ETV Bharat / state

ಪಿಯುಸಿ ಪರೀಕ್ಷೆ ಫಲಿತಾಂಶದ ಬಳಿಕ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ

author img

By

Published : Jul 14, 2020, 11:24 PM IST

ಪಿಯುಸಿ ಫಲಿತಾಂಶ ಹೊರಬೀಳುತ್ತಿದ್ದಂತೆ ಕಡಿಮೆ ಅಂಕ ಗಳಿಸಿದ್ದ ಹಾಗೂ ಅನುತ್ತೀರ್ಣರಾದ ಕಾರಣ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Two students commit suicide due to low marks in PUC exam
ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ

ಬೆಂಗಳೂರು: ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಗಳಿಸಿದ್ದ ಹಾಗೂ ಅನುತ್ತೀರ್ಣರಾದ ಕಾರಣ ಇಬ್ಬರು ವಿದ್ಯಾರ್ಥಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ವಿನಾಯಕನಗರ ನಿವಾಸಿ ರಾಹುಲ್ ರೆಡ್ಡಿ (21) ಹಾಗೂ ಬಾಬಾನಗರ ನಿವಾಸಿ ಪ್ರವೀಣ್ (19) ಮೃತರು. ರಾಹುಲ್ ರೆಡ್ಡಿ ತಂದೆ-ತಾಯಿ ಜೊತೆ ಬಾಬಾನಗರದಲ್ಲಿ ವಾಸವಿದ್ದ. ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾದಾಗ ಕಡಿಮೆ ಅಂಕ ಬಂದಿರುವ ಕಾರಣ ಮನನೊಂದು ಮನೆಯ ಕೊಠಡಿಯಲ್ಲಿನ ಫ್ಯಾನ್​​​​​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಮತ್ತೋರ್ವ ವಿನಾಯಕ ನಗರ ನಿವಾಸಿ ಪ್ರವೀಣ್, ದ್ವಿತೀಯ ಪಿಯುಸಿಯ ಕೆಲ ವಿಷಯಗಳಲ್ಲಿ ಅನುತ್ತೀರ್ಣನಾಗಿದ್ದ. ಇದೇ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ‌ಬಾಗಲೂರು ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ಮೃತದೇಹಗಳ ಗಂಟಲು ದ್ರವ ಸಂಗ್ರಹಿಸಿ ಕೊರೊನಾ ಟೆಸ್ಟ್‌ಗೆ ಕಳುಹಿಸಲಾಗಿದೆ.

ಬೆಂಗಳೂರು: ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಗಳಿಸಿದ್ದ ಹಾಗೂ ಅನುತ್ತೀರ್ಣರಾದ ಕಾರಣ ಇಬ್ಬರು ವಿದ್ಯಾರ್ಥಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ವಿನಾಯಕನಗರ ನಿವಾಸಿ ರಾಹುಲ್ ರೆಡ್ಡಿ (21) ಹಾಗೂ ಬಾಬಾನಗರ ನಿವಾಸಿ ಪ್ರವೀಣ್ (19) ಮೃತರು. ರಾಹುಲ್ ರೆಡ್ಡಿ ತಂದೆ-ತಾಯಿ ಜೊತೆ ಬಾಬಾನಗರದಲ್ಲಿ ವಾಸವಿದ್ದ. ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾದಾಗ ಕಡಿಮೆ ಅಂಕ ಬಂದಿರುವ ಕಾರಣ ಮನನೊಂದು ಮನೆಯ ಕೊಠಡಿಯಲ್ಲಿನ ಫ್ಯಾನ್​​​​​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಮತ್ತೋರ್ವ ವಿನಾಯಕ ನಗರ ನಿವಾಸಿ ಪ್ರವೀಣ್, ದ್ವಿತೀಯ ಪಿಯುಸಿಯ ಕೆಲ ವಿಷಯಗಳಲ್ಲಿ ಅನುತ್ತೀರ್ಣನಾಗಿದ್ದ. ಇದೇ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ‌ಬಾಗಲೂರು ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ಮೃತದೇಹಗಳ ಗಂಟಲು ದ್ರವ ಸಂಗ್ರಹಿಸಿ ಕೊರೊನಾ ಟೆಸ್ಟ್‌ಗೆ ಕಳುಹಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.