ETV Bharat / state

ಉಪಚುನಾವಣೆ ಕದನ ಕಣ: ವೇಣುಗೋಪಾಲ್​ ನೇತೃತ್ವದಲ್ಲಿ ನಾಳೆ ಕೈ ನಾಯಕರ ಪೂರ್ವಭಾವಿ ಸಭೆ - ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್

ಉಪಚುನಾವಣೆ ಹಿನ್ನೆಲೆ ನಾಳೆ ಕಾಂಗ್ರೆಸ್​ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಹಿರಿಯ ಕೈ ನಾಯಕರು ಉಪಚುನಾವಣೆಗೆ ರಣತಂತ್ರ ರೂಪಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಪೂರ್ವಭಾವಿ ಸಭೆ
author img

By

Published : Oct 14, 2019, 6:02 PM IST

ಬೆಂಗಳೂರು: ನಾಳೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಬೆಂಗಳೂರಿಗೆ ಆಗಮಿಸಲಿದ್ದು, ಕೈ ಹಿರಿಯ ನಾಯಕರ ಜೊತೆ ಸಭೆ ನಡೆಸಲಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಕೈ ನಾಯಕರ ಸಭೆಯಲ್ಲಿ ಉಪಚುನಾವಣೆ ತಯಾರಿ ಸಂಬಂಧ ಸಮಾಲೋಚನೆ ನಡೆಸಲಿದ್ದಾರೆ. 15 ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಕನಿಷ್ಠ 12 ಕ್ಷೇತ್ರ ಗೆಲ್ಲುವುದು ಕಾಂಗ್ರೆಸ್​ನ ಗುರಿಯಾಗಿದ್ದು, ಸಮರ್ಥವಾಗಿ ಬಿಜೆಪಿ, ಜೆಡಿಎಸ್ ಅನ್ನು ಎದುರಿಸುವ ನಿಟ್ಟಿನಲ್ಲಿ ಕೈ ನಾಯಕರು ಕಾರ್ಯತಂತ್ರ ರೂಪಿಸಲಿದ್ದಾರೆ ಎನ್ನಲಾಗ್ತಿದೆ.

ಕೆಸಿವಿ ನೇತೃತ್ವದಲ್ಲಿ ನಾಳೆ ಕೈ ನಾಯಕರ ಪೂರ್ವಭಾವಿ ಸಭೆ

ಸಭೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸಂಸದ ಕೆ.ಹೆಚ್. ಮುನಿಯಪ್ಪ, ಬಿ.ಕೆ. ಹರಿಪ್ರಸಾದ್, ಹೆಚ್.ಕೆ. ಪಾಟೀಲ್, ರಮೇಶ್ ಕುಮಾರ್, ವೀರಪ್ಪ ಮೊಯ್ಲಿ ಸೇರಿದಂತೆ ಹಿರಿಯ ನಾಯಕರ ಜತೆ ಸಭೆ ನಡೆಸಿ, ಉಪಚುನಾವಣೆ ಸಂಬಂಧ ಚರ್ಚಿಸಲಿದ್ದಾರೆ. ಇನ್ನು ಬಿಜೆಪಿ ಅತೃಪ್ತ ನಾಯಕರ ಬಗ್ಗೆಯೂ ಸಮಾಲೋಚನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು: ನಾಳೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಬೆಂಗಳೂರಿಗೆ ಆಗಮಿಸಲಿದ್ದು, ಕೈ ಹಿರಿಯ ನಾಯಕರ ಜೊತೆ ಸಭೆ ನಡೆಸಲಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಕೈ ನಾಯಕರ ಸಭೆಯಲ್ಲಿ ಉಪಚುನಾವಣೆ ತಯಾರಿ ಸಂಬಂಧ ಸಮಾಲೋಚನೆ ನಡೆಸಲಿದ್ದಾರೆ. 15 ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಕನಿಷ್ಠ 12 ಕ್ಷೇತ್ರ ಗೆಲ್ಲುವುದು ಕಾಂಗ್ರೆಸ್​ನ ಗುರಿಯಾಗಿದ್ದು, ಸಮರ್ಥವಾಗಿ ಬಿಜೆಪಿ, ಜೆಡಿಎಸ್ ಅನ್ನು ಎದುರಿಸುವ ನಿಟ್ಟಿನಲ್ಲಿ ಕೈ ನಾಯಕರು ಕಾರ್ಯತಂತ್ರ ರೂಪಿಸಲಿದ್ದಾರೆ ಎನ್ನಲಾಗ್ತಿದೆ.

ಕೆಸಿವಿ ನೇತೃತ್ವದಲ್ಲಿ ನಾಳೆ ಕೈ ನಾಯಕರ ಪೂರ್ವಭಾವಿ ಸಭೆ

ಸಭೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸಂಸದ ಕೆ.ಹೆಚ್. ಮುನಿಯಪ್ಪ, ಬಿ.ಕೆ. ಹರಿಪ್ರಸಾದ್, ಹೆಚ್.ಕೆ. ಪಾಟೀಲ್, ರಮೇಶ್ ಕುಮಾರ್, ವೀರಪ್ಪ ಮೊಯ್ಲಿ ಸೇರಿದಂತೆ ಹಿರಿಯ ನಾಯಕರ ಜತೆ ಸಭೆ ನಡೆಸಿ, ಉಪಚುನಾವಣೆ ಸಂಬಂಧ ಚರ್ಚಿಸಲಿದ್ದಾರೆ. ಇನ್ನು ಬಿಜೆಪಿ ಅತೃಪ್ತ ನಾಯಕರ ಬಗ್ಗೆಯೂ ಸಮಾಲೋಚನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Intro:Body:KN_BNG_04_KCVENUGOPAL_SENIORMEETING_SCRIPT_7201951

ಉಪಚುನಾವಣೆ: ಕೆಸಿವಿ ನೇತೃತ್ವದಲ್ಲಿ ನಾಳೆ ಕೈ ಹಿರಿಯ ನಾಯಕರ ಜತೆ ಪೂರ್ವಭಾವಿ ಸಭೆ

ಬೆಂಗಳೂರು: ಉಪಚುನಾವಣೆ ಹಿನ್ನೆಲೆ ನಾಳೆ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.

ನಾಳೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಬೆಂಗಳೂರಿಗೆ ಆಗಮಿಸಲಿದ್ದು, ಕೈ ಹಿರಿಯ ನಾಯಕರ ಜೊತೆ ಸಭೆ ನಡೆಸಲಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಕೈ ಹಿರಿಯ ನಾಯಕರ ಸಭೆಯಲ್ಲಿ ಉಪಚುನಾವಣೆ ತಯಾರಿ ಸಂಬಂಧ ಸಮಾಲೋಚನೆ ನಡೆಸಲಿದ್ದಾರೆ. ಹದಿನೈದು ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಕನಿಷ್ಠ 12 ಕ್ಷೇತ್ರ ಗೆಲ್ಲುವ ಗುರಿ ಕಾಂಗ್ರೆಸ್ ನದ್ದು. ಈ ಹಿನ್ನೆಲೆ ಕಾರ್ಯತಂತ್ರ ರೂಪಿಸಲು ನಾಳೆ ಹಿರಿಯ ಕೈ ನಾಯಕರ ಜತೆ ಸಭೆ ನಡೆಯಲಿದೆ‌.

ಸಭೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಕೆ.ಎಚ್.ಮುನಿಯಪ್ಪ, ಬಿ.ಕೆ.ಹರಿಪ್ರಸಾದ್, ಎಚ್.ಕೆ.ಪಾಟೀಲ್, ರಮೇಶ್ ಕುಮಾರ್, ವೀರಪ್ಪ ಮೊಯ್ಲಿ ಸೇರಿದಂತೆ ಹಿರಿಯ ನಾಯಕರ ಜತೆ ಸಭೆ ನಡೆಸಿ, ಉಪಚುನಾವಣೆ ಸಂಬಂಧ ಚರ್ಚಿಸಲಿದ್ದಾರೆ.

ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಕುರಿತಾಗಿ ನಾಳಿನ ಸಭೆಯಲ್ಲಿ ಸಮಾಲೋಚನೆ ನಡೆಯಲಿದೆ. 15 ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಮೂಲಕ ಈಗಿನಿಂದಲೇ ಚುನಾವಣಾ ಸಿದ್ಧತೆ ಕುರಿತಂತೆ ಚರ್ಚೆ ನಡೆಸುವ ಬಗ್ಗೆ ರಣತಂತ್ರ ರೂಪಿಸಲಿದ್ದಾರೆ. ಬಿಜೆಪಿ ಪಕ್ಷದ ಅತೃಪ್ತ ನಾಯಕರನ್ನು ಪಕ್ಷಕ್ಕೆ ಸೇರುವ ಸಾಧ್ಯತೆ ಬಗ್ಗೆಯೂ ಸಮಾಲೋಚನೆ ನಡೆಯಲಿದೆ.

ಸಭೆಯಲ್ಲಿ ಐಟಿ ದಾಳಿ ಸಂಬಂಧವೂ ಚರ್ಚೆ ನಡೆಯಲಿದೆ. ಉಪಚುನಾವಣೆ ಸಂಬಂಧ ಸಮಾವೇಶಗಳ ಆಯೋಜನೆ, ಹೈಕಮಾಂಡ್ ನಾಯಕರನ್ನು ರಾಜ್ಯಕ್ಕೆ ಕರೆಸಿ, ಸಮರ್ಥವಾಗಿ ಬಿಜೆಪಿ, ಜೆಡಿಎಸ್ ನ್ನು ಎದುರಿಸುವ ನಿಟ್ಟಿನಲ್ಲಿ ಕೈ ನಾಯಕರ ಕಾರ್ಯತಂತ್ರ ರೂಪಿಸಲಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.