ETV Bharat / state

ಮಂಡ್ಯ ಫಲಿತಾಂಶದ ಬಗ್ಗೆ ಮಾತಾಡುವಷ್ಟು ದೊಡ್ಡವಳಲ್ಲ:ಪೂಜಾಗಾಂಧಿ - undefined

ಮಂಡ್ಯ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡುವಷ್ಟು ನಾನು ದೊಡ್ಡವಳಲ್ಲ. ಆದಷ್ಟು ಬೇಗ ನಾನು ರಾಜಕಾರಣದಲ್ಲಿ ಸಕ್ರೀಯಳಾಗುತ್ತೇನೆ ಎಂದು ಮಳೆ ಹುಡುಗಿ ಪೂಜಾಗಾಂಧಿ ಹೇಳಿದ್ದಾರೆ.

ಪೂಜಾ ಗಾಂಧಿ
author img

By

Published : May 22, 2019, 8:59 PM IST

'ಮುಂಗಾರು ಮಳೆ' ಖ್ಯಾತಿಯ ನಟಿ ಪೂಜಾಗಾಂಧಿ ರಾಜಕೀಯದಲ್ಲಿದ್ದರೂ ಸಕ್ರೀಯರಾಗಿಲ್ಲ.'ಸಂಹಾರಿಣಿ' ಚಿತ್ರದ ಶೂಟಿಂಗ್ ಬಿಡುವಿನ ವೇಳೆ ಅವರು ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. 'ನಾನಿನ್ನೂ ಜೆಡಿಎಸ್ ಪಕ್ಷದಲ್ಲಿದ್ದೇನೆ. ನನ್ನ ತಾಯಿಗೆ ಆರೋಗ್ಯ ಸರಿ ಇಲ್ಲದ ಕಾರಣ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನಾನು ಪ್ರಚಾರದಲ್ಲಿ ಪಾಲ್ಗೊಳ್ಳಲಾಗಲಿಲ್ಲ. ಆದಷ್ಟು ಬೇಗ ರಾಜಕಾರಣದಲ್ಲಿ ಸಕ್ರೀಯಳಾಗುತ್ತೇನೆ. ನಾಳಿನ ಫಲಿತಾಂಶದಲ್ಲಿ ನಮ್ಮ ಪಕ್ಷ ಅತ್ಯಧಿಕ ಸೀಟು ಗೆಲ್ಲುತ್ತದೆ' ಎಂದು ಭರವಸೆ ವ್ಯಕ್ತಪಡಿಸಿದರು.

ನಟಿ ಪೂಜಾಗಾಂಧಿ

ಮಂಡ್ಯ ಚುನಾವಣಾ ಫಲಿತಾಂಶದ ಬಗ್ಗೆ ಪ್ರಶ್ನಿಸಿದಾಗ 'ನಾನು ಮಂಡ್ಯ ಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡುವಷ್ಟು ದೊಡ್ಡವಳಲ್ಲ. ಅವರೆಲ್ಲಾ ದೊಡ್ಡವರು, ನಾನು ಅವರ ಮುಂದೆ ಬಹಳ ಚಿಕ್ಕವಳು. ಇನ್ನು ಸಮೀಕ್ಷೆ ಬಗ್ಗೆ ನನಗೇನೂ ಗೊತ್ತಿಲ್ಲ. ನಾನು ಹೆಚ್ಚಿಗೆ ಟಿವಿ ನೋಡುವುದಿಲ್ಲ ಎಂದರು. ರಾಜಕೀಯದ ಬಗ್ಗೆ ಹೆಚ್ಚಿಗೆ ಮಾತನಾಡದ ಪೂಜಾ ಆದಷ್ಟು ಬೇಗ 'ಸಂಹಾರಿಣಿ' ಸಿನಿಮಾ ಬಿಡುಗಡೆಯಾಗುತ್ತಿದೆ. ಇದು ಎಲ್ಲರೂ ನೋಡಬೇಕಾದ ಸಿನಿಮಾ' ಎಂದು ಹೇಳಿದರು.

ಪೂಜಾಗಾಂಧಿ 2012 ರಲ್ಲಿ ಜೆಡಿಎಸ್ ಸೇರ್ಪಡೆಯಾಗಿ ರಾಜಕೀಯ ಜೀವನಕ್ಕೆ ಕಾಲಿಟ್ಟಿದ್ದರು. 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ರಾಯಚೂರು ಕ್ಷೇತ್ರದಿಂದ ಕಣಕ್ಕಿಳಿದು ಸೋಲು ಅನುಭವಿಸಿದ್ದರು. ನಂತರ ಮತ್ತೆ 2018ರಲ್ಲಿ ಜೆಡಿಎಸ್‌ ಸೇರ್ಪಡೆಯಾಗಿದ್ದರು.

'ಮುಂಗಾರು ಮಳೆ' ಖ್ಯಾತಿಯ ನಟಿ ಪೂಜಾಗಾಂಧಿ ರಾಜಕೀಯದಲ್ಲಿದ್ದರೂ ಸಕ್ರೀಯರಾಗಿಲ್ಲ.'ಸಂಹಾರಿಣಿ' ಚಿತ್ರದ ಶೂಟಿಂಗ್ ಬಿಡುವಿನ ವೇಳೆ ಅವರು ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. 'ನಾನಿನ್ನೂ ಜೆಡಿಎಸ್ ಪಕ್ಷದಲ್ಲಿದ್ದೇನೆ. ನನ್ನ ತಾಯಿಗೆ ಆರೋಗ್ಯ ಸರಿ ಇಲ್ಲದ ಕಾರಣ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನಾನು ಪ್ರಚಾರದಲ್ಲಿ ಪಾಲ್ಗೊಳ್ಳಲಾಗಲಿಲ್ಲ. ಆದಷ್ಟು ಬೇಗ ರಾಜಕಾರಣದಲ್ಲಿ ಸಕ್ರೀಯಳಾಗುತ್ತೇನೆ. ನಾಳಿನ ಫಲಿತಾಂಶದಲ್ಲಿ ನಮ್ಮ ಪಕ್ಷ ಅತ್ಯಧಿಕ ಸೀಟು ಗೆಲ್ಲುತ್ತದೆ' ಎಂದು ಭರವಸೆ ವ್ಯಕ್ತಪಡಿಸಿದರು.

ನಟಿ ಪೂಜಾಗಾಂಧಿ

ಮಂಡ್ಯ ಚುನಾವಣಾ ಫಲಿತಾಂಶದ ಬಗ್ಗೆ ಪ್ರಶ್ನಿಸಿದಾಗ 'ನಾನು ಮಂಡ್ಯ ಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡುವಷ್ಟು ದೊಡ್ಡವಳಲ್ಲ. ಅವರೆಲ್ಲಾ ದೊಡ್ಡವರು, ನಾನು ಅವರ ಮುಂದೆ ಬಹಳ ಚಿಕ್ಕವಳು. ಇನ್ನು ಸಮೀಕ್ಷೆ ಬಗ್ಗೆ ನನಗೇನೂ ಗೊತ್ತಿಲ್ಲ. ನಾನು ಹೆಚ್ಚಿಗೆ ಟಿವಿ ನೋಡುವುದಿಲ್ಲ ಎಂದರು. ರಾಜಕೀಯದ ಬಗ್ಗೆ ಹೆಚ್ಚಿಗೆ ಮಾತನಾಡದ ಪೂಜಾ ಆದಷ್ಟು ಬೇಗ 'ಸಂಹಾರಿಣಿ' ಸಿನಿಮಾ ಬಿಡುಗಡೆಯಾಗುತ್ತಿದೆ. ಇದು ಎಲ್ಲರೂ ನೋಡಬೇಕಾದ ಸಿನಿಮಾ' ಎಂದು ಹೇಳಿದರು.

ಪೂಜಾಗಾಂಧಿ 2012 ರಲ್ಲಿ ಜೆಡಿಎಸ್ ಸೇರ್ಪಡೆಯಾಗಿ ರಾಜಕೀಯ ಜೀವನಕ್ಕೆ ಕಾಲಿಟ್ಟಿದ್ದರು. 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ರಾಯಚೂರು ಕ್ಷೇತ್ರದಿಂದ ಕಣಕ್ಕಿಳಿದು ಸೋಲು ಅನುಭವಿಸಿದ್ದರು. ನಂತರ ಮತ್ತೆ 2018ರಲ್ಲಿ ಜೆಡಿಎಸ್‌ ಸೇರ್ಪಡೆಯಾಗಿದ್ದರು.

Intro:ಮಂಡ್ಯ ಫಲಿತಾಂಶದ ಬಗ್ಗೆ ಮಳ ಹುಡುಗಿ ಏನ್ ಹೇಳಿದ್ರು ಗೋತ್ತಾ?....


ಇಡೀ ದೇಶದ ಗಮನ ನಾಳಿನ ಲೋಕಸಭಾ ಚುನಾವಣ ಫಲಿತಾಂಶದ ಕಡೆಗಿದೆ.ಇದರ ಜೊತೆಗೆ ಮಂಡ್ಯ ಲೋಕಸಭಾ ಫಲಿತಾಂಶದ ಮೇಲೆ‌ ಈಗಾಗಲೇ ಬಾರಿ ಲೆಕ್ಕಚಾರ ಶುರುವಾಗಿ್ದೆದೆ.ಈಗಿರುವಾಗ ಮಂಡ್ಯ ಫಲಿತಾಂಶದ ಬಗ್ಗೆ ಮಳೆ ಹುಡುಗಿ ಪೂಜಾ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ನಟಿ ಪೂಜಾಗಾಂಧಿ ಸಂಹಾರಿಣಿ ಸಿನಿಮಾದ ಶೂಟಿಂಗ್ ವೇಳೆ ಅವರ ರಾಜಕೀಯ ಜೀವನದ ಬಗ್ಗೆ ಮಾತಾಡಿದ್ದಾರೆ. ನಾನು ಇನ್ನೂ ಜೆಡಿಎಸ್‌ನಲ್ಲೇ ಇದ್ದೀನಿ.ಇಷ್ಟರಲ್ಲೇ ಸಕ್ರಿಯ ರಾಜಕಾರಣದಲ್ಲಿ ನಾನು ತೊಡಗಿಸಿಕೊಳ್ತೀನಿ. ನಮ್ಮ ತಾಯಿಗೆ ಆರೋಗ್ಯ ಹದಗೆಟ್ಟಿದ್ದ ಕಾರಣ ಲೋಕಸಭಾ ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ. ನಮ್ಮ ಪಕ್ಷ ಅತ್ಯಧಿಕ ಸೀಟುಗಳಲ್ಲಿ ಗೆಲ್ಲುವ ಭರವಸೆಯಿದೆ. ಮಂಡ್ಯ ಚುನಾವಣೆ ಫಲಿತಾಂಶದ ಕುರಿತು ನಾನೇನೂ ಮಾತಾಡಲ್ಲ. Body:ಅವರೆಲ್ಲರೂ ದೊಡ್ಡವರು ಅವರನ್ನು ಕುರಿತು ಮಾತಾಡುವಷ್ಟು ದೊಡ್ಡವಳು ನಾನಲ್ಲ. ಎಕ್ಸಿಟ್ ಪೋಲ್ ಸಮೀಕ್ಷೆ ಬಗ್ಗೆ ನನಗೇನು ಗೊತ್ತಿಲ್ಲ. ನಾನು ಯಾವುದೇ ಸುದ್ದಿಗಳನ್ನು ಫಾಲೋ ಮಾಡ್ತಿಲ್ಲ ಎಂದಿದ್ದಾರೆ.ಇನ್ನೂ
2012 ರಲ್ಲಿ ಅವರು ಜೆಡಿಎಸ್ ಸೇರ್ಪಡೆಯಾಗಿ ರಾಜಕೀಯ ಜೀವನಕ್ಕೆ ಕಾಲಿಟ್ಟಿದ್ದ ಪೂಜಾಗಾಂಧಿ .2013ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ಸಾರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ರಾಯಚೂರು ಕ್ಷೇತ್ರದಿಂದ ಕಣಕ್ಕಿಳಿದು ಸೋಲು ಅನುಭವಿಸಿದ್ದರು. ನಂತ್ರ ಮತ್ತೆ 2018ರಲ್ಲಿ ಜೆಡಿಎಸ್‌ ಸೇರ್ಪಡೆಯಾಗಿದ್ದರು.

ಸತೀಶ ಎಂಬಿ
Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.