ETV Bharat / state

ಗೃಹ ಸಚಿವರನ್ನು ಭೇಟಿಯಾದ ಟಿ.ಜೆ ಅಬ್ರಹಾಂ: ಇಂದ್ರಜಿತ್ ಲಂಕೇಶ್ ವಿರುದ್ಧ ದೂರು!

author img

By

Published : Jul 20, 2021, 12:58 PM IST

Updated : Jul 20, 2021, 1:12 PM IST

ಹೋಟೆಲ್ ಸಪ್ಲೈಯರ್ ಮೇಲೆ ದರ್ಶನ್ ಹಲ್ಲೆ ಮಾಡಿದ್ದಾರೆ ಎಂಬ ವಿಚಾರದಲ್ಲಿ ಇಂದ್ರಜಿತ್ ಲಂಕೇಶ್ ದಲಿತರ ಹೆಸರನ್ನು ಎಳೆದು ತಂದಿದ್ದಾರೆ ಎಂದು ಆರೋಪಿಸಿ ಟಿ.ಜೆ.ಅಬ್ರಹಾಂ ಗೃಹ ಸಚಿವರಿಗೆ ದೂರು ನೀಡಿದ್ದಾರೆ.

TJ Abraham Complaint
ಇಂದ್ರಜಿತ್ ಲಂಕೇಶ್ ವಿರುದ್ಧ ದೂರು

ಬೆಂಗಳೂರು : ದಲಿತ ಅಲ್ಲದವರನ್ನು ಎತ್ತಿ ಕಟ್ಟಲು ಇಂದ್ರಜಿತ್ ಪ್ರಯತ್ನಪಟ್ಟಿದ್ದಾರೆ ಎಂದು ಸಾಮಾಜಿಕ‌ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಆರೋಪಿಸಿದ್ದಾರೆ.

ವಿಧಾನಸೌಧದಲ್ಲಿ ಗೃಹ ಸಚಿವರನ್ನು ಭೇಟಿಯಾಗಿ ದೂರು ನೀಡಿದ ಬಳಿಕ ಮಾತನಾಡಿದ ಅವರು, ಇಂದ್ರಜಿತ್ ಲಂಕೇಶ್ ದಲಿತ ಎನ್ನುವ ಪದವನ್ನು ಪದೇ ಪದೆ ಬಳಸಿದ್ದಾರೆ. ಈ ಬಗ್ಗೆ ಗೃಹ ಸಚಿವರನ್ನು ಭೇಟಿಯಾಗಿ ದೂರು ನೀಡಿದ್ದೇವೆ ಎಂದರು.

ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ

ದಲಿತ ಸಪ್ಲೈಯರ್ ಮೇಲೆ ಹಲ್ಲೆ ಆಗಿದೆ ಎಂದು ಒತ್ತಿ ಹೇಳಿದ್ದಾರೆ. ಪೊಲೀಸರು ಕಾಂಪ್ರಮೈಸ್ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಮೈಸೂರಿನ ಪೊಲೀಸ್ ಠಾಣೆಗಳು ಸೆಟಲ್​ಮೆಂಟ್ ಸ್ಟೇಷನ್ ಎಂದು ಹೇಳಿದ್ದಾರೆ.

ಅಲ್ಲದೆ, ದಲಿತರ ಬಗ್ಗೆ ಬೇರೆ ಸಮುದಾಯದವರಿಗೆ ಕೋಪ ಬರುವಂತೆ ಮಾತನಾಡಿದ್ದಾರೆ. ಇಂದ್ರಜಿತ್ ಅವರಿಂದ ಮೈಸೂರು ಪೊಲೀಸರ ಮಾನ ಮರ್ಯಾದೆ ಹೋಗಿದೆ. ಈ ಕಾರಣಕ್ಕೆ ಇಂದ್ರಜಿತ್ ವಿರುದ್ದ ಗೃಹ ಸಚಿವರಿಗೆ ದೂರು ನೀಡಿದ್ದೇವೆ ಎಂದು ಹೇಳಿದರು.

ಇಂದ್ರಜಿತ್ ವಿರುದ್ದ ಮೈಸೂರು ಪೊಲೀಸರು ಮಾನನಷ್ಟ ಮೊಕದ್ದಮೆ ಹೂಡಲಿ ಎಂದು ಅವರು ಇದೇ ವೇಳೆ ಆಗ್ರಹಿಸಿದರು.

ಓದಿ : ದರ್ಶನ್ ಬೆಂಬಲಿಗರು, ರೌಡಿಗಳು ಸತತವಾಗಿ ಕರೆ ಮಾಡಿ ಬೆದರಿಕೆ ಹಾಕ್ತಿದ್ದಾರೆ: ಇಂದ್ರಜಿತ್ ಲಂಕೇಶ್

ಬೆಂಗಳೂರು : ದಲಿತ ಅಲ್ಲದವರನ್ನು ಎತ್ತಿ ಕಟ್ಟಲು ಇಂದ್ರಜಿತ್ ಪ್ರಯತ್ನಪಟ್ಟಿದ್ದಾರೆ ಎಂದು ಸಾಮಾಜಿಕ‌ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಆರೋಪಿಸಿದ್ದಾರೆ.

ವಿಧಾನಸೌಧದಲ್ಲಿ ಗೃಹ ಸಚಿವರನ್ನು ಭೇಟಿಯಾಗಿ ದೂರು ನೀಡಿದ ಬಳಿಕ ಮಾತನಾಡಿದ ಅವರು, ಇಂದ್ರಜಿತ್ ಲಂಕೇಶ್ ದಲಿತ ಎನ್ನುವ ಪದವನ್ನು ಪದೇ ಪದೆ ಬಳಸಿದ್ದಾರೆ. ಈ ಬಗ್ಗೆ ಗೃಹ ಸಚಿವರನ್ನು ಭೇಟಿಯಾಗಿ ದೂರು ನೀಡಿದ್ದೇವೆ ಎಂದರು.

ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ

ದಲಿತ ಸಪ್ಲೈಯರ್ ಮೇಲೆ ಹಲ್ಲೆ ಆಗಿದೆ ಎಂದು ಒತ್ತಿ ಹೇಳಿದ್ದಾರೆ. ಪೊಲೀಸರು ಕಾಂಪ್ರಮೈಸ್ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಮೈಸೂರಿನ ಪೊಲೀಸ್ ಠಾಣೆಗಳು ಸೆಟಲ್​ಮೆಂಟ್ ಸ್ಟೇಷನ್ ಎಂದು ಹೇಳಿದ್ದಾರೆ.

ಅಲ್ಲದೆ, ದಲಿತರ ಬಗ್ಗೆ ಬೇರೆ ಸಮುದಾಯದವರಿಗೆ ಕೋಪ ಬರುವಂತೆ ಮಾತನಾಡಿದ್ದಾರೆ. ಇಂದ್ರಜಿತ್ ಅವರಿಂದ ಮೈಸೂರು ಪೊಲೀಸರ ಮಾನ ಮರ್ಯಾದೆ ಹೋಗಿದೆ. ಈ ಕಾರಣಕ್ಕೆ ಇಂದ್ರಜಿತ್ ವಿರುದ್ದ ಗೃಹ ಸಚಿವರಿಗೆ ದೂರು ನೀಡಿದ್ದೇವೆ ಎಂದು ಹೇಳಿದರು.

ಇಂದ್ರಜಿತ್ ವಿರುದ್ದ ಮೈಸೂರು ಪೊಲೀಸರು ಮಾನನಷ್ಟ ಮೊಕದ್ದಮೆ ಹೂಡಲಿ ಎಂದು ಅವರು ಇದೇ ವೇಳೆ ಆಗ್ರಹಿಸಿದರು.

ಓದಿ : ದರ್ಶನ್ ಬೆಂಬಲಿಗರು, ರೌಡಿಗಳು ಸತತವಾಗಿ ಕರೆ ಮಾಡಿ ಬೆದರಿಕೆ ಹಾಕ್ತಿದ್ದಾರೆ: ಇಂದ್ರಜಿತ್ ಲಂಕೇಶ್

Last Updated : Jul 20, 2021, 1:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.