ಬೆಂಗಳೂರು : ಸಹೋದರರ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಮಂಗಳವಾರ ತಡರಾತ್ರಿ ಗೋವಿಂದಪುರ ಠಾಣಾ ವ್ಯಾಪ್ತಿಯ ಪ್ರಶಾಂತ ನಗರದಲ್ಲಿ ನಡೆದಿದೆ. ಕಪಿಲನ್ (37) ಸಹೋದರನಿಂದಲೇ ಕೊಲೆಯಾದ ವ್ಯಕ್ತಿ. ಅಶೋಕನ್ ಕೊಲೆಗೈದ ಆರೋಪಿ ಎಂದು ತಿಳಿದುಬಂದಿದೆ.
ಮನೆಯ ವಿಚಾರವಾಗಿ ಆಗಾಗ ಜಗಳವಾಡುತ್ತಿದ್ದ ಕಪಿಲನ್ ಹಾಗೂ ಆತನ ಅಣ್ಣ ಅಶೋಕನ್ ತಡರಾತ್ರಿ ಕುಡಿದ ಅಮಲಿನಲ್ಲಿ ಜಗಳವಾಡಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಕಪಿಲನ್ ಮೇಲೆ ಹಲ್ಲೆ ಮಾಡಿ, ಅಶೋಕನ್ ತಳ್ಳಿದ್ದಾನೆ. ಹಲ್ಲೆಗೊಳಗಾದ ಕಪಿಲನ್ ನನ್ನು ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಆದಾಗಲೇ ರಕ್ತಸ್ರಾವದಿಂದ ಕಪಿಲನ್ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕಪಿಲನ್ ಪತ್ನಿ ನೀಡಿರುವ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಗೋವಿಂದಪುರ ಠಾಣಾ ಪೊಲೀಸರು ಆರೋಪಿ ಅಶೋಕನ್ಅನ್ನು ಬಂಧಿಸಿದ್ದಾರೆ ಎಂದು ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ಹೇಳಿದ್ದಾರೆ.
ಓದಿ : ಹಾವೇರಿ: ಕರ್ತವ್ಯ ನಿರತ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ಗಳ ಮೇಲೆ ಹಲ್ಲೆ