ಬೆಂಗಳೂರು : ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಡಿ ಕೇಂದ್ರ ಡಿಸಿಪಿ ಕಚೇರಿಗೆ ದೂರು ಸಲ್ಲಿಕೆಯಾಗಿದೆೆ. ಆರೋಪಿಯನ್ನು ಬಂಧಿಸಲು ಕನ್ನಡಪರ ಸಂಘಟನೆಗಳಿಂದ ಕೂಗು ಕೇಳಿ ಬರುತ್ತಿದೆ.
ಹೊಳೆನರಸೀಪುರ ನಿವಾಸಿ ಶಾಬಾಝ್ ಉಲ್ಲಾಖಾನ್ ಯೂಟ್ಯೂಬ್ ಚಾನಲ್ವೊಂದರಲ್ಲಿ ಮುಖ್ಯಮಂತ್ರಿಯವರ ಬಗ್ಗೆ ಕೀಳು ಶಬ್ದಗಳಿಂದ ನಿಂದಿಸಿದ್ದಾನೆ. ಪಾಕಿಸ್ತಾನದಿಂದ ಕರೆ ಬರುತ್ತಿದೆ ಎಂದು ಹೇಳಿಕೊಂಡಿದ್ದಾನೆ. ಅಷ್ಟೇ ಅಲ್ಲ, ಕೋಮು ಸೌಹಾರ್ದತೆಗೆ ಧಕ್ಕೆ ತರುವ ಮಾತುಗಳನ್ನಾಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪ್ರಕರಣದ ಕುರಿತು ಕನ್ನಡಪರ ಸಂಘಟನೆಯ ಭರತ್ ಶೆಟ್ಟಿ ಡಿಸಿಪಿ ಅನುಚೇತ್ ಕಚೇರಿಗೆ ದೂರಿನ ಪ್ರತಿ ತಲುಪಿಸಿದ್ದಾರೆ. ಸಮಾಜ ಘಾತುಕ ಹೇಳಿಕೆ ನೀಡಿ, ಮುಖ್ಯಮಂತ್ರಿಗಳನ್ನು ಕೀಳು ಶಬ್ದದಲ್ಲಿ ನಿಂದಿಸಿದ್ದ ಶಾಬಾಝ್ ಖಾನ್ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಆಸ್ಟರ್ ಆಸ್ಪತ್ರೆಯಿಂದ ರಾಮಯ್ಯ ನಾರಾಯಣ ಹೃದಯಾಲಯಕ್ಕೆ ಜೀವಂತ ಹೃದಯ ರವಾನೆ