ETV Bharat / state

ಸಹೋದರನ ಪರ ಲಾಬಿ ಮಾಡಿದ್ದ ಶಾಸಕ ಉಮೇಶ್ ಕತ್ತಿಗೆ ಸಿಎಂ ಹೇಳಿದ್ದೇನು?

author img

By

Published : Jun 3, 2020, 11:33 PM IST

ಹೊಸ ಸರ್ಕಾರ ರಚನೆ ಮಾಡುವಲ್ಲಿ ಮೂಲ ಅಸ್ತ್ರವಾಗಿದ್ದ ಬೆಳಗಾವಿಯ ರಾಜಕಾರಣದಲ್ಲಿ ಇದೀಗ ಅಸಮಾಧಾನದ ಹೊಗೆ ಎದ್ದಿದೆ. ಈ ನಡುವೆ ಸಿಎಂ ಬಿಎಸ್​ವೈ ಅವರನ್ನು ಬಂಡಾಯ ಶಾಸಕ ಉಮೇಶ್ ಕತ್ತಿ ಇಂದು ಭೇಟಿಯಾಗುವ ಮೂಲಕ ಮತ್ತೆ ಕುತೂಹಲ ಕೆರಳಿಸಿದ್ದಾರೆ.

Umesh Katti and CM BSY
ಶಾಸಕ ಉಮೇಶ್ ಕತ್ತಿ

ಬೆಂಗಳೂರು: ಬೆಳಗಾವಿ ರಾಜಕಾರಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕತ್ತಿ ಕುಟುಂಬಕ್ಕೆ ರಾಜ್ಯಸಭಾ ಟಿಕೆಟ್ ನೀಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟವಾಗಿ ನಿರಾಕರಿಸಿದ್ದಾರೆ ಎನ್ನಲಾಗಿದೆ.

ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದ ಶಾಸಕ ಉಮೇಶ್ ಕತ್ತಿ ತಮ್ಮ ಸಹೋದರ ರಮೇಶ್ ಕತ್ತಿಗೆ ರಾಜ್ಯಸಭಾ ಟಿಕೆಟ್ ನೀಡುವಂತೆ ಮನವಿ ಮಾಡಿ ಈ ಸಂಬಂಧ ಮಾತುಕತೆ ನಡೆಸಿದ್ದಾರೆ.

ಮುಂಜಾನೆಯೇ ಸಿಎಂ ಒಳ್ಳೆಯ ಮೂಡ್​​ನಲ್ಲಿರುತ್ತಾರೆ, ಸುದೀರ್ಘ ಮಾತುಕತೆ ನಡೆಸಬಹುದು ಎಂದುಕೊಂಡು ಹೋಗಿದ್ದ ಕತ್ತಿ ಜೊತೆ ಸಿಎಂ ಕೇವಲ 20 ನಿಮಿಷಗಳ ಮಾತುಕತೆ ನಡೆಸಿದರು. ಆದರೆ, ಶಾಸಕ ಉಮೇಶ್ ಕತ್ತಿ ಬೇಡಿಕೆಯನ್ನು ತಳ್ಳಿಹಾಕಿದ್ದಾರೆ ಎನ್ನಲಾಗಿದೆ.

ಈಗಾಗಲೇ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದು, ಅದರಂತೆ ನಿಮ್ಮನ್ನು ಮಂತ್ರಿ ಮಾಡಲಾಗುತ್ತದೆ. ಆದರೆ, ಸಹೋದರನಿಗೆ ರಾಜ್ಯಸಭಾ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ ಎಂದು ಸಿಎಂ ಆಪ್ತ ಮೂಲಗಳಿಂದ ತಿಳಿದು ಬಂದಿದೆ. ಹಾಲಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಮತ್ತೊಂದು ಅವಧಿಗೆ ಅವಕಾಶ ಕೋರಿದ್ದು ಟಿಕೆಟ್​ಗಾಗಿ ಬೆಳಗಾವಿಯಲ್ಲಿ ಲಾಬಿ ಜೋರಾಗಿ ನಡೆಯುತ್ತಿದೆ.

ಬೆಂಗಳೂರು: ಬೆಳಗಾವಿ ರಾಜಕಾರಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕತ್ತಿ ಕುಟುಂಬಕ್ಕೆ ರಾಜ್ಯಸಭಾ ಟಿಕೆಟ್ ನೀಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟವಾಗಿ ನಿರಾಕರಿಸಿದ್ದಾರೆ ಎನ್ನಲಾಗಿದೆ.

ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದ ಶಾಸಕ ಉಮೇಶ್ ಕತ್ತಿ ತಮ್ಮ ಸಹೋದರ ರಮೇಶ್ ಕತ್ತಿಗೆ ರಾಜ್ಯಸಭಾ ಟಿಕೆಟ್ ನೀಡುವಂತೆ ಮನವಿ ಮಾಡಿ ಈ ಸಂಬಂಧ ಮಾತುಕತೆ ನಡೆಸಿದ್ದಾರೆ.

ಮುಂಜಾನೆಯೇ ಸಿಎಂ ಒಳ್ಳೆಯ ಮೂಡ್​​ನಲ್ಲಿರುತ್ತಾರೆ, ಸುದೀರ್ಘ ಮಾತುಕತೆ ನಡೆಸಬಹುದು ಎಂದುಕೊಂಡು ಹೋಗಿದ್ದ ಕತ್ತಿ ಜೊತೆ ಸಿಎಂ ಕೇವಲ 20 ನಿಮಿಷಗಳ ಮಾತುಕತೆ ನಡೆಸಿದರು. ಆದರೆ, ಶಾಸಕ ಉಮೇಶ್ ಕತ್ತಿ ಬೇಡಿಕೆಯನ್ನು ತಳ್ಳಿಹಾಕಿದ್ದಾರೆ ಎನ್ನಲಾಗಿದೆ.

ಈಗಾಗಲೇ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದು, ಅದರಂತೆ ನಿಮ್ಮನ್ನು ಮಂತ್ರಿ ಮಾಡಲಾಗುತ್ತದೆ. ಆದರೆ, ಸಹೋದರನಿಗೆ ರಾಜ್ಯಸಭಾ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ ಎಂದು ಸಿಎಂ ಆಪ್ತ ಮೂಲಗಳಿಂದ ತಿಳಿದು ಬಂದಿದೆ. ಹಾಲಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಮತ್ತೊಂದು ಅವಧಿಗೆ ಅವಕಾಶ ಕೋರಿದ್ದು ಟಿಕೆಟ್​ಗಾಗಿ ಬೆಳಗಾವಿಯಲ್ಲಿ ಲಾಬಿ ಜೋರಾಗಿ ನಡೆಯುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.