ETV Bharat / state

ಪ್ರತಿ ಮನೆ-ಮನೆಗೂ ಕೊಳಾಯಿ: ಸಚಿವ ಕೆ.ಎಸ್. ಈಶ್ವರಪ್ಪ - water facity for every home scheme

ಮನೆ ಮನೆಗೆ ‘ಗಂಗಾ ಯೋಜನೆ ’ಎಂಬ ಹೊಸ ಯೋಜನೆ ಪ್ರತಿ ಮನೆ-ಮನೆಗೂ ಕೊಳಾಯಿ ಹಾಕಿಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ.

water facity for every home scheme
ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ
author img

By

Published : Jan 27, 2020, 8:38 PM IST

ಬೆಂಗಳೂರು : ಮನೆ ಮನೆಗೆ ‘ಗಂಗಾ ಯೋಜನೆ ’ಎಂಬ ಹೊಸ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಪ್ರತಿ ಮನೆ ಮನೆಗೂ ಗಂಗಾ ಯೋಜನೆಯಡಿ ಕೊಳಾಯಿ (ನಲ್ಲಿ) ಕೊಡಲು ತೀರ್ಮಾನ ಮಾಡಿದ್ದೇವೆ. ಇನ್ನೊಂದು ತಿಂಗಳಲ್ಲಿ ಈ ಯೋಜನೆ ಒಂದು ಹಂತಕ್ಕೆ ಬರಲಿದೆ ಎಂದು ಹೇಳಿದರು. ಇನ್ನು ಕೇಂದ್ರ ಸರ್ಕಾರ ಇದಕ್ಕೆ ಎಷ್ಟು ಅನುದಾನ ಕೊಡುತ್ತದೆ ಮತ್ತು ರಾಜ್ಯ ಸರ್ಕಾರದಿಂದ ಎಷ್ಟು ಭರಿಸಬೇಕು ಎಂಬುವುದರ ಕುರಿತು ಚರ್ಚೆ ನಡೆಸಲಾಗುತ್ತಿದ್ದು, ಶೀಘ್ರದಲ್ಲೇ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ನೀಡುವುದು ಈ ಯೋಜನೆಯ ಉದ್ದೇಶ. ಪೈಪ್​​​ಗಳ ಮೂಲಕ ಮನೆ ಮನೆಗೆ ಕೊಳಾಯಿ ಹಾಕಿ ನೀರು ಸರಬರಾಜು ಮಾಡಲಾಗುತ್ತದೆ. ತಿಂಗಳಿಗೆ ಇಂತಿಷ್ಟು ಶುಲ್ಕ ವಿಧಿಸಲಾಗುತ್ತದೆ. ಸರ್ಕಾರವೇ ನೀರು ಬಿಡುವ ನಿರ್ವಹಣೆ ಮಾಡುವುದರಿಂದ ಹೆಚ್ಚು ನೀರು ಪೋಲಾಗದಂತೆ ತಡೆಯಬಹುದು ಎಂದು ಹೇಳಿದರು.

ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ

ರಾಜ್ಯದ 6,021 ಗ್ರಾಮ ಪಂಚಾಯಿತಿಗಳಿಗೆ ಸೋಲಾರ್ ಅಳವಡಿಕೆ, ತ್ಯಾಜ್ಯ ಸಂಸ್ಕರಣ ಘಟಕಗಳ ಸ್ಥಾಪನೆಗೆ ನಿರ್ಧಾರ ಮಾಡಲಾಗಿದ್ದು, ಆ ಗ್ರಾಮ ಪಂಚಾಯಿತಿಗಳಿಗೆ ಈಗಾಗಲೇ ಭೂಮಿ ಕೊಡುತ್ತಿದ್ದೇವೆ. ಘನತ್ಯಾಜ್ಯಕ್ಕೆ ಕಾಮಗಾರಿ ಕೂಡ ಶುರು ಮಾಡಿದ್ದೇವೆ ಎಂದು ಮಾಹಿತಿ ನೀಡಿದರು. ಶುದ್ಧ ಕುಡಿಯವ ನೀರಿನ ಘಟಕಗಳ ಬಗ್ಗೆ ಬಹಳಷ್ಟು ದೂರುಗಳು ಬಂದಿವೆ. ಹೀಗಾಗಿ ತನಿಖೆ ಮಾಡಿಸಲು ಒಂದು ಏಜೆನ್ಸಿ ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಬೆಂಗಳೂರು : ಮನೆ ಮನೆಗೆ ‘ಗಂಗಾ ಯೋಜನೆ ’ಎಂಬ ಹೊಸ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಪ್ರತಿ ಮನೆ ಮನೆಗೂ ಗಂಗಾ ಯೋಜನೆಯಡಿ ಕೊಳಾಯಿ (ನಲ್ಲಿ) ಕೊಡಲು ತೀರ್ಮಾನ ಮಾಡಿದ್ದೇವೆ. ಇನ್ನೊಂದು ತಿಂಗಳಲ್ಲಿ ಈ ಯೋಜನೆ ಒಂದು ಹಂತಕ್ಕೆ ಬರಲಿದೆ ಎಂದು ಹೇಳಿದರು. ಇನ್ನು ಕೇಂದ್ರ ಸರ್ಕಾರ ಇದಕ್ಕೆ ಎಷ್ಟು ಅನುದಾನ ಕೊಡುತ್ತದೆ ಮತ್ತು ರಾಜ್ಯ ಸರ್ಕಾರದಿಂದ ಎಷ್ಟು ಭರಿಸಬೇಕು ಎಂಬುವುದರ ಕುರಿತು ಚರ್ಚೆ ನಡೆಸಲಾಗುತ್ತಿದ್ದು, ಶೀಘ್ರದಲ್ಲೇ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ನೀಡುವುದು ಈ ಯೋಜನೆಯ ಉದ್ದೇಶ. ಪೈಪ್​​​ಗಳ ಮೂಲಕ ಮನೆ ಮನೆಗೆ ಕೊಳಾಯಿ ಹಾಕಿ ನೀರು ಸರಬರಾಜು ಮಾಡಲಾಗುತ್ತದೆ. ತಿಂಗಳಿಗೆ ಇಂತಿಷ್ಟು ಶುಲ್ಕ ವಿಧಿಸಲಾಗುತ್ತದೆ. ಸರ್ಕಾರವೇ ನೀರು ಬಿಡುವ ನಿರ್ವಹಣೆ ಮಾಡುವುದರಿಂದ ಹೆಚ್ಚು ನೀರು ಪೋಲಾಗದಂತೆ ತಡೆಯಬಹುದು ಎಂದು ಹೇಳಿದರು.

ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ

ರಾಜ್ಯದ 6,021 ಗ್ರಾಮ ಪಂಚಾಯಿತಿಗಳಿಗೆ ಸೋಲಾರ್ ಅಳವಡಿಕೆ, ತ್ಯಾಜ್ಯ ಸಂಸ್ಕರಣ ಘಟಕಗಳ ಸ್ಥಾಪನೆಗೆ ನಿರ್ಧಾರ ಮಾಡಲಾಗಿದ್ದು, ಆ ಗ್ರಾಮ ಪಂಚಾಯಿತಿಗಳಿಗೆ ಈಗಾಗಲೇ ಭೂಮಿ ಕೊಡುತ್ತಿದ್ದೇವೆ. ಘನತ್ಯಾಜ್ಯಕ್ಕೆ ಕಾಮಗಾರಿ ಕೂಡ ಶುರು ಮಾಡಿದ್ದೇವೆ ಎಂದು ಮಾಹಿತಿ ನೀಡಿದರು. ಶುದ್ಧ ಕುಡಿಯವ ನೀರಿನ ಘಟಕಗಳ ಬಗ್ಗೆ ಬಹಳಷ್ಟು ದೂರುಗಳು ಬಂದಿವೆ. ಹೀಗಾಗಿ ತನಿಖೆ ಮಾಡಿಸಲು ಒಂದು ಏಜೆನ್ಸಿ ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

Intro:ಬೆಂಗಳೂರು : ಮನೆ ಮನೆಗೆ ‘ಗಂಗಾ ಯೋಜನೆ ’ಎಂಬ ಹೊಸ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. Body:ವಿಧಾನಸೌಧದಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರ ಜೊತೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪನವರು, ಪ್ರತಿ ಮನೆ ಮನೆಗೂ ಗಂಗಾ ಯೋಜನೆಯಡಿ ಕೊಳಾಯಿ (ನಲ್ಲಿ) ಕೊಡಲು ತೀರ್ಮಾನ ಮಾಡಿದ್ದೇವೆ. ಕೊಳಾಯಿ ಮೂಲಕ ನೀರು ತಲುಪಿಸುವ ಯೋಜನೆ ಇದಾಗಿದೆ. ಇನ್ನೊಂದು ತಿಂಗಳಲ್ಲಿ ಈ ಯೋಜನೆ ಒಂದು ಹಂತಕ್ಕೆ ಬರಲಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರ ಇದಕ್ಕೆ ಎಷ್ಟು ಅನುದಾನ ಕೊಡುತ್ತದೆ ಮತ್ತು ರಾಜ್ಯ ಸರ್ಕಾರದಿಂದ ಎಷ್ಟು ಭರಿಸಬೇಕೆಂಬುದರ ಕುರಿತು ಚರ್ಚೆ ನಡೆಸಲಾಗುತ್ತಿದ್ದು, ಶೀಘ್ರದಲ್ಲೇ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ನೀಡುವುದು ಈ ಯೋಜನೆ ಉದ್ದೇಶ. ಪೈಪ್ ಗಳ ಮೂಲಕ ಮನೆ ಮನೆಗೆ ಕೊಳಾಯಿ ಹಾಕಿ ನೀರು ಸರಬರಾಜು ಮಾಡಲಾಗುತ್ತದೆ. ತಿಂಗಳಿಗೆ ಇಂತಿಷ್ಟು ಶುಲ್ಕ ವಿಧಿಸಲಾಗುತ್ತದೆ. ಸರ್ಕಾರವೇ ನೀರು ಬಿಡುವ ನಿರ್ವಹಣೆ ಮಾಡುವುದರಿಂದ ಹೆಚ್ಚು ನೀರು ಪೋಲಾಗದಂತೆ ತಡೆಯಬಹುದು ಎಂದು ಹೇಳಿದರು.
ರಾಜ್ಯದ 6021 ಗ್ರಾಮ ಪಂಚಾಯತಿಗಳಿಗೆ ಸೋಲಾರ್ ಅಳವಡಿಕೆ, 6021 ಗ್ರಾಮ ಪಂಚಾಯತಿಗಳಿಗೆ ಘನತ್ಯಾಜ್ಯ ಸಂಸ್ಕರಣ ಘಟಕಗಳ ಸ್ಥಾಪನೆಗೆ ನಿರ್ಧಾರ ಮಾಡಲಾಗಿದ್ದು, ಆ ಗ್ರಾಮ ಪಂಚಾಯತಿಗಳಿಗೆ ಈಗಾಗಲೇ ಭೂಮಿ ಕೊಡುತ್ತಿದ್ದೇವೆ. ಘನತ್ಯಾಜ್ಯಕ್ಕೆ ಕಾಮಗಾರಿ ಕೂಡ ಶುರು ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.
ಶುದ್ದಕುಡಿಯವ ನೀರಿನ ಘಟಕಗಳ ಬಗ್ಗೆ ಬಹಳಷ್ಟು ದೂರುಗಳು ಬಂದಿವೆ. ಹೀಗಾಗಿ ತನಿಖೆ ಮಾಡಿಸಲು ಒಂದು ಏಜೆನ್ಸಿ ನೇಮಕ ಮಾಡಲು ತೀರ್ಮಾನ. ಏಜೇನ್ಸಿ ಮೂಲಕ ತನಿಖೆ ಮಾಡಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.