ETV Bharat / state

ಮತದಾನದ ದಿನ ನಮ್ಮ ಮೆಟ್ರೋ ಸಂಚಾರ ಅವಧಿ ವಿಸ್ತರಣೆ.. ಮತದಾನಕ್ಕೆ ಊರಿಗೆ ಹೋಗೋರ ಜೇಬಿಗೆ ಖಾಸಗಿ ಬಸ್​ಗಳಿಂದ ಕತ್ತರಿ

author img

By

Published : May 8, 2023, 10:58 PM IST

ವಿಧಾನಸಭೆ ಚುನಾವಣೆ ಹಿನ್ನೆಲೆ ಮತದಾನ ದಿನದಂದು ಮೆಟ್ರೋ ರೈಲು ಓಡಾಟದ ಅವಧಿಯನ್ನು ವಿಸ್ತರಿಸಲಾಗುತ್ತದೆ ಎಂದು ಮೆಟ್ರೋ ರೈಲು ನಿಗಮ ತಿಳಿಸಿದೆ.

time-extension-of-metro-service-on-polling-day
ಬೆಂಗಳೂರು:ಮತದಾನದ ದಿನ ನಮ್ಮ ಮೆಟ್ರೋ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಮತದಾನ ದಿನದಂದು ಮೆಟ್ರೋ ರೈಲು ಓಡಾಟದ ಅವಧಿಯನ್ನು ವಿಸ್ತರಿಸಲಾಗುತ್ತದೆ ಎಂದು ನಮ್ಮ ಮೆಟ್ರೋ ತಿಳಿಸಿದೆ. ಮೇ 10 ರಂದು ತಡರಾತ್ರಿಯ ಸೇವಾವಧಿ ವಿಸ್ತರಣೆ ಮಾಡಲಾಗಿದೆ. ಅಂದು ರಾತ್ರಿ 11 ಗಂಟೆಯ ಬದಲಾಗಿ ಮಧ್ಯರಾತ್ರಿ 12.05 ಕ್ಕೆ ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ, ರೇಷ್ಮೆ ಸಂಸ್ಥೆ, ಕೃಷ್ಣರಾಜಪುರ ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ) ಗಳಿಂದ ಕೊನೆಯ ರೈಲುಗಳು ಹೊರಡಲಿವೆ ಎಂದು ಮಾಹಿತಿ ನೀಡಿದೆ.

ಸಾಮಾನ್ಯ ದಿನಗಳಲ್ಲಿ ನಿತ್ಯ ರಾತ್ರಿ 11.30ಕ್ಕೆ ಮೆಜೆಸ್ಟಿಕ್‌ನಿಂದ ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ ಹಾಗೂ ರೇಷ್ಮೆ ಸಂಸ್ಥೆ ಕಡೆಗೆ ಹೊರಡುತ್ತವೆ. ಆದರೆ, ಚುನಾವಣೆ ದಿನ ದೂರದ ಊರುಗಳಿಂದ ಮತದಾನ ಮುಗಿಸಿ ಸಾಕಷ್ಟು ಮಂದಿ ಆಗಮಿಸುತ್ತಾರೆ. ಈ ಹಿನ್ನೆಲೆ 1 ಗಂಟೆ 5 ನಿಮಿಷಗಳ ಕಾಲ ರೈಲುಗಳ ಸೇವೆಯನ್ನು ವಿಸ್ತರಿಸಲಾಗಿದೆ. ಈ ಹಿನ್ನಲೆಯಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮಜೆಸ್ಟಿಕ್‌ನಿಂದ ಕೂಡ ಹೊರಡುವ ಎಲ್ಲ ಕೊನೆಯ ರೈಲುಗಳು ಸಮಯ ರಾತ್ರಿ 12.35ಕ್ಕೆ ನಿಗದಿ ಪಡಿಸಲಾಗಿದೆ ಎಂದಿದೆ.

ಗುರುವಾರ ಎಂದಿನಂತೆ ಬೆಳಗ್ಗೆ 5 ಗಂಟೆಗೆ ಕೊನೆಯ ನಿಲ್ದಾಣಗಳಿಂದ ರೈಲು ಸೇವೆ ಆರಂಭವಾಗಲಿದೆ ಮತ್ತು ಮೆಜೆಸ್ಟಿಕ್‌ನಿಂದ ಮೊದಲ ರೈಲು 5.30ಕ್ಕೆ ಹೊರಡಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ತಿಳಿಸಿದೆ.

ಖಾಸಗಿ ಬಸ್ ದರವನ್ನು ಹೆಚ್ಚಿಸಿದ ಖಾಸಗಿ ಬಸ್ ಮಾಲೀಕರು: ಮೇ 10 ರಂದು ತಮ್ಮ ಅಮೂಲ್ಯ ಮತ ಚಲಾಯಿಸಲು ಅನೇಕರು ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡ ಖಾಸಗಿ ಬಸ್​ ಮಾಲೀಕರು, ಟಿಕೆಟ್ ದರವನ್ನು ಹೆಚ್ಚಳ ಮಾಡಿದ್ದಾರೆ. ಇದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಬಸ್​ ದರ 800 ರೂ. ಇತ್ತು, ಈಗ 1800ಕ್ಕೆ ಏರಿಕೆಯಾಗಿದೆ.

ಅದೇ ರೀತಿ 950ರೂ. ಇದ್ದ ಮಂಗಳೂರು ಟಿಕೆಟ್ ದರ ಇದೀಗ 2200ರೂ. ಆಗಿದೆ. ಶಿವಮೊಗ್ಗ 900ರಿಂದ 2160 ರೂ., ಉಡುಪಿ 900 ರಿಂದ 2200 ರೂ., ಬೆಳಗಾವಿ 1100 ರಿಂದ 2800 ರೂ., ಹಾಸನ 650 ರಿಂದ 2200 ರೂ., ಗೋವಾ 1100 ರಿಂದ 3500 ರೂ., ಚಿಕ್ಕಮಗಳೂರು 700 ರಿಂದ 1500 ರೂ., ಕಲಬುರಗಿ 1400 ರಿಂದ 2500 ರೂ. ಬಾಗಲಕೋಟೆ 1400 ರಿಂದ 2300 ರೂ., ಯಾದಗಿರಿ 1400 ರಿಂದ 1999 ರೂ., ಅಥಣಿ 1400 ರಿಂದ 2200 ರೂ., ಕೊಡಗು 700 ರಿಂದ 1400 ರೂ., ಬಳ್ಳಾರಿ 900 ರಿಂದ 2500 ರೂ.ಗೆ ಏರಿಸಲಾಗಿದೆ.

ಇದನ್ನೂ ಓದಿ:ಮನೆಯಿಂದ ಮತದಾನ ಮಾಡಿದ ವಯೋವೃದ್ಧರು, ವಿಶೇಷ ಚೇತನರು: ಶೇ. 97 ರಷ್ಟು ವೋಟಿಂಗ್​

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಮತದಾನ ದಿನದಂದು ಮೆಟ್ರೋ ರೈಲು ಓಡಾಟದ ಅವಧಿಯನ್ನು ವಿಸ್ತರಿಸಲಾಗುತ್ತದೆ ಎಂದು ನಮ್ಮ ಮೆಟ್ರೋ ತಿಳಿಸಿದೆ. ಮೇ 10 ರಂದು ತಡರಾತ್ರಿಯ ಸೇವಾವಧಿ ವಿಸ್ತರಣೆ ಮಾಡಲಾಗಿದೆ. ಅಂದು ರಾತ್ರಿ 11 ಗಂಟೆಯ ಬದಲಾಗಿ ಮಧ್ಯರಾತ್ರಿ 12.05 ಕ್ಕೆ ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ, ರೇಷ್ಮೆ ಸಂಸ್ಥೆ, ಕೃಷ್ಣರಾಜಪುರ ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ) ಗಳಿಂದ ಕೊನೆಯ ರೈಲುಗಳು ಹೊರಡಲಿವೆ ಎಂದು ಮಾಹಿತಿ ನೀಡಿದೆ.

ಸಾಮಾನ್ಯ ದಿನಗಳಲ್ಲಿ ನಿತ್ಯ ರಾತ್ರಿ 11.30ಕ್ಕೆ ಮೆಜೆಸ್ಟಿಕ್‌ನಿಂದ ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ ಹಾಗೂ ರೇಷ್ಮೆ ಸಂಸ್ಥೆ ಕಡೆಗೆ ಹೊರಡುತ್ತವೆ. ಆದರೆ, ಚುನಾವಣೆ ದಿನ ದೂರದ ಊರುಗಳಿಂದ ಮತದಾನ ಮುಗಿಸಿ ಸಾಕಷ್ಟು ಮಂದಿ ಆಗಮಿಸುತ್ತಾರೆ. ಈ ಹಿನ್ನೆಲೆ 1 ಗಂಟೆ 5 ನಿಮಿಷಗಳ ಕಾಲ ರೈಲುಗಳ ಸೇವೆಯನ್ನು ವಿಸ್ತರಿಸಲಾಗಿದೆ. ಈ ಹಿನ್ನಲೆಯಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮಜೆಸ್ಟಿಕ್‌ನಿಂದ ಕೂಡ ಹೊರಡುವ ಎಲ್ಲ ಕೊನೆಯ ರೈಲುಗಳು ಸಮಯ ರಾತ್ರಿ 12.35ಕ್ಕೆ ನಿಗದಿ ಪಡಿಸಲಾಗಿದೆ ಎಂದಿದೆ.

ಗುರುವಾರ ಎಂದಿನಂತೆ ಬೆಳಗ್ಗೆ 5 ಗಂಟೆಗೆ ಕೊನೆಯ ನಿಲ್ದಾಣಗಳಿಂದ ರೈಲು ಸೇವೆ ಆರಂಭವಾಗಲಿದೆ ಮತ್ತು ಮೆಜೆಸ್ಟಿಕ್‌ನಿಂದ ಮೊದಲ ರೈಲು 5.30ಕ್ಕೆ ಹೊರಡಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ತಿಳಿಸಿದೆ.

ಖಾಸಗಿ ಬಸ್ ದರವನ್ನು ಹೆಚ್ಚಿಸಿದ ಖಾಸಗಿ ಬಸ್ ಮಾಲೀಕರು: ಮೇ 10 ರಂದು ತಮ್ಮ ಅಮೂಲ್ಯ ಮತ ಚಲಾಯಿಸಲು ಅನೇಕರು ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡ ಖಾಸಗಿ ಬಸ್​ ಮಾಲೀಕರು, ಟಿಕೆಟ್ ದರವನ್ನು ಹೆಚ್ಚಳ ಮಾಡಿದ್ದಾರೆ. ಇದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಬಸ್​ ದರ 800 ರೂ. ಇತ್ತು, ಈಗ 1800ಕ್ಕೆ ಏರಿಕೆಯಾಗಿದೆ.

ಅದೇ ರೀತಿ 950ರೂ. ಇದ್ದ ಮಂಗಳೂರು ಟಿಕೆಟ್ ದರ ಇದೀಗ 2200ರೂ. ಆಗಿದೆ. ಶಿವಮೊಗ್ಗ 900ರಿಂದ 2160 ರೂ., ಉಡುಪಿ 900 ರಿಂದ 2200 ರೂ., ಬೆಳಗಾವಿ 1100 ರಿಂದ 2800 ರೂ., ಹಾಸನ 650 ರಿಂದ 2200 ರೂ., ಗೋವಾ 1100 ರಿಂದ 3500 ರೂ., ಚಿಕ್ಕಮಗಳೂರು 700 ರಿಂದ 1500 ರೂ., ಕಲಬುರಗಿ 1400 ರಿಂದ 2500 ರೂ. ಬಾಗಲಕೋಟೆ 1400 ರಿಂದ 2300 ರೂ., ಯಾದಗಿರಿ 1400 ರಿಂದ 1999 ರೂ., ಅಥಣಿ 1400 ರಿಂದ 2200 ರೂ., ಕೊಡಗು 700 ರಿಂದ 1400 ರೂ., ಬಳ್ಳಾರಿ 900 ರಿಂದ 2500 ರೂ.ಗೆ ಏರಿಸಲಾಗಿದೆ.

ಇದನ್ನೂ ಓದಿ:ಮನೆಯಿಂದ ಮತದಾನ ಮಾಡಿದ ವಯೋವೃದ್ಧರು, ವಿಶೇಷ ಚೇತನರು: ಶೇ. 97 ರಷ್ಟು ವೋಟಿಂಗ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.