ETV Bharat / state

ಜ.12ರಿಂದ ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮ: ಹೆಚ್.ವಿಶ್ವನಾಥ್ - ಮಾಜಿ ಸಚಿವ ಹೆಚ್.ವಿಶ್ವನಾಥ್

ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮವನ್ನು ಜನವರಿ 12ರಿಂದ 14ರವರೆಗೆ ಮೂರು ದಿನ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಣಿ ಬ್ರಿಡ್ಜ್​​ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಹೆಚ್.ವಿಶ್ವನಾಥ್ ತಿಳಿಸಿದ್ದಾರೆ.

three-day-milk-culture-glory-program-from-jan-12-said-by-former-minister-hvishwanath
ಮಾಜಿ ಸಚಿವ ಹೆಚ್.ವಿಶ್ವನಾಥ್
author img

By

Published : Jan 8, 2020, 10:14 AM IST

ಬೆಂಗಳೂರು: ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮವನ್ನು ಜನವರಿ 12ರಿಂದ 14ರವರೆಗೆ ಮೂರು ದಿನ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಣಿ ಬ್ರಿಡ್ಜ್​​ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಹೆಚ್.ವಿಶ್ವನಾಥ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮಾಜಿ ಸಚಿವ ಹೆಚ್.ವಿಶ್ವನಾಥ್, ಕಲಬುರಗಿ ವಿಭಾಗದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಶ್ರೀ ಸಿದ್ದರಾಮನಂದ ಸ್ವಾಮೀಜಿ ಅವರು 12 ವರ್ಷಗಳಿಂದ ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮ ನಡೆಸಿಕೊಂಡು ಬಂದಿದ್ದಾರೆ. ಅದೇ ರೀತಿ ಈ ವರ್ಷವೂ ಕಾರ್ಯಕ್ರಮ ಆಯೋಜಿಸಲಿದ್ದು, ಜ. 13ರಂದು ಆದಿವಾಸಿ ಸಂಸ್ಕೃತಿ ಸಮಾವೇಶವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಹಾಗೆಯೇ ಈ ಕಾರ್ಯಕ್ರಮದ ಸಾನ್ನಿಧ್ಯವನ್ನು ಕನಕಪುರ ಪೀಠದ ಶಿವಾನಂದಪುರಿ ಸ್ವಾಮೀಜಿ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಮಾಜಿ ಸಚಿವ ಹೆಚ್.ವಿಶ್ವನಾಥ್

ಕಲಬುರಗಿ ವಿಭಾಗದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಶ್ರೀ ಸಿದ್ದರಾಮನಂದ ಸ್ವಾಮೀಜಿ ಮಾತನಾಡಿ, ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಹಾಲುಮತ ಕೇಂದ್ರದ ವತಿಯಿಂದ ನಡೆಯುವ ಈ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ನಿರಂಜನಾನಂದಪುರಿ ಸ್ವಾಮೀಜಿ, ಶಿವಾನಂದಪುರಿ ಸ್ವಾಮೀಜಿ, ಈಶ್ವರಾನಂದಪುರಿ ಸ್ವಾಮೀಜಿ ವಹಿಸಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಫಗ್ಗನ್ ಸಿಂಗ್ ಕುಲಸ್ತೆ, ರೇಣುಕಾಸಿಂಗ್ ಸರುತಾ, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮಲು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕೊಡಗಿನ ಮುತ್ತಮ್ಮ ಎಂಬುವರಿಗೆ ಸಿದ್ಧಶ್ರೀ ಪ್ರಶಸ್ತಿ, ಜಯದೇವ ಮೆಣಸಗಿ ಅವರಿಗೆ ಹಾಲುಮತ ಭಾಸ್ಕರ ಪ್ರಶಸ್ತಿ ಹಾಗೂ ಕೆ.ಎಂ.ಮೆತ್ರಿ ಅವರಿಗೆ ಕನಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸ್ವಾಮೀಜಿ ಮಾಹಿತಿ ನೀಡಿದರು.

ಬೆಂಗಳೂರು: ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮವನ್ನು ಜನವರಿ 12ರಿಂದ 14ರವರೆಗೆ ಮೂರು ದಿನ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಣಿ ಬ್ರಿಡ್ಜ್​​ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಹೆಚ್.ವಿಶ್ವನಾಥ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮಾಜಿ ಸಚಿವ ಹೆಚ್.ವಿಶ್ವನಾಥ್, ಕಲಬುರಗಿ ವಿಭಾಗದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಶ್ರೀ ಸಿದ್ದರಾಮನಂದ ಸ್ವಾಮೀಜಿ ಅವರು 12 ವರ್ಷಗಳಿಂದ ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮ ನಡೆಸಿಕೊಂಡು ಬಂದಿದ್ದಾರೆ. ಅದೇ ರೀತಿ ಈ ವರ್ಷವೂ ಕಾರ್ಯಕ್ರಮ ಆಯೋಜಿಸಲಿದ್ದು, ಜ. 13ರಂದು ಆದಿವಾಸಿ ಸಂಸ್ಕೃತಿ ಸಮಾವೇಶವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಹಾಗೆಯೇ ಈ ಕಾರ್ಯಕ್ರಮದ ಸಾನ್ನಿಧ್ಯವನ್ನು ಕನಕಪುರ ಪೀಠದ ಶಿವಾನಂದಪುರಿ ಸ್ವಾಮೀಜಿ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಮಾಜಿ ಸಚಿವ ಹೆಚ್.ವಿಶ್ವನಾಥ್

ಕಲಬುರಗಿ ವಿಭಾಗದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಶ್ರೀ ಸಿದ್ದರಾಮನಂದ ಸ್ವಾಮೀಜಿ ಮಾತನಾಡಿ, ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಹಾಲುಮತ ಕೇಂದ್ರದ ವತಿಯಿಂದ ನಡೆಯುವ ಈ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ನಿರಂಜನಾನಂದಪುರಿ ಸ್ವಾಮೀಜಿ, ಶಿವಾನಂದಪುರಿ ಸ್ವಾಮೀಜಿ, ಈಶ್ವರಾನಂದಪುರಿ ಸ್ವಾಮೀಜಿ ವಹಿಸಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಫಗ್ಗನ್ ಸಿಂಗ್ ಕುಲಸ್ತೆ, ರೇಣುಕಾಸಿಂಗ್ ಸರುತಾ, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮಲು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕೊಡಗಿನ ಮುತ್ತಮ್ಮ ಎಂಬುವರಿಗೆ ಸಿದ್ಧಶ್ರೀ ಪ್ರಶಸ್ತಿ, ಜಯದೇವ ಮೆಣಸಗಿ ಅವರಿಗೆ ಹಾಲುಮತ ಭಾಸ್ಕರ ಪ್ರಶಸ್ತಿ ಹಾಗೂ ಕೆ.ಎಂ.ಮೆತ್ರಿ ಅವರಿಗೆ ಕನಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸ್ವಾಮೀಜಿ ಮಾಹಿತಿ ನೀಡಿದರು.

Intro:ಬೆಂಗಳೂರು : ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮವನ್ನು ಜನವರಿ 12 ರಿಂದ 14 ರವರೆಗೆ ಮೂರು ದಿನ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಣಿ ಬ್ರಿಡ್ಜ್ ನಲ್ಲಿ ಹಮ್ಮಿಕೊಳ್ಳಲಾಗಿದೆ.Body:ಇಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮಾಜಿ ಸಚಿವ ಹೆಚ್.ವಿಶ್ವನಾಥ್ ಅವರು, ಗುಲ್ಬರ್ಗಾ ವಿಭಾಗದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಶ್ರೀ ಸಿದ್ದರಾಮನಂದ ಸ್ವಾಮೀಜಿ ಅವರು 12 ವರ್ಷಗಳಿಂದ ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮ ನಡೆಸಿಕೊಂಡು ಬಂದಿದ್ದು, ಅದೇ ರೀತಿ ಈ ವರ್ಷವೂ ಕಾರ್ಯಕ್ರಮ ಆಯೋಜಿಸಿದ್ದಾರೆ ಎಂದು ಹೇಳಿದರು.
ಜ.13 ರಂದು ಆದಿವಾಸಿ ಸಂಸ್ಕೃತಿ ಸಮಾವೇಶವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದ ಸಾನಿಧ್ಯವನ್ನು ಕನಕಪುರ ಪೀಠದ ಶಿವನಂದಾಪುರಿ ಸ್ವಾಮೀಜಿ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಗುಲ್ಬರ್ಗಾ ವಿಭಾಗದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಶ್ರೀ ಸಿದ್ದರಾಮನಂದ ಸ್ವಾಮೀಜಿ ಮಾತನಾಡಿ, ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಹಾಲುಮತ ಕೇಂದ್ರದ ವತಿಯಿಂದ ನಡೆಯುವ ಈ ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ನಿರಂಜನಾ ನಂದಾಪುರಿ ಸ್ವಾಮೀಜಿ, ಶಿವಾನಂದಪುರಿ ಸ್ವಾಮೀಜಿ, ಈಶ್ವರ ನಂದಾಪುರಿ ಸ್ವಾಮೀಜಿ ವಹಿಸಲಿದ್ದಾರೆ. ಜನವರಿ 12 ರಂದು ಬೆಳಗ್ಗೆ 9 ಗಂಟೆಗೆ ಹೈದರಾಬಾದ್ ವಿಧಾನಪರಿಷತ್ ಸದಸ್ಯ ಎಗ್ಗೆ ಮಲ್ಲೇಶಂ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಹಾಲುಮತ-ಗಂಗಾಮತ ಸಮಾವೇಶ ನಡೆಯಲಿದ್ದು, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಸಮಾವೇಶ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಶಾಸಕರು, ವಿಧಾನಪರಿಷತ್ ಸದಸ್ಯರು ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಅಂದು 108 ದೇವರ ಭಂಡಾರ ಪೂಜೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಜನವರಿ 13 ರಂದು ಆದಿವಾಸಿ ಸಂಸ್ಕೃತಿ ಸಮಾವೇಶ ನಡೆಯಲಿದ್ದು, ಈ ಸಮಾವೇಶವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಫಗ್ಗನ್ ಸಿಂಗ್ ಕುಲಸ್ತೆ, ರೇಣುಕಾಸಿಂಗ್ ಸರುತಾ, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮಲು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕೊಡಗಿನ ಮುತ್ತಮ್ಮ ಎಂಬುವರಿಎ ಸಿದ್ಧಶ್ರೀ ಪ್ರಶಸ್ತಿ, ಜಯದೇವ ಮೆಣಸಗಿ ಅವರಿಗೆ ಹಾಲುಮತ ಭಾಸ್ಕರ ಪ್ರಶಸ್ತಿ ಹಾಗೂ ಕೆ.ಎಂ. ಮೆತ್ರಿ ಅವರಿಗೆ ಕನಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸ್ವಾಮೀಜಿ ಮಾಹಿತಿ ನೀಡಿದರು. ಜನವರಿ 14 ರಂದು ಜಗದ್ಗುರು ಶ್ರೀ ರೇವಣಸಿದ್ದೇಶ್ವರ, ಶ್ರೀ ಸಿದ್ದರಾಮೇಶ್ವರ ಸ್ಮರಣೋತ್ಸವ ಕಾರ್ಯಕ್ರಮ ನಡೆಯಲಿದೆ. ಅಲ್ಲದೆ, ಗ್ರಾಮೀಣ ಕ್ರೀಡೆಗಳಾದ ಎತ್ತುಗಳು ಭಾರ ಎಳೆಯುವ ಸ್ಪರ್ಧೆ, ಟಗರು ಕಾಳಗ ಮತ್ತಿತರ ಕ್ರೀಡೆಗಳನ್ನು ಸಹ ಏರ್ಪಡಿಸಲಾಗಿದೆ ಎಂದು ಹೇಳಿದರು.
ರೇಣುಕಾಚಾರ್ಯ ಕಾಲ್ಪನಿಕ : ರೇಣುಕಾಚಾರ್ಯರೇ ಇಲ್ಲ ಎಂಬುದರ ಬಗ್ಗೆ ಹಲವಾರು ಸಂಶೋಧಕರು ಹೇಳಿದ್ದರು. ಹಿರಿಯ ಸಂಶೋಧಕ ಚಿದಾನಂದಮೂರ್ತಿ ಅವರೇ ಅಲ್ಲ. ಎಂ.ಎಂ. ಕಲ್ಬುರ್ಗಿ ಅವರು ಸಹ ಹೇಳಿದ್ದರು. ಈಗ ಅಧಿಕೃತವಾಗಿ ಚಿದಾನಂದಮೂರ್ತಿ ಅವರು ಹೇಳಿರುವುದು ಅದಕ್ಕೆ ಅಲಂಕಾರ ಬಂದಿದೆ ಎಂದು ಹೇಳಬಹುದು ಎಂದರು.
ಹತ್ತು, ಹನ್ನೊಂದು ಮತ್ತು ಹನ್ನೇರಡನೇ ಶತಮಾನಗಳಲ್ಲಿರುವ ಶಾಸನಗಳಲ್ಲಿ ಅಧಿಕೃತವಾಗಿ ರೇವಣಸಿದ್ದ ಇದ್ದರು. 15 ನೇ ಶತಮಾನದ ನಂತರ ರೇಣುಕಾಚಾರ್ಯರೆಂದು ಪ್ರಚಾರ ಮಾಡಲಾಗಿದೆ ಎಂಬುದು ವಾದ. ರೇವಣಸಿದ್ದೇಶ್ವರರ ಜಾತಿ ಮೂಲದ ಕಾರಣಕ್ಕೆ ಚಿರಿತ್ರೆಯಲ್ಲಿ ಹತ್ತಿಕ್ಕಲು ರೇಣುಕಾಚಾರ್ಯರನ್ನು ಸೃಷ್ಟಿ ಮಾಡಲಾಗಿದೆ ಎಂಬುದು ನನ್ನ ವಾದ. ಕರ್ನಾಟಕ, ಮಹಾರಾಷ್ಟ್ರ, ಆಂಧ್ರ, ಸೋಲ್ಲಾಪುರದಲ್ಲಿ ರೇವಣಸಿದ್ದೇಶ್ವರರ ಕುರಿತು ಶಾಸನಗಳಿವೆ. ಆದರೆ, ರೇಣುಕಾಚಾರ್ಯರ ಕುರಿತು ಎಲ್ಲೂ ಶಾಸನಗಳಿಲ್ಲ ಎಂದು ಸ್ಪಷ್ಟಪಡಿಸಿದರು.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.