ಬೆಂಗಳೂರು: ನಮಗೆ ನಮ್ಮ ರಾಜ್ಯದ ಹಿತ ಮುಖ್ಯ. ಮಹದಾಯಿ ವಿಚಾರವಾಗಿ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ನಮ್ಮ ಧ್ವನಿ ರಾಜ್ಯದ ಪರವಾಗಿ ಹಾಗೂ ರಾಜ್ಯದ ಹಿತಕ್ಕಾಗಿ ಇದೆ. ನಮ್ಮ ರಾಜಕಾರಣಕ್ಕಾಗಿ ಈ ನೆಲ, ಜಲದ ಗೌರವ ಕಳೆದುಕೊಳ್ಳಲು ನಾವು ಸಿದ್ಧರಿಲ್ಲ. ಇದು ನಮ್ಮ ಕಾಂಗ್ರೆಸ್ ಪಕ್ಷದ ಮೂಲ ತತ್ವ, ಸಿದ್ಧಾಂತ, ಬದ್ಧತೆ. ಇನ್ನು ಮಹದಾಯಿ ವಿಚಾರವಾಗಿ ಪಾದಯಾತ್ರೆ ಮಾಡುವ ಬಗ್ಗೆ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದರು.