ETV Bharat / state

ವರ್ತೂರು ಪ್ರಕಾಶ್ ಅಪಹರಣ ಪ್ರಕರಣ: ತನಿಖೆ ಚುರುಕು

author img

By

Published : Dec 2, 2020, 8:57 AM IST

Updated : Dec 2, 2020, 9:09 AM IST

ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣದಲ್ಲಿ ತನಿಖೆ ಚುರುಕುಗೊಂಡಿದೆ. ಪೊಲೀಸರು ಎಲ್ಲಾ ಆಯಾಮದಲ್ಲೂ ತನಿಖೆಗೆ ಮುಂದಾಗಿದ್ದು, ಸ್ಥಳ ಪರಿಶೀಲನೆ ನಡೆಲಿದ್ದಾರೆ. ವೈಟ್​​​​ಫೀಲ್ಡ್ ಡಿಸಿಪಿ ದೇವರಾಜ್ ನೇತೃತ್ವದಲ್ಲಿ ಬೆಳ್ಳಂದೂರು ಠಾಣಾ ಇನ್ಸ್​​ಪೆಕ್ಟರ್ ರಿಂದ ತನಿಖೆ ನಡೆಯುತ್ತಿದೆ.

varthoor-prakash-kidnap-case-police-inquiry-continues
ವರ್ತೂರು ಪ್ರಕಾಶ್ ಅಪಹರಣ ಪ್ರಕರಣ:

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣ ಸಂಬಂಧ ಮೂರು ಆಯಾಮಗಳಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಫಾರ್ಮ್ ಹೌಸ್​​ನಿಂದ ಬರುವಾಗ ಕಿಡ್ನಾಪ್ ಆಗಿರುವುದಾಗಿ ದೂರಿನಲ್ಲಿ ವರ್ತೂರು ಉಲ್ಲೇಖಿಸಿದ್ದು, ಕಿಡ್ನಾಪ್ ಆದ ಸ್ಥಳ ಪರಿಶೀಲನೆ, ಅವರನ್ನ ಕಡೆಯದಾಗಿ ಕಿಡ್ನಾಪರ್ಸ್ ಇಳಿಸಿದ ಹೊಸಕೋಟೆಯ ಶಿವನಾಪುರ ಬಳಿ ಸ್ಥಳ ಪರಿಶೀಲನೆ ಹಾಗೂ ಕಾರು ಪತ್ತೆಯಾದ ಬೆಳ್ಳಂದೂರು ಠಾಣಾ ವ್ಯಾಪ್ತಿಯ ಸ್ಥಳದಲ್ಲಿ ಪರಿಶೀಲನೆ ನಡೆಸಲಿದ್ದಾರೆ. ವೈಟ್​​​​ಫೀಲ್ಡ್ ಡಿಸಿಪಿ ದೇವರಾಜ್ ನೇತೃತ್ವದಲ್ಲಿ ಬೆಳ್ಳಂದೂರು ಠಾಣಾ ಇನ್ಸ್​​ಪೆಕ್ಟರ್ ರಿಂದ ತನಿಖೆ ನಡೆಯುತ್ತಿದೆ.

ಈ ಮೂರು ಕಡೆ ಸಿಗಬಹುದಾದ ಸಿಸಿಟಿವಿ ಹಾಗೂ ಸುಳಿವುಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದು, ಇತ್ತೀಚಿಗೆ ವರ್ತೂರು ಪ್ರಕಾಶ್ ಮೊಬೈಲ್​​ಗೆ ಬಂದಿರುವ ಕರೆಗಳ ಸಿಡಿಆರ್ ಪರಿಶೀಲನೆ ಮಾಡುತ್ತಿದ್ದಾರೆ.

ಹಾಗೆಯೇ ಮಾಜಿ ಸಚಿವ ವರ್ತೂರು ಪ್ರಕಾಶ್ ಜೊತೆ ಅಪಹರಣಕ್ಕೆ ಒಳಗಾಗಿದ್ದ ಕಾರು ಚಾಲಕ ಸುನೀಲ್​​​ಗೆ ಕೋಲಾರದಲ್ಲಿನ ಚೌಡೇಶ್ವರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗ್ತಿದೆ. ಆಸ್ಪತ್ರೆಯಲ್ಲಿ ಕಾರು ಅಪಘಾತದಲ್ಲಿ ಗಾಯವಾಗಿದೆ ಎಂದು ಚಿಕಿತ್ಸೆಗೆ ದಾಖಲಾಗಿರುವ ಕುರಿತು ಮಾಹಿತಿ ತಿಳಿದುಬಂದಿದೆ. ಸದ್ಯದಲ್ಲೇ ವರ್ತೂರು ಪ್ರಕಾಶ್ ಮಾಧ್ಯಮಗೋಷ್ಟಿ ನಡೆಸಲಿದ್ದಾರೆ.

ಇದನ್ನೂ ಓದಿ: ಸಿನಿಮೀಯ ಶೈಲಿಯಲ್ಲಿ ಅಪಹರಣ: ವರ್ತೂರು ಪ್ರಕಾಶ್ ನೀಡಿದ ದೂರಿನ ಸಂಪೂರ್ಣ ಮಾಹಿತಿ....

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣ ಸಂಬಂಧ ಮೂರು ಆಯಾಮಗಳಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಫಾರ್ಮ್ ಹೌಸ್​​ನಿಂದ ಬರುವಾಗ ಕಿಡ್ನಾಪ್ ಆಗಿರುವುದಾಗಿ ದೂರಿನಲ್ಲಿ ವರ್ತೂರು ಉಲ್ಲೇಖಿಸಿದ್ದು, ಕಿಡ್ನಾಪ್ ಆದ ಸ್ಥಳ ಪರಿಶೀಲನೆ, ಅವರನ್ನ ಕಡೆಯದಾಗಿ ಕಿಡ್ನಾಪರ್ಸ್ ಇಳಿಸಿದ ಹೊಸಕೋಟೆಯ ಶಿವನಾಪುರ ಬಳಿ ಸ್ಥಳ ಪರಿಶೀಲನೆ ಹಾಗೂ ಕಾರು ಪತ್ತೆಯಾದ ಬೆಳ್ಳಂದೂರು ಠಾಣಾ ವ್ಯಾಪ್ತಿಯ ಸ್ಥಳದಲ್ಲಿ ಪರಿಶೀಲನೆ ನಡೆಸಲಿದ್ದಾರೆ. ವೈಟ್​​​​ಫೀಲ್ಡ್ ಡಿಸಿಪಿ ದೇವರಾಜ್ ನೇತೃತ್ವದಲ್ಲಿ ಬೆಳ್ಳಂದೂರು ಠಾಣಾ ಇನ್ಸ್​​ಪೆಕ್ಟರ್ ರಿಂದ ತನಿಖೆ ನಡೆಯುತ್ತಿದೆ.

ಈ ಮೂರು ಕಡೆ ಸಿಗಬಹುದಾದ ಸಿಸಿಟಿವಿ ಹಾಗೂ ಸುಳಿವುಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದು, ಇತ್ತೀಚಿಗೆ ವರ್ತೂರು ಪ್ರಕಾಶ್ ಮೊಬೈಲ್​​ಗೆ ಬಂದಿರುವ ಕರೆಗಳ ಸಿಡಿಆರ್ ಪರಿಶೀಲನೆ ಮಾಡುತ್ತಿದ್ದಾರೆ.

ಹಾಗೆಯೇ ಮಾಜಿ ಸಚಿವ ವರ್ತೂರು ಪ್ರಕಾಶ್ ಜೊತೆ ಅಪಹರಣಕ್ಕೆ ಒಳಗಾಗಿದ್ದ ಕಾರು ಚಾಲಕ ಸುನೀಲ್​​​ಗೆ ಕೋಲಾರದಲ್ಲಿನ ಚೌಡೇಶ್ವರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗ್ತಿದೆ. ಆಸ್ಪತ್ರೆಯಲ್ಲಿ ಕಾರು ಅಪಘಾತದಲ್ಲಿ ಗಾಯವಾಗಿದೆ ಎಂದು ಚಿಕಿತ್ಸೆಗೆ ದಾಖಲಾಗಿರುವ ಕುರಿತು ಮಾಹಿತಿ ತಿಳಿದುಬಂದಿದೆ. ಸದ್ಯದಲ್ಲೇ ವರ್ತೂರು ಪ್ರಕಾಶ್ ಮಾಧ್ಯಮಗೋಷ್ಟಿ ನಡೆಸಲಿದ್ದಾರೆ.

ಇದನ್ನೂ ಓದಿ: ಸಿನಿಮೀಯ ಶೈಲಿಯಲ್ಲಿ ಅಪಹರಣ: ವರ್ತೂರು ಪ್ರಕಾಶ್ ನೀಡಿದ ದೂರಿನ ಸಂಪೂರ್ಣ ಮಾಹಿತಿ....

Last Updated : Dec 2, 2020, 9:09 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.