ETV Bharat / state

ಮೂವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ರಾಜ್ಯ ಸರ್ಕಾರವು ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದೆ..

author img

By

Published : May 4, 2022, 3:18 PM IST

three-ips-officers-transferred-by-karnataka-government
ಮೂವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಡಿಜಿಪಿ ಡಾ.ಪಿ. ರವೀಂದ್ರನಾಥ್ ಅವರನ್ನು ತರಬೇತಿ ವಿಭಾಗ ಬೆಂಗಳೂರು ಇಲ್ಲಿಗೆ ವರ್ಗಾವಣೆ ಮಾಡಲಾಗಿದೆ.

ಹುದ್ದೆಯ ನಿರೀಕ್ಷೆಯಲ್ಲಿದ್ದ ಎಡಿಜಿಪಿ ಅರುಣ್ ಚಕ್ರವರ್ತಿ ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯಕ್ಕೆ ಹಾಗೂ ತರಬೇತಿ ವಿಭಾಗದ ಎಡಿಜಿಪಿಯಾಗಿದ್ದ ಹರಿಶೇಖರನ್ ಪಿ. ಅವರನ್ನು ಅಗ್ನಿಶಾಮಕ ಮತ್ತು ತುರ್ತು ಸೇವೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

three IPS officers Transferred by karnataka government
ವರ್ಗಾವಣೆ ಆದೇಶ ಪ್ರತಿ

ಕೆಲದಿನಗಳ ಹಿಂದೆ ರಾಜ್ಯ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಅಮ್ರಿತ್ ಪಾಲ್ ಅವರನ್ನು ವರ್ಗಾವಣೆಗೊಳಿಲಾಗಿತ್ತು. ನೇಮಕಾತಿ ವಿಭಾಗದಿಂದ ರಾಜ್ಯ ಆಂತರಿಕ ಭದ್ರತಾ ಪಡೆ (ಐಎಸ್‌ಡಿ) ಎಡಿಜಿಪಿ ಹಾಗೂ ಅಮ್ರಿತ್​ ಪಾಲ್ ಅವರ ಜಾಗಕ್ಕೆ ಅಪರಾಧ ಹಾಗೂ ತಾಂತ್ರಿಕ ಸೇವೆ ಎಡಿಜಿಪಿಯಾಗಿರುವ ಆರ್.ಹಿತೇಂದ್ರ ಅವರನ್ನು‌ ನಿಯುಕ್ತಿ ಮಾಡಲಾಗಿತ್ತು.

ಇದನ್ನೂ ಓದಿ: ಪಿಎಸ್​​ಐ ಹಗರಣ ಪೂರ್ವ ನಿಯೋಜಿತ ಕೃತ್ಯ: ಸಿದ್ದರಾಮಯ್ಯ

ಬೆಂಗಳೂರು : ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಡಿಜಿಪಿ ಡಾ.ಪಿ. ರವೀಂದ್ರನಾಥ್ ಅವರನ್ನು ತರಬೇತಿ ವಿಭಾಗ ಬೆಂಗಳೂರು ಇಲ್ಲಿಗೆ ವರ್ಗಾವಣೆ ಮಾಡಲಾಗಿದೆ.

ಹುದ್ದೆಯ ನಿರೀಕ್ಷೆಯಲ್ಲಿದ್ದ ಎಡಿಜಿಪಿ ಅರುಣ್ ಚಕ್ರವರ್ತಿ ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯಕ್ಕೆ ಹಾಗೂ ತರಬೇತಿ ವಿಭಾಗದ ಎಡಿಜಿಪಿಯಾಗಿದ್ದ ಹರಿಶೇಖರನ್ ಪಿ. ಅವರನ್ನು ಅಗ್ನಿಶಾಮಕ ಮತ್ತು ತುರ್ತು ಸೇವೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

three IPS officers Transferred by karnataka government
ವರ್ಗಾವಣೆ ಆದೇಶ ಪ್ರತಿ

ಕೆಲದಿನಗಳ ಹಿಂದೆ ರಾಜ್ಯ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಅಮ್ರಿತ್ ಪಾಲ್ ಅವರನ್ನು ವರ್ಗಾವಣೆಗೊಳಿಲಾಗಿತ್ತು. ನೇಮಕಾತಿ ವಿಭಾಗದಿಂದ ರಾಜ್ಯ ಆಂತರಿಕ ಭದ್ರತಾ ಪಡೆ (ಐಎಸ್‌ಡಿ) ಎಡಿಜಿಪಿ ಹಾಗೂ ಅಮ್ರಿತ್​ ಪಾಲ್ ಅವರ ಜಾಗಕ್ಕೆ ಅಪರಾಧ ಹಾಗೂ ತಾಂತ್ರಿಕ ಸೇವೆ ಎಡಿಜಿಪಿಯಾಗಿರುವ ಆರ್.ಹಿತೇಂದ್ರ ಅವರನ್ನು‌ ನಿಯುಕ್ತಿ ಮಾಡಲಾಗಿತ್ತು.

ಇದನ್ನೂ ಓದಿ: ಪಿಎಸ್​​ಐ ಹಗರಣ ಪೂರ್ವ ನಿಯೋಜಿತ ಕೃತ್ಯ: ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.