ETV Bharat / state

ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಬೆಂಬಲಿಸಿ ಜೆಡಿಎಸ್ ಪತ್ರ - Banglore latest update news

JDS letter
ಅವಿಶ್ವಾಸ ನಿರ್ಣಯ ಬೆಂಬಲಿಸಿ ಜೆಡಿಎಸ್ ಪತ್ರ
author img

By

Published : Dec 15, 2020, 1:49 PM IST

Updated : Dec 15, 2020, 3:20 PM IST

13:38 December 15

ಜೆಡಿಎಸ್​ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಜೆಡಿಎಸ್ ಸದಸ್ಯರು ಪರಿಷತ್ ಕಾರ್ಯದರ್ಶಿಯವರ ಕೊಠಡಿಗೆ ತೆರಳಿ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಬೆಂಬಲ ಇರುವ ಲಿಖಿತ ಪತ್ರ ನೀಡಿದರು.

ಬೆಂಗಳೂರು: ವಿಧಾನ ಪರಿಷತ್‌ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯ ಬೆಂಬಲಿಸಿ ಜೆಡಿಎಸ್ ಸದಸ್ಯರು ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಜೆಡಿಎಸ್​ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಜೆಡಿಎಸ್ ಸದಸ್ಯರು ಇಂದು ಪರಿಷತ್ ಕಾರ್ಯದರ್ಶಿ ಕೊಠಡಿಗೆ ತೆರಳಿ ಅವಿಶ್ವಾಸ ನಿರ್ಣಯಕ್ಕೆ ಬೆಂಬಲ ಇರುವ ಲಿಖಿತ ಪತ್ರ ನೀಡಿದರು. ಈ ಸಂದರ್ಭದಲ್ಲಿ ಪರಿಷತ್​ನ ಜೆಡಿಎಸ್ ಸದಸ್ಯರಾದ ತಿಪ್ಪೇಸ್ವಾಮಿ, ಅಪ್ಪಾಜಿಗೌಡ, ಮನೋಹರ ಸೇರಿದಂತೆ ಹಲವು ಸದಸ್ಯರು ಹಾಜರಿದ್ದರು.

ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಬಸವರಾಜ ಹೊರಟ್ಟಿ, ಅವಿಶ್ವಾಸ ನಿರ್ಣಯ ಬೆಂಬಲಿಸಿ ಪರಿಷತ್ ಕಾರ್ಯದರ್ಶಿ ಅವರಿಗೆ ಪತ್ರ ನೀಡಲಾಗಿದೆ. ಸಭಾಪತಿಗಳಿಗೆ ಬಹುಮತ ಇಲ್ಲ. ಅವರು ರಾಜೀನಾಮೆ ಕೊಡಬೇಕು ಎಂದು ಮನವಿ ಮಾಡಲಾಗಿದೆ ಎಂದು ತಿಳಿಸಿದರು. ಸಭಾಪತಿ ಅವರು ರಾಜೀನಾಮೆ ಕೊಡಲಿಲ್ಲ ಅಂದರೆ ಕಾನೂನು ಇದೆ, ನೋಡೊಣ‌‌ ಎಂದ ಅವರು, ಸಭಾಪತಿ ಸ್ಥಾನದಲ್ಲಿ ಇರಲು ಅವರಿಗೆ ನೈತಿಕತೆ ಇಲ್ಲ. ಮುಂದೆ ಏನು ಮಾಡಬೇಕೆಂದು ಸರ್ಕಾರವೇ ತೀರ್ಮಾನ ಮಾಡಲಿದೆ ಎಂದರು.

ಸಭಾಪತಿಗಳು ಸರ್ಕಾರದ ನಿರ್ದೇಶನದಂತೆ ಸಭೆ ಕರೆದಿದ್ದೇವೆ ಎಂದು ಹೇಳಿದ್ದರು. ಈಗ ಕಾರ್ಯದರ್ಶಿ ಹೇಳಿದಂತೆ ಸಭೆ ಕರೆದಿದ್ದಾರೆ. ಇದು ನ್ಯಾಯ ಸಮ್ಮತವಲ್ಲ. ಅದಕ್ಕೆ ಉಪಸಭಾಪತಿಗಳನ್ನು ಚೇರ್ ನಲ್ಲಿ‌ ಕೂರಿಸಿದ್ದೆವು. ಈಗ 14 ಜೆಡಿಎಸ್ ಸದಸ್ಯರು ಸಹಿ ಹಾಕಿದ್ದೇವೆ. ಅನಿರ್ದಿಷ್ಟಾವಧಿಗೆ ಮುಂದೂಡಿರಬಹುದು. ಈಗ ಅವರು ನೈತಿಕವಾಗಿ ರಾಜೀನಾಮೆ ನೀಡಬೇಕು. ರಾಜೀನಾಮೆ ನೀಡದಿದ್ದರೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

13:38 December 15

ಜೆಡಿಎಸ್​ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಜೆಡಿಎಸ್ ಸದಸ್ಯರು ಪರಿಷತ್ ಕಾರ್ಯದರ್ಶಿಯವರ ಕೊಠಡಿಗೆ ತೆರಳಿ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಬೆಂಬಲ ಇರುವ ಲಿಖಿತ ಪತ್ರ ನೀಡಿದರು.

ಬೆಂಗಳೂರು: ವಿಧಾನ ಪರಿಷತ್‌ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯ ಬೆಂಬಲಿಸಿ ಜೆಡಿಎಸ್ ಸದಸ್ಯರು ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಜೆಡಿಎಸ್​ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಜೆಡಿಎಸ್ ಸದಸ್ಯರು ಇಂದು ಪರಿಷತ್ ಕಾರ್ಯದರ್ಶಿ ಕೊಠಡಿಗೆ ತೆರಳಿ ಅವಿಶ್ವಾಸ ನಿರ್ಣಯಕ್ಕೆ ಬೆಂಬಲ ಇರುವ ಲಿಖಿತ ಪತ್ರ ನೀಡಿದರು. ಈ ಸಂದರ್ಭದಲ್ಲಿ ಪರಿಷತ್​ನ ಜೆಡಿಎಸ್ ಸದಸ್ಯರಾದ ತಿಪ್ಪೇಸ್ವಾಮಿ, ಅಪ್ಪಾಜಿಗೌಡ, ಮನೋಹರ ಸೇರಿದಂತೆ ಹಲವು ಸದಸ್ಯರು ಹಾಜರಿದ್ದರು.

ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಬಸವರಾಜ ಹೊರಟ್ಟಿ, ಅವಿಶ್ವಾಸ ನಿರ್ಣಯ ಬೆಂಬಲಿಸಿ ಪರಿಷತ್ ಕಾರ್ಯದರ್ಶಿ ಅವರಿಗೆ ಪತ್ರ ನೀಡಲಾಗಿದೆ. ಸಭಾಪತಿಗಳಿಗೆ ಬಹುಮತ ಇಲ್ಲ. ಅವರು ರಾಜೀನಾಮೆ ಕೊಡಬೇಕು ಎಂದು ಮನವಿ ಮಾಡಲಾಗಿದೆ ಎಂದು ತಿಳಿಸಿದರು. ಸಭಾಪತಿ ಅವರು ರಾಜೀನಾಮೆ ಕೊಡಲಿಲ್ಲ ಅಂದರೆ ಕಾನೂನು ಇದೆ, ನೋಡೊಣ‌‌ ಎಂದ ಅವರು, ಸಭಾಪತಿ ಸ್ಥಾನದಲ್ಲಿ ಇರಲು ಅವರಿಗೆ ನೈತಿಕತೆ ಇಲ್ಲ. ಮುಂದೆ ಏನು ಮಾಡಬೇಕೆಂದು ಸರ್ಕಾರವೇ ತೀರ್ಮಾನ ಮಾಡಲಿದೆ ಎಂದರು.

ಸಭಾಪತಿಗಳು ಸರ್ಕಾರದ ನಿರ್ದೇಶನದಂತೆ ಸಭೆ ಕರೆದಿದ್ದೇವೆ ಎಂದು ಹೇಳಿದ್ದರು. ಈಗ ಕಾರ್ಯದರ್ಶಿ ಹೇಳಿದಂತೆ ಸಭೆ ಕರೆದಿದ್ದಾರೆ. ಇದು ನ್ಯಾಯ ಸಮ್ಮತವಲ್ಲ. ಅದಕ್ಕೆ ಉಪಸಭಾಪತಿಗಳನ್ನು ಚೇರ್ ನಲ್ಲಿ‌ ಕೂರಿಸಿದ್ದೆವು. ಈಗ 14 ಜೆಡಿಎಸ್ ಸದಸ್ಯರು ಸಹಿ ಹಾಕಿದ್ದೇವೆ. ಅನಿರ್ದಿಷ್ಟಾವಧಿಗೆ ಮುಂದೂಡಿರಬಹುದು. ಈಗ ಅವರು ನೈತಿಕವಾಗಿ ರಾಜೀನಾಮೆ ನೀಡಬೇಕು. ರಾಜೀನಾಮೆ ನೀಡದಿದ್ದರೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

Last Updated : Dec 15, 2020, 3:20 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.