ETV Bharat / state

ಮೈತ್ರಿ ನಾಯಕರು ವ್ಯತಿರಿಕ್ತ,ವಿವಾದಾತ್ಮಕ ಹೇಳಿಕೆ ನೀಡಬಾರದು:ಸಿಎಂ ಮನವಿ

ಉಭಯ ಪಕ್ಷಗಳ ನಾಯಕರು ಯಾವುದೇ ರೀತಿಯ ವಿವಾದಾತ್ಮಕ ಹೇಳಿಕೆಗಳನ್ನು ನೀಡದಂತೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್
author img

By

Published : May 18, 2019, 4:55 PM IST

ಬೆಂಗಳೂರು:ಮೈತ್ರಿ ಪಕ್ಷಗಳ ನಾಯಕರು ವಿವಾದಾತ್ಮಕ ಹೇಳಿಕೆಗಳನ್ನು ನೀಡಬಾರದೆಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ,‘ಕೇಂದ್ರದಲ್ಲಿ ಹೊಸ ಸರ್ಕಾರ ರಚನೆಯಾಗುವ ಮಹತ್ತರ ಘಟ್ಟದಲ್ಲಿ ನಾವಿದ್ದೇವೆ. ಬಿಜೆಪಿಯೇತರ ಸರ್ಕಾರ ರಚನೆಯ ನಮ್ಮೆಲ್ಲರ ಆಶಯ ಸಾಕಾರಗೊಳಿಸುವ ಪ್ರಯತ್ನಗಳು ನಡೆಯುತ್ತಿರುವ ಸಂದರ್ಭದಲ್ಲಿ, ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳ ಮುಖಂಡರು ವ್ಯತಿರಿಕ್ತ ಹೇಳಿಕೆಗಳನ್ನು ನೀಡುವುದು, ಈ ಪ್ರಯತ್ನಗಳಿಗೆ ಹಿನ್ನೆಡೆಯಾಗಬಹುದು. ಆದ್ದರಿಂದ ಉಭಯ ಪಕ್ಷಗಳ ಮುಖಂಡರು ನಮ್ಮ ಆಶಯಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಯಾವುದೇ ವಿಭಿನ್ನ,ವಿವಾದಾತ್ಮಕ ಹೇಳಿಕೆ ನೀಡದಂತೆ ನನ್ನ ಕಳಕಳಿಯ ಮನವಿ ’ ಎಂದು ಟ್ವೀಟ್ ನಲ್ಲಿ ಕೋರಿದ್ದಾರೆ.

bangalore
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್

ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಬಸವಾಜ ಹೊರಟ್ಟಿ ಅವರು ಇಂದು ಬೆಳಗ್ಗೆ ಗೊಂದಲದಲ್ಲಿ ಮೈತ್ರಿ ಸರ್ಕಾರ ನಡೆಸುವುದು ಬೇಡ.ವಿಧಾನಸಭೆ ವಿಸರ್ಜಿಸಿ, ಚುನಾವಣೆ ಎದುರಿಸೋಣ. ಬಹುಮತ ಪಡೆದ ಪಕ್ಷ ಸರ್ಕಾರ ರಚಿಸಲಿ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಂಬಂಧ ರಾಜಕೀಯ ವಲಯದಲ್ಲಿ ಪರ-ವಿರೋಧ ಟೀಕೆಗಳು ಕೇಳಿ ಬಂದಿದ್ದವು. ಆಗಾಗ ಇಂತಹ ಹೇಳಿಕೆಗಳಿಂದ ಸರ್ಕಾರಕ್ಕೆ ಕಸಿವಿಸಿ ಉಂಟಾಗುತ್ತಿರುವುದನ್ನು ಅರಿತ ಕುಮಾರಸ್ವಾಮಿ ಈ ಬೆಳವಣಿಗೆಗಳಿಗೆ ಕಡಿವಾಣ ಹಾಕಲು ಮುಂದಾಗಿದ್ದಾರೆ.

ಬೆಂಗಳೂರು:ಮೈತ್ರಿ ಪಕ್ಷಗಳ ನಾಯಕರು ವಿವಾದಾತ್ಮಕ ಹೇಳಿಕೆಗಳನ್ನು ನೀಡಬಾರದೆಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ,‘ಕೇಂದ್ರದಲ್ಲಿ ಹೊಸ ಸರ್ಕಾರ ರಚನೆಯಾಗುವ ಮಹತ್ತರ ಘಟ್ಟದಲ್ಲಿ ನಾವಿದ್ದೇವೆ. ಬಿಜೆಪಿಯೇತರ ಸರ್ಕಾರ ರಚನೆಯ ನಮ್ಮೆಲ್ಲರ ಆಶಯ ಸಾಕಾರಗೊಳಿಸುವ ಪ್ರಯತ್ನಗಳು ನಡೆಯುತ್ತಿರುವ ಸಂದರ್ಭದಲ್ಲಿ, ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳ ಮುಖಂಡರು ವ್ಯತಿರಿಕ್ತ ಹೇಳಿಕೆಗಳನ್ನು ನೀಡುವುದು, ಈ ಪ್ರಯತ್ನಗಳಿಗೆ ಹಿನ್ನೆಡೆಯಾಗಬಹುದು. ಆದ್ದರಿಂದ ಉಭಯ ಪಕ್ಷಗಳ ಮುಖಂಡರು ನಮ್ಮ ಆಶಯಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಯಾವುದೇ ವಿಭಿನ್ನ,ವಿವಾದಾತ್ಮಕ ಹೇಳಿಕೆ ನೀಡದಂತೆ ನನ್ನ ಕಳಕಳಿಯ ಮನವಿ ’ ಎಂದು ಟ್ವೀಟ್ ನಲ್ಲಿ ಕೋರಿದ್ದಾರೆ.

bangalore
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್

ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಬಸವಾಜ ಹೊರಟ್ಟಿ ಅವರು ಇಂದು ಬೆಳಗ್ಗೆ ಗೊಂದಲದಲ್ಲಿ ಮೈತ್ರಿ ಸರ್ಕಾರ ನಡೆಸುವುದು ಬೇಡ.ವಿಧಾನಸಭೆ ವಿಸರ್ಜಿಸಿ, ಚುನಾವಣೆ ಎದುರಿಸೋಣ. ಬಹುಮತ ಪಡೆದ ಪಕ್ಷ ಸರ್ಕಾರ ರಚಿಸಲಿ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಂಬಂಧ ರಾಜಕೀಯ ವಲಯದಲ್ಲಿ ಪರ-ವಿರೋಧ ಟೀಕೆಗಳು ಕೇಳಿ ಬಂದಿದ್ದವು. ಆಗಾಗ ಇಂತಹ ಹೇಳಿಕೆಗಳಿಂದ ಸರ್ಕಾರಕ್ಕೆ ಕಸಿವಿಸಿ ಉಂಟಾಗುತ್ತಿರುವುದನ್ನು ಅರಿತ ಕುಮಾರಸ್ವಾಮಿ ಈ ಬೆಳವಣಿಗೆಗಳಿಗೆ ಕಡಿವಾಣ ಹಾಕಲು ಮುಂದಾಗಿದ್ದಾರೆ.

Intro:ಬೆಂಗಳೂರು : ಮೈತ್ರಿ ಪಕ್ಷಗಳ ನಾಯಕರು ಪ್ರತಿದಿನ ವಿವಾದಾತ್ಮಕ ಹೇಳಿಕೆ ನೀಡುತ್ತಿರುವುದರಿಂದ ದೋಸ್ತಿ ಸರ್ಕಾರಕ್ಕೆ ಮುಜುಗರ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಉಭಯ ಪಕ್ಷಗಳ ನಾಯಕರು ಯಾವುದೇ ಹೇಳಿಕೆಗಳನ್ನು ನೀಡಬಾರದೆಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ.Body:ಈ ಕುರಿತು ಟ್ವೀಟ್ ಮಾಡಿರುವ ಸಿಎಂ, ‘ ಕೇಂದ್ರದಲ್ಲಿ ಇನ್ನೊಂದು ಹೊಸ ಸರ್ಕಾರ ರಚನೆಯಾಗುವ ಮಹತ್ತರಘಟ್ಟದಲ್ಲಿ ನಾವಿದ್ದೇವೆ. ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚನೆಯ ನಮ್ಮೆಲ್ಲರ ಆಶಯ ಸಾಕಾರಗೊಳಿಸುವ ಪ್ರಯತ್ನಗಳು ನಡೆಯುತ್ತಿರುವ ಸಂದರ್ಭದಲ್ಲಿ ರಾಜ್ಯದ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಪಕ್ಷಗಳ ಮುಖಂಡರು ವ್ಯತಿರಿಕ್ತ ಹೇಳಿಕೆಗಳನ್ನು ನೀಡುವುದು ಇಂತಹ ಪ್ರಯತ್ನಗಳಿಎ ಹಿನ್ನಡೆಯಾಗಬಹುದು. ಆದ್ದರಿಂದ ಉಭಯ ಪಕ್ಷಗಳ ಮುಖಂಡರು ಇಂತಹ ಆಶಯಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಯಾವುದೇ ವಿಭಿನ್ನ, ವಿವಾದಾತ್ಮಕ ಹೇಳಿಕೆ ನೀಡದಂತೆ ನನ್ನ ಕಳಕಳಿಯ ಮನವಿ ’ ಎಂದು ಟ್ವೀಟ್ ನಲ್ಲಿ ಕೋರಿದ್ದಾರೆ.

ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಬಸವಾಜ ಹೊರಟ್ಟಿ ಅವರು ಇಂದು ಬೆಳಗ್ಗೆ ಗೊಂದಲದಲ್ಲಿ ಮೈತ್ರಿ ಸರ್ಕಾರ ನಡೆಸುವುದು ಬೇಡ. ವಿಧಾನಸಭೆ ವಿಸರ್ಜಿಸಿ, ಚುನಾವಣೆ ಎದುರಿಸೋಣ. ಬಹುಮತ ಪಡೆದ ಪಕ್ಷ ಸರ್ಕಾರ ರಚಿಸಲಿ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಂಬಂಧ ಹಲವು ಪರ-ವಿರೋಧ ಟೀಕೆಗಳು ಕೇಳಿಬಂದಿದ್ದವು. ಆಗಾಗ ಇಂತಹ ಹೇಳಿಕೆಗಳಿಂದ ಸರ್ಕಾರಕ್ಕೆ ಮುಜುಗರ ಉಂಟಾಗುತ್ತಿರುವುದನ್ನು ಅರಿತ ಕುಮಾರಸ್ವಾಮಿ ಅವರು ಇದಕ್ಕೆ ಕಡಿವಾಣ ಹಾಕಲು ಎರಡು ಪಕ್ಷಗಳ ಮುಖಂಡರಿಗೂ ಮನವಿ ಮಾಡಿದ್ದಾರೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.