ETV Bharat / state

ವಿವಿಧ ನಾಯಕರಿಂದ ಡಿಕೆಶಿ ಭೇಟಿ... ನಾಳೆ ಕುಟುಂಬದ ಜೊತೆ ದೆಹಲಿಗೆ ತೆರಳಲಿರುವ ಸುರೇಶ್​​​

author img

By

Published : Oct 29, 2019, 10:41 PM IST

ಬೆನ್ನು ನೋವಿನಿಂದ ಬಳಲುತ್ತಿರುವ ಡಿ.ಕೆ.ಶಿವಕುಮಾರ್ ಮನೆಯಲ್ಲೇ ಇದ್ದು ವಿಶ್ರಾಂತಿ ಪಡೆಯುತ್ತಿದ್ದಾರೆ. ಹೀಗಾಗಿ ಹಲವು ನಾಯಕರು ಮನೆಗೆ ಆಗಮಿಸಿ ಸಮಾಲೋಚನೆ ನಡೆಸಿ ತೆರಳಿದ್ದಾರೆ.

ವಿವಿಧ ನಾಯಕರಿಂದ ಡಿಕೆಶಿ ಭೇಟಿ

ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವ​ರನ್ನು ವಿವಿಧ ನಾಯಕರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಬೆನ್ನು ನೋವಿನಿಂದ ಬಳಲುತ್ತಿರುವ ಡಿ.ಕೆ.ಶಿವಕುಮಾರ್ ಮನೆಯಲ್ಲೇ ಇದ್ದು ವಿಶ್ರಾಂತಿ ಪಡೆಯುತ್ತಿದ್ದಾರೆ. ಹೀಗಾಗಿ ಹಲವು ನಾಯಕರು ಮನೆಗೆ ಆಗಮಿಸಿ ಸಮಾಲೋಚನೆ ನಡೆಸಿ ತೆರಳಿದ್ದಾರೆ. ಮಾಜಿ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಶಾಸಕಿ ಸೌಮ್ಯ ರೆಡ್ಡಿ ಮತ್ತತರ ನಾಯಕರು ಡಿಕೆಶಿ ನಿವಾಸಕ್ಕೆ ಭೇಟಿ ನೀಡಿದರು. ಬೆಳಿಗ್ಗೆ ರಾಮಲಿಂಗಾರೆಡ್ಡಿ ಭೇಟಿ ನೀಡಿ ತೆರಳಿದ್ದರು. ಇದರ ಬೆನ್ನಲ್ಲೇ ಸೌಮ್ಯ ರೆಡ್ಡಿ ಕೂಡ ಮಧ್ಯಾಹ್ನದ ನಂತರ ಆಗಮಿಸಿ ಡಿಕೆಶಿಯವರ ಆರೋಗ್ಯ ವಿಚಾರಿಸಿದ್ದಾರೆ.

ಇನ್ನು ಡಿಕೆಶಿ ಭೇಟಿಗೆ ಜೆಡಿಎಸ್ ನಾಯಕರು ಕೂಡ ಆಗಮಿಸಿದ್ದು, ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಮತ್ತು ಶಾಸಕ ಶಿವಲಿಂಗೇಗೌಡ ಭೇಟಿ ನೀಡಿ ಮಾತುಕತೆ ನಡೆಸಿದರು. ಪಕ್ಷಕ್ಕಿಂತ ಮುಖ್ಯವಾಗಿ ಒಕ್ಕಲಿಗ ಸಮುದಾಯದ ಹಿರಿಯ ನಾಯಕರಾಗಿರುವ ಕಾರಣ ಶಿವಕುಮಾರ್​ರನ್ನು ವಿವಿಧ ಪಕ್ಷಗಳ ಒಕ್ಕಲಿಗ ಮುಖಂಡರು ಭೇಟಿ ಮಾಡಿದ್ದಾರೆ.

ನಾಳೆ ಡಿ.ಕೆ.ಸುರೇಶ್ ದಿಲ್ಲಿಗೆ: ಡಿಕೆಶಿ ತಾಯಿ ಹಾಗೂ ಪತ್ನಿ ವಿಚಾರಣೆ ಬೆಂಗಳೂರು ಹೈಕೋರ್ಟ್​ನಲ್ಲಿ ನಡೆಸಲು ಅವಕಾಶ ನೀಡುವಂತೆ ಸಲ್ಲಿಸಿರುವ ಅರ್ಜಿ ದೆಹಲಿ ಹೈಕೋರ್ಟ್​ನಲ್ಲಿ ವಿಚಾರಣೆಗೆ ಬರಲಿದೆ. ಈ ಸಂದರ್ಭ ಕುಟುಂಬ ಸಮೇತರಾಗಿ ಶಿವಕುಮಾರ್ ದೆಹಲಿಗೆ ತೆರಳಬೇಕಿತ್ತು. ಆದರೆ ಬೆನ್ನು ನೋವಿನ ಹಿನ್ನೆಲೆ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದು, ನಾಳೆ ಡಿಕೆಶಿ ಬದಲು ಡಿ.ಕೆ.ಸುರೇಶ್ ದಿಲ್ಲಿಗೆ ತೆರಳಿ ವಕೀಲರ ಜೊತೆ ನ್ಯಾಯಾಲಯದಲ್ಲಿ ಹಾಜರಾಗಿ ಶಿವಕುಮಾರ್​ ಪರ ಮನವಿ ಮಾಡಲಿದ್ದಾರೆ. ದೆಹಲಿ ಹೈಕೋರ್ಟ್ ವಿಚಾರಣೆಯನ್ನು ಬೆಂಗಳೂರಿನಲ್ಲಿ ನಡೆಸಲು ಸಮ್ಮತಿಸಿದರೆ ವಿಚಾರಣೆ ಬೆಂಗಳೂರಿನಲ್ಲಿ ನಡೆಯಲಿದೆ. ಇಲ್ಲವಾದರೆ ಪತ್ನಿ ಹಾಗೂ ತಾಯಿಯೊಂದಿಗೆ ಡಿಕೆಶಿ ದೆಹಲಿಗೆ ತೆರಳುವ ಅನಿವಾರ್ಯತೆ ಎದುರಾಗಲಿದೆ.

ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವ​ರನ್ನು ವಿವಿಧ ನಾಯಕರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಬೆನ್ನು ನೋವಿನಿಂದ ಬಳಲುತ್ತಿರುವ ಡಿ.ಕೆ.ಶಿವಕುಮಾರ್ ಮನೆಯಲ್ಲೇ ಇದ್ದು ವಿಶ್ರಾಂತಿ ಪಡೆಯುತ್ತಿದ್ದಾರೆ. ಹೀಗಾಗಿ ಹಲವು ನಾಯಕರು ಮನೆಗೆ ಆಗಮಿಸಿ ಸಮಾಲೋಚನೆ ನಡೆಸಿ ತೆರಳಿದ್ದಾರೆ. ಮಾಜಿ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಶಾಸಕಿ ಸೌಮ್ಯ ರೆಡ್ಡಿ ಮತ್ತತರ ನಾಯಕರು ಡಿಕೆಶಿ ನಿವಾಸಕ್ಕೆ ಭೇಟಿ ನೀಡಿದರು. ಬೆಳಿಗ್ಗೆ ರಾಮಲಿಂಗಾರೆಡ್ಡಿ ಭೇಟಿ ನೀಡಿ ತೆರಳಿದ್ದರು. ಇದರ ಬೆನ್ನಲ್ಲೇ ಸೌಮ್ಯ ರೆಡ್ಡಿ ಕೂಡ ಮಧ್ಯಾಹ್ನದ ನಂತರ ಆಗಮಿಸಿ ಡಿಕೆಶಿಯವರ ಆರೋಗ್ಯ ವಿಚಾರಿಸಿದ್ದಾರೆ.

ಇನ್ನು ಡಿಕೆಶಿ ಭೇಟಿಗೆ ಜೆಡಿಎಸ್ ನಾಯಕರು ಕೂಡ ಆಗಮಿಸಿದ್ದು, ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಮತ್ತು ಶಾಸಕ ಶಿವಲಿಂಗೇಗೌಡ ಭೇಟಿ ನೀಡಿ ಮಾತುಕತೆ ನಡೆಸಿದರು. ಪಕ್ಷಕ್ಕಿಂತ ಮುಖ್ಯವಾಗಿ ಒಕ್ಕಲಿಗ ಸಮುದಾಯದ ಹಿರಿಯ ನಾಯಕರಾಗಿರುವ ಕಾರಣ ಶಿವಕುಮಾರ್​ರನ್ನು ವಿವಿಧ ಪಕ್ಷಗಳ ಒಕ್ಕಲಿಗ ಮುಖಂಡರು ಭೇಟಿ ಮಾಡಿದ್ದಾರೆ.

ನಾಳೆ ಡಿ.ಕೆ.ಸುರೇಶ್ ದಿಲ್ಲಿಗೆ: ಡಿಕೆಶಿ ತಾಯಿ ಹಾಗೂ ಪತ್ನಿ ವಿಚಾರಣೆ ಬೆಂಗಳೂರು ಹೈಕೋರ್ಟ್​ನಲ್ಲಿ ನಡೆಸಲು ಅವಕಾಶ ನೀಡುವಂತೆ ಸಲ್ಲಿಸಿರುವ ಅರ್ಜಿ ದೆಹಲಿ ಹೈಕೋರ್ಟ್​ನಲ್ಲಿ ವಿಚಾರಣೆಗೆ ಬರಲಿದೆ. ಈ ಸಂದರ್ಭ ಕುಟುಂಬ ಸಮೇತರಾಗಿ ಶಿವಕುಮಾರ್ ದೆಹಲಿಗೆ ತೆರಳಬೇಕಿತ್ತು. ಆದರೆ ಬೆನ್ನು ನೋವಿನ ಹಿನ್ನೆಲೆ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದು, ನಾಳೆ ಡಿಕೆಶಿ ಬದಲು ಡಿ.ಕೆ.ಸುರೇಶ್ ದಿಲ್ಲಿಗೆ ತೆರಳಿ ವಕೀಲರ ಜೊತೆ ನ್ಯಾಯಾಲಯದಲ್ಲಿ ಹಾಜರಾಗಿ ಶಿವಕುಮಾರ್​ ಪರ ಮನವಿ ಮಾಡಲಿದ್ದಾರೆ. ದೆಹಲಿ ಹೈಕೋರ್ಟ್ ವಿಚಾರಣೆಯನ್ನು ಬೆಂಗಳೂರಿನಲ್ಲಿ ನಡೆಸಲು ಸಮ್ಮತಿಸಿದರೆ ವಿಚಾರಣೆ ಬೆಂಗಳೂರಿನಲ್ಲಿ ನಡೆಯಲಿದೆ. ಇಲ್ಲವಾದರೆ ಪತ್ನಿ ಹಾಗೂ ತಾಯಿಯೊಂದಿಗೆ ಡಿಕೆಶಿ ದೆಹಲಿಗೆ ತೆರಳುವ ಅನಿವಾರ್ಯತೆ ಎದುರಾಗಲಿದೆ.

Intro:newsBody:ಸಂಜೆ ವಿವಿಧ ನಾಯಕರಿಂದ ಡಿಕೆಶಿ ಭೇಟಿ, ನಾಳೆ ಸುರೇಶ್ ದಿಲ್ಲಿಗೆ ಪ್ರಯಾಣ

ಬೆಂಗಳೂರು: ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಇಂದು ಸಂಜೆ ಕೂಡ ವಿವಿಧ ನಾಯಕರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಬೆನ್ನು ನೋವಿನಿಂದ ಬಳಲುತ್ತಿರುವ ಶಿವಕುಮಾರ್ ಇಂದು ದಿನವಿಡೀ ಮನೆಯಲ್ಲೇ ಇದ್ದು ವಿಶ್ರಾಂತಿ ಪಡೆದರು. ಹೀಗಾಗಿ ಹಲವು ನಾಯಕರು ಇವರ ಮನೆಗೆ ಆಗಮಿಸಿ ಬೇಟಿ ಮಾಡಿ ಸಮಾಲೋಚಿಸಿ ತೆರಳಿದ್ದಾರೆ.
ಕಾಂಗ್ರೆಸ್ ನಾಯಕ ಮತ್ತು ಮಾಜಿ ವಿಧಾನಸಭಾಧ್ಯಕ್ಷ ಕೆ.ಬಿ ಕೋಳಿವಾಡ, ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ಆರ್.ವಿ ದೇಶಪಾಂಡೆ ಹಾಗೂ ಶಾಸಕಿ ಸೌಮ್ಯ ರೆಡ್ಡಿ ಅವರು ಮಂಗಳವಾರ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತನಾಡಿದರು. ಬೆಳಿಗ್ಗೆ ರಾಮಲಿಂಗ ರೆಡ್ಡಿ ಭೇಟಿ ನೀಡಿ ಮಾತನಾಡಿ ತೆರಳಿದ್ದರು ಇದರ ಬೆನ್ನಲ್ಲೇ ಸೌಮ್ಯ ರೆಡ್ಡಿ ಕೂಡ ಮಧ್ಯಾಹ್ನದ ನಂತರ ಆಗಮಿಸಿ ಆರೋಗ್ಯ ವಿಚಾರಿಸಿದ್ದಾರೆ.
ಇಂದು ಕೂಡ ಜೆಡಿಎಸ್ ನಾಯಕರ ಭೇಟಿ ಮುಂದುವರಿದಿದ್ದು ಶಿವಕುಮಾರ್ ನಿವಾಸಕ್ಕೆ ಜೆಡಿಎಸ್ ನಾಯಕರು ಹಾಗೂ ಮಾಜಿ ಸಚಿವರಾದ ಡಿ.ಸಿ ತಮ್ಮಣ್ಣ ಮತ್ತು ಶಾಸಕ ಶಿವಲಿಂಗೆಗೌಡ ಅವರು ಭೇಟಿ ನೀಡಿ ಮಾತುಕತೆ ನಡೆಸಿದರು. ಪಕ್ಷಕ್ಕಿಂತ ಮುಖ್ಯವಾಗಿ ಒಕ್ಕಲಿಗ ಸಮುದಾಯದ ಹಿರಿಯ ನಾಯಕರಾಗಿರುವ ಕಾರಣ ಶಿವಕುಮಾರ್ ಅವರನ್ನು ವಿವಿಧ ಪಕ್ಷದ ಒಕ್ಕಲಿಗ ಮುಖಂಡರ ಭೇಟಿ ಮಾಡಿ ತೆರಳುತ್ತಿದ್ದಾರೆ.
ನಾಳೆ ಡಿಕೆಸುರೇಶ್ ದಿಲ್ಲಿಗೆ
ಡಿಕೆಶಿ ತಾಯಿ ಹಾಗೂ ಪತ್ನಿ ವಿಚಾರಣೆ ದಿಲ್ಲಿ ಹೈಕೋರ್ಟ್ ಬೆಂಗಳೂರು ಹೈಕೋರ್ಟ್ ನಲ್ಲಿ ನಡೆಸಲು ಅವಕಾಶ ನೀಡುವಂತೆ ಮನವಿ ಅರ್ಜಿ ವಿಚಾರಣೆಗೆ ಬರಲಿದೆ. ಈ ಸಂದರ್ಭ ಕುಟುಂಬಸಮೇತರಾಗಿ ಶಿವಕುಮಾರ್ ದಿಲ್ಲಿಗೆ ತೆರಳಬೇಕಿತ್ತು. ಆದರೆ ಅವರಿಗೆ ಬೆನ್ನುನೋವಿನ ಹಿನ್ನೆಲೆ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದು ನಾಳೆ ಅವರ ಬದಲು ಡಿಕೆ ಸುರೇಶ್ ಮಾತ್ರ ದಿಲ್ಲಿಗೆ ತೆರಳಿ ತಮ್ಮ ವಕೀಲರ ಜೊತೆ ಸಮಾಲೋಚಿಸಿ ನ್ಯಾಯಾಲಯದಲ್ಲಿ ಹಾಜರಾಗಿ ಶಿವಕುಮಾರ ಪರ ಮಾನವಿ ಮಾಡಿಕೊಳ್ಳಲಿದ್ದಾರೆ.
ಒಂದೊಮ್ಮೆ ದಿಲ್ಲಿ ಹೈಕೋರ್ಟ್ ವಿಚಾರಣೆಯನ್ನು ಬೆಂಗಳೂರಿನಲ್ಲಿ ನಡೆಸಲು ಸಮ್ಮತಿಸಿದರೆ ವಿಚಾರಣೆ ಬೆಂಗಳೂರಿನಲ್ಲಿ ನಡೆಯಲಿದೆ. ಇಲ್ಲವಾದರೆ ಪತ್ನಿ ಹಾಗೂ ತಾಯಿಯೊಂದಿಗೆ ಡಿಕೆಶಿ ದಿಲ್ಲಿಗೆ ತೆರಳುವ ಅನಿವಾರ್ಯತೆ ಎದುರಾಗಲಿದೆ.

Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.