ETV Bharat / state

ಆಡಳಿತಗಾರರಿಗೆ ದೂರದೃಷ್ಟಿ, ಕಳಕಳಿ ಬದ್ಧತೆಯ ನಾಯಕತ್ವ ಮುಖ್ಯ: ಸಿಎಂ ಬಸವರಾಜ ಬೊಮ್ಮಾಯಿ

author img

By

Published : Mar 7, 2023, 3:40 PM IST

ಬೆಂಗಳೂರಿನ ಜಯನಗರದಲ್ಲಿ ಜನೌಷಧ ದಿವಸ್ ಆಚರಣೆ - ಸಂಸದ ತೇಜಸ್ವಿ ಸೂರ್ಯ ಕ್ಷೇತ್ರದಲ್ಲಿ 100 ನೇ ಜನೌಷಧ ಕೇಂದ್ರ ಉದ್ಘಾಟಿಸಿದ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ.

CM Bommai inaugurated the Janaushadhi Centre
ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಮತ್ತು ಬಡವರ ಬಗ್ಗೆ ಅವರಿಗಿರುವ ಕಾಳಜಿ ತೋರಿಸುತ್ತದೆ. ಅವರು ಪ್ರಧಾನಿಯಾಗುವ ಮುನ್ನ ಅತ್ಯಂತ ಕಡಿಮೆ ದರದಲ್ಲಿ ಔಷಧಗಳನ್ನು ನೀಡುವ ಕಾರ್ಯಕ್ರಮ ಇರಲಿಲ್ಲ. ಆಡಳಿತಗಾರರಿಗೆ ಸೂಕ್ಷ್ಮಾತಿ ಸೂಕ್ಷ್ಮ ವಿಷಯಗಳ ಬಗ್ಗೆ ಕಳಕಳಿ ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಪಕ್ಷಗಳಿಗೆ ಮಾರ್ಮಿಕವಾಗಿ ಕುಟುಕಿದ್ದಾರೆ.

ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವಾಲಯದಿಂದ ಜಯನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಜನೌಷಧ ದಿವಸ್ ಆಚರಣೆ ಮತ್ತು 100 ನೇ ಜನೌಷಧ ಕೇಂದ್ರವನ್ನು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರೊಂದಿಗೆ ಉದ್ಘಾಟಿಸಿ ಅವರು, ಮಾತನಾಡಿದರು.

ಬಡವರಿಗೆ ಕಡಿಮೆ ದರದಲ್ಲಿ ಔಷಧ ವಿತರಣೆ :ಬಡತನವನ್ನು ಅನುಭವಿಸಿದಾಗ, ಹತ್ತಿರದಿಂದ ನೋಡಿ ಬಡವರ ಸಂಕಷ್ಟವನ್ನು ತಿಳಿದುಕೊಂಡಾಗ ಮಾತ್ರ ಬರುತ್ತದೆ. ನರೇಂದ್ರ ಮೋದಿಯವರಿಗೆ ಬಡತನ ಎಂದರೇನು ಗೊತ್ತಿದೆ. ಬಡವರು100 ರೂಪಾಯಿ ಸಹ ಇಲ್ಲದ ಸ್ಥಿತಿಯಲ್ಲಿರುತ್ತಾರೆ. ಔಷಧ ಕಂಪನಿಗಳ ದರ ಹತ್ತುಪಟ್ಟು ಮಾಡಿರುತ್ತಾರೆ. ಬಡವರ ಕಷ್ಟವನ್ನು ಅರ್ಥಮಾಡಿಕೊಂಡಿರುವ ಪ್ರಧಾನಿಗಳು ಬಡವರಿಗಾಗಿ ಔಷಧಗಳು ಸುಲಭ ಮತ್ತು ಕಡಿಮೆ ದರದಲ್ಲಿ ದೊರೆಯಬೇಕೆಂದು. ಗುಣಮುಖರಾಗಿ ಆರೋಗ್ಯವಂತರಾಗಬೇಕು. ಭಾರತ ಸಶಕ್ತವಾಗಬೇಕಾದರೆ , ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯಗಳು ತಲುಪಬೇಕೆಂದು ಇಂಥ ಕಾರ್ಯಕ್ರಮ ರೂಪಿಸಿದ್ದಾರೆ ಎಂದು ತಿಳಿಸಿದರು.

ಪ್ರತಿ ಮನೆಗೂ ಶುದ್ಧ ನೀರು ಪೂರೈಕೆ: ಆರೋಗ್ಯಕ್ಕೆ ಮೊದಲು ಅಗತ್ಯವಿರುವುದು ಶುದ್ಧವಾದ ನೀರು, ದೇಶದ ಗ್ರಾಮಗಳಲ್ಲಿರುವ ಎಲ್ಲರ ಮನೆಗೆ ಮುಂದಿನ 5 ವರ್ಷಗಳಲ್ಲಿ ನೀರು ಕೊಡುವುದಾಗಿ ಘೋಷಿಸಿದ್ದ ಪ್ರಧಾನಿಗಳು, ನಾಯಕನಿಗೆ ಬದ್ಧತೆ, ಛಲ,ಬುದ್ಧಿವಂತಿಕೆ ಹಾಗೂ ಬುದ್ದಿವಂತಿಕೆಗೆ ಹಣ ಕೊಡುವ ಹೃದಯ ವೈಶಾಲ್ಯವಿದ್ದರೆ ಅದು ಸಾಧ್ಯವಿದೆ. ಆದರೆ, ದೇಶದಲ್ಲಿ ಇಷ್ಟು ಪ್ರಧಾನಿಗಳು ಬಂದು ಹೋದರು ಯಾರಾದರು ಒಬ್ಬರು ನೀರು ಕೊಡುತ್ತೇನೆ ಎಂದು ಸಮಸ್ಯೆ ಪರಿಹರಿಸಿದ್ದಾರಾ?,

40 ಲಕ್ಷ ಮನೆಗಳಿಗೆ ಕುಡಿಯುವ ನೀರು ಪೂರೈಕೆ: ಇವರು ಇಂತಹ ಸಂಕಲ್ಪ ಮಾಡಿದ್ದಾರೆ. ಜಲ್ ಜೀವನ್ ಮಿಷನ್ ಅಡಿ ಅಸಾಧ್ಯವಾದುದನ್ನು ಸಾಧ್ಯ ಮಾಡಲಾಗುತ್ತಿದೆ. ಅಸಾಧ್ಯವಾದುದನ್ನು ಸಾಧ್ಯ ಮಾಡುವುದೇ ನಿಜವಾದ ನಾಯಕತ್ವ. 10 ಕೋಟಿಗಳಿಂತ ಹೆಚ್ಚು ಮನೆಗಳಿಗೆ ಮೋದಿಯವರು ಶುದ್ಧವಾದ ಕುಡಿಯುವ ನೀರನ್ನು ಕೊಡುತ್ತಿದ್ದಾರೆ. ಕರ್ನಾಟಕ ಒಂದರಲ್ಲಿಯೇ 72 ವರ್ಷ ಕೇವಲ 25 ಲಕ್ಷ ಮನೆಗಳಿಗೆ ನೀರು ಕೊಡಲಾಗಿತ್ತು. ಕಳೆದ ಮೂರು ವರ್ಷಗಳಲ್ಲಿ 40 ಲಕ್ಷ ಮನೆಗಳಿಗೆ ಕುಡಿಯುವ ನೀರನ್ನು ಒದಗಿಸಲಾಗಿದೆ. ಇದು ಬದ್ಧತೆಯ ನಾಯಕತ್ವ ಹಾಗೂ ಬದ್ಧತೆ ಎಂದು ಹೇಳಿದರು.

ಬೆಂಗಳೂರಿಗರ ಆರೋಗ್ಯಕ್ಕಾಗಿ ಸುವ್ಯವಸ್ಥೆ :ಬೆಂಗಳೂರಿನ ನಾಗರಿಕರ ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಅತಿ ಹೆಚ್ಚಿನ ಗಮನವನ್ನು ನೀಡಲಾಗಿದೆ. ಬೆಂಗಳೂರಿಗೆ ಆರೋಗ್ಯಕ್ಕಾಗಿ ವಿಶೇಷ ವ್ಯವಸ್ಥೆ ರೂಪಿಸಲಾಗುತ್ತಿದೆ. ಬೆಂಗಳೂರಿನ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದು, ಪ್ರತಿ ವಾರ್ಡಿಗೆ ನಮ್ಮ ಕ್ಲಿನಿಕ್ ಪ್ರಾರಂಭ ಮಾಡಲಾಗಿದೆ. ಈಗಾಗಲೇ 100 ಪ್ರಾರಂಭ ಮಾಡಲಾಗಿದ್ದು, ಇನ್ನೂ ನೂರು ಇದೇ ವಾರದಲ್ಲಿ ಪ್ರಾರಂಭಿಸಲಾಗುತ್ತಿದೆ.

ನಮ್ಮ ಕ್ಲಿನಿಕ್:240 ವಾರ್ಡ್​ಗಳಲ್ಲಿ ನಮ್ಮ ಕ್ಲಿನಿಕ್ ಪ್ರಾರಂಭವಾಗುತ್ತಿದೆ. ಸುಮಾರು 19 ಪಿಹೆಚ್​ಸಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. 4 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಎಲ್ಲೆಡೆ ಜನೌಷಧ ಕೇಂದ್ರಗಳನ್ನು ತೆರೆಯಲಾಗಿದೆ. ಇಂದು ಸಂಚಾರಿ ಆಸ್ಪತ್ರೆಯನ್ನೂ ಹಾಗೂ ಡಯಾಲಿಸಿಸ್ ಕೇಂದ್ರವನ್ನೂ ಉದ್ಘಾಟಿಸಲಾಗಿದ್ದು, ರೋಗಿಗಳ ಮುಖದಲ್ಲಿ ಮಂದಹಾಸ ನೋಡಿದಾಗ ಸಾರ್ಥಕ ಭಾವ ಮೂಡುತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರು ಕೂಡ ಕ್ರಿಯಾಶೀಲ ಸಚಿವರು. ರಾಜ್ಯಕ್ಕೆ ಹೆಚ್ಚುವರಿ ಲಸಿಕೆಯನ್ನು ಒದಗಿಸಿದ್ದಲ್ಲದೇ ಯೂರಿಯಾ ಕೊರತೆಯಾದಾಗಲೂ ಆದೇಶ ಮಾಡಿ ಕೊರತೆ ನೀಗಿಸಿದ್ದರು ಎಂದು ಶ್ಲಾಘಿಸಿದರು. ಸಂಸದ ತೇಜಸ್ವಿ ಸೂರ್ಯ ಅವರ ಕ್ಷೇತ್ರದಲ್ಲಿ ನೂರನೇ ಜನೌಷಧ ಕೇಂದ್ರ ಉದ್ಘಾಟನೆಗೊಂಡಿದ್ದು, ಇಡೀ ದೇಶದಲ್ಲಿ ಸಂಸದರೊಬ್ಬರ ಕ್ಷೇತ್ರದಲ್ಲಿ ಇರುವುದು ಒಂದು ದಾಖಲೆ. ಇದು ಜನಪರ ಕಾಳಜಿ ತೋರಿಸುತ್ತದೆ. ಇನ್ನು ವಾಸವಿ ಚಾರಿಟಬಲ್ ಆಸ್ಪತ್ರೆಗೆ ಅಭಿನಂದನೆಗಳನ್ನು ಸಲ್ಲಿಸಿದ ಅವರು ಕೆಎಸ್ಆರ್ ಟಿಸಿ ಯಲ್ಲಿ ಆಸ್ಪತ್ರೆಯಾಗಿ ಪರಿವರ್ತನೆ ಮಾಡಿರುವುದನ್ನು ದತ್ತು ಪಡೆದು ಡಯಾಲಿಸ್ ಕೇಂದ್ರ ತೆರೆದು ಅತ್ಯುತ್ತಮ ಸೇವೆ ಸಲ್ಲಿಸುತ್ತಿದ್ದಾರೆ ಎಂದರು. ಕಂದಾಯ ಸಚಿವ ಆರ್.ಅಶೋಕ್, ಸಂಸದ ತೇಜಸ್ವಿ ಸೂರ್ಯ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂಓದಿ:ಕೆಲವು ಹಾಲಿ ಶಾಸಕರಿಗೆ ಟಿಕೆಟ್‌ ಕೈತಪ್ಪಬಹುದು: ಬಿ.ಎಸ್‌.ಯಡಿಯೂರಪ್ಪ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಮತ್ತು ಬಡವರ ಬಗ್ಗೆ ಅವರಿಗಿರುವ ಕಾಳಜಿ ತೋರಿಸುತ್ತದೆ. ಅವರು ಪ್ರಧಾನಿಯಾಗುವ ಮುನ್ನ ಅತ್ಯಂತ ಕಡಿಮೆ ದರದಲ್ಲಿ ಔಷಧಗಳನ್ನು ನೀಡುವ ಕಾರ್ಯಕ್ರಮ ಇರಲಿಲ್ಲ. ಆಡಳಿತಗಾರರಿಗೆ ಸೂಕ್ಷ್ಮಾತಿ ಸೂಕ್ಷ್ಮ ವಿಷಯಗಳ ಬಗ್ಗೆ ಕಳಕಳಿ ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಪಕ್ಷಗಳಿಗೆ ಮಾರ್ಮಿಕವಾಗಿ ಕುಟುಕಿದ್ದಾರೆ.

ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವಾಲಯದಿಂದ ಜಯನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಜನೌಷಧ ದಿವಸ್ ಆಚರಣೆ ಮತ್ತು 100 ನೇ ಜನೌಷಧ ಕೇಂದ್ರವನ್ನು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರೊಂದಿಗೆ ಉದ್ಘಾಟಿಸಿ ಅವರು, ಮಾತನಾಡಿದರು.

ಬಡವರಿಗೆ ಕಡಿಮೆ ದರದಲ್ಲಿ ಔಷಧ ವಿತರಣೆ :ಬಡತನವನ್ನು ಅನುಭವಿಸಿದಾಗ, ಹತ್ತಿರದಿಂದ ನೋಡಿ ಬಡವರ ಸಂಕಷ್ಟವನ್ನು ತಿಳಿದುಕೊಂಡಾಗ ಮಾತ್ರ ಬರುತ್ತದೆ. ನರೇಂದ್ರ ಮೋದಿಯವರಿಗೆ ಬಡತನ ಎಂದರೇನು ಗೊತ್ತಿದೆ. ಬಡವರು100 ರೂಪಾಯಿ ಸಹ ಇಲ್ಲದ ಸ್ಥಿತಿಯಲ್ಲಿರುತ್ತಾರೆ. ಔಷಧ ಕಂಪನಿಗಳ ದರ ಹತ್ತುಪಟ್ಟು ಮಾಡಿರುತ್ತಾರೆ. ಬಡವರ ಕಷ್ಟವನ್ನು ಅರ್ಥಮಾಡಿಕೊಂಡಿರುವ ಪ್ರಧಾನಿಗಳು ಬಡವರಿಗಾಗಿ ಔಷಧಗಳು ಸುಲಭ ಮತ್ತು ಕಡಿಮೆ ದರದಲ್ಲಿ ದೊರೆಯಬೇಕೆಂದು. ಗುಣಮುಖರಾಗಿ ಆರೋಗ್ಯವಂತರಾಗಬೇಕು. ಭಾರತ ಸಶಕ್ತವಾಗಬೇಕಾದರೆ , ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯಗಳು ತಲುಪಬೇಕೆಂದು ಇಂಥ ಕಾರ್ಯಕ್ರಮ ರೂಪಿಸಿದ್ದಾರೆ ಎಂದು ತಿಳಿಸಿದರು.

ಪ್ರತಿ ಮನೆಗೂ ಶುದ್ಧ ನೀರು ಪೂರೈಕೆ: ಆರೋಗ್ಯಕ್ಕೆ ಮೊದಲು ಅಗತ್ಯವಿರುವುದು ಶುದ್ಧವಾದ ನೀರು, ದೇಶದ ಗ್ರಾಮಗಳಲ್ಲಿರುವ ಎಲ್ಲರ ಮನೆಗೆ ಮುಂದಿನ 5 ವರ್ಷಗಳಲ್ಲಿ ನೀರು ಕೊಡುವುದಾಗಿ ಘೋಷಿಸಿದ್ದ ಪ್ರಧಾನಿಗಳು, ನಾಯಕನಿಗೆ ಬದ್ಧತೆ, ಛಲ,ಬುದ್ಧಿವಂತಿಕೆ ಹಾಗೂ ಬುದ್ದಿವಂತಿಕೆಗೆ ಹಣ ಕೊಡುವ ಹೃದಯ ವೈಶಾಲ್ಯವಿದ್ದರೆ ಅದು ಸಾಧ್ಯವಿದೆ. ಆದರೆ, ದೇಶದಲ್ಲಿ ಇಷ್ಟು ಪ್ರಧಾನಿಗಳು ಬಂದು ಹೋದರು ಯಾರಾದರು ಒಬ್ಬರು ನೀರು ಕೊಡುತ್ತೇನೆ ಎಂದು ಸಮಸ್ಯೆ ಪರಿಹರಿಸಿದ್ದಾರಾ?,

40 ಲಕ್ಷ ಮನೆಗಳಿಗೆ ಕುಡಿಯುವ ನೀರು ಪೂರೈಕೆ: ಇವರು ಇಂತಹ ಸಂಕಲ್ಪ ಮಾಡಿದ್ದಾರೆ. ಜಲ್ ಜೀವನ್ ಮಿಷನ್ ಅಡಿ ಅಸಾಧ್ಯವಾದುದನ್ನು ಸಾಧ್ಯ ಮಾಡಲಾಗುತ್ತಿದೆ. ಅಸಾಧ್ಯವಾದುದನ್ನು ಸಾಧ್ಯ ಮಾಡುವುದೇ ನಿಜವಾದ ನಾಯಕತ್ವ. 10 ಕೋಟಿಗಳಿಂತ ಹೆಚ್ಚು ಮನೆಗಳಿಗೆ ಮೋದಿಯವರು ಶುದ್ಧವಾದ ಕುಡಿಯುವ ನೀರನ್ನು ಕೊಡುತ್ತಿದ್ದಾರೆ. ಕರ್ನಾಟಕ ಒಂದರಲ್ಲಿಯೇ 72 ವರ್ಷ ಕೇವಲ 25 ಲಕ್ಷ ಮನೆಗಳಿಗೆ ನೀರು ಕೊಡಲಾಗಿತ್ತು. ಕಳೆದ ಮೂರು ವರ್ಷಗಳಲ್ಲಿ 40 ಲಕ್ಷ ಮನೆಗಳಿಗೆ ಕುಡಿಯುವ ನೀರನ್ನು ಒದಗಿಸಲಾಗಿದೆ. ಇದು ಬದ್ಧತೆಯ ನಾಯಕತ್ವ ಹಾಗೂ ಬದ್ಧತೆ ಎಂದು ಹೇಳಿದರು.

ಬೆಂಗಳೂರಿಗರ ಆರೋಗ್ಯಕ್ಕಾಗಿ ಸುವ್ಯವಸ್ಥೆ :ಬೆಂಗಳೂರಿನ ನಾಗರಿಕರ ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಅತಿ ಹೆಚ್ಚಿನ ಗಮನವನ್ನು ನೀಡಲಾಗಿದೆ. ಬೆಂಗಳೂರಿಗೆ ಆರೋಗ್ಯಕ್ಕಾಗಿ ವಿಶೇಷ ವ್ಯವಸ್ಥೆ ರೂಪಿಸಲಾಗುತ್ತಿದೆ. ಬೆಂಗಳೂರಿನ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದು, ಪ್ರತಿ ವಾರ್ಡಿಗೆ ನಮ್ಮ ಕ್ಲಿನಿಕ್ ಪ್ರಾರಂಭ ಮಾಡಲಾಗಿದೆ. ಈಗಾಗಲೇ 100 ಪ್ರಾರಂಭ ಮಾಡಲಾಗಿದ್ದು, ಇನ್ನೂ ನೂರು ಇದೇ ವಾರದಲ್ಲಿ ಪ್ರಾರಂಭಿಸಲಾಗುತ್ತಿದೆ.

ನಮ್ಮ ಕ್ಲಿನಿಕ್:240 ವಾರ್ಡ್​ಗಳಲ್ಲಿ ನಮ್ಮ ಕ್ಲಿನಿಕ್ ಪ್ರಾರಂಭವಾಗುತ್ತಿದೆ. ಸುಮಾರು 19 ಪಿಹೆಚ್​ಸಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. 4 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಎಲ್ಲೆಡೆ ಜನೌಷಧ ಕೇಂದ್ರಗಳನ್ನು ತೆರೆಯಲಾಗಿದೆ. ಇಂದು ಸಂಚಾರಿ ಆಸ್ಪತ್ರೆಯನ್ನೂ ಹಾಗೂ ಡಯಾಲಿಸಿಸ್ ಕೇಂದ್ರವನ್ನೂ ಉದ್ಘಾಟಿಸಲಾಗಿದ್ದು, ರೋಗಿಗಳ ಮುಖದಲ್ಲಿ ಮಂದಹಾಸ ನೋಡಿದಾಗ ಸಾರ್ಥಕ ಭಾವ ಮೂಡುತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರು ಕೂಡ ಕ್ರಿಯಾಶೀಲ ಸಚಿವರು. ರಾಜ್ಯಕ್ಕೆ ಹೆಚ್ಚುವರಿ ಲಸಿಕೆಯನ್ನು ಒದಗಿಸಿದ್ದಲ್ಲದೇ ಯೂರಿಯಾ ಕೊರತೆಯಾದಾಗಲೂ ಆದೇಶ ಮಾಡಿ ಕೊರತೆ ನೀಗಿಸಿದ್ದರು ಎಂದು ಶ್ಲಾಘಿಸಿದರು. ಸಂಸದ ತೇಜಸ್ವಿ ಸೂರ್ಯ ಅವರ ಕ್ಷೇತ್ರದಲ್ಲಿ ನೂರನೇ ಜನೌಷಧ ಕೇಂದ್ರ ಉದ್ಘಾಟನೆಗೊಂಡಿದ್ದು, ಇಡೀ ದೇಶದಲ್ಲಿ ಸಂಸದರೊಬ್ಬರ ಕ್ಷೇತ್ರದಲ್ಲಿ ಇರುವುದು ಒಂದು ದಾಖಲೆ. ಇದು ಜನಪರ ಕಾಳಜಿ ತೋರಿಸುತ್ತದೆ. ಇನ್ನು ವಾಸವಿ ಚಾರಿಟಬಲ್ ಆಸ್ಪತ್ರೆಗೆ ಅಭಿನಂದನೆಗಳನ್ನು ಸಲ್ಲಿಸಿದ ಅವರು ಕೆಎಸ್ಆರ್ ಟಿಸಿ ಯಲ್ಲಿ ಆಸ್ಪತ್ರೆಯಾಗಿ ಪರಿವರ್ತನೆ ಮಾಡಿರುವುದನ್ನು ದತ್ತು ಪಡೆದು ಡಯಾಲಿಸ್ ಕೇಂದ್ರ ತೆರೆದು ಅತ್ಯುತ್ತಮ ಸೇವೆ ಸಲ್ಲಿಸುತ್ತಿದ್ದಾರೆ ಎಂದರು. ಕಂದಾಯ ಸಚಿವ ಆರ್.ಅಶೋಕ್, ಸಂಸದ ತೇಜಸ್ವಿ ಸೂರ್ಯ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂಓದಿ:ಕೆಲವು ಹಾಲಿ ಶಾಸಕರಿಗೆ ಟಿಕೆಟ್‌ ಕೈತಪ್ಪಬಹುದು: ಬಿ.ಎಸ್‌.ಯಡಿಯೂರಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.