ಬೆಂಗಳೂರು: ಹಸಿರು ಪಟಾಕಿಯನ್ನು ಮಾತ್ರ ಬಳಸಿ ದೀಪಾವಳಿಯನ್ನು ಸರಳ ಸುಂದರವಾಗಿ ಆಚರಿಸುವಂತೆ ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.
ದೀಪಾವಳಿ ಹಬ್ಬದಂದು ಪಟಾಕಿ ಮಾರುವುದು ಮತ್ತು ಸಿಡಿಸುವುದನ್ನು ನಿಷೇಧಿಸುವ ಬಗ್ಗೆ ಸಾರ್ವಜನಿಕರಿಂದ ಹಲವಾರು ಸಲಹೆ ಸೂಚನೆಗಳು ಬಂದಿವೆ. ಕೋವಿಡ್-19 ಸೋಂಕನ್ನು ನಿಯಂತ್ರಿಸಲು ರಾಜ್ಯ ಸರ್ಕಾರವು ಈಗಾಗಲೇ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಇಂತಹ ಪರಿಸ್ಥಿತಿಯಲ್ಲಿ ಸಾರ್ವಜನಿಕರು ಮತ್ತು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ದೀಪಾವಳಿ ಹಬ್ಬವನ್ನು ಸರಳವಾಗಿ, ಅರ್ಥಗರ್ಭಿತವಾಗಿ, ಭಕ್ತಿಪೂರ್ವಕವಾಗಿ ಆಚರಿಸುವುದು ಸೂಕ್ತವಾಗಿರುತ್ತದೆ. ಈ ಹಿನ್ನೆಲೆ ಹಸಿರು ಪಟಾಕಿಯನ್ನು ಮಾತ್ರ ಬಳಸಿ ದೀಪಾವಳಿಯನ್ನು ಸರಳ ಸುಂದರವಾಗಿ ಆಚರಿಸುವಂತೆ ಮನವಿ ಮಾಡಿದ್ದಾರೆ.
![ಪ್ರಕಟಣೆ](https://etvbharatimages.akamaized.net/etvbharat/prod-images/kn-bng-11-cm-press-statement-about-green-crackers-script-7208080_06112020194623_0611f_1604672183_46.jpg)
ಪಟಾಕಿ ಸಿಡಿಸದೆ ದೀಪಾವಳಿ ಆಚರಿಸುವಂತೆ ಜನತೆಯಲ್ಲಿ ಜಾಗೃತಿ ಮೂಡಿಸಲು ಮುಂದಾಗಿರುವ ಸಿಎಂ, ಹಬ್ಬಕ್ಕೂ ಮೊದಲೇ ಮುಂಚಿತವಾಗಿ ದೀಪಾವಳಿ ಹಬ್ಬದ ಶುಭಾಶಯ ಎನ್ನುವ ಸಂದೇಶವನ್ನು ಜನತೆಗೆ ನೀಡುತ್ತಾ ಮಾಧ್ಯಮ ಹೇಳಿಕೆ ಮೂಲಕ ಪಟಾಕಿ ಬೇಡ ಎನ್ನುವ ಮನವಿ ಮಾಡಿದ್ದಾರೆ.