ETV Bharat / state

ಉಮೇಶ್​ ಜಾಧವ್​​ ರಾಜೀನಾಮೆ: ಚಿಂಚೋಳಿ ಕ್ಷೇತ್ರಕ್ಕೆ ಮೇ 19ರಂದು ಉಪಚುನಾವಣೆ - undefined

ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಇದರೊಂದಿಗೆ ವಿಧಾನಸಭೆ ಉಪಚುನಾವಣೆ ದಿನಾಂಕ ಕೂಡ ಘೋಷಣೆಯಾಗಿದೆ.

ಚಿಂಚೋಳಿ ಕ್ಷೇತ್ರಕ್ಕೆ ಮೇ 19ರಂದು ಉಪಚುನಾವಣೆ
author img

By

Published : Apr 17, 2019, 7:55 AM IST

ಬೆಂಗಳೂರು: ಆಪರೇಶನ್ ಕಮಲಕ್ಕೆ ಒಳಗಾಗಿ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಡಾ. ಉಮೇಶ್ ಜಾಧವ್ ರಾಜೀನಾಮೆಯಿಂದ ತೆರವಾಗಿದ್ದ ಚಿಂಚೋಳಿ ವಿಧಾನಸಭೆ ಕ್ಷೇತ್ರಕ್ಕೆ ಮೇ 19ರಂದು ಉಪಚುನಾವಣೆ ನಡೆಯಲಿದೆ.

ಕೇಂದ್ರ ಚುನಾವಣಾ ಆಯೋಗ ಉಪಚುನಾವಣೆ ವೇಳಾಪಟ್ಟಿಯನ್ನ ಪ್ರಕಟಿಸಿದ್ದು, ಏಪ್ರಿಲ್ 22ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಏ. 22ರಿಂದಲೇ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದ್ದು, ಏ. 29 ಉಮೇದುವಾರಿಕೆ ಸಲ್ಲಿಸಲು ಕಡೆಯ ದಿನವಾಗಿದೆ. ಏ. 30ರಂದು ನಾಮಪತ್ರ ಪರಿಶೀಲನೆ. ಮೇ 2ಕ್ಕೆ ನಾಮಪ್ರ ಹಿಂದಕ್ಕೆ ಪಡೆಯಲು ಕಡೆಯ ದಿನವಾಗಿರುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿಯಲ್ಲಿ ತಿಳಿಸಿದೆ. ಇನ್ನು ಮೇ 19 ರಂದು ಉಪಚುನಾವಣೆ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟಿಸಲಾಗುತ್ತದೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಡಾ. ಉಮೇಶ್ ಜಾಧವ್ ಅವರು ಮೈತ್ರಿ ಸರ್ಕಾರದಲ್ಲಿ ತಮಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಪ್ರತಿಭಟಿಸಿದ್ದರು. ಸಚಿವ ಸ್ಥಾನ ತಪ್ಪಲು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರೇ ಕಾರಣರೆಂದು ಆರೋಪಿಸಿದ್ದ ಡಾ. ಜಾಧವ್ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೇರಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕಣಕ್ಕಿಳಿದಿದ್ದಾರೆ.

ಸಚಿವರಾಗಿದ್ದ ಸಿ.ಎಸ್.ಶಿವಳ್ಳಿ ಅವರ ಅಗಲಿಕೆಯಿಂದ ತೆರವಾಗಿದ್ದ ಧಾರವಾಡ ಜಿಲ್ಲೆಯ ಕುಂದಗೋಳ ವಿದಾನಸಭೆ ಕ್ಷೇತ್ರದ ಉಪಚುನಾವಣೆಯೂ ಮೇ 19ಕ್ಕೆ ನಿಗದಿಯಾಗಿದೆ. ಮೇ 23ರ ಲೋಕಸಭೆ ಚುನಾವಣೆ ಫಲಿತಾಂಶದ ಜೊತೆಗೆ ಎರಡು ವಿದಾನಸಭೆ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಸಹ ಹೊರಬೀಳಲಿದೆ.

ಬೆಂಗಳೂರು: ಆಪರೇಶನ್ ಕಮಲಕ್ಕೆ ಒಳಗಾಗಿ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಡಾ. ಉಮೇಶ್ ಜಾಧವ್ ರಾಜೀನಾಮೆಯಿಂದ ತೆರವಾಗಿದ್ದ ಚಿಂಚೋಳಿ ವಿಧಾನಸಭೆ ಕ್ಷೇತ್ರಕ್ಕೆ ಮೇ 19ರಂದು ಉಪಚುನಾವಣೆ ನಡೆಯಲಿದೆ.

ಕೇಂದ್ರ ಚುನಾವಣಾ ಆಯೋಗ ಉಪಚುನಾವಣೆ ವೇಳಾಪಟ್ಟಿಯನ್ನ ಪ್ರಕಟಿಸಿದ್ದು, ಏಪ್ರಿಲ್ 22ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಏ. 22ರಿಂದಲೇ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದ್ದು, ಏ. 29 ಉಮೇದುವಾರಿಕೆ ಸಲ್ಲಿಸಲು ಕಡೆಯ ದಿನವಾಗಿದೆ. ಏ. 30ರಂದು ನಾಮಪತ್ರ ಪರಿಶೀಲನೆ. ಮೇ 2ಕ್ಕೆ ನಾಮಪ್ರ ಹಿಂದಕ್ಕೆ ಪಡೆಯಲು ಕಡೆಯ ದಿನವಾಗಿರುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿಯಲ್ಲಿ ತಿಳಿಸಿದೆ. ಇನ್ನು ಮೇ 19 ರಂದು ಉಪಚುನಾವಣೆ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟಿಸಲಾಗುತ್ತದೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಡಾ. ಉಮೇಶ್ ಜಾಧವ್ ಅವರು ಮೈತ್ರಿ ಸರ್ಕಾರದಲ್ಲಿ ತಮಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಪ್ರತಿಭಟಿಸಿದ್ದರು. ಸಚಿವ ಸ್ಥಾನ ತಪ್ಪಲು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರೇ ಕಾರಣರೆಂದು ಆರೋಪಿಸಿದ್ದ ಡಾ. ಜಾಧವ್ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೇರಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕಣಕ್ಕಿಳಿದಿದ್ದಾರೆ.

ಸಚಿವರಾಗಿದ್ದ ಸಿ.ಎಸ್.ಶಿವಳ್ಳಿ ಅವರ ಅಗಲಿಕೆಯಿಂದ ತೆರವಾಗಿದ್ದ ಧಾರವಾಡ ಜಿಲ್ಲೆಯ ಕುಂದಗೋಳ ವಿದಾನಸಭೆ ಕ್ಷೇತ್ರದ ಉಪಚುನಾವಣೆಯೂ ಮೇ 19ಕ್ಕೆ ನಿಗದಿಯಾಗಿದೆ. ಮೇ 23ರ ಲೋಕಸಭೆ ಚುನಾವಣೆ ಫಲಿತಾಂಶದ ಜೊತೆಗೆ ಎರಡು ವಿದಾನಸಭೆ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಸಹ ಹೊರಬೀಳಲಿದೆ.

Intro: ಉಮೇಶ್ ಜಾದವ್ ರಾಜೀನಾಮೆ : ಚಿಂಚೋಳಿ
ಕ್ಷೇತ್ರಕ್ಕೆ ಮೇ.೧೯ ರಂದು ಉಪಚುನಾವಣೆ


ಬೆಂಗಳೂರು : ಆಪರೇಶನ್ ಕಮಲಕ್ಕೆ ಒಳಗಾಗಿ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಶಾಸಕ ಡಾ.ಉಮೇಶ್ ಜಾಧವ್ ರಾಜೀನಾಮೆಯಿಂದ ತೆರವಾಗಿದ್ದ ಚಿಂಚೋಳಿ ವಿಧಾನಸಭೆ ಕ್ಷೇತ್ರಕ್ಕೆ ಮೇ ೧೯ ರಂದು ಉಪ ಚುನಾವಣೆ ನಡೆಯಲಿದೆ.

ಕೇಂದ್ರ ಚುನಾವಣೆ ಆಯೋಗ ಉಪಚುನಾವಣೆ ವೇಳಾಪಟ್ಟಿಯನ್ನ ಮಂಗಳವಾರ ಪ್ರಕಟಿಸಿದ್ದು ಏಪ್ರಿಲ್ ೨೨ ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ..


Body: ಈ ತಿಂಗಳ ೨೨ರಿಂದಲೇ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದ್ದು ಏ.೨೯ ಉಮೇದುವಾರಿಕೆ ಸಲ್ಲಿಸಲು ಕಡೆಯ ದಿನವಾಗಿದೆ. ಏ.೩೦ ರಂದು ನಾಮ ಪತ್ರ ಪರಿಶೀಲನೆ.ಮೇ.೨ ನಾಮಪ್ರ ಹಿಂದಕ್ಕೆ ಪಡೆಯಲು ಕಡೆಯ ದಿನ ವಾಗಿರುತ್ತದೆ ಎಂದು ಕೇಂದ್ರ ಚುನಾವಣೆ ಆಯೋಗ ವೇಳಾಪಟ್ಟಿ ವಿವರದಲ್ಲಿ ತಿಳಿಸಿದೆ.

ಮೇ.೧೯ ರಂದು ಉಪಚುನಾವಣೆ ನಡೆದು ಮೇ ೨೩ ರಂದು ಮತ ಎಣಿಕೆಯ ಫಲಿತಾಂಶ ಪ್ರಕಟಿಸಲಾಗುತ್ತದೆ.


Conclusion:ಕಲ್ಬುರ್ಗಿ ಜಿಲ್ಲೆಯ ಚಿಂಚೋಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಡಾ. ಉಮೇಶ್ ಜಾಧವ್ ಅವರು ಮೈತ್ರಿ ಸರಕಾರದಲ್ಲಿ ತಮಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಪ್ರತಿಭಟಿಸಿದ್ದರು. ಸಚಿವ ಸ್ಥಾನ ತಪ್ಪಲು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರೇ ಕಾರಣರೆಂದು ಆರೋಪಿಸಿದ್ದ ಡಾ. ಜಾಧವ್ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೇರಿ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಈಗ ಕಣಕ್ಕಿಳಿದಿದ್ದಾರೆ.

ಇತ್ತೀಚೆಗಷ್ಟೆ ವಿಧಾನಸಭಾದ್ಯಕ್ಷ ರಮೇಶ್ ಕುಮಾರ್ ಅವರು ಶಾಸಕ ಸ್ಥಾನಕ್ಕೆ ಉಮೇಶ್ ಜಾಧವ್ ನೀಡಿದ್ದ ರಾಜೀನಾಮೆ ಅಂಗೀಕರಿಸಿದ್ದರ ಬೆನ್ನ ಹಿಂದೆಯೇ ಚುನಾವಣೆ ಆಯೋಗ ಚಿಂಚೋಳಿ ಕ್ಷೇತ್ತಕ್ಕೆ ಉಪ ಚುನಾವಣೆ ಘೋಷಿಸಿದೆ.

ಸಚಿವರಾಗಿದ್ದ ಸಿ.ಎಸ್ ಶಿವಳ್ಳಿ ಅವರ ಅಗಲಿಕೆಯಿಂದ ತೆರವಾಗಿದ್ದ ಧಾರವಾಡ ಜಿಲ್ಲೆಯ ಕುಂದಗೋಳ ವಿದಾನಸಭೆ ಕ್ಷೇತ್ರದ ಉಪಚುನಾವಣೆಯೂ ಮೇ.೧೯ ಕ್ಕೆ ನಿಗದಿಯಾಗಿದೆ.. ಮೇ.೨೩ ರ ಲೋಕಸಭೆ ಫಲಿತಾಂಶದ ಜೊತೆಗೆ ಎರಡು ವಿದಾನಸಭೆ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಸಹ ಹೊರಬೀಳಲಿದೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.