ಬೆಂಗಳೂರು: ಇಲ್ಲಿನ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯ ರೌಡಿಶೀಟರ್ ಸುನೀಲ್ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಬ್ಯಾಟರಾಯನಪುರದ ಕಸ್ತೂರಿ ನಗರದಲ್ಲಿ ದುಷ್ಕರ್ಮಿಗಳು ಸುನೀಲ್ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಓದಿ: ನೈಟ್ ಕರ್ಫ್ಯೂ ಉಲ್ಲಂಘನೆ: ಮೈಸೂರಲ್ಲಿ 8 ಮಂದಿ ಅರೆಸ್ಟ್
ಈ ಹಿಂದೆ ಸುನೀಲ್ ರೌಡಿ ಶೀಟರ್ ಸೋಮನ್ ಎಂಬುವನನ್ನು ಹತ್ಯೆ ಮಾಡಿ ಜೈಲಿಗೆ ಹೋಗಿ ಬಂದಿದ್ದನು. ನಂತರ ಸೋಮನ ಸಹಚರರೊಂದಿಗೆ ಆಗಾಗ ಜಗಳ ಕೂಡ ಮಾಡಿಕೊಂಡಿದ್ದು, ಸೋಮನ್ ಕೊಲೆ ಮಾಡಿದ ಸೇಡಿಗೆ ಆತನ ಸಹಚರರೇ ಸುನೀಲ್ನ ಹತ್ಯೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸುತ್ತಿದ್ದಾರೆ.