ETV Bharat / state

ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಸಂಚು ಆರೋಪ: ಇಬ್ಬರು ಆರೋಪಿಗಳ ಬಂಧನ

author img

By

Published : Feb 15, 2023, 4:32 PM IST

Updated : Feb 15, 2023, 6:04 PM IST

ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಪ್ಲಾನ್​ ಪ್ರಕರಣ ಸಂಬಂಧ ಅಪ್ರಾಪ್ತ ಸೇರಿದಂತೆ ಇಬ್ಬರನ್ನು ಬೆಂಗಳೂರಿನ ಬೊಮ್ಮನಹಳ್ಳಿ​​ ಠಾಣೆ ಪೊಲೀಸರು ಬಂಧಿಸಿದ್ದಾರೆ.

two-detained-in-supari-case-for-bjp-mla-satish-reddy-murder
ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಸಂಚು ಆರೋಪ: ಇಬ್ಬರು ಆರೋಪಿಗಳ ಬಂಧನ
ಹತ್ಯೆ ಸಂಚಿನ ಬಗ್ಗೆ ಶಾಸಕ ಸತೀಶ್ ರೆಡ್ಡಿ ಪ್ರತಿಕ್ರಿಯೆ

ಬೆಂಗಳೂರು: ಬಿಜೆಪಿ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಸಂಚು ನಡೆಸಿರುವ ಆರೋಪದಡಿ ಬೊಮ್ಮನಹಳ್ಳಿ ಠಾಣೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಆಪ್ತ ಸಹಾಯಕ ನೀಡಿದ ದೂರಿನನ್ವಯ ಎನ್.ಸಿ.ಆರ್ ದಾಖಲಿಸಿದ್ದ ಪೊಲೀಸರು, ಬಳಿಕ ನ್ಯಾಯಾಲಯದಿಂದ ಅನುಮತಿ ಪಡೆದು ಪ್ರಕರಣ ದಾಖಲಿಸಿ, ಇಬ್ಬರನ್ನು ಬಂಧಿಸಿದ್ದಾರೆ‌.

ರೆಡ್ಡಿ ಆಪ್ತ ಸಹಾಯಕ ದೂರಿನಲ್ಲಿ ಹೇಳಿದ್ದೇನು?: ''ಕಳೆದ ಹದಿನೈದು ದಿ‌ನದಿಂದ ಶಾಸಕರ ಮನೆಯ ಬಳಿ ಅನುಮಾನಾಸ್ಪದ ವ್ಯಕ್ತಿಗಳು ಓಡಾಡುತ್ತಿದ್ದಾರೆ. ಫೆಬ್ರವರಿ 3ರಂದು ಬೊಮ್ಮನಹಳ್ಳಿಯ ಚಂದ್ರು ಎಂಬಾತ ತಮಗೆ ಕರೆ ಮಾಡಿದ್ದ. ಶಾಸಕರ ಹತ್ಯೆಗೆ ಸಂಚು ನಡೆದಿದೆ, ಚಿತ್ರದುರ್ಗದ ಹೊಳಲ್ಕೆರೆಯ ಆಕಾಶ್ ಎಂಬಾತ ತನಗೆ ತಿಳಿಸಿದ್ದಾನೆ ಎಂದು ಚಂದ್ರು ಹೇಳಿದ್ದಾನೆ‌. ಅಲ್ಲದೆ, ಶಾಸಕರ ಹತ್ಯೆಗೆ 2 ಕೋಟಿ ಸುಪಾರಿ ಪಡೆಯಲಾಗಿದೆ ಎಂದೂ ಸಹ ಚಂದ್ರು ಹೇಳಿದ್ದ. ಜೊತೆಗೆ ಸುಪಾರಿ ಪಡೆದವನ ಫೋಟೋವನ್ನೂ ಸಹ ಚಂದ್ರು ಕಳಿಸಿದ್ದ. ನಂತರ ಆ ಫೋಟೊ ಪರಿಶೀಲಿಸಿದಾಗ ಅದರಲ್ಲಿರುವುದು ಬೆಂಗಳೂರಿನ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಎಂಬುದು ಗೊತ್ತಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು'' ಎಂದು ಸತೀಶ್ ರೆಡ್ಡಿಯ ಆಪ್ತ ಸಹಾಯಕ ಹರೀಶ್ ಬಾಬು ದೂರು ನೀಡಿದ್ದಾರೆ. ದೂರಿನ ಅನ್ವಯ ಕಾರ್ಯ ಪ್ರವೃತ್ತರಾದ ಬೊಮ್ಮನಹಳ್ಳಿ ಠಾಣೆ ಪೊಲೀಸರು ಅಪ್ರಾಪ್ತ ಸೇರಿದಂತೆ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಬೊಮ್ಮನಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕ ಸತೀಶ್ ರೆಡ್ಡಿ ಪ್ರತಿಕ್ರಿಯೆ : ಪ್ರಕರಣದ ಬಗ್ಗೆ ವಿಧಾನಸೌಧದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಶಾಸಕ ಸತೀಶ್ ರೆಡ್ಡಿ, ಸುಪಾರಿ ಹಿಂದೆ ರಾಜಕೀಯ ದುರುದ್ದೇಶವೇ ಇದೆ. ನಾನು ಯಾರಿಗೂ ದ್ರೋಹ ಮಾಡಿಲ್ಲ. ನನಗೆ ಯಾವುದೇ ಬೆದರಿಕೆ ಕರೆ ಬಂದಿಲ್ಲ. ಆದರೆ, ಸುಪಾರಿ ಬಗ್ಗೆ ಮಾತಾಡಿರುವವರ ಆಡಿಯೋ ಪೊಲೀಸರಿಗೆ ಸಿಕ್ಕಿದೆ. ಅಲ್ಲದೇ, ನಾನು ಯಾರ ಮೇಲೆಯೂ ಆರೋಪ ಮಾಡುವುದಿಲ್ಲ. ಯಾವುದೇ ರಾಜಕೀಯ ಪಕ್ಷದ ಮೇಲೂ ಆರೋಪ ಮಾಡಲ್ಲ. ಆದರೆ, ಪಾರದರ್ಶಕ ತನಿಖೆ ಆಗಲಿ ಎಂದು ಆಗ್ರಹಿಸಿದರು.

''ನನಗೆ ನಿನ್ನೆ ಸಂಜೆ ಪೊಲೀಸರು ತಿಳಿಸಿದರು. ಈಗ ಚುನಾವಣೆ ಇದೆ, ರಾಜಕೀಯ ಕಾರಣಗಳೂ ಇರಬಹುದು. ಇದರ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಆಗ ಸಿಎಂ ಭದ್ರತೆ ತೆಗೆದುಕೊಳ್ಳುವಂತ ಹೇಳಿದರು. ಆದರೆ, ನನಗೆ ಭದ್ರತೆ ಬೇಡ ಅಂದಿದ್ದೇನೆ. ಇದರ ಹಿಂದೆ ರಾಜಕೀಯ ಉದ್ದೇಶ ಇದೆ'' ಎಂದರು.

''ನಾನು ಭಯ ಪಡುವುದಿಲ್ಲ. ಅಕ್ರಮವಾಗಿ ಹಣ ಸಂಪಾದನೆ ಮಾಡುವ ಉದ್ದೇಶವೂ ಇರಬಹುದು. ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಆರೋಪಿಗಳು ನನ್ನ ಚಲನವಲನದ ಮೇಲೆ ಗಮನ ಇಟ್ಟಿದ್ದರಂತೆ, ಆರೋಪಿಗಳು ಎಲ್ಲೆಲ್ಲಿ ಓಡಾಡಿದ್ದಾರೆ. ಏನೇನು ಮಾಡಿದ್ದಾರೆ ಎಂಬುದನ್ನು ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ. ನಾನು ಭಯ ಪಡುವವನಲ್ಲ. ಇದಕ್ಕೆಲ್ಲ ಹೆದರಲ್ಲ. ನಾನು ಪೂರ್ತಿ ರಾಜಕಾರಣದಲ್ಲೇ ಇದ್ದೇನೆ. ಈಗ ಯಾವುದೇ ಉದ್ಯಮದಲ್ಲಿ ನಾನು ಇಲ್ಲ. ಉದ್ಯಮ ಕಾರಣ ಸುಪಾರಿ ಹಿಂದೆ ಇಲ್ಲ. ರಾಜಕೀಯ ಕಾರಣವೇ ಸುಪಾರಿ ಹಿಂದೆ ಇದೆ. ಪೊಲೀಸರು ತನಿಖೆ ಮಾಡಿ ಅಪರಾಧಿಗಳನ್ನು ಜೈಲಿಗೆ ಕಳಿಸಲಿ'' ಎಂದು ಒತ್ತಾಯಿಸಿದರು.

ಅರಗ ಜ್ಞಾನೇಂದ್ರ ಪ್ರಕರಣದ ಬಗ್ಗೆ ಹೇಳಿದ್ದಿಷ್ಟು! : ಶಾಸಕ ಸತೀಶ್ ರೆಡ್ಡಿ ಅವರ ಜೀವಕ್ಕೆ ಸುಪಾರಿ ಕೊಟ್ಟಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಎಫ್ಐಆರ್ ಆಗಿದೆ. ತನಿಖೆ ನಡೆಯುತ್ತಿದ್ದು, ಈ ಸಂಬಂಧ ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ವಿಚಾರಣೆ ನಂತರ ಯಾವ ಹಿನ್ನೆಲೆಯಲ್ಲಿ ಆಗಿದೆ ಅಂತ ಹೊರಗೆ ಬರಬೇಕಾಗಿದೆ. ಈ ಹಂತದಲ್ಲಿ ನನಗೆ ಇರುವ ಮಾಹಿತಿಯನ್ನು ನಿಮ್ಮ ಮುಂದೆ ಹಂಚಿಕೊಳ್ಳಲು ಸಾಧ್ಯವಿಲ್ಲ. ವಿಚಾರಣೆ ಹಂತದಲ್ಲಿದೆ, ಈ ಹಂತದಲ್ಲಿ ಎನು ಹೇಳುವುದಕ್ಕೆ ಆಗುವುದಿಲ್ಲ. ಎಫ್ಐಆರ್​ನಲ್ಲಿ ಕೆಲವರ ಹೆಸರಿದೆ. ವಿಚಾರಣೆಗೆ ಕೆಲವರನ್ನು ಕರೆದುಕೊಂಡು ಬಂದಿದ್ದಾರೆ ಎಂದು ಹೇಳಿದರು.

ನಮ್ಮ ಶಾಸಕರಿಗೆ ಯಾವುದೇ ಬೆದರಿಕೆ ಇದ್ದರೂ ಸಹ ಅವರಿಗೆ ರಕ್ಷಣೆ ಕೊಡುವ ಕೆಲಸವನ್ನು ನಮ್ಮ ಪೊಲೀಸರು ಮಾಡುತ್ತಾರೆ. ನಾನು ಈಗಾಗಲೇ ನಮ್ಮ ಹಿರಿಯ ಅಧಿಕಾರಿಗಳ ಜೊತೆ ಮಾತಾಡಿದ್ದೇನೆ, ಅವರಿಗೆ ಭದ್ರತೆ ಕೊಡುತ್ತಾರೆ ಎಂದು ಗೃಹ ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ಬರ್ತ್ ಡೇ ಗಿಫ್ಟ್ ವಿಚಾರಕ್ಕೆ ಲಿವ್​ ಇನ್​​​​​​​ ರಿಲೇಷನ್​​ಶಿಪ್​​ನಲ್ಲಿದ್ದ​ ಗೆಳತಿ ಹತ್ಯೆ ಮಾಡಿದ್ದ ಆರೋಪಿ ಬಂಧನ..

ಹತ್ಯೆ ಸಂಚಿನ ಬಗ್ಗೆ ಶಾಸಕ ಸತೀಶ್ ರೆಡ್ಡಿ ಪ್ರತಿಕ್ರಿಯೆ

ಬೆಂಗಳೂರು: ಬಿಜೆಪಿ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಸಂಚು ನಡೆಸಿರುವ ಆರೋಪದಡಿ ಬೊಮ್ಮನಹಳ್ಳಿ ಠಾಣೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಆಪ್ತ ಸಹಾಯಕ ನೀಡಿದ ದೂರಿನನ್ವಯ ಎನ್.ಸಿ.ಆರ್ ದಾಖಲಿಸಿದ್ದ ಪೊಲೀಸರು, ಬಳಿಕ ನ್ಯಾಯಾಲಯದಿಂದ ಅನುಮತಿ ಪಡೆದು ಪ್ರಕರಣ ದಾಖಲಿಸಿ, ಇಬ್ಬರನ್ನು ಬಂಧಿಸಿದ್ದಾರೆ‌.

ರೆಡ್ಡಿ ಆಪ್ತ ಸಹಾಯಕ ದೂರಿನಲ್ಲಿ ಹೇಳಿದ್ದೇನು?: ''ಕಳೆದ ಹದಿನೈದು ದಿ‌ನದಿಂದ ಶಾಸಕರ ಮನೆಯ ಬಳಿ ಅನುಮಾನಾಸ್ಪದ ವ್ಯಕ್ತಿಗಳು ಓಡಾಡುತ್ತಿದ್ದಾರೆ. ಫೆಬ್ರವರಿ 3ರಂದು ಬೊಮ್ಮನಹಳ್ಳಿಯ ಚಂದ್ರು ಎಂಬಾತ ತಮಗೆ ಕರೆ ಮಾಡಿದ್ದ. ಶಾಸಕರ ಹತ್ಯೆಗೆ ಸಂಚು ನಡೆದಿದೆ, ಚಿತ್ರದುರ್ಗದ ಹೊಳಲ್ಕೆರೆಯ ಆಕಾಶ್ ಎಂಬಾತ ತನಗೆ ತಿಳಿಸಿದ್ದಾನೆ ಎಂದು ಚಂದ್ರು ಹೇಳಿದ್ದಾನೆ‌. ಅಲ್ಲದೆ, ಶಾಸಕರ ಹತ್ಯೆಗೆ 2 ಕೋಟಿ ಸುಪಾರಿ ಪಡೆಯಲಾಗಿದೆ ಎಂದೂ ಸಹ ಚಂದ್ರು ಹೇಳಿದ್ದ. ಜೊತೆಗೆ ಸುಪಾರಿ ಪಡೆದವನ ಫೋಟೋವನ್ನೂ ಸಹ ಚಂದ್ರು ಕಳಿಸಿದ್ದ. ನಂತರ ಆ ಫೋಟೊ ಪರಿಶೀಲಿಸಿದಾಗ ಅದರಲ್ಲಿರುವುದು ಬೆಂಗಳೂರಿನ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಎಂಬುದು ಗೊತ್ತಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು'' ಎಂದು ಸತೀಶ್ ರೆಡ್ಡಿಯ ಆಪ್ತ ಸಹಾಯಕ ಹರೀಶ್ ಬಾಬು ದೂರು ನೀಡಿದ್ದಾರೆ. ದೂರಿನ ಅನ್ವಯ ಕಾರ್ಯ ಪ್ರವೃತ್ತರಾದ ಬೊಮ್ಮನಹಳ್ಳಿ ಠಾಣೆ ಪೊಲೀಸರು ಅಪ್ರಾಪ್ತ ಸೇರಿದಂತೆ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಬೊಮ್ಮನಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕ ಸತೀಶ್ ರೆಡ್ಡಿ ಪ್ರತಿಕ್ರಿಯೆ : ಪ್ರಕರಣದ ಬಗ್ಗೆ ವಿಧಾನಸೌಧದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಶಾಸಕ ಸತೀಶ್ ರೆಡ್ಡಿ, ಸುಪಾರಿ ಹಿಂದೆ ರಾಜಕೀಯ ದುರುದ್ದೇಶವೇ ಇದೆ. ನಾನು ಯಾರಿಗೂ ದ್ರೋಹ ಮಾಡಿಲ್ಲ. ನನಗೆ ಯಾವುದೇ ಬೆದರಿಕೆ ಕರೆ ಬಂದಿಲ್ಲ. ಆದರೆ, ಸುಪಾರಿ ಬಗ್ಗೆ ಮಾತಾಡಿರುವವರ ಆಡಿಯೋ ಪೊಲೀಸರಿಗೆ ಸಿಕ್ಕಿದೆ. ಅಲ್ಲದೇ, ನಾನು ಯಾರ ಮೇಲೆಯೂ ಆರೋಪ ಮಾಡುವುದಿಲ್ಲ. ಯಾವುದೇ ರಾಜಕೀಯ ಪಕ್ಷದ ಮೇಲೂ ಆರೋಪ ಮಾಡಲ್ಲ. ಆದರೆ, ಪಾರದರ್ಶಕ ತನಿಖೆ ಆಗಲಿ ಎಂದು ಆಗ್ರಹಿಸಿದರು.

''ನನಗೆ ನಿನ್ನೆ ಸಂಜೆ ಪೊಲೀಸರು ತಿಳಿಸಿದರು. ಈಗ ಚುನಾವಣೆ ಇದೆ, ರಾಜಕೀಯ ಕಾರಣಗಳೂ ಇರಬಹುದು. ಇದರ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಆಗ ಸಿಎಂ ಭದ್ರತೆ ತೆಗೆದುಕೊಳ್ಳುವಂತ ಹೇಳಿದರು. ಆದರೆ, ನನಗೆ ಭದ್ರತೆ ಬೇಡ ಅಂದಿದ್ದೇನೆ. ಇದರ ಹಿಂದೆ ರಾಜಕೀಯ ಉದ್ದೇಶ ಇದೆ'' ಎಂದರು.

''ನಾನು ಭಯ ಪಡುವುದಿಲ್ಲ. ಅಕ್ರಮವಾಗಿ ಹಣ ಸಂಪಾದನೆ ಮಾಡುವ ಉದ್ದೇಶವೂ ಇರಬಹುದು. ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಆರೋಪಿಗಳು ನನ್ನ ಚಲನವಲನದ ಮೇಲೆ ಗಮನ ಇಟ್ಟಿದ್ದರಂತೆ, ಆರೋಪಿಗಳು ಎಲ್ಲೆಲ್ಲಿ ಓಡಾಡಿದ್ದಾರೆ. ಏನೇನು ಮಾಡಿದ್ದಾರೆ ಎಂಬುದನ್ನು ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ. ನಾನು ಭಯ ಪಡುವವನಲ್ಲ. ಇದಕ್ಕೆಲ್ಲ ಹೆದರಲ್ಲ. ನಾನು ಪೂರ್ತಿ ರಾಜಕಾರಣದಲ್ಲೇ ಇದ್ದೇನೆ. ಈಗ ಯಾವುದೇ ಉದ್ಯಮದಲ್ಲಿ ನಾನು ಇಲ್ಲ. ಉದ್ಯಮ ಕಾರಣ ಸುಪಾರಿ ಹಿಂದೆ ಇಲ್ಲ. ರಾಜಕೀಯ ಕಾರಣವೇ ಸುಪಾರಿ ಹಿಂದೆ ಇದೆ. ಪೊಲೀಸರು ತನಿಖೆ ಮಾಡಿ ಅಪರಾಧಿಗಳನ್ನು ಜೈಲಿಗೆ ಕಳಿಸಲಿ'' ಎಂದು ಒತ್ತಾಯಿಸಿದರು.

ಅರಗ ಜ್ಞಾನೇಂದ್ರ ಪ್ರಕರಣದ ಬಗ್ಗೆ ಹೇಳಿದ್ದಿಷ್ಟು! : ಶಾಸಕ ಸತೀಶ್ ರೆಡ್ಡಿ ಅವರ ಜೀವಕ್ಕೆ ಸುಪಾರಿ ಕೊಟ್ಟಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಎಫ್ಐಆರ್ ಆಗಿದೆ. ತನಿಖೆ ನಡೆಯುತ್ತಿದ್ದು, ಈ ಸಂಬಂಧ ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ವಿಚಾರಣೆ ನಂತರ ಯಾವ ಹಿನ್ನೆಲೆಯಲ್ಲಿ ಆಗಿದೆ ಅಂತ ಹೊರಗೆ ಬರಬೇಕಾಗಿದೆ. ಈ ಹಂತದಲ್ಲಿ ನನಗೆ ಇರುವ ಮಾಹಿತಿಯನ್ನು ನಿಮ್ಮ ಮುಂದೆ ಹಂಚಿಕೊಳ್ಳಲು ಸಾಧ್ಯವಿಲ್ಲ. ವಿಚಾರಣೆ ಹಂತದಲ್ಲಿದೆ, ಈ ಹಂತದಲ್ಲಿ ಎನು ಹೇಳುವುದಕ್ಕೆ ಆಗುವುದಿಲ್ಲ. ಎಫ್ಐಆರ್​ನಲ್ಲಿ ಕೆಲವರ ಹೆಸರಿದೆ. ವಿಚಾರಣೆಗೆ ಕೆಲವರನ್ನು ಕರೆದುಕೊಂಡು ಬಂದಿದ್ದಾರೆ ಎಂದು ಹೇಳಿದರು.

ನಮ್ಮ ಶಾಸಕರಿಗೆ ಯಾವುದೇ ಬೆದರಿಕೆ ಇದ್ದರೂ ಸಹ ಅವರಿಗೆ ರಕ್ಷಣೆ ಕೊಡುವ ಕೆಲಸವನ್ನು ನಮ್ಮ ಪೊಲೀಸರು ಮಾಡುತ್ತಾರೆ. ನಾನು ಈಗಾಗಲೇ ನಮ್ಮ ಹಿರಿಯ ಅಧಿಕಾರಿಗಳ ಜೊತೆ ಮಾತಾಡಿದ್ದೇನೆ, ಅವರಿಗೆ ಭದ್ರತೆ ಕೊಡುತ್ತಾರೆ ಎಂದು ಗೃಹ ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ಬರ್ತ್ ಡೇ ಗಿಫ್ಟ್ ವಿಚಾರಕ್ಕೆ ಲಿವ್​ ಇನ್​​​​​​​ ರಿಲೇಷನ್​​ಶಿಪ್​​ನಲ್ಲಿದ್ದ​ ಗೆಳತಿ ಹತ್ಯೆ ಮಾಡಿದ್ದ ಆರೋಪಿ ಬಂಧನ..

Last Updated : Feb 15, 2023, 6:04 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.