ETV Bharat / state

ರಾಜ್ಯದಲ್ಲಿ ತಗ್ಗಿದ ಮಳೆಯಾರ್ಭಟ ; 27ರವರೆಗೆ ಸಾಧಾರಣ ಮಳೆ ಮುಂದುವರಿಕೆ

author img

By

Published : Sep 23, 2020, 4:38 PM IST

Updated : Sep 23, 2020, 7:20 PM IST

ರಾಜ್ಯದಲ್ಲಿ ಮಳೆ ಪ್ರಮಾಣ ತಗ್ಗಿದೆ. ಆದರೆ, ಬೆಂಗಳೂರಿನ ಹಲವಡೆ ಹಗುರವಾಗಿ ಮಳೆ ಮಳೆ ಬೀಳುವ ಸಾಧ್ಯತೆ ಇದೆ.

Rainfall in coastal district
ಸಂಗ್ರಹ ಚಿತ್ರ

ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆ ಹಾಗೂ ಒಳನಾಡಿನಲ್ಲಿ ಇಂದು ವ್ಯಾಪಕ ಮಳೆಯಾಗಿದೆ. ಆಗುಂಬೆಯಲ್ಲಿ 8 ಸೆಂ.ಮೀ, ಕೊಟ್ಟಿಗೆಹಾರ, ಕದರದಲ್ಲಿ 6 ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ ಎಸ್ ಪಾಟೀಲ್ ತಿಳಿಸಿದರು.

ಕರಾವಳಿ ಜಿಲ್ಲೆಗಳಲ್ಲಿ ಸೆ. 23-24ರಂದು ಸಾಧಾರಣ ಜೊತೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಸೆ. 25 ರಿಂದ 27ರವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಎಲ್ಲಾ ಕಡೆ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.

ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ ಎಸ್ ಪಾಟೀಲ್

ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸೆ.23 ರಿಂದ 27ರವರೆಗೆ ಹಗುರದಿಂದ ಸಾಧಾರಣವಾಗಿ ಹಲವು ಸ್ಥಳಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ. ಬೆಂಗಳೂರಿನಲ್ಲೂ ಹಲವು ಕಡೆ ಹಗುರವಾಗಿ ಮಳೆಯಾಗಬಹುದು ಎಂದು ಸಿ ಎಸ್ ಪಾಟೀಲ್ ತಿಳಿಸಿದರು.

ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆ ಹಾಗೂ ಒಳನಾಡಿನಲ್ಲಿ ಇಂದು ವ್ಯಾಪಕ ಮಳೆಯಾಗಿದೆ. ಆಗುಂಬೆಯಲ್ಲಿ 8 ಸೆಂ.ಮೀ, ಕೊಟ್ಟಿಗೆಹಾರ, ಕದರದಲ್ಲಿ 6 ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ ಎಸ್ ಪಾಟೀಲ್ ತಿಳಿಸಿದರು.

ಕರಾವಳಿ ಜಿಲ್ಲೆಗಳಲ್ಲಿ ಸೆ. 23-24ರಂದು ಸಾಧಾರಣ ಜೊತೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಸೆ. 25 ರಿಂದ 27ರವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಎಲ್ಲಾ ಕಡೆ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.

ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ ಎಸ್ ಪಾಟೀಲ್

ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸೆ.23 ರಿಂದ 27ರವರೆಗೆ ಹಗುರದಿಂದ ಸಾಧಾರಣವಾಗಿ ಹಲವು ಸ್ಥಳಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ. ಬೆಂಗಳೂರಿನಲ್ಲೂ ಹಲವು ಕಡೆ ಹಗುರವಾಗಿ ಮಳೆಯಾಗಬಹುದು ಎಂದು ಸಿ ಎಸ್ ಪಾಟೀಲ್ ತಿಳಿಸಿದರು.

Last Updated : Sep 23, 2020, 7:20 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.