ಆನೇಕಲ್: ಚಲಿಸುತ್ತಿದ್ದ ಕಾರಿನ ಮೇಲೆ ಜಲ್ಲಿ ಕಲ್ಲು ಟಿಪ್ಪರ್ ಲಾರಿ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ಅತ್ತಿಬೆಲೆ-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಅತ್ತಿಬೆಲೆ ಟೋಲ್ ಬಳಿ ನಡೆದಿದೆ.
ತಮಿಳುನಾಡಿಗೆ ಸೇರಿದ ಕಾರಿನ ಮೇಲೆ ಜಲ್ಲಿ ತುಂಬಿದ್ದ ಟಿಪ್ಪರ್ ಲಾರಿ ಏಕಾಏಕಿ ಮುಗುಚಿ ಬಿದ್ದಿದೆ. ಪರಿಣಾಮ ಕಾರು ಸಂಪೂರ್ಣ ಜಲ್ಲಿ ಕಲ್ಲಿನಿಂದ ತುಂಬಿ ಕಾರಿನಲ್ಲಿದ್ದ ಇಬ್ಬರು ಕಾರಿನಲ್ಲಿಯೇ ಸಿಲುಕಿ ಸಾವನ್ನಪ್ಪಿದ್ದಾರೆ.
ಓದಿ: ಮಗಳ ಹುಟ್ಟುಹಬ್ಬಕ್ಕೆ 'ಚಂದಮಾಮ' ಉಡುಗೊರೆ ನೀಡಿ 'ಅಭಯ' ಕೊಟ್ಟ ಡ್ಯಾಡಿ
ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಹೆದ್ದಾರಿಯಲ್ಲಿ ಬಿದ್ದಿರುವ ಟಿಪ್ಪರ್ ಮತ್ತು ಕಾರನ್ನು ತೆರವುಗೊಳಿಸಿ ಸಾವನ್ನಪ್ಪಿರುವ ವ್ಯಕ್ತಿಗಳ ಸಂಬಂಧಿಕರ ಹುಡುಕಾಟದಲ್ಲಿ ತೊಡಗಿದ್ದಾರೆ.