ETV Bharat / state

'ಮಾಧುಸ್ವಾಮಿ ವಿರುದ್ಧ ಪ್ರತಿಭಟನೆ ಕೈಬಿಡಲು ಕುರುಬ ಸಮಾಜದ ಸ್ವಾಮೀಜಿಗಳು ಸೂಚಿಸಬೇಕು' - veerashaiva mahasabha press statement on kuruba society protest

ವೀರಶೈವ ಲಿಂಗಾಯತ ಸಮುದಾಯ ಹಾಗೂ ಕುರುಬ ಸಮುದಾಯದ ನಡುವೆ ಗೊಂದಲ ಸೃಷ್ಟಿಸಿ ರಾಜಕೀಯ ಲಾಭ ಪಡೆದುಕೊಳ್ಳುವ ಹುನ್ನಾರ ನಡೆಸಿದಂತಿದೆ. ಎರಡೂ ಸಮಾಜಗಳ ನಡುವೆ ಅನಗತ್ಯ ಕಂದಕ ಸೃಷ್ಟಿಯಾಗುವುದನ್ನು ತಪ್ಪಿಸಲು ಪ್ರತಿಭಟನೆ ನಡೆಸುವುದನ್ನು ಕೈಬಿಡುವಂತೆ ಸೂಚನೆ ನೀಡಬೇಕೆಂದು ಅಖಿಲ ಭಾರತ ವೀರಶೈವ ಮಾಹಾಸಭೆಯ ಯುವ ಘಟಕದ ಮಾಜಿ ರಾಜ್ಯಾಧ್ಯಕ್ಷ ಉಮೇಶ್ ಪಾಟೀಲ್ ಆಗ್ರಹಿಸಿದ್ದಾರೆ.

ಅಖಿಲ ಭಾರತ ವೀರಶೈವ ಮಾಹಾಸಭೆ ಪತ್ರಿಕಾ ಪ್ರಕಟಣೆ
author img

By

Published : Nov 21, 2019, 2:49 PM IST

ಬೆಂಗಳೂರು: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ವಿರುದ್ಧ ಹುಳಿಯಾರು ಸೇರಿದಂತೆ ಬೇರೆ ಕಡೆಗಳಲ್ಲಿ ಕುರುಬ ಸಮುದಾಯದ ಬಾಂಧವರು ಪ್ರತಿಭಟನೆ ಮಾಡುವುದನ್ನು ಕೈಬಿಡುವಂತೆ ಕುರುಬ ಸಮುದಾಯದ ಮಠಾಧೀಶರು ಸೂಚಿಸಬೇಕೆಂದು ಅಖಿಲ ಭಾರತ ವೀರಶೈವ ಮಾಹಾಸಭೆಯ ಯುವ ಘಟಕದ ಮಾಜಿ ರಾಜ್ಯಾಧ್ಯಕ್ಷ ಉಮೇಶ್ ಪಾಟೀಲ್ ಒತ್ತಾಯಿಸಿದ್ದಾರೆ.

ಈ ಗೊಂದಲಕ್ಕೆ ಸಂಬಂಧಿಸಿದಂತೆ ಈಗಾಗಲೇ ಸ್ವತಃ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕ್ಷಮೆ ಕೋರಿದ್ದಾರೆ, ಅಲ್ಲದೆ ಅದೇ ವೃತ್ತಕ್ಕೆ ಕನಕದಾಸರ ಹೆಸರಿಡುವುದಾಗಿಯೂ ಘೋಷಿಸಿದ್ದಾರೆ. ಇಷ್ಟಾದರೂ ಸಚಿವರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದರ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿರುವ ಅನುಮಾನ ಮೂಡುತ್ತಿದೆ.

Press release
ಅಖಿಲ ಭಾರತ ವೀರಶೈವ ಮಾಹಾಸಭೆ ಪತ್ರಿಕಾ ಪ್ರಕಟಣೆ

ವೀರಶೈವ ಲಿಂಗಾಯತ ಸಮುದಾಯ ಹಾಗೂ ಕುರುಬ ಸಮಾಜಗಳ ನಡುವೆ ಗೊಂದಲ ಸೃಷ್ಟಿಸಿ ರಾಜಕೀಯ ಲಾಭ ಪಡೆದುಕೊಳ್ಳುವ ಹುನ್ನಾರ ನಡೆಸಿದಂತಿದೆ. ಹೀಗಾಗಿ ಕುರುಬ ಸಮಾಜದ ಗುರುಗಳು ಎರಡೂ ಸಮಾಜಗಳ ನಡುವೆ ಅನಗತ್ಯ ಕಂದಕ ಸೃಷ್ಟಿಯಾಗುವುದನ್ನು ತಪ್ಪಿಸಲು ಪ್ರತಿಭಟನೆ ನಡೆಸುವುದನ್ನು ಕೈಬಿಡುವಂತೆ ಸೂಚನೆ ನೀಡಬೇಕೆಂದು ಪತ್ರಿಕಾ ಹೇಳಿಕೆ ಮೂಲಕ ವಿನಂತಿಸಿಕೊಂಡಿದ್ದಾರೆ.

ಈ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರು ಹಾಗೂ ಕುರುಬ ಸಮಾಜದ ಹಿರಿಯ ನಾಯಕರೂ ಆಗಿರುವ ಕೆ.ಎಸ್. ಈಶ್ವರಪ್ಪ ಅವರು ಕುರುಬ ಸಮುದಾಯದ ಮುಖಂಡರಿಗೆ ತಿಳಿ ಹೇಳಿ ಎರಡು ಸಮಾಜದ ನಡುವೆ ಗೊಂದಲ ಉಂಟಾಗಂತೆ ನೋಡಿಕೊಳ್ಳಬೇಕೆಂದು ಉಮೇಶ್ ಪಾಟೀಲ್ ಮನವಿ ಮಾಡಿದ್ದಾರೆ.

ಬೆಂಗಳೂರು: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ವಿರುದ್ಧ ಹುಳಿಯಾರು ಸೇರಿದಂತೆ ಬೇರೆ ಕಡೆಗಳಲ್ಲಿ ಕುರುಬ ಸಮುದಾಯದ ಬಾಂಧವರು ಪ್ರತಿಭಟನೆ ಮಾಡುವುದನ್ನು ಕೈಬಿಡುವಂತೆ ಕುರುಬ ಸಮುದಾಯದ ಮಠಾಧೀಶರು ಸೂಚಿಸಬೇಕೆಂದು ಅಖಿಲ ಭಾರತ ವೀರಶೈವ ಮಾಹಾಸಭೆಯ ಯುವ ಘಟಕದ ಮಾಜಿ ರಾಜ್ಯಾಧ್ಯಕ್ಷ ಉಮೇಶ್ ಪಾಟೀಲ್ ಒತ್ತಾಯಿಸಿದ್ದಾರೆ.

ಈ ಗೊಂದಲಕ್ಕೆ ಸಂಬಂಧಿಸಿದಂತೆ ಈಗಾಗಲೇ ಸ್ವತಃ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕ್ಷಮೆ ಕೋರಿದ್ದಾರೆ, ಅಲ್ಲದೆ ಅದೇ ವೃತ್ತಕ್ಕೆ ಕನಕದಾಸರ ಹೆಸರಿಡುವುದಾಗಿಯೂ ಘೋಷಿಸಿದ್ದಾರೆ. ಇಷ್ಟಾದರೂ ಸಚಿವರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದರ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿರುವ ಅನುಮಾನ ಮೂಡುತ್ತಿದೆ.

Press release
ಅಖಿಲ ಭಾರತ ವೀರಶೈವ ಮಾಹಾಸಭೆ ಪತ್ರಿಕಾ ಪ್ರಕಟಣೆ

ವೀರಶೈವ ಲಿಂಗಾಯತ ಸಮುದಾಯ ಹಾಗೂ ಕುರುಬ ಸಮಾಜಗಳ ನಡುವೆ ಗೊಂದಲ ಸೃಷ್ಟಿಸಿ ರಾಜಕೀಯ ಲಾಭ ಪಡೆದುಕೊಳ್ಳುವ ಹುನ್ನಾರ ನಡೆಸಿದಂತಿದೆ. ಹೀಗಾಗಿ ಕುರುಬ ಸಮಾಜದ ಗುರುಗಳು ಎರಡೂ ಸಮಾಜಗಳ ನಡುವೆ ಅನಗತ್ಯ ಕಂದಕ ಸೃಷ್ಟಿಯಾಗುವುದನ್ನು ತಪ್ಪಿಸಲು ಪ್ರತಿಭಟನೆ ನಡೆಸುವುದನ್ನು ಕೈಬಿಡುವಂತೆ ಸೂಚನೆ ನೀಡಬೇಕೆಂದು ಪತ್ರಿಕಾ ಹೇಳಿಕೆ ಮೂಲಕ ವಿನಂತಿಸಿಕೊಂಡಿದ್ದಾರೆ.

ಈ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರು ಹಾಗೂ ಕುರುಬ ಸಮಾಜದ ಹಿರಿಯ ನಾಯಕರೂ ಆಗಿರುವ ಕೆ.ಎಸ್. ಈಶ್ವರಪ್ಪ ಅವರು ಕುರುಬ ಸಮುದಾಯದ ಮುಖಂಡರಿಗೆ ತಿಳಿ ಹೇಳಿ ಎರಡು ಸಮಾಜದ ನಡುವೆ ಗೊಂದಲ ಉಂಟಾಗಂತೆ ನೋಡಿಕೊಳ್ಳಬೇಕೆಂದು ಉಮೇಶ್ ಪಾಟೀಲ್ ಮನವಿ ಮಾಡಿದ್ದಾರೆ.

Intro:



ಬೆಂಗಳೂರು: ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ ಮಾಧುಸ್ವಾಮಿ ವಿರುದ್ಧ ಹುಳಿಯಾರು ಸೇರಿದಂತೆ ಬೇರೆ ಕಡೆಗಳಲ್ಲಿ ಕುರುಬ ಸಾಮಾಜ ಬಾಂಧವರು ಪ್ರತಿಭಟನೆ ಮಾಡುವುದನ್ನು ಕೈ ಬಿಡುವಂತೆ ಕುರುಬ ಸಮಾಜದ ಮಠಾಧೀಶರು ಸೂವಿಸಬೇಕು ಎಂದು ಅಖಿಲ ಭಾರತ ವೀರಶೈವ ಮಾಹಸಭೆಯ ಯುವ ಘಟಕದ ಮಾಜಿ ರಾಜ್ಯಾಧ್ಯಕ್ಷ ಉಮೇಶ್ ಪಾಟೀಲ್ ಆಗ್ರಹಿಸಿದ್ದಾರೆ.

ಈ ಗೊಂದಲಕ್ಕೆ ಸಂಬಂಧಿಸಿದಂತೆ ಈಗಾಗಲೆ ಸ್ವತ ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಕ್ಷಮೆ ಕೋರಿದ್ದಾರೆ, ಅಲ್ಲದೆ ಅದೇ ವೃತ್ತಕ್ಕೆ ಕನಕದಾಸರ ಹೆಸರಿಡುವುದಾಗಿಯೂ ಘೋಷಣೆ ಮಾಡಿದ್ದಾರೆ
ಇಷ್ಟಾದರೂ ಸಚಿವರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದರ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿರುವ ಅನುಮಾನ ಮೂಡುತ್ತಿದೆ. ವೀರಶೈವ ಲಿಂಗಾಯತ ಸಮುದಾಯ ಹಾಗೂ ಕುರುಬ ಸಮಾಜ ರಾಜ್ಯದಲ್ಲಿ ಸೌಹಾರ್ದಯುತವಾಗಿ ಜೀವನ ನಡೆಸಿಕೊಂಡು ಬರುತ್ತಿವೆ. ಇಂಥ ಸಂದರ್ಭದಲ್ಲಿ ಅನಗತ್ಯವಾಗಿ ಸಚಿವರ ಏಳಿಗೆಯನ್ನು ಸಹಿಸದ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅವರ ವಿರುದ್ಧ ಸೇಡು ತೀರಿಸಿಕೊಳ್ಳುವ ಷಡ್ಯಂತ್ರ ನಡೆಸಿದ್ದಾರೆ. ಅಲ್ಲದೆ ಎರಡು ಸಮಾಜಗಳ ನಡುವೆ ಗೊಂದಲ ಸೃಷ್ಟಿಸಿ ರಾಜಕೀಯ ಲಾಭ ಪಡೆದುಕೊಳ್ಳುವ ಹುನ್ನಾರ ನಡೆಸಿದಂತಿದೆ.ಹೀಗಾಗಿ ಕುರುಬ ಸಮಾಜದ ಗುರುಗಳು ಎರಡೂ ಸಮಾಜಗಳ ನಡುವೆ ಅನಗತ್ಯ ಕಂದಕ ಸೃಷ್ಟಿಯಾಗುವುದನ್ನು ತಪ್ಪಿಸಲು ಪ್ರತಿಭಟನೆ ನಡೆಸುವುದನ್ನು ಕೈಬಿಡುವಂತೆ ಕುರುಬ ಸಮಾಜದ ನಾಯಕರು ಹಾಗೂ ಕಾರ್ಯಕರ್ತರಿಗೆ ಸೂಚನೆ ನೀಡಬೇಕೆಂದು ಪತ್ರಿಕಾ ಹೇಳಿಕೆ ಮೂಲಕ ವಿನಂತಿಸಿಕೊಂಡಿದ್ದಾರೆ.

ಈ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವರು ಹಾಗೂ ಕುರುಬ ಸಮಾಜದ ಹಿರಿಯ ನಾಯಕರೂ ಆಗಿರುವ ಕೆ.ಎಸ್ ಈಶ್ವರಪ್ಪ ಅವರು ಕುರುಬ ಸಮಾಜದ ಮುಖಂಡರಿಗೆ ತಿಳಿ ಹೇಳಿ ಎರಡು ಸಮಾಜದ ನಡುವೆ ಗೊಂದಲ ಉಂಟಾಗಂತೆ ನೋಡಿಕೊಳ್ಳಬೇಕೆಂದೂ ಉಮೇಶ್ ಪಾಟೀಲ್ ಮನವಿ ಮಾಡಿದ್ದಾರೆ.
Body:.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.