ETV Bharat / state

ಸಚಿನ್​​ ಪೈಲಟ್​​​​​​​ ಬಿಜೆಪಿ ಸೇರುವುದಾದರೆ ಸ್ವಾಗತಿಸುತ್ತೇನೆ: ಸುಧಾಕರ್​

author img

By

Published : Jul 13, 2020, 11:44 AM IST

ರಾಜಸ್ಥಾನ ಕಾಂಗ್ರೆಸ್​​ನಲ್ಲಿ ಆಂತರಿಕ ಕಲಹ ಸ್ಫೋಟಗೊಂಡಿದ್ದು, ಡಿಸಿಎಂ ಸಚಿನ್ ಪೈಲಟ್ ಪಕ್ಷದಿಂದ ಹೊರ ಹೋಗಲು ಚಿಂತನೆ ನಡೆಸಿದ್ದಾರೆ. ಈ ಕುರಿತಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಟ್ವೀಟ್​ ಮಾಡಿ, ಬಿಜೆಪಿಗೆ ಬರುವುದಾದರೆ ವೈಯಕ್ತಿಕವಾಗಿ ಸ್ವಾಗತಿಸುತ್ತೇನೆ ಎಂದಿದ್ದಾರೆ.

Minister Sudhakar tweet
ಸುಧಾಕರ್

ಬೆಂಗಳೂರು: ಕಾಂಗ್ರೆಸ್ ನಾಯಕ ಹಾಗೂ ರಾಜಸ್ಥಾನ ಡಿಸಿಎಂ ಸಚಿನ್ ಪೈಲಟ್ ಬಿಜೆಪಿಗೆ ಬರುವುದಾದರೆ ಅವರ ನಿರ್ಧಾರವನ್ನು ನಾನು ವೈಯಕ್ತಿಕವಾಗಿ ಸ್ವಾಗತಿಸುತ್ತೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.

  • There’s no room for talent & capability in INC. I personally welcome Sachin if he decides to join BJP. Ours is the only party who recognise & reward true leaders with caliber & commitment not follow cronyism. https://t.co/mvIhvh7cup

    — Dr Sudhakar K (@mla_sudhakar) July 12, 2020 " class="align-text-top noRightClick twitterSection" data=" ">

ಕಾಂಗ್ರೆಸ್ ಪಕ್ಷದಲ್ಲಿ ಪ್ರತಿಭೆ ಹಾಗೂ ಸಾಮರ್ಥ್ಯಕ್ಕೆ ಮನ್ನಣೆ ಸಿಕ್ಕುವುದಿಲ್ಲ. ಅದನ್ನು ಗುರುತಿಸುವುದೂ ಇಲ್ಲ. ನಿಜವಾದ ನಾಯಕರ ಸಾಮರ್ಥ್ಯವನ್ನು ಗುರುತಿಸುವ ಹಾಗೂ ಅದಕ್ಕೆ ತಕ್ಕ ಪ್ರತಿಫಲ ಕೊಡುವ ಬದ್ಧತೆ ಇರುವ ಪಕ್ಷ ಬಿಜೆಪಿ ಮಾತ್ರ ಎಂದು ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ರಾಜಸ್ಥಾನ ಕಾಂಗ್ರೆಸ್​​ನಲ್ಲಿ ಆಂತರಿಕ ಕಲಹ ಸ್ಫೋಟಗೊಂಡಿದ್ದು, ಡಿಸಿಎಂ ಸಚಿನ್ ಪೈಲಟ್ ಪಕ್ಷದಿಂದ ಹೊರ ಹೋಗಲು ಚಿಂತನೆ ನಡೆಸಿದ್ದಾರೆ. ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ.

ಬೆಂಗಳೂರು: ಕಾಂಗ್ರೆಸ್ ನಾಯಕ ಹಾಗೂ ರಾಜಸ್ಥಾನ ಡಿಸಿಎಂ ಸಚಿನ್ ಪೈಲಟ್ ಬಿಜೆಪಿಗೆ ಬರುವುದಾದರೆ ಅವರ ನಿರ್ಧಾರವನ್ನು ನಾನು ವೈಯಕ್ತಿಕವಾಗಿ ಸ್ವಾಗತಿಸುತ್ತೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.

  • There’s no room for talent & capability in INC. I personally welcome Sachin if he decides to join BJP. Ours is the only party who recognise & reward true leaders with caliber & commitment not follow cronyism. https://t.co/mvIhvh7cup

    — Dr Sudhakar K (@mla_sudhakar) July 12, 2020 " class="align-text-top noRightClick twitterSection" data=" ">

ಕಾಂಗ್ರೆಸ್ ಪಕ್ಷದಲ್ಲಿ ಪ್ರತಿಭೆ ಹಾಗೂ ಸಾಮರ್ಥ್ಯಕ್ಕೆ ಮನ್ನಣೆ ಸಿಕ್ಕುವುದಿಲ್ಲ. ಅದನ್ನು ಗುರುತಿಸುವುದೂ ಇಲ್ಲ. ನಿಜವಾದ ನಾಯಕರ ಸಾಮರ್ಥ್ಯವನ್ನು ಗುರುತಿಸುವ ಹಾಗೂ ಅದಕ್ಕೆ ತಕ್ಕ ಪ್ರತಿಫಲ ಕೊಡುವ ಬದ್ಧತೆ ಇರುವ ಪಕ್ಷ ಬಿಜೆಪಿ ಮಾತ್ರ ಎಂದು ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ರಾಜಸ್ಥಾನ ಕಾಂಗ್ರೆಸ್​​ನಲ್ಲಿ ಆಂತರಿಕ ಕಲಹ ಸ್ಫೋಟಗೊಂಡಿದ್ದು, ಡಿಸಿಎಂ ಸಚಿನ್ ಪೈಲಟ್ ಪಕ್ಷದಿಂದ ಹೊರ ಹೋಗಲು ಚಿಂತನೆ ನಡೆಸಿದ್ದಾರೆ. ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.