ETV Bharat / state

ಪೌರ ಕಾರ್ಮಿಕರಿಗೆ ಸಿಹಿ ಸುದ್ದಿ.. ಸೇವೆ ಖಾಯಂ ಬಗ್ಗೆ ಪರಿಶೀಲಿಸುವುದಾಗಿ ಸಿಎಂ ಭರವಸೆ

author img

By

Published : Mar 14, 2022, 6:26 PM IST

Updated : Mar 14, 2022, 6:56 PM IST

ಶೂನ್ಯ ವೇಳೆಯಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಶಾಸಕ ಪಿ.ರಾಜೀವ್ ಪೌರ ಕಾರ್ಮಿಕರ ಬಗ್ಗೆ ಪ್ರಸ್ತಾಪ ಮಾಡಿದರು. ಇದಕ್ಕೆ ಉತ್ತರಿಸಿದ ಸಿಎಂ ಎಲ್ಲ ಇಲಾಖೆಗಳಿಂದ ಮಾಹಿತಿ ಪಡೆದು ಆರ್ಥಿಕ ಹೊರೆಯ ಬಗ್ಗೆ ಪರಿಶೀಲನೆ ನಡೆಸಿ, ಅವರನ್ನು ಖಾಯಂ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

Chief Ministers who answered the proposal made by Opposition Leader Siddaramaiah
ಸಿಎಂ

ಬೆಂಗಳೂರು: ಪೌರ ಕಾರ್ಮಿಕರ ಎಲ್ಲ ಇಲಾಖೆಗಳಿಂದ ಮಾಹಿತಿ ಪಡೆದು ಆರ್ಥಿಕ ಹೊರೆಯ ಬಗ್ಗೆ ಪರಿಶೀಲನೆ ನಡೆಸಿ, ಅವರನ್ನು ಖಾಯಂ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ಇಂದು ತಿಳಿಸಿದರು.

ಶೂನ್ಯ ವೇಳೆಯಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಶಾಸಕ ಪಿ.ರಾಜೀವ್ ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು, ಪೌರ ಕಾರ್ಮಿಕರನ್ನು ಗುತ್ತಿಗೆದಾರರು ನೇಮಕ ಮಾಡಿಕೊಳ್ಳುತ್ತಾರೆ. ಅವರಿಗೆ ಸರಿಯಾಗಿ ವೇತನ ಕೊಡುತ್ತಿರಲಿಲ್ಲ. ಈಗ ಪೌರ ಕಾರ್ಮಿಕರ ಖಾತೆಗಳಿಗೆ ವೇತನ ಜಮೆಯಾಗುತ್ತಿದೆ. ಪೌರಕಾರ್ಮಿಕರ ಆರೋಗ್ಯಕ್ಕಾಗಿ ಪ್ರತಿ ತಿಂಗಳು 2 ಸಾವಿರ ರೂ. ಒದಗಿಸಲು ಬಜೆಟ್‌ನಲ್ಲಿ ಘೋಷಿಸಲಾಗಿದೆ. ವೈದ್ಯಕೀಯ ಸೌಲಭ್ಯ ಒದಗಿಸುವುದು ಸೇರಿದಂತೆ ಅವರಿಗೆ ಅಗತ್ಯ ಅನುಕೂಲಗಳನ್ನು ಮಾಡಿಕೊಡಲಾಗುತ್ತಿದೆ ಎಂದು ಹೇಳಿದರು.

ಪೌರ ಕಾರ್ಮಿಕರ ಸೇವೆ ಖಾಯಂ ಬಗ್ಗೆ ಪರಿಶೀಲಿಸುವುದಾಗಿ ಸಿಎಂ ಭರವಸೆ

ಕಾರ್ಮಿಕರ ಸ್ಥಿತಿ ಗೊತ್ತಿದೆ. ಸ್ವಚ್ಛತೆ ಮಾಡುವಾಗ ಪ್ರಾಣ ಕಳೆದುಕೊಂಡ ಘಟನೆಗಳು ನಡೆದಿವೆ. ಮತ್ತೆ ಮರುಕಳಿಸಿವೆ. ಎಲ್ಲ ಇಲಾಖೆಗಳಿಂದ ಮಾಹಿತಿ ಪಡೆದು ಅವರನ್ನು ಖಾಯಂ ಮಾಡುವ ನಿರ್ಧಾರ ಮಾಡಲಾಗುವುದು ಎಂದು ಭರವಸೆ ನೀಡಿದರು.

ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಸೇವೆ ಖಾಯಂ ಮಾಡುವುದು ಸೇರಿದಂತೆ 27 ವಿವಿಧ ಬೇಡಿಕೆಗಳನ್ನು ಇಟ್ಟುಕೊಂಡು ಪೌರಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲಿ, ನಗರಗಳಲ್ಲಿ ಸ್ವಚ್ಛಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕು. ಮೃತಪಟ್ಟವರಿಗೆ 10 ಲಕ್ಷ ಪರಿಹಾರ ಕೊಡುತ್ತಿಲ್ಲ. ನಮ್ಮ ಅವಧಿಯಲ್ಲಿ 7,700 ರಿಂದ 17 ಸಾವಿರಕ್ಕೆ ವೇತನ ಹೆಚ್ಚಿಸಲಾಗಿತ್ತು. 18 ಸಾವಿರ ಪೌರಕಾರ್ಮಿಕರನ್ನು ಕಾಯಂ ಮಾಡಿ ಅವರ ಅನೇಕ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ: ಸಮವಸ್ತ್ರ ವಿವಾದ ಬಗ್ಗೆ ಹೆಚ್​​ಡಿಕೆ ಪ್ರಸ್ತಾಪ : ಕಾಂಗ್ರೆಸ್​ ಶಾಸಕ ಜಮೀರ್- ಜೆಡಿಎಸ್‍ ಶಾಸಕರ ನಡುವೆ ವಾಗ್ವಾದ

ಶಾಸಕ ಪಿ.ರಾಜೀವ್‌ ಮಾತನಾಡಿ, ಪೌರ ಕಾರ್ಮಿಕರಿಗೆ 2 ಸಾವಿರ ರೂ. ಸಾಲುವುದಿಲ್ಲ. ನಗರ, ಪಟ್ಟಣದ ಸ್ವಚ್ಛತೆಗೆ ಪೌರಕಾರ್ಮಿಕರ ಸೇವೆ ಮುಖ್ಯ. ಪ್ರಧಾನಿಯವರು ಪೌರಕಾರ್ಮಿಕರ ಪಾದ ತಳೆದು ಸನ್ಮಾನಿಸಿದರು. ಅವರ ಜೀವಿತಾವಧಿ 45ರಿಂದ 50 ವರ್ಷ ಮಾತ್ರವಿದೆ. ನಗರಾಭಿವೃದ್ಧಿ, ಪೌರಾಡಳಿತ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುತ್ತಾರೆ. ಶೇ.1ರಷ್ಟು ಸಂಗ್ರಹಿಸಲಾಗುವ ಸೆಸ್​ನ್ನು ಪೌರಕಾರ್ಮಿಕರ ವೇತನ ಕಲ್ಯಾಣಕ್ಕೆ ಮೀಸಲಿಟ್ಟರೆ 35 ರಿಂದ 45 ಸಾವಿರ ರೂ. ವೇತನ ಕೊಡಬಹುದು ಎಂದು ಸಲಹೆ ನೀಡಿದರು.

ಬೆಂಗಳೂರು: ಪೌರ ಕಾರ್ಮಿಕರ ಎಲ್ಲ ಇಲಾಖೆಗಳಿಂದ ಮಾಹಿತಿ ಪಡೆದು ಆರ್ಥಿಕ ಹೊರೆಯ ಬಗ್ಗೆ ಪರಿಶೀಲನೆ ನಡೆಸಿ, ಅವರನ್ನು ಖಾಯಂ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ಇಂದು ತಿಳಿಸಿದರು.

ಶೂನ್ಯ ವೇಳೆಯಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಶಾಸಕ ಪಿ.ರಾಜೀವ್ ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು, ಪೌರ ಕಾರ್ಮಿಕರನ್ನು ಗುತ್ತಿಗೆದಾರರು ನೇಮಕ ಮಾಡಿಕೊಳ್ಳುತ್ತಾರೆ. ಅವರಿಗೆ ಸರಿಯಾಗಿ ವೇತನ ಕೊಡುತ್ತಿರಲಿಲ್ಲ. ಈಗ ಪೌರ ಕಾರ್ಮಿಕರ ಖಾತೆಗಳಿಗೆ ವೇತನ ಜಮೆಯಾಗುತ್ತಿದೆ. ಪೌರಕಾರ್ಮಿಕರ ಆರೋಗ್ಯಕ್ಕಾಗಿ ಪ್ರತಿ ತಿಂಗಳು 2 ಸಾವಿರ ರೂ. ಒದಗಿಸಲು ಬಜೆಟ್‌ನಲ್ಲಿ ಘೋಷಿಸಲಾಗಿದೆ. ವೈದ್ಯಕೀಯ ಸೌಲಭ್ಯ ಒದಗಿಸುವುದು ಸೇರಿದಂತೆ ಅವರಿಗೆ ಅಗತ್ಯ ಅನುಕೂಲಗಳನ್ನು ಮಾಡಿಕೊಡಲಾಗುತ್ತಿದೆ ಎಂದು ಹೇಳಿದರು.

ಪೌರ ಕಾರ್ಮಿಕರ ಸೇವೆ ಖಾಯಂ ಬಗ್ಗೆ ಪರಿಶೀಲಿಸುವುದಾಗಿ ಸಿಎಂ ಭರವಸೆ

ಕಾರ್ಮಿಕರ ಸ್ಥಿತಿ ಗೊತ್ತಿದೆ. ಸ್ವಚ್ಛತೆ ಮಾಡುವಾಗ ಪ್ರಾಣ ಕಳೆದುಕೊಂಡ ಘಟನೆಗಳು ನಡೆದಿವೆ. ಮತ್ತೆ ಮರುಕಳಿಸಿವೆ. ಎಲ್ಲ ಇಲಾಖೆಗಳಿಂದ ಮಾಹಿತಿ ಪಡೆದು ಅವರನ್ನು ಖಾಯಂ ಮಾಡುವ ನಿರ್ಧಾರ ಮಾಡಲಾಗುವುದು ಎಂದು ಭರವಸೆ ನೀಡಿದರು.

ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಸೇವೆ ಖಾಯಂ ಮಾಡುವುದು ಸೇರಿದಂತೆ 27 ವಿವಿಧ ಬೇಡಿಕೆಗಳನ್ನು ಇಟ್ಟುಕೊಂಡು ಪೌರಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲಿ, ನಗರಗಳಲ್ಲಿ ಸ್ವಚ್ಛಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕು. ಮೃತಪಟ್ಟವರಿಗೆ 10 ಲಕ್ಷ ಪರಿಹಾರ ಕೊಡುತ್ತಿಲ್ಲ. ನಮ್ಮ ಅವಧಿಯಲ್ಲಿ 7,700 ರಿಂದ 17 ಸಾವಿರಕ್ಕೆ ವೇತನ ಹೆಚ್ಚಿಸಲಾಗಿತ್ತು. 18 ಸಾವಿರ ಪೌರಕಾರ್ಮಿಕರನ್ನು ಕಾಯಂ ಮಾಡಿ ಅವರ ಅನೇಕ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ: ಸಮವಸ್ತ್ರ ವಿವಾದ ಬಗ್ಗೆ ಹೆಚ್​​ಡಿಕೆ ಪ್ರಸ್ತಾಪ : ಕಾಂಗ್ರೆಸ್​ ಶಾಸಕ ಜಮೀರ್- ಜೆಡಿಎಸ್‍ ಶಾಸಕರ ನಡುವೆ ವಾಗ್ವಾದ

ಶಾಸಕ ಪಿ.ರಾಜೀವ್‌ ಮಾತನಾಡಿ, ಪೌರ ಕಾರ್ಮಿಕರಿಗೆ 2 ಸಾವಿರ ರೂ. ಸಾಲುವುದಿಲ್ಲ. ನಗರ, ಪಟ್ಟಣದ ಸ್ವಚ್ಛತೆಗೆ ಪೌರಕಾರ್ಮಿಕರ ಸೇವೆ ಮುಖ್ಯ. ಪ್ರಧಾನಿಯವರು ಪೌರಕಾರ್ಮಿಕರ ಪಾದ ತಳೆದು ಸನ್ಮಾನಿಸಿದರು. ಅವರ ಜೀವಿತಾವಧಿ 45ರಿಂದ 50 ವರ್ಷ ಮಾತ್ರವಿದೆ. ನಗರಾಭಿವೃದ್ಧಿ, ಪೌರಾಡಳಿತ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುತ್ತಾರೆ. ಶೇ.1ರಷ್ಟು ಸಂಗ್ರಹಿಸಲಾಗುವ ಸೆಸ್​ನ್ನು ಪೌರಕಾರ್ಮಿಕರ ವೇತನ ಕಲ್ಯಾಣಕ್ಕೆ ಮೀಸಲಿಟ್ಟರೆ 35 ರಿಂದ 45 ಸಾವಿರ ರೂ. ವೇತನ ಕೊಡಬಹುದು ಎಂದು ಸಲಹೆ ನೀಡಿದರು.

Last Updated : Mar 14, 2022, 6:56 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.