ETV Bharat / state

ಅತಿ ಹೆಚ್ಚು ವಾಹನ ಸಂಚರಿಸುವ ಪೀಣ್ಯಾ ಎಲಿವೇಟೆಡ್ ಫ್ಲೈಓವರ್ ರಿಪೇರಿಗೆ ತಕ್ಷಣ ಕ್ರಮ : ಸಿಎಂ

author img

By

Published : Feb 15, 2022, 5:34 PM IST

8ನೇ ಮೈಲಿಯಿಂದ ಲಕ್ಷಾಂತರ ವಾಹನ ಬರುತ್ತಿವೆ. ಇದರಿಂದಾಗಿ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗುತ್ತಿದೆ. ಈ ಬಗ್ಗೆ ಕ್ರಮಕೈಗೊಳ್ಳುವಂತೆ ಸೂಚಿಸಿದರು. ಮಧ್ಯೆಪ್ರವೇಶಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಚಾಲಕರಿಗೆ ತೊಂದರೆ ಆಗುತ್ತಿದೆ. ಸರ್ಕಾರ ದೃಢವಾದ ನಿಲುವು ತೆಗೆದುಕೊಳ್ಳಬೇಕು ಎಂದು ಸೂಚಿಸಿದರು..

traffic-jam-in-elevated-flyover-near-pinya-repair-work-done-soon
ಸಿ ಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಅತಿ ಹೆಚ್ಚು ವಾಹನ ಸಂಚರಿಸುವ ಪೀಣ್ಯಾ ಎಲಿವೇಟೆಡ್ ಫ್ಲೈಓವರ್ ಎರಡು ತಿಂಗಳಾದರೂ ರಿಪೇರಿ ಆಗದೆ ಕೆಲಸ ಕುಂಠಿತಗೊಂಡಿದೆ ಎಂದು ಜೆಡಿಎಸ್‍ ಶಾಸಕ ಮಂಜುನಾಥ್ ವಿಧಾನಸಭೆಯಲ್ಲಿ ಇಂದು ವಿಷಯ ಪ್ರಸ್ತಾಪಿಸಿದರು.

ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಈ ಭಾಗದ ಜನ ಟ್ರಾಫಿಕ್ ಜಾಮ್‌ನಿಂದ ಬಳಲುತ್ತಿದ್ದಾರೆ. ಆ್ಯಂಬುಲೆನ್ಸ್‌ಲ್ಲಿ ರೋಗಿಯು ಸಾವು- ಬದುಕಿನ ಮಧ್ಯೆ ಹೋರಾಡುವ ಪರಿಸ್ಥಿತಿ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಪತ್ರ ಬರೆದರೂ ಸೂಕ್ತ ಉತ್ತರ ಸಿಗುತ್ತಿಲ್ಲ.

ಲಘು ವಾಹನ ಅಥವಾ ಆ್ಯಂಬುಲೆನ್ಸ್ ಇಲ್ಲಿ ಸಂಚರಿಸಲು ಬಿಡಬಹುದಿತ್ತು. ಆದರೆ, ವಾಹನಗಳನ್ನು ಬಿಡುತ್ತಿಲ್ಲ. ಟೋಲ್ ಸಂಗ್ರಹ ಮಾಡುತ್ತಿದ್ದು,ಮೊದಲು ಟೋಲ್ ಸಂಗ್ರಹ ಮಾಡುವುದನ್ನು ತಡೆಯುವಂತೆ ಶಾಸಕರು ಒತ್ತಾಯಿಸಿದರು.

8ನೇ ಮೈಲಿಯಿಂದ ಲಕ್ಷಾಂತರ ವಾಹನ ಬರುತ್ತಿವೆ. ಇದರಿಂದಾಗಿ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗುತ್ತಿದೆ. ಈ ಬಗ್ಗೆ ಕ್ರಮಕೈಗೊಳ್ಳುವಂತೆ ಸೂಚಿಸಿದರು. ಮಧ್ಯೆಪ್ರವೇಶಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಚಾಲಕರಿಗೆ ತೊಂದರೆ ಆಗುತ್ತಿದೆ. ಸರ್ಕಾರ ದೃಢವಾದ ನಿಲುವು ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

ಈ ಬಗ್ಗೆ ಸಿಎಂ ಬೊಮ್ಮಾಯಿ ಮಾತನಾಡಿ, ಈ ವಿಚಾರ ರಾಷ್ಟ್ರೀಯ ಹೆದ್ದಾರಿಗೆ ಬರುತ್ತದೆ. ಕಳಪೆ ಕಾಮಗಾರಿ ಮಾಡಿರುವುದೇ ಇದಕ್ಕೆ ಕಾರಣ ಎಂದು ಹಿಂದಿನ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಈಗ ಲೋಡ್ ಟೆಸ್ಟ್ ಮಾಡಲಾಗ್ತಿದೆ. ಕೇಬಲ್ ಟೆಸ್ಟ್, ಲೋಡ್ ಟೆಸ್ಟ್ ಮಾಡಿದಾಗ ಕಂಬಿಗಳು ಬಾಗುತ್ತಿವೆ.

ಆದ್ದರಿಂದ ಲಘು ವಾಹನಗಳ ಸಂಚಾರದ ಬಗ್ಗೆ ವಾರದಲ್ಲಿ ತೀರ್ಮಾನ ಮಾಡಿ ಅಂತಾ ಸೂಚಿಸಿದ್ದು, ಇನ್ನೆರಡು ದಿನದಲ್ಲಿ ತಿಳಿಸಲಿದ್ದಾರೆ. ಘನ ವಾಹನಗಳ ಸಂಚಾರಕ್ಕೆ ಯೋಗ್ಯವಿಲ್ಲ ಎಂದು ತಿಳಿದಿದೆ. ಮತ್ತೊಮ್ಮೆ ಹೊಸದಾಗಿ ಮಾಡಬೇಕೆಂದು ಇಂಜಿನಿಯರ್‌ಗಳು ಹೇಳಿದ್ದಾರೆ ಎಂದರು.

ಈ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದೇನೆ. ಫೈಓವರ್ ನಿರ್ಮಾಣದ ಬಗ್ಗೆ ಪ್ರಸ್ತಾಪಿಸಿದ್ದೇನೆ. ಲಘು ವಾಹನ ಸಂಚಾರ ಸಾಧ್ಯವಿದ್ದರೆ, ಅವುಗಳ ಸಂಚಾರದ ಬಗೆಗೆ ಕ್ರಮಕೈಗೊಳ್ಳಲಿದ್ದೇವೆ ಎಂದು ಮುಖ್ಯಮಂತ್ರಿಗಳು ಇದೇ ವೇಳೆ ವಿವರಿಸಿದರು.

ಓದಿ : ನಾವು ಹಿಜಾಬ್ ತೆಗೆಯೋದಿಲ್ಲ, ಬೇಕಿದ್ದರೇ ಶಾಲೆಯನ್ನೇ ಮುಚ್ಚಿ

ಬೆಂಗಳೂರು : ಅತಿ ಹೆಚ್ಚು ವಾಹನ ಸಂಚರಿಸುವ ಪೀಣ್ಯಾ ಎಲಿವೇಟೆಡ್ ಫ್ಲೈಓವರ್ ಎರಡು ತಿಂಗಳಾದರೂ ರಿಪೇರಿ ಆಗದೆ ಕೆಲಸ ಕುಂಠಿತಗೊಂಡಿದೆ ಎಂದು ಜೆಡಿಎಸ್‍ ಶಾಸಕ ಮಂಜುನಾಥ್ ವಿಧಾನಸಭೆಯಲ್ಲಿ ಇಂದು ವಿಷಯ ಪ್ರಸ್ತಾಪಿಸಿದರು.

ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಈ ಭಾಗದ ಜನ ಟ್ರಾಫಿಕ್ ಜಾಮ್‌ನಿಂದ ಬಳಲುತ್ತಿದ್ದಾರೆ. ಆ್ಯಂಬುಲೆನ್ಸ್‌ಲ್ಲಿ ರೋಗಿಯು ಸಾವು- ಬದುಕಿನ ಮಧ್ಯೆ ಹೋರಾಡುವ ಪರಿಸ್ಥಿತಿ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಪತ್ರ ಬರೆದರೂ ಸೂಕ್ತ ಉತ್ತರ ಸಿಗುತ್ತಿಲ್ಲ.

ಲಘು ವಾಹನ ಅಥವಾ ಆ್ಯಂಬುಲೆನ್ಸ್ ಇಲ್ಲಿ ಸಂಚರಿಸಲು ಬಿಡಬಹುದಿತ್ತು. ಆದರೆ, ವಾಹನಗಳನ್ನು ಬಿಡುತ್ತಿಲ್ಲ. ಟೋಲ್ ಸಂಗ್ರಹ ಮಾಡುತ್ತಿದ್ದು,ಮೊದಲು ಟೋಲ್ ಸಂಗ್ರಹ ಮಾಡುವುದನ್ನು ತಡೆಯುವಂತೆ ಶಾಸಕರು ಒತ್ತಾಯಿಸಿದರು.

8ನೇ ಮೈಲಿಯಿಂದ ಲಕ್ಷಾಂತರ ವಾಹನ ಬರುತ್ತಿವೆ. ಇದರಿಂದಾಗಿ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗುತ್ತಿದೆ. ಈ ಬಗ್ಗೆ ಕ್ರಮಕೈಗೊಳ್ಳುವಂತೆ ಸೂಚಿಸಿದರು. ಮಧ್ಯೆಪ್ರವೇಶಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಚಾಲಕರಿಗೆ ತೊಂದರೆ ಆಗುತ್ತಿದೆ. ಸರ್ಕಾರ ದೃಢವಾದ ನಿಲುವು ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

ಈ ಬಗ್ಗೆ ಸಿಎಂ ಬೊಮ್ಮಾಯಿ ಮಾತನಾಡಿ, ಈ ವಿಚಾರ ರಾಷ್ಟ್ರೀಯ ಹೆದ್ದಾರಿಗೆ ಬರುತ್ತದೆ. ಕಳಪೆ ಕಾಮಗಾರಿ ಮಾಡಿರುವುದೇ ಇದಕ್ಕೆ ಕಾರಣ ಎಂದು ಹಿಂದಿನ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಈಗ ಲೋಡ್ ಟೆಸ್ಟ್ ಮಾಡಲಾಗ್ತಿದೆ. ಕೇಬಲ್ ಟೆಸ್ಟ್, ಲೋಡ್ ಟೆಸ್ಟ್ ಮಾಡಿದಾಗ ಕಂಬಿಗಳು ಬಾಗುತ್ತಿವೆ.

ಆದ್ದರಿಂದ ಲಘು ವಾಹನಗಳ ಸಂಚಾರದ ಬಗ್ಗೆ ವಾರದಲ್ಲಿ ತೀರ್ಮಾನ ಮಾಡಿ ಅಂತಾ ಸೂಚಿಸಿದ್ದು, ಇನ್ನೆರಡು ದಿನದಲ್ಲಿ ತಿಳಿಸಲಿದ್ದಾರೆ. ಘನ ವಾಹನಗಳ ಸಂಚಾರಕ್ಕೆ ಯೋಗ್ಯವಿಲ್ಲ ಎಂದು ತಿಳಿದಿದೆ. ಮತ್ತೊಮ್ಮೆ ಹೊಸದಾಗಿ ಮಾಡಬೇಕೆಂದು ಇಂಜಿನಿಯರ್‌ಗಳು ಹೇಳಿದ್ದಾರೆ ಎಂದರು.

ಈ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದೇನೆ. ಫೈಓವರ್ ನಿರ್ಮಾಣದ ಬಗ್ಗೆ ಪ್ರಸ್ತಾಪಿಸಿದ್ದೇನೆ. ಲಘು ವಾಹನ ಸಂಚಾರ ಸಾಧ್ಯವಿದ್ದರೆ, ಅವುಗಳ ಸಂಚಾರದ ಬಗೆಗೆ ಕ್ರಮಕೈಗೊಳ್ಳಲಿದ್ದೇವೆ ಎಂದು ಮುಖ್ಯಮಂತ್ರಿಗಳು ಇದೇ ವೇಳೆ ವಿವರಿಸಿದರು.

ಓದಿ : ನಾವು ಹಿಜಾಬ್ ತೆಗೆಯೋದಿಲ್ಲ, ಬೇಕಿದ್ದರೇ ಶಾಲೆಯನ್ನೇ ಮುಚ್ಚಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.