ETV Bharat / state

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ಕರ್ನಾಟಕದ ಪೂರ್ವ ಅರಬಿ ಸಮುದ್ರದ ಕರಾವಳಿ ಭಾಗದಲ್ಲಿ ಇದರ ಪ್ರಭಾವವಿದ್ದು, ಮುಂದಿನ ಐದು ದಿನಗಳ ಕಾಲ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಜುಲೈ 2 ಮತ್ತು 3ರಿಂದ ಕರ್ನಾಟಕದಕ ರಾವಳಿಯಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ರಾಜ್ಯ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

author img

By

Published : Jun 30, 2020, 5:42 AM IST

Rain
ಮಳೆ

ಬೆಂಗಳೂರು: ನೈರುತ್ಯ ಮುಂಗಾರು ಚುರುಕಾಗಿದ್ದು, ಪೂರ್ವ ಅರಬಿ ಸಮುದ್ರದ ಕೇರಳದ ಕರಾವಳಿ ಭಾಗದಲ್ಲಿ ಜೋರಾದ ಗಾಳಿ ಬೀಸಿದ ಪರಿಣಾಮ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆ ಆಗಿದೆ ಎಂದು ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ಹೇಳಿದ್ದಾರೆ.

ಪೂರ್ವ ಅರಬಿ ಸಮುದ್ರದ ರಾಜ್ಯದ ಕರಾವಳಿ ಭಾಗದಲ್ಲಿ ಇದರ ಪ್ರಭಾವವಿದ್ದು, ಮುಂದಿನ ಐದು ದಿನಗಳ ಕಾಲ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಜುಲೈ 2 ಮತ್ತು 3ರಿಂದ ಕರ್ನಾಟಕದಕ ರಾವಳಿಯಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ರಾಜ್ಯ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ ಎಂದರು.

ಈಟಿವಿ ಭಾರತ ಜತೆ ಮಾತನಾಡಿದ ಹವಾಮಾನ ತಜ್ಞ ಸಿ.ಎಸ್​. ಪಾಟೀಲ್

ಇಂದು ಬೆಂಗಳೂರು, ಮಂಡ್ಯ, ತುಮಕೂರು, ಹಾಸನ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಸಿ.ಎಸ್. ಪಾಟೀಲ್ ಅವರು ಈಟಿವಿ ಭಾರತಗೆ ಹೇಳಿದ್ದಾರೆ.

ಬೆಂಗಳೂರು: ನೈರುತ್ಯ ಮುಂಗಾರು ಚುರುಕಾಗಿದ್ದು, ಪೂರ್ವ ಅರಬಿ ಸಮುದ್ರದ ಕೇರಳದ ಕರಾವಳಿ ಭಾಗದಲ್ಲಿ ಜೋರಾದ ಗಾಳಿ ಬೀಸಿದ ಪರಿಣಾಮ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆ ಆಗಿದೆ ಎಂದು ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ಹೇಳಿದ್ದಾರೆ.

ಪೂರ್ವ ಅರಬಿ ಸಮುದ್ರದ ರಾಜ್ಯದ ಕರಾವಳಿ ಭಾಗದಲ್ಲಿ ಇದರ ಪ್ರಭಾವವಿದ್ದು, ಮುಂದಿನ ಐದು ದಿನಗಳ ಕಾಲ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಜುಲೈ 2 ಮತ್ತು 3ರಿಂದ ಕರ್ನಾಟಕದಕ ರಾವಳಿಯಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ರಾಜ್ಯ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ ಎಂದರು.

ಈಟಿವಿ ಭಾರತ ಜತೆ ಮಾತನಾಡಿದ ಹವಾಮಾನ ತಜ್ಞ ಸಿ.ಎಸ್​. ಪಾಟೀಲ್

ಇಂದು ಬೆಂಗಳೂರು, ಮಂಡ್ಯ, ತುಮಕೂರು, ಹಾಸನ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಸಿ.ಎಸ್. ಪಾಟೀಲ್ ಅವರು ಈಟಿವಿ ಭಾರತಗೆ ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.