ETV Bharat / state

ಇಂದು ದಿಲ್ಲಿಯಲ್ಲೇ ಉಳಿಯಲಿರುವ ಡಿಕೆಶಿ, ನಾಳೆ ಸಂಜೆ ರಾಜ್ಯಕ್ಕೆ ಪಯಣ

author img

By

Published : Oct 24, 2019, 10:25 AM IST

ಜೈಲಿನಿಂದ ಬಿಡುಗಡೆಗೊಂಡ ಕಾಂಗ್ರೆಸ್ ನಾಯಕ ಹಾಗು ಮಾಜಿ ಸಚಿವ ಡಿಕೆ ಶಿವಕುಮಾರ್​ ಇಂದು ಬೆಂಗಳೂರಿಗೆ ಬರುವ ನಿರೀಕ್ಷೆ ಇತ್ತು. ಆದರೆ, ಜಾರಿ ನಿರ್ದೇಶನಾಲಯ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೊರೆ ಹೋಗಿರುವ ಕಾರಣ ಡಿಕೆಶಿ ದೆಹಲಿಯಲ್ಲೇ ಉಳಿಯಬೇಕಾಗುತ್ತದೆ.

ಡಿಕೆಶಿ

ಬೆಂಗಳೂರು: ಜೈಲಿನಿಂದ ಬಿಡುಗಡೆಯಾಗಿದ್ದರೂ ಕೂಡ ಮಾಜಿ ಸಚಿವ ಡಿಕೆ ಶಿವಕುಮಾರ್ ರಾಜ್ಯಕ್ಕೆ ವಾಪಸಾಗುವುದು ವಿಳಂಬವಾಗಲಿದೆ.

ಅಕ್ರಮ ಹಣ ವರ್ಗಾವಣೆ ತಡೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಡಿಕೆಶಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್‌ ಇಂದು ವಿಚಾರಣೆಯನ್ನು ಕೈಗೆತ್ತಿಕೊಳ್ಳುವ ಸಾಧ್ಯತೆ ಇದ್ದು, ತಮ್ಮ ಪರ ವಕೀಲರ ಜೊತೆ ಸಮಾಲೋಚಿಸಲು ನಿರ್ಧರಿಸಿರುವ ಡಿಕೆಶಿ ಇಂದು ದಿಲ್ಲಿಯಲ್ಲಿ ಉಳಿಯಲಿದ್ದಾರೆ.

ತಮ್ಮ ವಕೀಲರ ಜೊತೆ ಮುಂದಿನ ಕಾನೂನು ಹೋರಾಟಗಳ ಕುರಿತು ಅವರು ಚರ್ಚಿಸಲಿದ್ದಾರೆ. ನಾಳೆಯವರೆಗೆ ಕಾಯ್ದು ಸುಪ್ರೀಂಕೋರ್ಟ್​ನ ನಿರ್ಧಾರ ನೋಡಿ ಅವರು ರಾಜ್ಯಕ್ಕೆ ಪ್ರಯಾಣಿಸುವ ನಿರ್ಧಾರ ಕೈಗೊಳ್ಳಲಿದ್ದಾರೆ. ಒಂದೊಮ್ಮೆ ಸುಪ್ರೀಂಕೋರ್ಟ್, ದಿಲ್ಲಿ ಹೈಕೋರ್ಟ್ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಿದರೆ ಶಿವಕುಮಾರ್ ಮತ್ತೆ ತಿಹಾರ್ ಜೈಲು ಸೇರಬೇಕಾಗುತ್ತದೆ. ಈ ಹಿನ್ನೆಲೆ ಸುಪ್ರೀಂ ನಿಲುವು ತಿಳಿದುಕೊಂಡು, ನಿರಾಳವಾದರೆ ಮಾತ್ರ ರಾಜ್ಯಕ್ಕೆ ವಾಪಸಾಗಲು ಶಿವಕುಮಾರ್ ನಿರ್ಧರಿಸಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ, ಎಲ್ಲಾ ಅಂದುಕೊಂಡಂತೆ ಆದಲ್ಲಿ ಡಿಕೆಶಿ ನಾಳೆ ಮಧ್ಯಾಹ್ನ ದೆಹಲಿಯಿಂದ ಹೊರಟು ಬೆಂಗಳೂರಿಗೆ ಆಗಮಿಸುವ ನಿರೀಕ್ಷೆ ಇದೆ. ನಿನ್ನೆ ರಾತ್ರಿಯೇ ಜೈಲಿನಿಂದ ಹೊರಬಂದಿರುವ ಅವರು ಮಾಧ್ಯಮಗಳ ಜೊತೆ ಮಾತನಾಡಿದ ಸಂದರ್ಭ, ನಾಳೆ ವಕೀಲರನ್ನು ಭೇಟಿ ಮಾಡಿ ಸಮಾಲೋಚಿಸುವುದಾಗಿ ತಿಳಿಸಿದ್ದಾರೆ. ಇದರಿಂದಾಗಿ ಇಂದು ಅವರು ನಗರಕ್ಕೆ ಬರಬಹುದು ಎಂದು ನಿರೀಕ್ಷಿಸಿದ್ದ ಅಭಿಮಾನಿಗಳಿಗೆ ನಿರಾಸೆ ಉಂಟಾಗಿತ್ತು. ಆದರೂ ವಕೀಲರನ್ನು ಭೇಟಿ ಮಾಡಿ ಸಂಜೆ ವೇಳೆಗಾದರೂ ಅವರು ವಾಪಸ್ ಆಗುವ ನಿರೀಕ್ಷೆ ಹೊಂದಲಾಗಿತ್ತು.

ಬೆಂಗಳೂರು: ಜೈಲಿನಿಂದ ಬಿಡುಗಡೆಯಾಗಿದ್ದರೂ ಕೂಡ ಮಾಜಿ ಸಚಿವ ಡಿಕೆ ಶಿವಕುಮಾರ್ ರಾಜ್ಯಕ್ಕೆ ವಾಪಸಾಗುವುದು ವಿಳಂಬವಾಗಲಿದೆ.

ಅಕ್ರಮ ಹಣ ವರ್ಗಾವಣೆ ತಡೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಡಿಕೆಶಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್‌ ಇಂದು ವಿಚಾರಣೆಯನ್ನು ಕೈಗೆತ್ತಿಕೊಳ್ಳುವ ಸಾಧ್ಯತೆ ಇದ್ದು, ತಮ್ಮ ಪರ ವಕೀಲರ ಜೊತೆ ಸಮಾಲೋಚಿಸಲು ನಿರ್ಧರಿಸಿರುವ ಡಿಕೆಶಿ ಇಂದು ದಿಲ್ಲಿಯಲ್ಲಿ ಉಳಿಯಲಿದ್ದಾರೆ.

ತಮ್ಮ ವಕೀಲರ ಜೊತೆ ಮುಂದಿನ ಕಾನೂನು ಹೋರಾಟಗಳ ಕುರಿತು ಅವರು ಚರ್ಚಿಸಲಿದ್ದಾರೆ. ನಾಳೆಯವರೆಗೆ ಕಾಯ್ದು ಸುಪ್ರೀಂಕೋರ್ಟ್​ನ ನಿರ್ಧಾರ ನೋಡಿ ಅವರು ರಾಜ್ಯಕ್ಕೆ ಪ್ರಯಾಣಿಸುವ ನಿರ್ಧಾರ ಕೈಗೊಳ್ಳಲಿದ್ದಾರೆ. ಒಂದೊಮ್ಮೆ ಸುಪ್ರೀಂಕೋರ್ಟ್, ದಿಲ್ಲಿ ಹೈಕೋರ್ಟ್ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಿದರೆ ಶಿವಕುಮಾರ್ ಮತ್ತೆ ತಿಹಾರ್ ಜೈಲು ಸೇರಬೇಕಾಗುತ್ತದೆ. ಈ ಹಿನ್ನೆಲೆ ಸುಪ್ರೀಂ ನಿಲುವು ತಿಳಿದುಕೊಂಡು, ನಿರಾಳವಾದರೆ ಮಾತ್ರ ರಾಜ್ಯಕ್ಕೆ ವಾಪಸಾಗಲು ಶಿವಕುಮಾರ್ ನಿರ್ಧರಿಸಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ, ಎಲ್ಲಾ ಅಂದುಕೊಂಡಂತೆ ಆದಲ್ಲಿ ಡಿಕೆಶಿ ನಾಳೆ ಮಧ್ಯಾಹ್ನ ದೆಹಲಿಯಿಂದ ಹೊರಟು ಬೆಂಗಳೂರಿಗೆ ಆಗಮಿಸುವ ನಿರೀಕ್ಷೆ ಇದೆ. ನಿನ್ನೆ ರಾತ್ರಿಯೇ ಜೈಲಿನಿಂದ ಹೊರಬಂದಿರುವ ಅವರು ಮಾಧ್ಯಮಗಳ ಜೊತೆ ಮಾತನಾಡಿದ ಸಂದರ್ಭ, ನಾಳೆ ವಕೀಲರನ್ನು ಭೇಟಿ ಮಾಡಿ ಸಮಾಲೋಚಿಸುವುದಾಗಿ ತಿಳಿಸಿದ್ದಾರೆ. ಇದರಿಂದಾಗಿ ಇಂದು ಅವರು ನಗರಕ್ಕೆ ಬರಬಹುದು ಎಂದು ನಿರೀಕ್ಷಿಸಿದ್ದ ಅಭಿಮಾನಿಗಳಿಗೆ ನಿರಾಸೆ ಉಂಟಾಗಿತ್ತು. ಆದರೂ ವಕೀಲರನ್ನು ಭೇಟಿ ಮಾಡಿ ಸಂಜೆ ವೇಳೆಗಾದರೂ ಅವರು ವಾಪಸ್ ಆಗುವ ನಿರೀಕ್ಷೆ ಹೊಂದಲಾಗಿತ್ತು.

Intro:newsBody:ಇಂದು ದಿಲ್ಲಿಯಲ್ಲೇ ಇರಲಿದ್ದಾರೆ ಡಿಕೆಶಿ, ನಾಳೆ ಸಂಜೆ ನಗರಕ್ಕೆ ಆಗಮಿಸುವ ಸಾಧ್ಯತೆ

ಬೆಂಗಳೂರು: ಜೈಲಿನಿಂದ ಬಿಡುಗಡೆಯಾಗಿದ್ದರೂ ಕೂಡ ಮಾಜಿ ಸಚಿವ ಡಿಕೆ ಶಿವಕುಮಾರ್ ರಾಜ್ಯಕ್ಕೆ ವಾಪಸಾಗುವುದು ವಿಳಂಬವಾಗಲಿದೆ.
ದಿಲ್ಲಿ ಹೈಕೋರ್ಟ್ ಡಿಕೆಶಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸುಪ್ರೀಂಕೋರ್ಟ್ ಮೊರೆ ಹೋಗಿರುವ ಹಿನ್ನೆಲೆ ಇಂದು ವಿಚಾರಣೆಯನ್ನು ಕೈಗೆತ್ತಿಕೊಳ್ಳುವ ಸಾಧ್ಯತೆ ಇದ್ದು ತಮ್ಮ ಪರವಾಗಿಲ್ಲ ಜೊತೆ ಸಮಾಲೋಚಿಸಲು ನಿರ್ಧರಿಸಿರುವ ಶಿವಕುಮಾರ್ ಇಂದು ದಿಲ್ಲಿಯಲ್ಲಿ ಉಳಿಯಲಿದ್ದಾರೆ. ತಮ್ಮ ವಕೀಲರ ಜೊತೆ ಮುಂದಿನ ಸಾಧ್ಯಾಸಾಧ್ಯತೆಗಳ ಕುರಿತು ಚರ್ಚಿಸಲಿದ್ದಾರೆ. ನಾಳೆಯವರೆಗೆ ಕಾಯ್ದು ಸುಪ್ರೀಂ ಕೋರ್ಟ್ನ ನಿರ್ಧಾರ ವೀಕ್ಷಿಸಿ ರಾಜ್ಯಕ್ಕೆ ಬರುವ ನಿರ್ಧಾರ ಕೈಗೊಳ್ಳಲಿದ್ದಾರೆ.
ಒಂದೊಮ್ಮೆ ಸುಪ್ರೀಂಕೋರ್ಟ್ ದಿಲ್ಲಿ ಹೈಕೋರ್ಟ್ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಿದರೆ ಶಿವಕುಮಾರ್ ಮತ್ತೆ ತಿಹಾರ್ ಜೈಲ್ ಆಗಬೇಕಾಗುತ್ತದೆ. ಈ ಹಿನ್ನೆಲೆ ಸುಪ್ರೀಂ ನಿಲುವು ತಿಳಿದುಕೊಂಡೆ ನಿರಾಳವಾದ ಮಾತ್ರ ರಾಜ್ಯಕ್ಕೆ ವಾಪಸಾಗಲು ಶಿವಕುಮಾರ್ ನಿರ್ಧರಿಸಿದ್ದಾರೆ. ಹೀಗಾಗಿ ನಾಳೆಯವರೆಗೆ ದಿಲ್ಲಿಯಲ್ಲೇ ಉಳಿಯಲಿದ್ದು ಆನಂತರವೇ ನಿರ್ಧಾರ ಕೈಗೊಳ್ಳಲಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ ಎಲ್ಲಾ ಅಂದುಕೊಂಡಂತೆ ಆದಲ್ಲಿ ಡಿಕೆ ಶಿವಕುಮಾರ್ ನಾಳೆ ಮಧ್ಯಾಹ್ನ ಇಲ್ಲಿಂದ ಹೊರಟು ಬೆಂಗಳೂರಿಗೆ ಆಗಮಿಸುವ ನಿರೀಕ್ಷೆ ಇದೆ. ನಿನ್ನೆ ರಾತ್ರಿಯೇ ಜೈಲಿನಿಂದ ಆಚೆ ಬಂದ ಶಿವಕುಮಾರ್ ಮಾಧ್ಯಮಗಳ ಜೊತೆ ಮಾತನಾಡಿದ ಸಂದರ್ಭ ನಾಳೆ ವಕೀಲರನ್ನು ಭೇಟಿ ಮಾಡಿ ಸಮಾಲೋಚಿಸುವುದು ತಿಳಿಸಿದ್ದಾರೆ. ಇದರಿಂದಾಗಿ ಇಂದು ಅವರು ನಗರಕ್ಕೆ ಬರಬಹುದು ಎಂದು ನಿರೀಕ್ಷಿಸಿದ್ದ ಅಭಿಮಾನಿಗಳಿಗೆ ನಿರಾಸೆ ಉಂಟಾಗಿತ್ತು. ಆದರೂ ವಕೀಲರನ್ನು ಭೇಟಿ ಮಾಡಿ ಸಂಜೆ ಹೊತ್ತಿಗಾದರೂ ಅವರು ವಾಪಸ್ ಆಗುವ ನಿರೀಕ್ಷೆ ಹೊಂದಲಾಗಿತ್ತು. ಆದರೆ ಇದೀಗ ತಿಳಿದು ಬಂದ ಮಾಹಿತಿ ಪ್ರಕಾರ ನಾಳೆ ಮಧ್ಯಾಹ್ನದವರೆಗೂ ಶಿವಕುಮಾರ್ ದಿಲ್ಲಿಯಲ್ಲಿ ಉಳಿಯಲಿದ್ದಾರೆ. ಆ ನಂತರವೇ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ.Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.