ETV Bharat / state

ಸರ್ಕಾರ ಘೋಷಣೆ ಮಾಡಿದ ಹೊಸ ಯೋಜನೆಗಳು.. ಭೂ ಸಿರಿ, ರೈತ ಸಿರಿ, ಸಹ್ಯಾದ್ರಿ ಸಿರಿ.. ಬೊಮ್ಮಾಯಿ ಸಿರಿ ಭಾಗ್ಯ!

author img

By

Published : Feb 17, 2023, 12:51 PM IST

ಕರ್ನಾಟಕ ಬಜೆಟ್ 2023-24 ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ - ಬೊಮ್ಮಾಯಿ ಅವರು ಘೋಷಣೆ ಮಾಡಿದ ಹೊಸ ಯೋಜನೆಗಳೇನು? ಮತ್ತು ಹೊಸ ಘೋಷಣೆಗಳು - ರೈತರಿಗಾಗಿ 'ಭೂ ಸಿರಿ' ಎಂಬ ನೂತನ ಯೋಜನೆ ಘೋಷಣೆ.

bommai
ಬಸವರಾಜ ಬೊಮ್ಮಾಯಿ

ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬಮ್ಮಾಯಿ ಮಂಡಿಸಿರುವ ಕರ್ನಾಟಕ ಬಜೆಟ್ 2023-24 ಹತ್ತು ಹಲವು ರೀತಿಯಲ್ಲಿ ಗಮನ ಸೆಳೆದಿದೆ. ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಅನೇಕ ಜನಪರ ಘೋಷಣೆಗಳ ಮೂಲಕ ರಾಜ್ಯದ ಮತದಾರರ ಮನಗೆಲ್ಲಲು ಯತ್ನಿಸಲಾಗಿದೆ. ಈ ಬಾರಿಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ ಹೊಸ ಯೋಜನೆಗಳೇನು?, ಹೊಸ ಘೋಷಣೆಗಳೇನು? ಎಂಬ ಮಾಹಿತಿ ಇಲ್ಲಿದೆ ನೋಡಿ.

  • ರೈತರಿಗಾಗಿ 'ಭೂ ಸಿರಿ' ಎಂಬ ನೂತನ ಯೋಜನೆ ಘೋಷಣೆ ಮಾಡಲಾಗಿದೆ. ಈ ಯೋಜನೆಯಡಿ 10 ಸಾವಿರ ರೂ. ಹೆಚ್ಚುವರಿ ಸಹಾಯಧನ ನೀಡಿಕೆ.
  • 'ಸಹಸ್ರ ಸರೋವರ' ಯೋಜನೆಯಡಿ ರಾಜ್ಯದ 1,000 ಸಣ್ಣ ಸರೋವರಗಳ ಅಭಿವೃದ್ಧಿ ಮಾಡಲಾಗುವುದು.
  • 'ರೈತ ಸಿರಿ' ಯೋಜನೆ ಅಡಿ ಕಿರುಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ 10 ಸಾವಿರ ರೂ. ಪ್ರೋತ್ಸಾಹ ಧನ ನೀಡುವುದು.
  • 'ಸಹ್ಯಾದ್ರಿ ಸಿರಿ' ಯೋಜನೆಯಡಿ ಕರಾವಳಿ, ಮಲೆನಾಡು ಹಾಗೂ ಅರೆ ಮಲೆನಾಡಿನಲ್ಲಿ ಬೇಸಿಗೆಯಲ್ಲಿ ನೀರು ಸಂರಕ್ಷಣೆಗೆ ಒತ್ತು
  • ತೋಟಗಾರಿಕೆ ಉತ್ಪಾದಕತೆ ಹೆಚ್ಚಿಸಲು 'ಒಂದು ತೋಟ ಒಂದು ಬೆಳೆ' ಯೋಜನೆಗೆ 10 ಕೋಟಿ ರೂ. ಅನುದಾನ ಮೀಸಲು
  • ಆಳ ಸಮುದ್ರ ಮೀನುಗಾರಿಕೆ ಉತ್ತೇಜನಕ್ಕೆ 'ಮತ್ಸ್ಯ ಸಿರಿ' ಯೋಜನೆ ಘೋಷಣೆ
  • 'ಮುಖ್ಯಮಂತ್ರಿ ವಿದ್ಯಾ ಶಕ್ತಿ' ಯೋಜನೆಯಡಿ ಪದವಿವರೆಗೂ ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ
  • 100 ಕೋಟಿ ರೂ. ವೆಚ್ಚದಲ್ಲಿ ಶಾಲೆಗೆ ತೆರಳಲು 'ಮಕ್ಕಳ ಬಸ್' ಯೋಜನೆ ಜಾರಿ
  • 'ಬದುಕುವ ದಾರಿ' ಯೋಜನೆಯಡಿ ಯುವಜನರಿಗೆ 3 ತಿಂಗಳು ಐಟಿಐ ತರಬೇತಿ
  • ಯುವಕರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು 'ಯುವಸ್ನೇಹಿ' ಯೋಜನೆಯಡಿ ತಲಾ 2 ಸಾವಿರ ರೂ. ಘೋಷಣೆ
  • 'ವಿದ್ಯಾವಾಹಿನಿ' ಯೋಜನೆಯಡಿ ವಿದ್ಯಾರ್ಥಿನಿಯರಿಗೆ 350 ಕೋಟಿ ವೆಚ್ಚದಲ್ಲಿ ಉಚಿತ ಬಸ್ ಪಾಸ್ ಸೌಲಭ್ಯ
  • ಮಹಿಳೆಯರ ಆರ್ಥಿಕ ಶಕ್ತಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ 'ಗೃಹಿಣಿ ಶಕ್ತಿ' ಯೋಜನೆ ಜಾರಿ, ಇದಕ್ಕೆ 46,278 ಕೋಟಿ ರೂ. ಅನುದಾನ ಮೀಸಲು
  • 'ನಮ್ಮ ನೆಲೆ' ಯೋಜನೆಯಡಿ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ನಿವೇಶನ ನೀಡಿಕೆ
  • 'ಜಲನಿಧಿ' ಯೋಜನೆಯಡಿ ರೈತರ ಜಮೀನುಗಳಲ್ಲಿ ಜಲ ಹೊಂಡ
  • ಗೋ ಶಾಲೆಗಳ ಸ್ಥಾಪನೆಗೆ 'ಪುಣ್ಯ ಕೋಟಿ ದತ್ತು ಯೋಜನೆ' ಜಾರಿ
  • 'ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ' ಅಡಿ 355 ಕೋಟಿ ರೂ. ವೆಚ್ಚದಲ್ಲಿ ಕುರಿ ಮತ್ತು ಮೇಕೆ ಘಟಕ ಸ್ಥಾಪನೆ. ಇದರಿಂದ 20 ಸಾವಿರ ಫಲಾನುಭವಿಗಳಿಗೆ ಅನುಕೂಲ
  • 'ಹಳ್ಳಿ ಮುತ್ತು' ಯೋಜನೆ ಅಡಿ ಗ್ರಾಮೀಣ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಾಲಾ ಶಿಕ್ಷಣ ಪೂರೈಸುವ 500 ಅತ್ಯುತ್ತಮ ವಿದ್ಯಾರ್ಥಿಗಳು ಸಿಇಟಿ ಮೂಲಕ ಸರ್ಕಾರಿ ಕೋಟಾದಲ್ಲಿ ವೃತ್ತಿಪರ ಶಿಕ್ಷಣಕ್ಕೆ ಆಯ್ಕೆಯಾದರೆ ಸರ್ಕಾರವೇ ಸಂಪೂರ್ಣ ಶುಲ್ಕ ಭರಿಸಲಿದೆ.
  • 'ವಿದ್ಯಾವರ್ಧಿನಿ' ಯೋಜನೆಯಡಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್‌ಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸುವುದು
  • 'ಆರೋಗ್ಯ ಪುಷ್ಟಿ' ಯೋಜನೆ ಅಡಿ ಮಹಿಳೆಯರ ಅಪೌಷ್ಟಿಕತೆ, ರಕ್ತಹೀನತೆ ತಡೆಯಲು ಕ್ರಮ ಕೈಗೊಳ್ಳಲು ಕ್ರಮ
  • 'ಸ್ವಚೇತನ' ಯೋಜನೆಯಡಿ 5 ಸಾವಿರ ವಿಕಲ ಚೇತನರಿಗೆ ದ್ವಿಚಕ್ರ ವಾಹನ ನೀಡುವುದಾಗಿ ಸಿಎಂ ತಿಳಿಸಿದ್ದಾರೆ.

ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬಮ್ಮಾಯಿ ಮಂಡಿಸಿರುವ ಕರ್ನಾಟಕ ಬಜೆಟ್ 2023-24 ಹತ್ತು ಹಲವು ರೀತಿಯಲ್ಲಿ ಗಮನ ಸೆಳೆದಿದೆ. ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಅನೇಕ ಜನಪರ ಘೋಷಣೆಗಳ ಮೂಲಕ ರಾಜ್ಯದ ಮತದಾರರ ಮನಗೆಲ್ಲಲು ಯತ್ನಿಸಲಾಗಿದೆ. ಈ ಬಾರಿಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ ಹೊಸ ಯೋಜನೆಗಳೇನು?, ಹೊಸ ಘೋಷಣೆಗಳೇನು? ಎಂಬ ಮಾಹಿತಿ ಇಲ್ಲಿದೆ ನೋಡಿ.

  • ರೈತರಿಗಾಗಿ 'ಭೂ ಸಿರಿ' ಎಂಬ ನೂತನ ಯೋಜನೆ ಘೋಷಣೆ ಮಾಡಲಾಗಿದೆ. ಈ ಯೋಜನೆಯಡಿ 10 ಸಾವಿರ ರೂ. ಹೆಚ್ಚುವರಿ ಸಹಾಯಧನ ನೀಡಿಕೆ.
  • 'ಸಹಸ್ರ ಸರೋವರ' ಯೋಜನೆಯಡಿ ರಾಜ್ಯದ 1,000 ಸಣ್ಣ ಸರೋವರಗಳ ಅಭಿವೃದ್ಧಿ ಮಾಡಲಾಗುವುದು.
  • 'ರೈತ ಸಿರಿ' ಯೋಜನೆ ಅಡಿ ಕಿರುಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ 10 ಸಾವಿರ ರೂ. ಪ್ರೋತ್ಸಾಹ ಧನ ನೀಡುವುದು.
  • 'ಸಹ್ಯಾದ್ರಿ ಸಿರಿ' ಯೋಜನೆಯಡಿ ಕರಾವಳಿ, ಮಲೆನಾಡು ಹಾಗೂ ಅರೆ ಮಲೆನಾಡಿನಲ್ಲಿ ಬೇಸಿಗೆಯಲ್ಲಿ ನೀರು ಸಂರಕ್ಷಣೆಗೆ ಒತ್ತು
  • ತೋಟಗಾರಿಕೆ ಉತ್ಪಾದಕತೆ ಹೆಚ್ಚಿಸಲು 'ಒಂದು ತೋಟ ಒಂದು ಬೆಳೆ' ಯೋಜನೆಗೆ 10 ಕೋಟಿ ರೂ. ಅನುದಾನ ಮೀಸಲು
  • ಆಳ ಸಮುದ್ರ ಮೀನುಗಾರಿಕೆ ಉತ್ತೇಜನಕ್ಕೆ 'ಮತ್ಸ್ಯ ಸಿರಿ' ಯೋಜನೆ ಘೋಷಣೆ
  • 'ಮುಖ್ಯಮಂತ್ರಿ ವಿದ್ಯಾ ಶಕ್ತಿ' ಯೋಜನೆಯಡಿ ಪದವಿವರೆಗೂ ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ
  • 100 ಕೋಟಿ ರೂ. ವೆಚ್ಚದಲ್ಲಿ ಶಾಲೆಗೆ ತೆರಳಲು 'ಮಕ್ಕಳ ಬಸ್' ಯೋಜನೆ ಜಾರಿ
  • 'ಬದುಕುವ ದಾರಿ' ಯೋಜನೆಯಡಿ ಯುವಜನರಿಗೆ 3 ತಿಂಗಳು ಐಟಿಐ ತರಬೇತಿ
  • ಯುವಕರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು 'ಯುವಸ್ನೇಹಿ' ಯೋಜನೆಯಡಿ ತಲಾ 2 ಸಾವಿರ ರೂ. ಘೋಷಣೆ
  • 'ವಿದ್ಯಾವಾಹಿನಿ' ಯೋಜನೆಯಡಿ ವಿದ್ಯಾರ್ಥಿನಿಯರಿಗೆ 350 ಕೋಟಿ ವೆಚ್ಚದಲ್ಲಿ ಉಚಿತ ಬಸ್ ಪಾಸ್ ಸೌಲಭ್ಯ
  • ಮಹಿಳೆಯರ ಆರ್ಥಿಕ ಶಕ್ತಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ 'ಗೃಹಿಣಿ ಶಕ್ತಿ' ಯೋಜನೆ ಜಾರಿ, ಇದಕ್ಕೆ 46,278 ಕೋಟಿ ರೂ. ಅನುದಾನ ಮೀಸಲು
  • 'ನಮ್ಮ ನೆಲೆ' ಯೋಜನೆಯಡಿ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ನಿವೇಶನ ನೀಡಿಕೆ
  • 'ಜಲನಿಧಿ' ಯೋಜನೆಯಡಿ ರೈತರ ಜಮೀನುಗಳಲ್ಲಿ ಜಲ ಹೊಂಡ
  • ಗೋ ಶಾಲೆಗಳ ಸ್ಥಾಪನೆಗೆ 'ಪುಣ್ಯ ಕೋಟಿ ದತ್ತು ಯೋಜನೆ' ಜಾರಿ
  • 'ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ' ಅಡಿ 355 ಕೋಟಿ ರೂ. ವೆಚ್ಚದಲ್ಲಿ ಕುರಿ ಮತ್ತು ಮೇಕೆ ಘಟಕ ಸ್ಥಾಪನೆ. ಇದರಿಂದ 20 ಸಾವಿರ ಫಲಾನುಭವಿಗಳಿಗೆ ಅನುಕೂಲ
  • 'ಹಳ್ಳಿ ಮುತ್ತು' ಯೋಜನೆ ಅಡಿ ಗ್ರಾಮೀಣ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಾಲಾ ಶಿಕ್ಷಣ ಪೂರೈಸುವ 500 ಅತ್ಯುತ್ತಮ ವಿದ್ಯಾರ್ಥಿಗಳು ಸಿಇಟಿ ಮೂಲಕ ಸರ್ಕಾರಿ ಕೋಟಾದಲ್ಲಿ ವೃತ್ತಿಪರ ಶಿಕ್ಷಣಕ್ಕೆ ಆಯ್ಕೆಯಾದರೆ ಸರ್ಕಾರವೇ ಸಂಪೂರ್ಣ ಶುಲ್ಕ ಭರಿಸಲಿದೆ.
  • 'ವಿದ್ಯಾವರ್ಧಿನಿ' ಯೋಜನೆಯಡಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್‌ಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸುವುದು
  • 'ಆರೋಗ್ಯ ಪುಷ್ಟಿ' ಯೋಜನೆ ಅಡಿ ಮಹಿಳೆಯರ ಅಪೌಷ್ಟಿಕತೆ, ರಕ್ತಹೀನತೆ ತಡೆಯಲು ಕ್ರಮ ಕೈಗೊಳ್ಳಲು ಕ್ರಮ
  • 'ಸ್ವಚೇತನ' ಯೋಜನೆಯಡಿ 5 ಸಾವಿರ ವಿಕಲ ಚೇತನರಿಗೆ ದ್ವಿಚಕ್ರ ವಾಹನ ನೀಡುವುದಾಗಿ ಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ: Karnataka Budget 2023: ರೈತರಿಗೆ 5 ಲಕ್ಷದವರೆಗೆ ಸಾಲ.. ಮಠ, ಮಂದಿರಗಳ ಅಭಿವೃದ್ಧಿಗೆ 1,000 ಕೋಟಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.