ETV Bharat / state

ಭಾರತ ಜಾಗತಿಕ ಶಕ್ತಿಯಾಗಲು ಕೇಂದ್ರದಿಂದ 20 ಲಕ್ಷ ಕೋಟಿ ರೂ. ಪ್ಯಾಕೇಜ್​​​: ಶೆಟ್ಟರ್​

author img

By

Published : May 12, 2020, 11:32 PM IST

ದೇಶದ ಒಟ್ಟಾರೆ ಜಿಡಿಪಿ ಪೈಕಿ ಶೇ. 10ರಷ್ಟು ಆರ್ಥಿಕ ಪ್ಯಾಕೇಜ್‌ ಘೋಷಣೆ ಮಾಡಿರುವುದು ಒಳ್ಳೆಯ ಬೆಳವಣಿಗೆ. ಮುಂಬರುವ ದಿನಗಳಲ್ಲಿ ಕೇಂದ್ರದ ಆರ್ಥಿಕ ಸಚಿವರು ನೀಡುವ ಯೋಜನೆಯ ರೂಪುರೇಷೆಗಳು ಇನ್ನಷ್ಟು ಆಶಾದಾಯಕವಾಗಿರಲಿವೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

This is the package for India to become a global : Shetter
ಭಾರತ ಜಾಗತಿಕ ಶಕ್ತಿ ಆಗಲು ಒಂದೊಳ್ಳೆ ಪ್ಯಾಕೇಜ್​​​: ಜಗದೀಶ್​ ಶೆಟ್ಟರ್​

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ 20 ಲಕ್ಷ ಕೋಟಿ ರೂ. ಆರ್ಥಿಕ ಪ್ಯಾಕೇಜ್‌ ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ವೇಗ ನೀಡಲಿದೆ. ಗುಡಿ, ಗೃಹ, ಸಣ್ಣ, ಮಧ್ಯಮ ಹಾಗೂ ಬೃಹತ್‌ ಕೈಗಾರಿಕೆಗಳ ಚೇತರಿಕೆಗೂ ಪೂರಕವಾಗಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಅಭಿಪ್ರಾಯಪಟ್ಟಿದ್ದಾರೆ.

ಕೊರೊನಾ ಪ್ರೇರಿತ ಲಾಕ್​​​ಡೌನ್‌ ವೇಳೆ ಇಂತಹ ಪ್ಯಾಕೇಜ್‌ ಅವಶ್ಯಕತೆ ಬಹಳಷ್ಟಿತ್ತು. ದಿಗ್ಬಂಧನದಿಂದ ತೊಂದರೆಗೆ ಒಳಗಾದ ಕೈಗಾರಿಕಾ ವಲಯದ ಚೇತರಿಕೆಗೆ ವಿಶೇಷ ಸೌಲಭ್ಯ ನೀಡುವುದು ಅಗತ್ಯವಾಗಿತ್ತು ಎಂದರು.

ಭಾರತ ಜಾಗತಿಕ ಶಕ್ತಿಯಾಗಿ ಬೆಳೆಯಲು ಈ ಪ್ಯಾಕೇಜ್ ಸದಾವಕಾಶ‌ ಒದಗಿಸಲಿದೆ. ಸ್ಥಳೀಯ ಉತ್ಪಾದನೆಗೆ ಹೆಚ್ಚಿನ ಬಲ ನೀಡುವ ಮೂಲಕ ಆತ್ಮ ನಿರ್ಭರ ಭಾರತ್‌ ಯೋಜನೆಯು ದೇಶದ ಎಲ್ಲಾ ವರ್ಗದ ಅಭಿವೃದ್ಧಿಗೆ ಒತ್ತು ನೀಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ 20 ಲಕ್ಷ ಕೋಟಿ ರೂ. ಆರ್ಥಿಕ ಪ್ಯಾಕೇಜ್‌ ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ವೇಗ ನೀಡಲಿದೆ. ಗುಡಿ, ಗೃಹ, ಸಣ್ಣ, ಮಧ್ಯಮ ಹಾಗೂ ಬೃಹತ್‌ ಕೈಗಾರಿಕೆಗಳ ಚೇತರಿಕೆಗೂ ಪೂರಕವಾಗಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಅಭಿಪ್ರಾಯಪಟ್ಟಿದ್ದಾರೆ.

ಕೊರೊನಾ ಪ್ರೇರಿತ ಲಾಕ್​​​ಡೌನ್‌ ವೇಳೆ ಇಂತಹ ಪ್ಯಾಕೇಜ್‌ ಅವಶ್ಯಕತೆ ಬಹಳಷ್ಟಿತ್ತು. ದಿಗ್ಬಂಧನದಿಂದ ತೊಂದರೆಗೆ ಒಳಗಾದ ಕೈಗಾರಿಕಾ ವಲಯದ ಚೇತರಿಕೆಗೆ ವಿಶೇಷ ಸೌಲಭ್ಯ ನೀಡುವುದು ಅಗತ್ಯವಾಗಿತ್ತು ಎಂದರು.

ಭಾರತ ಜಾಗತಿಕ ಶಕ್ತಿಯಾಗಿ ಬೆಳೆಯಲು ಈ ಪ್ಯಾಕೇಜ್ ಸದಾವಕಾಶ‌ ಒದಗಿಸಲಿದೆ. ಸ್ಥಳೀಯ ಉತ್ಪಾದನೆಗೆ ಹೆಚ್ಚಿನ ಬಲ ನೀಡುವ ಮೂಲಕ ಆತ್ಮ ನಿರ್ಭರ ಭಾರತ್‌ ಯೋಜನೆಯು ದೇಶದ ಎಲ್ಲಾ ವರ್ಗದ ಅಭಿವೃದ್ಧಿಗೆ ಒತ್ತು ನೀಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.