ETV Bharat / state

ಬೆಂಗಳೂರು: ಆಂಬ್ಯುಲೆನ್ಸ್ ಡಿಕ್ಕಿಯಾಗಿ ಇಬ್ಬರು ಪಾದಚಾರಿಗಳು ಸಾವು..

author img

By

Published : Mar 21, 2023, 6:27 PM IST

ಆಂಬುಲೆನ್ಸ್ ಡಿಕ್ಕಿಯಾಗಿ ಇಬ್ಬರು ಪಾದಚಾರಿಗಳು ಸಾವನ್ನಪ್ಪಿರುವ ಘಟನೆ ಚಿಕ್ಕಜಾಲ ಬಳಿಯ ತರಳುಬಾಳು ರಸ್ತೆಯಲ್ಲಿ ನಡೆದಿದೆ.

two-pedestrians-died-hit-by-ambulance-in-bengaluru
ವೇಗವಾಗಿ ಬಂದ ಆಂಬುಲೆನ್ಸ್ ಡಿಕ್ಕಿಯಾಗಿ ಇಬ್ಬರು ಪಾದಚಾರಿಗಳು ಸಾವು..

ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗಳಿಗೆ ಆಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಜಾಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು(ಮಂಗಳವಾರ) ಬೆಳಗ್ಗೆ ನಡೆದಿದೆ. ಮೈಸೂರಿನ ಪ್ರಕಾಶ್ ಹಾಗೂ ಬನಶಂಕರಿ ಮೂಲದ ನಾಗೇಂದ್ರ ಮೃತ ದುದೈರ್ವಿಗಳು.

ಅಪಘಾತವೆಸಗಿದ ಆಂಬುಲೆನ್ಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ವಾಹನವನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ. ಚಿಕ್ಕಜಾಲ ಬಳಿಯ ತರಳುಬಾಳು ರಸ್ತೆಯಲ್ಲಿ ಇಂದು ಬೆಳಗ್ಗೆ ದುರ್ಘಟನೆ ನಡೆದಿದೆ‌‌. ಇಬ್ಬರು ನಡೆದುಕೊಂಡು ಹೋಗುವಾಗ ವೇಗವಾಗಿ ಬಂದ ಆಂಬುಲೆನ್ಸ್ ವಾಹನ ಡಿಕ್ಕಿ ಹೊಡೆದಿದೆ. ಅಪಘಾತ ರಭಸಕ್ಕೆ ಪ್ರಕಾಶ್ ಸ್ಥಳದಲ್ಲಿ ಮೃತಪಟ್ಟಿರೆ. ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಆಂಬುಲೆನ್ಸ್ ನಲ್ಲಿ ರೋಗಿ ಇಲ್ಲದಿದ್ದರೂ ವೇಗವಾಗಿ ಚಾಲನೆ ಮಾಡಿದ ಚಾಲಕ, ಇಬ್ಬರ ಸಾವಿಗೆ ಕಾರಣನಾಗಿದ್ದಾನೆ‌. ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಂಟಿಮನೆಗೆ ನುಗ್ಗಿ ದರೋಡೆ ಮಾಡಿದ್ದ ಏಳು ಜನ ಆರೋಪಿಗಳ ಬಂಧನ: ಒಂಟಿ ಮನೆಗೆ ನುಗ್ಗಿ ಡಕಾಯಿತಿ ಮಾಡಿದ್ದ ಗ್ಯಾಂಗನ್ನ ಬೆಂಗಳೂರಿನ ಸೋಲದೇವನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ರೌಡಿಗಳಾದ ನಿತೇಶ್, ಕಿಶನ್, ಶಿವರಾಜ್ ಹಾಗೂ ಸಾಗರ್, ಮನು ಜಂಗಮ್, ರಂಜಿತ್ ಕುಮಾರ್, ಅನಿಲ್ ಬಂಧಿತ ಆರೋಪಿಗಳು. ಮಾರ್ಚ್ 12ರಂದು ಸೋಲದೇವನಹಳ್ಳಿಯ ದೊಡ್ಡ ಬ್ಯಾಲ್ದ್ ಕೆರೆ ಮುಖ್ಯರಸ್ತೆಯ ನಾಲ್ವರು ವಾಸವಿದ್ದ ಒಂಟಿ ಮನೆಗೆ ಬಂದು ಬಾಗಿಲು ತಟ್ಟಿದ್ದ ಆರೋಪಿಗಳು, ಮನೆಯವರು ಬಾಗಿಲು ತೆಗೆದ ತಕ್ಷಣ ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಒಳನುಗ್ಗಿದ್ದರು. ಬಳಿಕ ಮನೆಯಲ್ಲಿದ್ದ ಸದಸ್ಯರ ಕೈ ಕಾಲು ಕಟ್ಟಿ ಹಾಕಿದ್ದರು. ಈ ವೇಳೆ ಪ್ರತಿರೋಧವೊಡ್ಡಿದ್ದ ಬಿಹಾರಿ ಗೋಸ್ವಾಮಿ ಎಂಬಾತನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮನೆಯಲ್ಲಿದ್ದ ನಗದು ಮತ್ತು ಮೊಬೈಲ್ ಫೋನ್‌ಗಳನ್ನ ದೋಚಿ ಪರಾರಿಯಾಗಿದ್ದರು.

ಘಟನೆ ಸಂಬಂಧ ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಸದ್ಯ ಏಳು ಜನ ಆರೋಪಿಗಳನ್ನ ಬಂಧಿಸಿದ್ದು, ಆರೋಪಿಗಳಿಂದ ಐದು ಸಾವಿರ ನಗದು, ಕೃತ್ಯಕ್ಕೆ ಬಳಸಿದ್ದ ಒಂದು ಕಾರು, ಎರಡು ದ್ವಿಚಕ್ರ ವಾಹನ, ಎರಡು ಡ್ಯಾಗರ್, ಪೆಪ್ಪರ್ ಸ್ಪ್ರೇ ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಉತ್ತರ ವಿಭಾಗದ ಡಿಸಿಪಿ ಡಿ.ದೇವರಾಜ್ ತಿಳಿಸಿದ್ದಾರೆ.

ಇದನ್ನೂ ಓದಿ:ದೂರು ನೀಡಲು ಬಂದ ಮಹಿಳೆಯನ್ನೇ ಮಂಚಕ್ಕೆ ಕರೆದ್ರಾ ಇನ್‌ಸ್ಪೆಕ್ಟರ್? ಡಿಸಿಪಿಗೆ ತನಿಖಾ ವರದಿ ಸಲ್ಲಿಕೆ

ಪತ್ನಿ ಹತ್ಯೆಗೈದು ಪುಟ್ಟ ಮಗುವಿಗೂ ಚಾಕು ಇರಿದ ಪತಿ: ಹೆಂಡತಿಯ ಕತ್ತು ಕೊಯ್ದು ಕೊಂದಿರುವ ಪಾಪಿ ಪತಿಯೊಬ್ಬ ಆಕೆಯ ಮಗುವನ್ನೂ ಗಾಯಗೊಳಿಸಿದ ಘಟನೆ ಸೋಮವಾರ ತಡರಾತ್ರಿ ಬೆಂಗಳೂರಿನ ಹೆಣ್ಣೂರು ಠಾಣಾ ವ್ಯಾಪ್ತಿಯ ಸಾರಾಯಿ ಪಾಳ್ಯದಲ್ಲಿ ನಡೆದಿದೆ. ಶೇಕ್ ಸೊಹೈಲ್ ಎಂಬಾತ ತನ್ನ ಪತ್ನಿ ತಬ್ಸೆನ್ ಬೇಬಿ (32) ಎಂಬಾಕೆಯನ್ನು ಕೊಲೆಗೈದಿದ್ದಾನೆ. ಆಕೆಯ ಮಗು ನಯೀಮ್ (2.6 ವರ್ಷ) ಎಡಕಾಲಿಗೂ ಚಾಕು ಇರಿದಿದ್ದಾನೆ.

ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗಳಿಗೆ ಆಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಜಾಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು(ಮಂಗಳವಾರ) ಬೆಳಗ್ಗೆ ನಡೆದಿದೆ. ಮೈಸೂರಿನ ಪ್ರಕಾಶ್ ಹಾಗೂ ಬನಶಂಕರಿ ಮೂಲದ ನಾಗೇಂದ್ರ ಮೃತ ದುದೈರ್ವಿಗಳು.

ಅಪಘಾತವೆಸಗಿದ ಆಂಬುಲೆನ್ಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ವಾಹನವನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ. ಚಿಕ್ಕಜಾಲ ಬಳಿಯ ತರಳುಬಾಳು ರಸ್ತೆಯಲ್ಲಿ ಇಂದು ಬೆಳಗ್ಗೆ ದುರ್ಘಟನೆ ನಡೆದಿದೆ‌‌. ಇಬ್ಬರು ನಡೆದುಕೊಂಡು ಹೋಗುವಾಗ ವೇಗವಾಗಿ ಬಂದ ಆಂಬುಲೆನ್ಸ್ ವಾಹನ ಡಿಕ್ಕಿ ಹೊಡೆದಿದೆ. ಅಪಘಾತ ರಭಸಕ್ಕೆ ಪ್ರಕಾಶ್ ಸ್ಥಳದಲ್ಲಿ ಮೃತಪಟ್ಟಿರೆ. ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಆಂಬುಲೆನ್ಸ್ ನಲ್ಲಿ ರೋಗಿ ಇಲ್ಲದಿದ್ದರೂ ವೇಗವಾಗಿ ಚಾಲನೆ ಮಾಡಿದ ಚಾಲಕ, ಇಬ್ಬರ ಸಾವಿಗೆ ಕಾರಣನಾಗಿದ್ದಾನೆ‌. ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಂಟಿಮನೆಗೆ ನುಗ್ಗಿ ದರೋಡೆ ಮಾಡಿದ್ದ ಏಳು ಜನ ಆರೋಪಿಗಳ ಬಂಧನ: ಒಂಟಿ ಮನೆಗೆ ನುಗ್ಗಿ ಡಕಾಯಿತಿ ಮಾಡಿದ್ದ ಗ್ಯಾಂಗನ್ನ ಬೆಂಗಳೂರಿನ ಸೋಲದೇವನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ರೌಡಿಗಳಾದ ನಿತೇಶ್, ಕಿಶನ್, ಶಿವರಾಜ್ ಹಾಗೂ ಸಾಗರ್, ಮನು ಜಂಗಮ್, ರಂಜಿತ್ ಕುಮಾರ್, ಅನಿಲ್ ಬಂಧಿತ ಆರೋಪಿಗಳು. ಮಾರ್ಚ್ 12ರಂದು ಸೋಲದೇವನಹಳ್ಳಿಯ ದೊಡ್ಡ ಬ್ಯಾಲ್ದ್ ಕೆರೆ ಮುಖ್ಯರಸ್ತೆಯ ನಾಲ್ವರು ವಾಸವಿದ್ದ ಒಂಟಿ ಮನೆಗೆ ಬಂದು ಬಾಗಿಲು ತಟ್ಟಿದ್ದ ಆರೋಪಿಗಳು, ಮನೆಯವರು ಬಾಗಿಲು ತೆಗೆದ ತಕ್ಷಣ ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಒಳನುಗ್ಗಿದ್ದರು. ಬಳಿಕ ಮನೆಯಲ್ಲಿದ್ದ ಸದಸ್ಯರ ಕೈ ಕಾಲು ಕಟ್ಟಿ ಹಾಕಿದ್ದರು. ಈ ವೇಳೆ ಪ್ರತಿರೋಧವೊಡ್ಡಿದ್ದ ಬಿಹಾರಿ ಗೋಸ್ವಾಮಿ ಎಂಬಾತನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮನೆಯಲ್ಲಿದ್ದ ನಗದು ಮತ್ತು ಮೊಬೈಲ್ ಫೋನ್‌ಗಳನ್ನ ದೋಚಿ ಪರಾರಿಯಾಗಿದ್ದರು.

ಘಟನೆ ಸಂಬಂಧ ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಸದ್ಯ ಏಳು ಜನ ಆರೋಪಿಗಳನ್ನ ಬಂಧಿಸಿದ್ದು, ಆರೋಪಿಗಳಿಂದ ಐದು ಸಾವಿರ ನಗದು, ಕೃತ್ಯಕ್ಕೆ ಬಳಸಿದ್ದ ಒಂದು ಕಾರು, ಎರಡು ದ್ವಿಚಕ್ರ ವಾಹನ, ಎರಡು ಡ್ಯಾಗರ್, ಪೆಪ್ಪರ್ ಸ್ಪ್ರೇ ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಉತ್ತರ ವಿಭಾಗದ ಡಿಸಿಪಿ ಡಿ.ದೇವರಾಜ್ ತಿಳಿಸಿದ್ದಾರೆ.

ಇದನ್ನೂ ಓದಿ:ದೂರು ನೀಡಲು ಬಂದ ಮಹಿಳೆಯನ್ನೇ ಮಂಚಕ್ಕೆ ಕರೆದ್ರಾ ಇನ್‌ಸ್ಪೆಕ್ಟರ್? ಡಿಸಿಪಿಗೆ ತನಿಖಾ ವರದಿ ಸಲ್ಲಿಕೆ

ಪತ್ನಿ ಹತ್ಯೆಗೈದು ಪುಟ್ಟ ಮಗುವಿಗೂ ಚಾಕು ಇರಿದ ಪತಿ: ಹೆಂಡತಿಯ ಕತ್ತು ಕೊಯ್ದು ಕೊಂದಿರುವ ಪಾಪಿ ಪತಿಯೊಬ್ಬ ಆಕೆಯ ಮಗುವನ್ನೂ ಗಾಯಗೊಳಿಸಿದ ಘಟನೆ ಸೋಮವಾರ ತಡರಾತ್ರಿ ಬೆಂಗಳೂರಿನ ಹೆಣ್ಣೂರು ಠಾಣಾ ವ್ಯಾಪ್ತಿಯ ಸಾರಾಯಿ ಪಾಳ್ಯದಲ್ಲಿ ನಡೆದಿದೆ. ಶೇಕ್ ಸೊಹೈಲ್ ಎಂಬಾತ ತನ್ನ ಪತ್ನಿ ತಬ್ಸೆನ್ ಬೇಬಿ (32) ಎಂಬಾಕೆಯನ್ನು ಕೊಲೆಗೈದಿದ್ದಾನೆ. ಆಕೆಯ ಮಗು ನಯೀಮ್ (2.6 ವರ್ಷ) ಎಡಕಾಲಿಗೂ ಚಾಕು ಇರಿದಿದ್ದಾನೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.