ಬೆಂಗಳೂರು: ನಗರದ ಕೆ ಆರ್ ಮಾರುಕಟ್ಟೆಯಲ್ಲಿ ಜನರು ಕೊರೊನಾ ಸೋಂಕು ಹರಡುವಿಕೆಯ ಯಾವುದೇ ಭಯವಿಲ್ಲದಂತೆ ವರ್ತಿಸುತ್ತಿದ್ದಾರೆ. ಖರೀದಿ ವೇಳೆ ಮಾಸ್ಕ್ ಸರಿಯಾಗಿ ಧರಿಸದೆ, ಸಾಮಾಜಿಕ ಅಂತರವನ್ನೂ ಮರೆತು ಗುಂಪು ಗುಂಪಾಗಿ ಸೇರಿರುವ ದೃಶ್ಯ ಕಂಡುಬಂದಿದೆ.
ರಾಜ್ಯಾದ್ಯಂತ ಇಂದು ಮಹಾನವಮಿ ಸಂಭ್ರಮ ಮನೆ ಮಾಡಿದೆ. ಆಯುಧ ಪೂಜೆ ಹಿನ್ನೆಲೆ ಜನರು ಸಡಗರದಿಂದ ಮಾರುಕಟ್ಟೆಯಲ್ಲಿ ಖರೀದಿಯಲ್ಲಿ ಮುಳುಗಿದ್ದಾರೆ. ಆದರೆ, ಇನ್ನೇನು ಈಗಷ್ಟೇ ಸೋಂಕು ಸ್ವಲ್ಪ ನಿಯಂತ್ರಣಕ್ಕೆ ಬರುತ್ತಿದೆ ಎನ್ನುವಷ್ಟರಲ್ಲಿ ಜನ ಮೈ ಮರೆತು ಕೊರೊನಾ ನಿಯಮಗಳನ್ನು ಗಾಳಿಯಲ್ಲಿ ತೂರಿ ಖರೀದಿಯಲ್ಲಿ ಬ್ಯುಸಿಯಾಗಿದ್ದಾರೆ.
ಇತ್ತ, ಬಿಬಿಎಂಪಿಯ ಮಾರ್ಷಲ್ ಗಳು ಜನರನ್ನು ನಿಯಂತ್ರಿಸಲು ಅಖಾಡಕ್ಕೆ ಇಳಿದರೂ ಯಾವುದೇ ಪ್ರಯೋಜನವಾಗಲಿಲ್ಲ.