ETV Bharat / state

ಉದ್ದೇಶಪೂರ್ವಕವಾಗಿಯೇ ನೆಹರು ಭಾವಚಿತ್ರ ಕೈಬಿಟ್ಟಿದ್ದೇವೆ : ಎನ್. ರವಿಕುಮಾರ್

ಮಾಜಿ ಪ್ರಧಾನಿ ನೆಹರು ಫೋಟೋವನ್ನು ಸರ್ಕಾರದ ಜಾಹೀರಾತಿನಲ್ಲಿ ಉದ್ದೇಶಪೂರ್ವಕವಾಗಿಯೇ ಕೈಬಿಟ್ಟಿದ್ದೇವೆ. ನೆಹರೂ ದೇಶ ವಿಭಜನೆಗೆ ಕಾರಣರಾದವರು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಹೇಳಿದ್ದಾರೆ.

author img

By

Published : Aug 14, 2022, 3:38 PM IST

ನೆಹರೂ ಭಾವಚಿತ್ರ ಕೈಬಿಡಲಾಗಿದೆ
ನೆಹರೂ ಭಾವಚಿತ್ರ ಕೈಬಿಡಲಾಗಿದೆ

ಬೆಂಗಳೂರು: ಸರ್ಕಾರದ ಜಾಹೀರಾತಿನಲ್ಲಿ ಉದ್ದೇಶಪೂರ್ವಕವಾಗಿಯೇ ನೆಹರೂ ಭಾವಚಿತ್ರ ಕೈಬಿಟ್ಟಿದ್ದೇವೆ. ನೆಹರೂ ದೇಶ ವಿಭಜನೆಗೆ ಕಾರಣರಾದವರು, ಮಹಾತ್ಮ ಗಾಂಧಿಯವರ ಮಾತನ್ನೇ ನೆಹರು ಕೇಳಲಿಲ್ಲ. ಸ್ವಾತಂತ್ರ್ಯ ಬಂದ ನಂತರ ಕಾಂಗ್ರೆಸ್ ವಿಸರ್ಜಿಸಿ ಅಂತ ಗಾಂಧೀಜಿ ಹೇಳಿದ್ದರು. ಆದರೆ, ನೆಹರು ಕಾಂಗ್ರೆಸ್ ವಿಸರ್ಜಿಸಲಿಲ್ಲ. ಹಾಗಾಗಿ ನಾವು ಜಾಹೀರಾತಿನಲ್ಲಿ ನೆಹರೂ ಭಾವಚಿತ್ರ ಕೈಬಿಟ್ಟಿದ್ದೇವೆ ಎಂದು ರಾಜ್ಯ ಸರ್ಕಾರದ ನಡೆಯನ್ನು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಸಮರ್ಥಿಸಿಕೊಂಡಿದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ದೇಶಪೂರ್ವಕವಾಗಿ ನೆಹರು ಫೋಟೋವನ್ನು ಪತ್ರಿಕೆಯಲ್ಲಿ ನೀಡಿದ ಸರ್ಕಾರಿ ಜಾಹೀರಾತಿನಲ್ಲಿ ಕೈ ಬಿಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಾವು ಉದ್ದೇಶಪೂರ್ವಕವಾಗಿಯೇ ನೆಹರೂ ಭಾವಚಿತ್ರ ಕೈ ಬಿಟ್ಟಿದ್ದೇವೆ, ದೇಶ ವಿಭಜನೆಯ ಕರಾಳ ನೆನಪು ಅಂತ ಆಚರಣೆ ಮಾಡುತ್ತಿದ್ದೇವೆ. ಗಾಂಧೀಜಿಯವರ ಮಾತನ್ನು ನೆಹರು ಕೇಳಲಿಲ್ಲ, ಮಹಾತ್ಮ ಗಾಂಧೀಜಿಯವರ ಮಾತನ್ನು ಕೇಳದೆ, ದೇಶ ವಿಭಜನೆಗೆ ಕಾರಣವಾಗಿರುವ ನೆಹರೂರವರ ಫೋಟೋವನ್ನು ನಾವು ಹಾಕಲ್ಲ ಎಂದು ಸಮರ್ಥನೆ ನೀಡಿದರು.

ಉದ್ದೇಶಪೂರ್ವಕವಾಗಿಯೇ ನೆಹರೂ ಭಾವಚಿತ್ರ ಕೈಬಿಟ್ಟಿದ್ದೇವೆ

ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರನಲ್ಲ: ಟಿಪ್ಪು ಅನೇಕ ದೇವಾಲಯಗಳನ್ನು ಧ್ವಂಸ ಮಾಡಿದಾತ, ಲಕ್ಷಾಂತರ ಜನರನ್ನು‌ ಮತಾಂತರ ಮಾಡಿದವ, ಮಹಿಳೆಯರ ಕಗ್ಗೊಲೆ ಮಾಡಿದವನು. ಧರ್ಮದ್ರೋಹಿ ಟಿಪ್ಪು ಭಾವಚಿತ್ರವನ್ನು ಕಾಂಗ್ರೆಸ್​​ನವರು ಯಾಕೆ ಹಾಕಿದ್ದಾರೆ? ಇದು ಬಹಳ ವಿಚಿತ್ರ ವಿಷಯ ಎಂದು ಕಾಂಗ್ರೆಸ್ ನಡೆಯನ್ನು ರವಿಕುಮಾರ್ ಟೀಕಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರ್ ಎಸ್ ಎಸ್ ಕೈಗೊಂಬೆ ಎನ್ನುವ ಕಾಂಗ್ರೆಸ್ ಆರೋಪ ತಳ್ಳಿಹಾಕಿದ ರವಿಕುಮಾರ್, ಸಿದ್ದರಾಮಯ್ಯ ಅಧಿಕಾರವನ್ನು ಪಡೆಯುವುದಕ್ಕೆ ಸೋನಿಯಾ ಗಾಂಧಿಯವರ ಕೈಗೊಂಬೆಯಾಗಿದ್ದಾರೆ. ರಾಹುಲ್ ಗಾಂಧಿಯವರು ಇಬ್ಬರು ಅಪ್ಪಿಕೊಳ್ಳಿ ಅಂತ ಸಿದ್ದರಾಮಯ್ಯ ಡಿ ಕೆ ಶಿವಕುಮಾರ್​​ಗೆ ಹೇಳಿದ್ರು ಅಲ್ವಾ. ಅವರು ಕೂರಿ ಅಂದರೆ ಕೂರಬೇಕು, ಅಪ್ಪಿಕೊಳ್ಳಿ ಅಂದರೆ ಅಪ್ಪಿಕೊಳ್ಳಬೇಕು ಅಂತಹ ದೌರ್ಭಾಗ್ಯದ ಪರಿಸ್ಥಿತಿ ಕಾಂಗ್ರೆಸ್​​​ಗೆ ಬಂದಿದೆ ಎಂದು ಲೇವಡಿ ಮಾಡಿದರು.

ಅಮೃತ ಮಹೋತ್ಸವ ಕಾರ್ಯಕ್ರಮ ಸಿದ್ಧತೆ ಪರಿಶೀಲನೆ: ನಾಳೆ 75ನೇ ಸ್ವಾತಂತ್ರ್ಯದ ಅಮೃತಮಹೋತ್ಸವ ಕಾರ್ಯಕ್ರಮ ಹಿನ್ನೆಲೆಯಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಪರಿಶೀಲನೆ ನಡೆಸಿದರು. ಈ ಬಗ್ಗೆ ಮಾತನಾಡಿದ ಅವರು, 75 ನೇ ವರ್ಷದ ಸ್ವಾತಂತ್ರ್ಯ ದಿನವನ್ನು ರಾಷ್ಟ್ರೀಯ ಹಬ್ಬವನ್ನಾಗಿ ಬಿಜೆಪಿ ದೊಡ್ಡ ಮಟ್ಟದಲ್ಲಿ ಉಲ್ಲಾಸದಿಂದ ಆಚರಣೆ ಮಾಡಲು ನಿರ್ಧರಿಸಿದೆ. 75 ಲಕ್ಷಕ್ಕೂ ಹೆಚ್ಚು ರಾಷ್ಟ್ರ ಧ್ವಜವನ್ನು ವಿತರಣೆ ಮಾಡಿ ಆಚರಿಸುತ್ತಿದ್ದೇವೆ ಎಂದರು.

ನಾಳೆ ಕಂಠೀರವ ಸ್ಟೇಡಿಯಂನಲ್ಲಿ 50 ಸಾವಿರಕ್ಕೂ ಹೆಚ್ಚು ಜನರು ಸೇರಲಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ಕಾರ್ಯವನ್ನು ಮಾಡುತ್ತೇವೆ. ದೇಶ ವಿಭಜನೆ ಆಯಿತು, ವಿಭಜನೆಯಿಂದ ಭಾರತ, ಪಾಕಿಸ್ತಾನ ಎರಡೂ ನೆಮ್ಮದಿಯಿಂದ ಇರಲು ಆಗಿಲ್ಲ, ನೆಹರೂ ಮಾಡಿದ ದ್ರೋಹದಿಂದ ಎರಡು ದೇಶಗಳು ನೆಮ್ಮದಿಯಾಗಿಲ್ಲ, ದೇಶ ವಿಭಜನೆಯ ಕರಾಳ ಇತಿಹಾಸವನ್ನ ಸಂಜೆ ಬಿಜೆಪಿ ಕಚೇರಿಯಲ್ಲಿ ಸಿಎಂ ಉದ್ಘಾಟನೆ ಮಾಡಲಿದ್ದಾರೆ. 198 ವಾರ್ಡ್ ಗಳಲ್ಲಿ ಜನರು ತಮ್ಮ ತಮ್ಮ ವಾಹನಗಳಲ್ಲಿ ಬರುತ್ತಾರೆ. ಮೆರವಣಿಗೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಹಿಡಿದು ಕಂಠೀರವ ಸ್ಟೇಡಿಯಂಗೆ ಆಗಮಿಸುತ್ತಾರೆ ಎಂದು ವಿವರಿಸಿದರು.

ಈದ್ಗಾ ಮೈದಾನದಲ್ಲಿ ಧ್ವಜಾರೋಹಣ : ಪೊಲೀಲಿಸ್ ಭಿಗಿ ಭದ್ರತೆಯಲ್ಲಿ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ರವಿಕುಮಾರ್, ರಾಷ್ಟ್ರ ಧ್ವಜವನ್ನು ಹಾರಿಸಲು ಈ ರೀತಿಯ ವಾತಾವರಣ ಬಂದಿರುವುದಕ್ಕೆ ಕಾಂಗ್ರೆಸ್ ಕಾರಣ. ಇದನ್ನು ನಿರ್ಮಾಣ ಮಾಡಿದ್ದು ಕಾಂಗ್ರೆಸ್ ನವರೇ ಎಂದು ಆರೋಪಿಸಿದರು.

ಇದನ್ನೂ ಓದಿ: ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ನೆಹರು ಫೋಟೋ ಮಿಸ್ಸಿಂಗ್‌, ಕಾಂಗ್ರೆಸ್‌ ವಾಗ್ದಾಳಿ

ಬೆಂಗಳೂರು: ಸರ್ಕಾರದ ಜಾಹೀರಾತಿನಲ್ಲಿ ಉದ್ದೇಶಪೂರ್ವಕವಾಗಿಯೇ ನೆಹರೂ ಭಾವಚಿತ್ರ ಕೈಬಿಟ್ಟಿದ್ದೇವೆ. ನೆಹರೂ ದೇಶ ವಿಭಜನೆಗೆ ಕಾರಣರಾದವರು, ಮಹಾತ್ಮ ಗಾಂಧಿಯವರ ಮಾತನ್ನೇ ನೆಹರು ಕೇಳಲಿಲ್ಲ. ಸ್ವಾತಂತ್ರ್ಯ ಬಂದ ನಂತರ ಕಾಂಗ್ರೆಸ್ ವಿಸರ್ಜಿಸಿ ಅಂತ ಗಾಂಧೀಜಿ ಹೇಳಿದ್ದರು. ಆದರೆ, ನೆಹರು ಕಾಂಗ್ರೆಸ್ ವಿಸರ್ಜಿಸಲಿಲ್ಲ. ಹಾಗಾಗಿ ನಾವು ಜಾಹೀರಾತಿನಲ್ಲಿ ನೆಹರೂ ಭಾವಚಿತ್ರ ಕೈಬಿಟ್ಟಿದ್ದೇವೆ ಎಂದು ರಾಜ್ಯ ಸರ್ಕಾರದ ನಡೆಯನ್ನು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಸಮರ್ಥಿಸಿಕೊಂಡಿದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ದೇಶಪೂರ್ವಕವಾಗಿ ನೆಹರು ಫೋಟೋವನ್ನು ಪತ್ರಿಕೆಯಲ್ಲಿ ನೀಡಿದ ಸರ್ಕಾರಿ ಜಾಹೀರಾತಿನಲ್ಲಿ ಕೈ ಬಿಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಾವು ಉದ್ದೇಶಪೂರ್ವಕವಾಗಿಯೇ ನೆಹರೂ ಭಾವಚಿತ್ರ ಕೈ ಬಿಟ್ಟಿದ್ದೇವೆ, ದೇಶ ವಿಭಜನೆಯ ಕರಾಳ ನೆನಪು ಅಂತ ಆಚರಣೆ ಮಾಡುತ್ತಿದ್ದೇವೆ. ಗಾಂಧೀಜಿಯವರ ಮಾತನ್ನು ನೆಹರು ಕೇಳಲಿಲ್ಲ, ಮಹಾತ್ಮ ಗಾಂಧೀಜಿಯವರ ಮಾತನ್ನು ಕೇಳದೆ, ದೇಶ ವಿಭಜನೆಗೆ ಕಾರಣವಾಗಿರುವ ನೆಹರೂರವರ ಫೋಟೋವನ್ನು ನಾವು ಹಾಕಲ್ಲ ಎಂದು ಸಮರ್ಥನೆ ನೀಡಿದರು.

ಉದ್ದೇಶಪೂರ್ವಕವಾಗಿಯೇ ನೆಹರೂ ಭಾವಚಿತ್ರ ಕೈಬಿಟ್ಟಿದ್ದೇವೆ

ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರನಲ್ಲ: ಟಿಪ್ಪು ಅನೇಕ ದೇವಾಲಯಗಳನ್ನು ಧ್ವಂಸ ಮಾಡಿದಾತ, ಲಕ್ಷಾಂತರ ಜನರನ್ನು‌ ಮತಾಂತರ ಮಾಡಿದವ, ಮಹಿಳೆಯರ ಕಗ್ಗೊಲೆ ಮಾಡಿದವನು. ಧರ್ಮದ್ರೋಹಿ ಟಿಪ್ಪು ಭಾವಚಿತ್ರವನ್ನು ಕಾಂಗ್ರೆಸ್​​ನವರು ಯಾಕೆ ಹಾಕಿದ್ದಾರೆ? ಇದು ಬಹಳ ವಿಚಿತ್ರ ವಿಷಯ ಎಂದು ಕಾಂಗ್ರೆಸ್ ನಡೆಯನ್ನು ರವಿಕುಮಾರ್ ಟೀಕಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರ್ ಎಸ್ ಎಸ್ ಕೈಗೊಂಬೆ ಎನ್ನುವ ಕಾಂಗ್ರೆಸ್ ಆರೋಪ ತಳ್ಳಿಹಾಕಿದ ರವಿಕುಮಾರ್, ಸಿದ್ದರಾಮಯ್ಯ ಅಧಿಕಾರವನ್ನು ಪಡೆಯುವುದಕ್ಕೆ ಸೋನಿಯಾ ಗಾಂಧಿಯವರ ಕೈಗೊಂಬೆಯಾಗಿದ್ದಾರೆ. ರಾಹುಲ್ ಗಾಂಧಿಯವರು ಇಬ್ಬರು ಅಪ್ಪಿಕೊಳ್ಳಿ ಅಂತ ಸಿದ್ದರಾಮಯ್ಯ ಡಿ ಕೆ ಶಿವಕುಮಾರ್​​ಗೆ ಹೇಳಿದ್ರು ಅಲ್ವಾ. ಅವರು ಕೂರಿ ಅಂದರೆ ಕೂರಬೇಕು, ಅಪ್ಪಿಕೊಳ್ಳಿ ಅಂದರೆ ಅಪ್ಪಿಕೊಳ್ಳಬೇಕು ಅಂತಹ ದೌರ್ಭಾಗ್ಯದ ಪರಿಸ್ಥಿತಿ ಕಾಂಗ್ರೆಸ್​​​ಗೆ ಬಂದಿದೆ ಎಂದು ಲೇವಡಿ ಮಾಡಿದರು.

ಅಮೃತ ಮಹೋತ್ಸವ ಕಾರ್ಯಕ್ರಮ ಸಿದ್ಧತೆ ಪರಿಶೀಲನೆ: ನಾಳೆ 75ನೇ ಸ್ವಾತಂತ್ರ್ಯದ ಅಮೃತಮಹೋತ್ಸವ ಕಾರ್ಯಕ್ರಮ ಹಿನ್ನೆಲೆಯಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಪರಿಶೀಲನೆ ನಡೆಸಿದರು. ಈ ಬಗ್ಗೆ ಮಾತನಾಡಿದ ಅವರು, 75 ನೇ ವರ್ಷದ ಸ್ವಾತಂತ್ರ್ಯ ದಿನವನ್ನು ರಾಷ್ಟ್ರೀಯ ಹಬ್ಬವನ್ನಾಗಿ ಬಿಜೆಪಿ ದೊಡ್ಡ ಮಟ್ಟದಲ್ಲಿ ಉಲ್ಲಾಸದಿಂದ ಆಚರಣೆ ಮಾಡಲು ನಿರ್ಧರಿಸಿದೆ. 75 ಲಕ್ಷಕ್ಕೂ ಹೆಚ್ಚು ರಾಷ್ಟ್ರ ಧ್ವಜವನ್ನು ವಿತರಣೆ ಮಾಡಿ ಆಚರಿಸುತ್ತಿದ್ದೇವೆ ಎಂದರು.

ನಾಳೆ ಕಂಠೀರವ ಸ್ಟೇಡಿಯಂನಲ್ಲಿ 50 ಸಾವಿರಕ್ಕೂ ಹೆಚ್ಚು ಜನರು ಸೇರಲಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ಕಾರ್ಯವನ್ನು ಮಾಡುತ್ತೇವೆ. ದೇಶ ವಿಭಜನೆ ಆಯಿತು, ವಿಭಜನೆಯಿಂದ ಭಾರತ, ಪಾಕಿಸ್ತಾನ ಎರಡೂ ನೆಮ್ಮದಿಯಿಂದ ಇರಲು ಆಗಿಲ್ಲ, ನೆಹರೂ ಮಾಡಿದ ದ್ರೋಹದಿಂದ ಎರಡು ದೇಶಗಳು ನೆಮ್ಮದಿಯಾಗಿಲ್ಲ, ದೇಶ ವಿಭಜನೆಯ ಕರಾಳ ಇತಿಹಾಸವನ್ನ ಸಂಜೆ ಬಿಜೆಪಿ ಕಚೇರಿಯಲ್ಲಿ ಸಿಎಂ ಉದ್ಘಾಟನೆ ಮಾಡಲಿದ್ದಾರೆ. 198 ವಾರ್ಡ್ ಗಳಲ್ಲಿ ಜನರು ತಮ್ಮ ತಮ್ಮ ವಾಹನಗಳಲ್ಲಿ ಬರುತ್ತಾರೆ. ಮೆರವಣಿಗೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಹಿಡಿದು ಕಂಠೀರವ ಸ್ಟೇಡಿಯಂಗೆ ಆಗಮಿಸುತ್ತಾರೆ ಎಂದು ವಿವರಿಸಿದರು.

ಈದ್ಗಾ ಮೈದಾನದಲ್ಲಿ ಧ್ವಜಾರೋಹಣ : ಪೊಲೀಲಿಸ್ ಭಿಗಿ ಭದ್ರತೆಯಲ್ಲಿ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ರವಿಕುಮಾರ್, ರಾಷ್ಟ್ರ ಧ್ವಜವನ್ನು ಹಾರಿಸಲು ಈ ರೀತಿಯ ವಾತಾವರಣ ಬಂದಿರುವುದಕ್ಕೆ ಕಾಂಗ್ರೆಸ್ ಕಾರಣ. ಇದನ್ನು ನಿರ್ಮಾಣ ಮಾಡಿದ್ದು ಕಾಂಗ್ರೆಸ್ ನವರೇ ಎಂದು ಆರೋಪಿಸಿದರು.

ಇದನ್ನೂ ಓದಿ: ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ನೆಹರು ಫೋಟೋ ಮಿಸ್ಸಿಂಗ್‌, ಕಾಂಗ್ರೆಸ್‌ ವಾಗ್ದಾಳಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.