ETV Bharat / state

ಸಂಚಾರ ದಟ್ಟಣೆ ತಪ್ಪಿಸಲು ಬಿಬಿಎಂಪಿ ಪ್ಲಾನ್​.. ತುಷಾರ್ ಗಿರಿನಾಥ್ ಮಾಹಿತಿ - ಸಂಚಾರ ದಟ್ಟಣೆ ತಪ್ಪಿಸುವ ಕ್ರಮದ ಬಗ್ಗೆ ತುಷಾರ್ ಗಿರಿನಾಥ್​ ಪ್ರತಿಕ್ರಿಯೆ

ಬೆಂಗಳೂರಲ್ಲಿ ಸಂಚಾರ ದಟ್ಟಣೆ ತಡೆಗೆ ಬಿಬಿಎಂಪಿ ಪ್ಲಾನ್​- ಅಧಿಕಾರಿಗಳಿಗೆ ವಿವಿಧ ಸೂಚನೆ-ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾತನಾಡಿದರು
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾತನಾಡಿದರು
author img

By

Published : Jul 6, 2022, 5:28 PM IST

ಬೆಂಗಳೂರು: ನಗರದಲ್ಲಿ ಸಂಚಾರ ದಟ್ಟಣೆ ಸಂಬಂಧ 10ಕ್ಕೂ ಹೆಚ್ಚು ಟ್ರಾಫಿಕ್ ಜಂಕ್ಷನ್​ಗಳನ್ನು ಗುರುತು ಮಾಡಲಾಗಿದೆ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು. ಇಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ‌ ವಾರ ಮೂರು ಜಾಗಗಳಿಗೆ ಭೇಟಿ ನೀಡಲಾಗಿದೆ. ಅದರಲ್ಲಿ ಗೊರಗುಂಟೇಪಾಳ್ಯ, ಹೆಬ್ಬಾಳ, ಕೆ. ಆರ್​ ಪುರ ಮುಖ್ಯವಾಗಿದೆ ಎಂದರು.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾತನಾಡಿದರು

ಮಂಗಳವಾರ ರಾತ್ರಿ ಸಿಂಧೂರ ರಸ್ತೆ ಕಡೆಯಿಂದ ಸಾರಕ್ಕಿ ಜಂಕ್ಷನ್ ಕಡೆಯ ರಸ್ತೆಯಲ್ಲಿ ಪಾಲಿಕೆ ವತಿಯಿಂದ ಅಳವಡಿಸಿರುವ ರಸ್ತೆಯ ನಾಮಫಲಕ, ಬೆಸ್ಕಾಂ ನವರು ಅಳವಡಿಸಿರುವ ಕಾಂಕ್ರಿಟ್ ಹಾಗೂ ಝೀರೋ ಟಾಲರೆನ್ಸ್ ಬೋರ್ಡ್‌ನ್ನು ಸ್ಥಳಾಂತರಿಸಿ, ಪಾದಚಾರಿ ಮಾರ್ಗವನ್ನು ಸರಿಪಡಿಸಿ ಎಡಭಾಗಕ್ಕೆ ಹೋಗುವ ವಾಹನಗಳಿಗೆ ಸುಗಮವಾಗಿ ಚಲಿಸಲು ಅವಕಾಶ ಕಲ್ಪಿಸಲಾಗಿದೆ.

ಬಿ.ಎಂ.ಆರ್.ಸಿ.ಎಲ್ ಪಿಲ್ಲರ್‌ಗೆ ಅಳವಡಿಸಿರುವ ಸಿಗ್ನಲ್ ಲೈಟ್ ಎತ್ತರವನ್ನು ಇನ್ನೂ ಮೂರು ಅಡಿ ಎತ್ತರಕ್ಕೆ ಎತ್ತರಿಸಬೇಕಿದೆ. ಸಾರಕ್ಕಿ ಸಿಗ್ನಲ್‌ಗೆ ಹೊಂದಿಕೊಂಡಂತಿರುವ ಜೆ. ಪಿ ನಗರ ಮೆಟ್ರೋ ನಿಲ್ದಾಣದ 14ನೇ ಇ ರಸ್ತೆಯಿಂದ ವಾಹನಗಳು ಪಾದಚಾರಿ ಮಾರ್ಗ ಮುಖೇನ ಕನಕಪುರ ರಸ್ತೆಗೆ ವೇಗವಾಗಿ ಬರುವುದರಿಂದ ಅಪಘಾತಗಳು ಉಂಟಾಗುತ್ತಿವೆ ಎಂದು ತಿಳಿಸಿದರು.

ಒಂದು ವಾರದಲ್ಲಿ ಕಾಮಗಾರಿ ಪೂರ್ಣ: ಜಯದೇವ ಮೇಲ್ಸೇತುವೆ, ಈಸ್ಟ್ ಎಂಡ್ ಮುಖ್ಯ ರಸ್ತೆಯ ಕಡೆಗೆ ರೋಡ್ ಸರ್ಫೆಸಿಂಗ್ ಸರಿಪಡಿಸುವ ವಿದ್ಯುತ್ ದೀಪಗಳನ್ನು ಅಳವಡಿಸಬೇಕಿದೆ. ಕೆಳಸೇತುವೆಯಲ್ಲಿ ವಾಟರ್ ಲಾಗಿಂಗ್ ಆಗುತ್ತಿದೆ. ಅದಕ್ಕಾಗಿ ಡ್ರೈನೇಜ್ ಕಾಮಗಾರಿ ಪ್ರಗತಿಯಲ್ಲಿದ್ದು, ಒಂದು ವಾರದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಆಡಳಿತಗಾರರಿಂದ ಮೆಟ್ರೊ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಕಟ್ಟಡ ಭಗ್ನಾವಶೇಷಗಳ ತೆರವು: ಮೆಟ್ರೋ ವತಿಯಿಂದ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳಬೇಕಿದ್ದು, ಕೂಡಲೇ ಅದನ್ನು ಮಾಡಬೇಕು. ಸರ್ವೀಸ್ ರಸ್ತೆಯ ಬದಿ ಕಟ್ಟಡ ಭಗ್ನಾವಶೇಷಗಳನ್ನು ಹಾಕಿದ್ದು, ಅದನ್ನು ತೆರವುಗೊಳಿಸಲು ನಿನ್ನೆ ರಾತ್ರಿ ಹೇಳಲಾಗಿದೆ ಎಂದರು.

ರಾಜಕಾಲುವೆಯಿಂದ ನೀರು ಉಕ್ಕಿ ಹರಿಯುವುದನ್ನು ತಪ್ಪಿಸಲು ಸೂಚನೆ: ಬಿ.ಟಿ.ಎಂ ಲೇಔಟ್ ಸಿಲ್ಕ್ ಬೋರ್ಡ್ ಕಡೆಗೆ ಎರಡು ಬದಿ ಚರಂಡಿ ಹಾಳಾಗಿರುವುದರಿಂದ ಮಳೆ ಬಂದಾಗ ಚರಂಡಿ ನೀರು ಮತ್ತು ಮಳೆ ನೀರು ಒಟ್ಟಾಗಿ ಸೇರಿ ರಾಜಕಾಲುವೆಯಿಂದ ಉಕ್ಕಿ ಹರಿಯುವುದರಿಂದ ವಾಹನಗಳ ಸಂಚಾರಕ್ಕೆ ಸಾಕಷ್ಟು ಸಮಸ್ಯೆ ಆಗುತ್ತಿದೆ. ರಾಜಕಾಲುವೆ ವಿಭಾಗದಿಂದ ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಂಡು ಸಮಸ್ಯೆಯಾಗುವುದನ್ನು ತಪ್ಪಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯ ಆಯುಕ್ತರು ಉಲ್ಲೇಖಿಸಿದರು.

ಓದಿ: ಡ್ರಗ್ಸ್​ ಪ್ರಕರಣದ ಆರೋಪಿ ಕಿಶೋರ್ ಶೆಟ್ಟಿ ಅಂಗಿ ಬಿಚ್ಚಿಸಿ ನೀತಿ ಪಾಠ ಮಾಡಿದ ಕಮಿಷನರ್​

ಬೆಂಗಳೂರು: ನಗರದಲ್ಲಿ ಸಂಚಾರ ದಟ್ಟಣೆ ಸಂಬಂಧ 10ಕ್ಕೂ ಹೆಚ್ಚು ಟ್ರಾಫಿಕ್ ಜಂಕ್ಷನ್​ಗಳನ್ನು ಗುರುತು ಮಾಡಲಾಗಿದೆ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು. ಇಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ‌ ವಾರ ಮೂರು ಜಾಗಗಳಿಗೆ ಭೇಟಿ ನೀಡಲಾಗಿದೆ. ಅದರಲ್ಲಿ ಗೊರಗುಂಟೇಪಾಳ್ಯ, ಹೆಬ್ಬಾಳ, ಕೆ. ಆರ್​ ಪುರ ಮುಖ್ಯವಾಗಿದೆ ಎಂದರು.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾತನಾಡಿದರು

ಮಂಗಳವಾರ ರಾತ್ರಿ ಸಿಂಧೂರ ರಸ್ತೆ ಕಡೆಯಿಂದ ಸಾರಕ್ಕಿ ಜಂಕ್ಷನ್ ಕಡೆಯ ರಸ್ತೆಯಲ್ಲಿ ಪಾಲಿಕೆ ವತಿಯಿಂದ ಅಳವಡಿಸಿರುವ ರಸ್ತೆಯ ನಾಮಫಲಕ, ಬೆಸ್ಕಾಂ ನವರು ಅಳವಡಿಸಿರುವ ಕಾಂಕ್ರಿಟ್ ಹಾಗೂ ಝೀರೋ ಟಾಲರೆನ್ಸ್ ಬೋರ್ಡ್‌ನ್ನು ಸ್ಥಳಾಂತರಿಸಿ, ಪಾದಚಾರಿ ಮಾರ್ಗವನ್ನು ಸರಿಪಡಿಸಿ ಎಡಭಾಗಕ್ಕೆ ಹೋಗುವ ವಾಹನಗಳಿಗೆ ಸುಗಮವಾಗಿ ಚಲಿಸಲು ಅವಕಾಶ ಕಲ್ಪಿಸಲಾಗಿದೆ.

ಬಿ.ಎಂ.ಆರ್.ಸಿ.ಎಲ್ ಪಿಲ್ಲರ್‌ಗೆ ಅಳವಡಿಸಿರುವ ಸಿಗ್ನಲ್ ಲೈಟ್ ಎತ್ತರವನ್ನು ಇನ್ನೂ ಮೂರು ಅಡಿ ಎತ್ತರಕ್ಕೆ ಎತ್ತರಿಸಬೇಕಿದೆ. ಸಾರಕ್ಕಿ ಸಿಗ್ನಲ್‌ಗೆ ಹೊಂದಿಕೊಂಡಂತಿರುವ ಜೆ. ಪಿ ನಗರ ಮೆಟ್ರೋ ನಿಲ್ದಾಣದ 14ನೇ ಇ ರಸ್ತೆಯಿಂದ ವಾಹನಗಳು ಪಾದಚಾರಿ ಮಾರ್ಗ ಮುಖೇನ ಕನಕಪುರ ರಸ್ತೆಗೆ ವೇಗವಾಗಿ ಬರುವುದರಿಂದ ಅಪಘಾತಗಳು ಉಂಟಾಗುತ್ತಿವೆ ಎಂದು ತಿಳಿಸಿದರು.

ಒಂದು ವಾರದಲ್ಲಿ ಕಾಮಗಾರಿ ಪೂರ್ಣ: ಜಯದೇವ ಮೇಲ್ಸೇತುವೆ, ಈಸ್ಟ್ ಎಂಡ್ ಮುಖ್ಯ ರಸ್ತೆಯ ಕಡೆಗೆ ರೋಡ್ ಸರ್ಫೆಸಿಂಗ್ ಸರಿಪಡಿಸುವ ವಿದ್ಯುತ್ ದೀಪಗಳನ್ನು ಅಳವಡಿಸಬೇಕಿದೆ. ಕೆಳಸೇತುವೆಯಲ್ಲಿ ವಾಟರ್ ಲಾಗಿಂಗ್ ಆಗುತ್ತಿದೆ. ಅದಕ್ಕಾಗಿ ಡ್ರೈನೇಜ್ ಕಾಮಗಾರಿ ಪ್ರಗತಿಯಲ್ಲಿದ್ದು, ಒಂದು ವಾರದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಆಡಳಿತಗಾರರಿಂದ ಮೆಟ್ರೊ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಕಟ್ಟಡ ಭಗ್ನಾವಶೇಷಗಳ ತೆರವು: ಮೆಟ್ರೋ ವತಿಯಿಂದ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳಬೇಕಿದ್ದು, ಕೂಡಲೇ ಅದನ್ನು ಮಾಡಬೇಕು. ಸರ್ವೀಸ್ ರಸ್ತೆಯ ಬದಿ ಕಟ್ಟಡ ಭಗ್ನಾವಶೇಷಗಳನ್ನು ಹಾಕಿದ್ದು, ಅದನ್ನು ತೆರವುಗೊಳಿಸಲು ನಿನ್ನೆ ರಾತ್ರಿ ಹೇಳಲಾಗಿದೆ ಎಂದರು.

ರಾಜಕಾಲುವೆಯಿಂದ ನೀರು ಉಕ್ಕಿ ಹರಿಯುವುದನ್ನು ತಪ್ಪಿಸಲು ಸೂಚನೆ: ಬಿ.ಟಿ.ಎಂ ಲೇಔಟ್ ಸಿಲ್ಕ್ ಬೋರ್ಡ್ ಕಡೆಗೆ ಎರಡು ಬದಿ ಚರಂಡಿ ಹಾಳಾಗಿರುವುದರಿಂದ ಮಳೆ ಬಂದಾಗ ಚರಂಡಿ ನೀರು ಮತ್ತು ಮಳೆ ನೀರು ಒಟ್ಟಾಗಿ ಸೇರಿ ರಾಜಕಾಲುವೆಯಿಂದ ಉಕ್ಕಿ ಹರಿಯುವುದರಿಂದ ವಾಹನಗಳ ಸಂಚಾರಕ್ಕೆ ಸಾಕಷ್ಟು ಸಮಸ್ಯೆ ಆಗುತ್ತಿದೆ. ರಾಜಕಾಲುವೆ ವಿಭಾಗದಿಂದ ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಂಡು ಸಮಸ್ಯೆಯಾಗುವುದನ್ನು ತಪ್ಪಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯ ಆಯುಕ್ತರು ಉಲ್ಲೇಖಿಸಿದರು.

ಓದಿ: ಡ್ರಗ್ಸ್​ ಪ್ರಕರಣದ ಆರೋಪಿ ಕಿಶೋರ್ ಶೆಟ್ಟಿ ಅಂಗಿ ಬಿಚ್ಚಿಸಿ ನೀತಿ ಪಾಠ ಮಾಡಿದ ಕಮಿಷನರ್​

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.