ETV Bharat / state

ಬೆಂಗಳೂರು: ಲಿಪ್ ಸ್ಟಿಕ್ ಹಾಕಿ ಮಹಿಳೆಯರ‌‌ ಒಳ ಉಡುಪು ಧರಿಸುತ್ತಿದ್ದ ಪತಿ ವಿರುದ್ದ ಪತ್ನಿ ದೂರು

ಮಹಿಳೆಯರ ಉಡುಪು ಧರಿಸಿ ವಿಚಿತ್ರ ವರ್ತನೆ ತೋರುತ್ತಿದ್ದ ಆರೋಪದ ಮೇಲೆ ಪತಿಯ ವಿರುದ್ಧ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

author img

By

Published : Mar 31, 2023, 4:51 PM IST

ಬೆಂಗಳೂರು
ಬೆಂಗಳೂರು

ಬೆಂಗಳೂರು: ನನ್ನ ಪತಿ ಲಿಪ್​ಸ್ಟಿಕ್​ ಹಾಕಿ ಮಹಿಳೆಯರ‌‌ ಒಳ ಉಡುಪು ಧರಿಸುತ್ತಿದ್ದರು ಎಂದು ಆರೋಪಿಸಿ ಪತ್ನಿಯು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಮಹಿಳೆಯರ ಉಡುಪು ಧರಿಸಿ ವಿಚಿತ್ರವಾಗಿ ವರ್ತಿಸುವುದಲ್ಲದೆ ವರದಕ್ಷಿಣೆ ನೆಪದಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಗಂಡ ಹಾಗೂ ಆತನ ಮನೆಯವರ ವಿರುದ್ಧ ಹೆಂಡತಿ‌ ದೂರು ನೀಡಿದ್ದಾರೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.‌‌

ಮ್ಯಾಟ್ರಿಮೊನಿ ವೆಬ್​ಸೈಟ್​ನಲ್ಲಿ ಪರಸ್ಪರ ಪರಿಚಯ: 25 ವರ್ಷದ ಮಹಿಳೆ ನೀಡಿದ ದೂರು ಆಧರಿಸಿ ಆಕೆಯ ಪತಿ, ಮಾವ ಹಾಗೂ ಅತ್ತೆಯ ವಿರುದ್ಧ ವರದಕ್ಷಿಣೆ ಕಿರುಕುಳದಡಿ ಪ್ರಕರಣ ದಾಖಲಾಗಿದೆ. ಕಳೆದ ಮೂರು ವರ್ಷಗಳ ಹಿಂದೆ ಮ್ಯಾಟ್ರಿಮೊನಿ ವೆಬ್​ಸೈಟ್ ಮುಖಾಂತರ ಮಹಿಳೆಗೆ ಆತ ಪರಿಚಯಗೊಂಡಿದ್ದ. ತಾನು ಎಂಟೆಕ್ ಮಾಡಿದ್ದು ಒಳ್ಳೆ ಕೆಲಸದಲ್ಲಿ ಇರುವುದಾಗಿ ಹೇಳಿಕೊಂಡಿದ್ದ. ಕ್ರಮೇಣ ಗುರು-ಹಿರಿಯರ ಸಮ್ಮುಖದಲ್ಲಿ 2020ರಲ್ಲಿ ಒಪ್ಪಿ ಇಬ್ಬರು ಮದುವೆಯಾಗಿದ್ದರು. ವರದಕ್ಷಿಣೆ ರೂಪವಾಗಿ 800 ಗ್ರಾಂ ಚಿನ್ನ, ಒಂದು ಕೆಜಿ ಬೆಳ್ಳಿ ಹಾಗೂ ಐದು ಲಕ್ಷ ಹಣ ನೀಡಲಾಗಿತ್ತು.

ವಿವಾಹವಾದ ಫಸ್ಟ್ ನೈಟ್​ನಲ್ಲಿ ತನ್ನ ಗಂಡ ಕನ್ನಡಿ ಮುಂದೆ ನಿಂತು ಲಿಪ್​ಸ್ಟಿಕ್​ ಹಾಕಿಕೊಂಡಿದ್ದ‌.‌ ಬಳಿಕ ಮಹಿಳೆಯರ‌ ಒಳ‌ ಉಡುಪು ಧರಿಸಿದ್ದ.‌ ಇದನ್ನ ಪ್ರಶ್ನಿಸಿದರೆ? ತನಗೆ ಗಂಡಸರು ಎಂದರೆ ತುಂಬಾ ಇಷ್ಟ ಎಂದಿದ್ದಾನೆ. ಇದೇ ವೇಳೆ‌ ಲಾಕ್​ಡೌನ್ ಆದ ಹಿನ್ನೆಲೆಯಲ್ಲಿ ಗಂಡನ ವಿಚಾರವಾಗಿ ಪ್ರತಿ‌ದಿನ ಜಗಳವಾಗುತಿತ್ತು. ಅತ್ತೆ-ಮಾವ ಸಹ ತನಗೆ ಜಿರಳೆ ಔಷಧಿ‌ ಸಿಂಪಡಿಸಿ ಅನಾರೋಗ್ಯಕ್ಕೆ ಕಾರಣವಾಗಿದ್ದರು. ಪ್ರತಿದಿನ ಪತಿಯ ವಿಚಿತ್ರ ವರ್ತನೆ ಹೆಚ್ಚಾಗಿದ್ದರಿಂದ ಆಸ್ಪತ್ರೆಗೆ ತೋರಿಸಲು 10 ಲಕ್ಷ ಹಣ ತೆಗೆದುಕೊಂಡು ಬರುವಂತೆ ಪೀಡಿಸುತ್ತಿದ್ದರು. ಕಿರುಕುಳ ತಾಳಲಾರದೆ ಮನೆಯಿಂದ ಹೊರಬಂದು ಸೋದರಮಾವನ ಮನೆಯಲ್ಲಿ ವಾಸ್ತವ್ಯ ಹೂಡಿದರೂ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು ಎಂದು ದೂರಿನಲ್ಲಿ ಮಹಿಳೆ‌ ಉಲ್ಲೇಖಿಸಿದ್ದಾಳೆ.

ಅತ್ಯಾಚಾರ ಎಸಗಿದ ನಾಲ್ವರ ಬಂಧನ: ಪಾರ್ಕ್​ನಲ್ಲಿ ಸ್ನೇಹಿತನೊಂದಿಗೆ ಮಾತನಾಡುತ್ತಾ ಕುಳಿತಿದ್ದ ಯುವತಿಯನ್ನು ಕಾರಿನೊಳಗೆ ಎಳೆದೊಯ್ದು ಅತ್ಯಾಚಾರ ಎಸಗಿದ ನಾಲ್ವರು ಆರೋಪಿಗಳನ್ನು ನಗರದ ಕೋರಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 25ರಂದು ಈ ದುಷ್ಕೃತ್ಯ ನಡೆದಿತ್ತು ಎಂಬುದು ತಿಳಿದುಬಂದಿದೆ.

ಸತೀಶ್, ವಿಜಯ್, ಶ್ರೀಧರ್ ಹಾಗೂ ಕಿರಣ್ ಬಂಧಿತರು. ಕೋರಮಂಗಲದ ನ್ಯಾಷನಲ್ ಗೇಮ್ಸ್ ಪಾರ್ಕ್​ನಲ್ಲಿ ರಾತ್ರಿ 10 ಗಂಟೆಯ ಸುಮಾರಿಗೆ ಯುವತಿ ಹಾಗೂ ಸ್ನೇಹಿತ ಕುಳಿತುಕೊಂಡಿದ್ದರು. ಅಲ್ಲಿಗೆ ಬಂದ ಈ ನಾಲ್ವರು ಸ್ನೇಹಿತನನ್ನು ಬೆದರಿಸಿ ಕಳುಹಿಸಿದ್ದಾರೆ. ನಂತರ ಯುವತಿ ಜೊತೆಗೆ ಜಗಳ ತೆಗೆದು ಕಾರಿನಲ್ಲಿ ಕಿಡ್ನಾಪ್ ಮಾಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಗರದ ದೊಮ್ಮಲೂರು, ಇಂದಿರಾನಗರ, ಆನೇಕಲ್, ನೈಸ್ ರಸ್ತೆ ಸೇರಿದಂತೆ ಹಲವೆಡೆ ಸುತ್ತಾಟ ನಡೆಸಿ ಚಲಿಸುತ್ತಿದ್ದ ಕಾರಿನಲ್ಲಿಯೇ ಅತ್ಯಾಚಾರ ಎಸಗಿದ್ದಾರೆ‌. ರಾತ್ರಿಪೂರ್ತಿ ಸುತ್ತಾಡಿಸಿದ ನಂತರ ಬೆಳಗಿನ ಜಾವ 4 ಗಂಟೆಗೆ ಯುವತಿಯ ಮನೆಯ ಬಳಿ ರಸ್ತೆಯಲ್ಲಿಯೇ ಬಿಟ್ಟು ಹೋಗಿದ್ದರು. ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಮಾರ್ಚ್ 26 ರಂದು ದೂರು ನೀಡಿದ್ದರು. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದ್ದು, ಆರೋಪಿಗಳ ಪೂರ್ವಾಪರ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 18 ಕೆಜಿ ಬೆಳ್ಳಿ ಆಭರಣ ವಶಕ್ಕೆ

ಬೆಂಗಳೂರು: ನನ್ನ ಪತಿ ಲಿಪ್​ಸ್ಟಿಕ್​ ಹಾಕಿ ಮಹಿಳೆಯರ‌‌ ಒಳ ಉಡುಪು ಧರಿಸುತ್ತಿದ್ದರು ಎಂದು ಆರೋಪಿಸಿ ಪತ್ನಿಯು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಮಹಿಳೆಯರ ಉಡುಪು ಧರಿಸಿ ವಿಚಿತ್ರವಾಗಿ ವರ್ತಿಸುವುದಲ್ಲದೆ ವರದಕ್ಷಿಣೆ ನೆಪದಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಗಂಡ ಹಾಗೂ ಆತನ ಮನೆಯವರ ವಿರುದ್ಧ ಹೆಂಡತಿ‌ ದೂರು ನೀಡಿದ್ದಾರೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.‌‌

ಮ್ಯಾಟ್ರಿಮೊನಿ ವೆಬ್​ಸೈಟ್​ನಲ್ಲಿ ಪರಸ್ಪರ ಪರಿಚಯ: 25 ವರ್ಷದ ಮಹಿಳೆ ನೀಡಿದ ದೂರು ಆಧರಿಸಿ ಆಕೆಯ ಪತಿ, ಮಾವ ಹಾಗೂ ಅತ್ತೆಯ ವಿರುದ್ಧ ವರದಕ್ಷಿಣೆ ಕಿರುಕುಳದಡಿ ಪ್ರಕರಣ ದಾಖಲಾಗಿದೆ. ಕಳೆದ ಮೂರು ವರ್ಷಗಳ ಹಿಂದೆ ಮ್ಯಾಟ್ರಿಮೊನಿ ವೆಬ್​ಸೈಟ್ ಮುಖಾಂತರ ಮಹಿಳೆಗೆ ಆತ ಪರಿಚಯಗೊಂಡಿದ್ದ. ತಾನು ಎಂಟೆಕ್ ಮಾಡಿದ್ದು ಒಳ್ಳೆ ಕೆಲಸದಲ್ಲಿ ಇರುವುದಾಗಿ ಹೇಳಿಕೊಂಡಿದ್ದ. ಕ್ರಮೇಣ ಗುರು-ಹಿರಿಯರ ಸಮ್ಮುಖದಲ್ಲಿ 2020ರಲ್ಲಿ ಒಪ್ಪಿ ಇಬ್ಬರು ಮದುವೆಯಾಗಿದ್ದರು. ವರದಕ್ಷಿಣೆ ರೂಪವಾಗಿ 800 ಗ್ರಾಂ ಚಿನ್ನ, ಒಂದು ಕೆಜಿ ಬೆಳ್ಳಿ ಹಾಗೂ ಐದು ಲಕ್ಷ ಹಣ ನೀಡಲಾಗಿತ್ತು.

ವಿವಾಹವಾದ ಫಸ್ಟ್ ನೈಟ್​ನಲ್ಲಿ ತನ್ನ ಗಂಡ ಕನ್ನಡಿ ಮುಂದೆ ನಿಂತು ಲಿಪ್​ಸ್ಟಿಕ್​ ಹಾಕಿಕೊಂಡಿದ್ದ‌.‌ ಬಳಿಕ ಮಹಿಳೆಯರ‌ ಒಳ‌ ಉಡುಪು ಧರಿಸಿದ್ದ.‌ ಇದನ್ನ ಪ್ರಶ್ನಿಸಿದರೆ? ತನಗೆ ಗಂಡಸರು ಎಂದರೆ ತುಂಬಾ ಇಷ್ಟ ಎಂದಿದ್ದಾನೆ. ಇದೇ ವೇಳೆ‌ ಲಾಕ್​ಡೌನ್ ಆದ ಹಿನ್ನೆಲೆಯಲ್ಲಿ ಗಂಡನ ವಿಚಾರವಾಗಿ ಪ್ರತಿ‌ದಿನ ಜಗಳವಾಗುತಿತ್ತು. ಅತ್ತೆ-ಮಾವ ಸಹ ತನಗೆ ಜಿರಳೆ ಔಷಧಿ‌ ಸಿಂಪಡಿಸಿ ಅನಾರೋಗ್ಯಕ್ಕೆ ಕಾರಣವಾಗಿದ್ದರು. ಪ್ರತಿದಿನ ಪತಿಯ ವಿಚಿತ್ರ ವರ್ತನೆ ಹೆಚ್ಚಾಗಿದ್ದರಿಂದ ಆಸ್ಪತ್ರೆಗೆ ತೋರಿಸಲು 10 ಲಕ್ಷ ಹಣ ತೆಗೆದುಕೊಂಡು ಬರುವಂತೆ ಪೀಡಿಸುತ್ತಿದ್ದರು. ಕಿರುಕುಳ ತಾಳಲಾರದೆ ಮನೆಯಿಂದ ಹೊರಬಂದು ಸೋದರಮಾವನ ಮನೆಯಲ್ಲಿ ವಾಸ್ತವ್ಯ ಹೂಡಿದರೂ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು ಎಂದು ದೂರಿನಲ್ಲಿ ಮಹಿಳೆ‌ ಉಲ್ಲೇಖಿಸಿದ್ದಾಳೆ.

ಅತ್ಯಾಚಾರ ಎಸಗಿದ ನಾಲ್ವರ ಬಂಧನ: ಪಾರ್ಕ್​ನಲ್ಲಿ ಸ್ನೇಹಿತನೊಂದಿಗೆ ಮಾತನಾಡುತ್ತಾ ಕುಳಿತಿದ್ದ ಯುವತಿಯನ್ನು ಕಾರಿನೊಳಗೆ ಎಳೆದೊಯ್ದು ಅತ್ಯಾಚಾರ ಎಸಗಿದ ನಾಲ್ವರು ಆರೋಪಿಗಳನ್ನು ನಗರದ ಕೋರಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 25ರಂದು ಈ ದುಷ್ಕೃತ್ಯ ನಡೆದಿತ್ತು ಎಂಬುದು ತಿಳಿದುಬಂದಿದೆ.

ಸತೀಶ್, ವಿಜಯ್, ಶ್ರೀಧರ್ ಹಾಗೂ ಕಿರಣ್ ಬಂಧಿತರು. ಕೋರಮಂಗಲದ ನ್ಯಾಷನಲ್ ಗೇಮ್ಸ್ ಪಾರ್ಕ್​ನಲ್ಲಿ ರಾತ್ರಿ 10 ಗಂಟೆಯ ಸುಮಾರಿಗೆ ಯುವತಿ ಹಾಗೂ ಸ್ನೇಹಿತ ಕುಳಿತುಕೊಂಡಿದ್ದರು. ಅಲ್ಲಿಗೆ ಬಂದ ಈ ನಾಲ್ವರು ಸ್ನೇಹಿತನನ್ನು ಬೆದರಿಸಿ ಕಳುಹಿಸಿದ್ದಾರೆ. ನಂತರ ಯುವತಿ ಜೊತೆಗೆ ಜಗಳ ತೆಗೆದು ಕಾರಿನಲ್ಲಿ ಕಿಡ್ನಾಪ್ ಮಾಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಗರದ ದೊಮ್ಮಲೂರು, ಇಂದಿರಾನಗರ, ಆನೇಕಲ್, ನೈಸ್ ರಸ್ತೆ ಸೇರಿದಂತೆ ಹಲವೆಡೆ ಸುತ್ತಾಟ ನಡೆಸಿ ಚಲಿಸುತ್ತಿದ್ದ ಕಾರಿನಲ್ಲಿಯೇ ಅತ್ಯಾಚಾರ ಎಸಗಿದ್ದಾರೆ‌. ರಾತ್ರಿಪೂರ್ತಿ ಸುತ್ತಾಡಿಸಿದ ನಂತರ ಬೆಳಗಿನ ಜಾವ 4 ಗಂಟೆಗೆ ಯುವತಿಯ ಮನೆಯ ಬಳಿ ರಸ್ತೆಯಲ್ಲಿಯೇ ಬಿಟ್ಟು ಹೋಗಿದ್ದರು. ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಮಾರ್ಚ್ 26 ರಂದು ದೂರು ನೀಡಿದ್ದರು. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದ್ದು, ಆರೋಪಿಗಳ ಪೂರ್ವಾಪರ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 18 ಕೆಜಿ ಬೆಳ್ಳಿ ಆಭರಣ ವಶಕ್ಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.