಪಟ್ಟ ಯಾವುದೇ ರೈತರಿಗೆ ಸಬ್ಸಿಡಿ ಇರುವುದಿಲ್ಲ ಎಂದರು.

ಬಿತ್ತನೆ ಬೀಜ, ರಸ ಗೊಬ್ಬರದ ಕೊರತೆ ಇಲ್ಲ : ರಾಜ್ಯದಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಕ್ಕೆ ಕೊರತೆ ಇಲ್ಲ. ರೈತರ ಅಗತ್ಯಕ್ಕನುಸಾರವಾಗಿ ರಸಗೊಬ್ಬರ, ಬಿತ್ತನೆ ಬೀಜ ಪೂರೈಸಲು ಇಲಾಖೆ ಸಜ್ಜಾಗಿದೆ. ಕಾಳ ಸಂತೆಯಾಗಲಿ ಅಥವಾ ಅಕ್ರಮ ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿಸುವುದಾಗಲಿ, ಡೀಲರ್ಸ್​ಗಳು ಹಾಗೂ ಮಾರಾಟಗಾರರು ಮಾಡಬಾರದು ಎಂದು ಎಚ್ಚರಿಸಿದರು.

ಅಕ್ರಮ ಕಂಡು ಬಂದಲ್ಲಿ ರೈತರಿಗೆ ಅನ್ಯಾಯವೆಸಗುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಮುಂಗಾರು ಹಂಗಾಮಿನಲ್ಲಿ ಈ ಬಾರಿ 77 ಲಕ್ಷ ಹೆಕ್ಟೇರ್ ಗುರಿ ಹೊಂದಲಾಗಿದೆ. ಈವರೆಗೆ 44.18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಂದರೆ 57.38% ಶೇಕಡವಾರು ಬಿತ್ತನೆಯಾಗಿದೆ. ಈ ಬಾರಿ 6 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜಕ್ಕೆ ಬೇಡಿಕೆಯಿದೆ.

8 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜ ಲಭ್ಯತೆಯಿದ್ದು, 3.12 ಲಕ್ಷ ಕ್ವಿಂಟಾಲ್ ವಿತರಣೆಯಾಗಿದೆ. ಇನ್ನೂ ಸಹ ರೈತ ಸಂಪರ್ಕ ಕೇಂದ್ರಗಳಲ್ಲಿ 0.55 ಲಕ್ಷ ಕ್ವಿಂಟಾಲ್ ದಾಸ್ತಾನು ಇದೆ. ಕಳೆದ ಏಪ್ರಿಲ್​​ನಿಂದ ಜುಲೈವರೆಗೆ ಡಿಎಪಿ, ಎಂಒಪಿ, ಕಾಂಪ್ಲೆಕ್ಸ್, ಯೂರಿಯಾ ಸೇರಿ ಒಟ್ಟು 17,44,448 ಮೆಟ್ರಿಕ್‌ ಟನ್ ರಸಗೊಬ್ಬರಕ್ಕೆ ಬೇಡಿಕೆಯಿದೆ.

ಇದರಲ್ಲಿ 11,54,320 ಆರಂಭಿಕ ಶಿಲ್ಕು, ಏಪ್ರಿಲ್​​ನಿಂದ ಜುಲೈ 16ರವರೆಗೆ 13,41,714 ಮೆಟ್ರಿಕ್‌ ಟನ್ ಸರಬರಾಜು ಆಗಿದೆ. 24,96,034 ಮೆಟ್ರಿಕ್‌ ಟನ್ ಒಟ್ಟು ದಾಸ್ತಾನುಯಿದ್ದು, 14,61,424 ಮೆ.ಟನ್ ಮಾರಾಟ, 10,34,610 ಉಳಿಕೆ ದಾಸ್ತಾನು ಇದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ರೈತರ ಆರ್.ಟಿ.ಸಿ ಪಹಣಿಯಲ್ಲಿ ಬೆಳೆ ಸಮೀಕ್ಷೆ ವಿವರ ನಮೂದು:

ಈ ವರ್ಷ ಮುಂಗಾರು ಹಂಗಾಮಿನಲ್ಲಿ ಸುಮಾರು 2.10 ಕೋಟಿ ತಾಲೂಕುಗಳಲ್ಲಿ ಬೆಳೆ ಸಮೀಕ್ಷೆ ಉದ್ದೇಶ ಹೊಂದಲಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ರೈತರೇ ತಮ್ಮ ಬೆಳೆ ಸಮೀಕ್ಷೆಯನ್ನು ಮೊಬೈಲ್ ಆ್ಯಪ್ ಮೂಲಕ ದಾಖಲಿಸುವಂತೆ ಮನವಿ ಮಾಡಲಾಗಿದೆ. 2021-22ನೇ ಸಾಲಿನಲ್ಲಿ ಪೂರ್ವ ಮುಂಗಾರಿನಲ್ಲಿ ಈವರೆಗೆ 1.09 ಲಕ್ಷ ತಾಲೂಕುಗಳನ್ನು ರೈತರೇ ಸ್ವತಃ ಆ್ಯಪ್​​ನಲ್ಲಿ ಹಾಗೂ 28.96 ಲಕ್ಷ ತಾಲೂಕುಗಳನ್ನು ಖಾಸಗಿ ನಿವಾಸಿಗಳ ಮೂಲಕ ಆ್ಯಪ್​​ನಲ್ಲಿ ಅಪ್ಲೋಡ್ ಮಾಡಲಾಗಿದೆ. ಪ್ರಸಕ್ತ ವರ್ಷದಿಂದ ರೈತರ ಬೆಳೆ ಸಮೀಕ್ಷೆ ಮಾಹಿತಿ ಇನ್ನು ಮುಂದೆ ರೈತರ ಆರ್‌ಟಿಸಿ ಪಹಣಿಯಲ್ಲಿ ಸಹ ನಮೂದಾಗಲಿದೆ ಎಂದರು.

ಬೆಂಗಳೂರು : ಸೂಕ್ಷ್ಮ ನೀರಾವರಿ ಯೋಜನೆಯಡಿ ಎಲ್ಲಾ ವರ್ಗದ ರೈತರಿಗೆ ಈ ಹಿಂದೆ ನೀಡುತ್ತಿದ್ದ ಸಬ್ಸಿಡಿಯನ್ನು ಅದೇ ಮಾದರಿಯಲ್ಲಿ ಮುಂದುವರೆಸುತ್ತಿರುವುದಾಗಿ ಕೃಷಿ ಸಚಿವ ಬಿ ಸಿ ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಕೃಷಿ ಅಧಿಕಾರಿಗಳ ಜತೆ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ, ಜಿಲ್ಲೆಗಳಲ್ಲಿನ ಪ್ರಗತಿ ಕುರಿತು ಸಭೆ ನಡೆಸಿದರು.

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್​, ಈ ಹಿಂದೆ ಎಲ್ಲಾ ವರ್ಗದ 2 ಹೆಕ್ಟೇರ್ ಭೂಮಿಯುಳ್ಳ ರೈತರಿಗೆ 90%ರಷ್ಟು, 5 ಹೆಕ್ಟೇರ್ ಭೂಮಿಯುಳ್ಳ ರೈತರಿಗೆ 45% ರಷ್ಟು ಸಬ್ಸಿಡಿ ನೀಡಲಾಗುತ್ತಿತ್ತು. ಸಿಎಂ ಆದೇಶದಂತೆ ಇದೀಗ ಮತ್ತೆ ಅದೇ ಹಳೆಯ ಮಾದರಿಯ ಸಬ್ಸಿಡಿಯನ್ನು ಮುಂದುವರೆಸಲಾಗುತ್ತಿದೆ. 5 ಹೆಕ್ಟೇರ್ ಮೇಲ್ಪಟ್ಟ ಯಾವುದೇ ರೈತರಿಗೆ ಸಬ್ಸಿಡಿ ಇರುವುದಿಲ್ಲ ಎಂದರು.

ಬಿತ್ತನೆ ಬೀಜ, ರಸ ಗೊಬ್ಬರದ ಕೊರತೆ ಇಲ್ಲ : ರಾಜ್ಯದಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಕ್ಕೆ ಕೊರತೆ ಇಲ್ಲ. ರೈತರ ಅಗತ್ಯಕ್ಕನುಸಾರವಾಗಿ ರಸಗೊಬ್ಬರ, ಬಿತ್ತನೆ ಬೀಜ ಪೂರೈಸಲು ಇಲಾಖೆ ಸಜ್ಜಾಗಿದೆ. ಕಾಳ ಸಂತೆಯಾಗಲಿ ಅಥವಾ ಅಕ್ರಮ ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿಸುವುದಾಗಲಿ, ಡೀಲರ್ಸ್​ಗಳು ಹಾಗೂ ಮಾರಾಟಗಾರರು ಮಾಡಬಾರದು ಎಂದು ಎಚ್ಚರಿಸಿದರು.

ಅಕ್ರಮ ಕಂಡು ಬಂದಲ್ಲಿ ರೈತರಿಗೆ ಅನ್ಯಾಯವೆಸಗುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಮುಂಗಾರು ಹಂಗಾಮಿನಲ್ಲಿ ಈ ಬಾರಿ 77 ಲಕ್ಷ ಹೆಕ್ಟೇರ್ ಗುರಿ ಹೊಂದಲಾಗಿದೆ. ಈವರೆಗೆ 44.18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಂದರೆ 57.38% ಶೇಕಡವಾರು ಬಿತ್ತನೆಯಾಗಿದೆ. ಈ ಬಾರಿ 6 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜಕ್ಕೆ ಬೇಡಿಕೆಯಿದೆ.

8 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜ ಲಭ್ಯತೆಯಿದ್ದು, 3.12 ಲಕ್ಷ ಕ್ವಿಂಟಾಲ್ ವಿತರಣೆಯಾಗಿದೆ. ಇನ್ನೂ ಸಹ ರೈತ ಸಂಪರ್ಕ ಕೇಂದ್ರಗಳಲ್ಲಿ 0.55 ಲಕ್ಷ ಕ್ವಿಂಟಾಲ್ ದಾಸ್ತಾನು ಇದೆ. ಕಳೆದ ಏಪ್ರಿಲ್​​ನಿಂದ ಜುಲೈವರೆಗೆ ಡಿಎಪಿ, ಎಂಒಪಿ, ಕಾಂಪ್ಲೆಕ್ಸ್, ಯೂರಿಯಾ ಸೇರಿ ಒಟ್ಟು 17,44,448 ಮೆಟ್ರಿಕ್‌ ಟನ್ ರಸಗೊಬ್ಬರಕ್ಕೆ ಬೇಡಿಕೆಯಿದೆ.

ಇದರಲ್ಲಿ 11,54,320 ಆರಂಭಿಕ ಶಿಲ್ಕು, ಏಪ್ರಿಲ್​​ನಿಂದ ಜುಲೈ 16ರವರೆಗೆ 13,41,714 ಮೆಟ್ರಿಕ್‌ ಟನ್ ಸರಬರಾಜು ಆಗಿದೆ. 24,96,034 ಮೆಟ್ರಿಕ್‌ ಟನ್ ಒಟ್ಟು ದಾಸ್ತಾನುಯಿದ್ದು, 14,61,424 ಮೆ.ಟನ್ ಮಾರಾಟ, 10,34,610 ಉಳಿಕೆ ದಾಸ್ತಾನು ಇದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ರೈತರ ಆರ್.ಟಿ.ಸಿ ಪಹಣಿಯಲ್ಲಿ ಬೆಳೆ ಸಮೀಕ್ಷೆ ವಿವರ ನಮೂದು:

ಈ ವರ್ಷ ಮುಂಗಾರು ಹಂಗಾಮಿನಲ್ಲಿ ಸುಮಾರು 2.10 ಕೋಟಿ ತಾಲೂಕುಗಳಲ್ಲಿ ಬೆಳೆ ಸಮೀಕ್ಷೆ ಉದ್ದೇಶ ಹೊಂದಲಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ರೈತರೇ ತಮ್ಮ ಬೆಳೆ ಸಮೀಕ್ಷೆಯನ್ನು ಮೊಬೈಲ್ ಆ್ಯಪ್ ಮೂಲಕ ದಾಖಲಿಸುವಂತೆ ಮನವಿ ಮಾಡಲಾಗಿದೆ. 2021-22ನೇ ಸಾಲಿನಲ್ಲಿ ಪೂರ್ವ ಮುಂಗಾರಿನಲ್ಲಿ ಈವರೆಗೆ 1.09 ಲಕ್ಷ ತಾಲೂಕುಗಳನ್ನು ರೈತರೇ ಸ್ವತಃ ಆ್ಯಪ್​​ನಲ್ಲಿ ಹಾಗೂ 28.96 ಲಕ್ಷ ತಾಲೂಕುಗಳನ್ನು ಖಾಸಗಿ ನಿವಾಸಿಗಳ ಮೂಲಕ ಆ್ಯಪ್​​ನಲ್ಲಿ ಅಪ್ಲೋಡ್ ಮಾಡಲಾಗಿದೆ. ಪ್ರಸಕ್ತ ವರ್ಷದಿಂದ ರೈತರ ಬೆಳೆ ಸಮೀಕ್ಷೆ ಮಾಹಿತಿ ಇನ್ನು ಮುಂದೆ ರೈತರ ಆರ್‌ಟಿಸಿ ಪಹಣಿಯಲ್ಲಿ ಸಹ ನಮೂದಾಗಲಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.