ETV Bharat / state

ಮಹಿಳೆ ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಲ್ಲಳು:  ಪ್ರಮೋದಾದೇವಿ ಒಡೆಯರ್

author img

By

Published : Mar 29, 2019, 2:39 PM IST

ಮಹಿಳೆ ಮೀಸಲು ನಂಬಿಕೊಳ್ಳದೇ ಹೆಚ್ಚು ಕೆಲಸ ಮಾಡಬೇಕು. ಪ್ರತಿ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆ ಮುಂದುವರೆಯಬೇಕು ಎಂದು ಪ್ರಮೋದಾದೇವಿ ಒಡೆಯರ್ ಕರೆ ನೀಡಿದ್ದಾರೆ.

ಪ್ರಮೋದಾದೇವಿ ಒಡೆಯರ್

ಬೆಂಗಳೂರು: ಮಹಿಳೆಯರು ಸಂಸಾರ ಹಾಗೂ ಸಮಾಜದಲ್ಲಿ ಸಮಾನ ಪಾತ್ರ ವಹಿಸುವ ಮೂಲಕ ಮಹಿಳಾ ಸಾಧಕಿ ಎಂಬ ಬಿರುದು ಪಡೆದಿದ್ದಾರೆ ಎಂದು ಮೈಸೂರು ರಾಜವಂಶಸ್ಥೆ ಡಾ. ಪ್ರಮೋದಾದೇವಿ ಒಡೆಯರ್ ಅಭಿಪ್ರಾಯಪಟ್ಟಿದ್ದಾರೆ.

ನಗರದಲ್ಲಿ ನಡೆದ ಕರ್ನಾಟಕ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಿಳೆ ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಲ್ಲಳು. ಅನಾದಿ ಕಾಲದಿಂದಲೂ ಮಹಿಳೆಗೆ ಅತ್ಯಂತ ಗೌರವ ಹಾಗೂ ಉನ್ನತ ಸ್ಥಾನ ನೀಡಲಾಗಿದೆ ಎಂದರು.

ಪ್ರಮೋದಾದೇವಿ ಒಡೆಯರ್

ಮಹಿಳೆ, ಮೀಸಲು ನೀತಿಯನ್ನ ನಂಬಿಕೊಳ್ಳದೇ ಹೆಚ್ಚು ಕೆಲಸ ಮಾಡಬೇಕು. ಪ್ರತಿ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆ ಮುಂದುವರೆಯಬೇಕು ಎಂದು ತಿಳಿಸಿದರು.

ಗೈಡ್ಸ್ ರಾಜ್ಯ ಸಹಾಯಕ ಆಯುಕ್ತೆ ಭಾಗ್ಯಲಕ್ಷ್ಮಿ ಮಾತನಾಡಿ, ಎಲ್ಲ ಕ್ಷೇತ್ರಗಳಲ್ಲಿ ಪುರುಷರಿಗೆ ಸಮಾನವಾಗಿ ಮಹಿಳೆ ಸಾಧನೆ ಮಾಡುತ್ತಿದ್ದಾಳೆ. ಉತ್ತಮ ಸಮಾಜ ಹಾಗೂ ಆರೋಗ್ಯಕರ ಕುಟುಂಬಕ್ಕೆ ಮಹಿಳೆಯರ ಶ್ರಮ ಬಹುಮುಖ್ಯ ಎಂದರು.

ಬೆಂಗಳೂರು: ಮಹಿಳೆಯರು ಸಂಸಾರ ಹಾಗೂ ಸಮಾಜದಲ್ಲಿ ಸಮಾನ ಪಾತ್ರ ವಹಿಸುವ ಮೂಲಕ ಮಹಿಳಾ ಸಾಧಕಿ ಎಂಬ ಬಿರುದು ಪಡೆದಿದ್ದಾರೆ ಎಂದು ಮೈಸೂರು ರಾಜವಂಶಸ್ಥೆ ಡಾ. ಪ್ರಮೋದಾದೇವಿ ಒಡೆಯರ್ ಅಭಿಪ್ರಾಯಪಟ್ಟಿದ್ದಾರೆ.

ನಗರದಲ್ಲಿ ನಡೆದ ಕರ್ನಾಟಕ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಿಳೆ ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಲ್ಲಳು. ಅನಾದಿ ಕಾಲದಿಂದಲೂ ಮಹಿಳೆಗೆ ಅತ್ಯಂತ ಗೌರವ ಹಾಗೂ ಉನ್ನತ ಸ್ಥಾನ ನೀಡಲಾಗಿದೆ ಎಂದರು.

ಪ್ರಮೋದಾದೇವಿ ಒಡೆಯರ್

ಮಹಿಳೆ, ಮೀಸಲು ನೀತಿಯನ್ನ ನಂಬಿಕೊಳ್ಳದೇ ಹೆಚ್ಚು ಕೆಲಸ ಮಾಡಬೇಕು. ಪ್ರತಿ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆ ಮುಂದುವರೆಯಬೇಕು ಎಂದು ತಿಳಿಸಿದರು.

ಗೈಡ್ಸ್ ರಾಜ್ಯ ಸಹಾಯಕ ಆಯುಕ್ತೆ ಭಾಗ್ಯಲಕ್ಷ್ಮಿ ಮಾತನಾಡಿ, ಎಲ್ಲ ಕ್ಷೇತ್ರಗಳಲ್ಲಿ ಪುರುಷರಿಗೆ ಸಮಾನವಾಗಿ ಮಹಿಳೆ ಸಾಧನೆ ಮಾಡುತ್ತಿದ್ದಾಳೆ. ಉತ್ತಮ ಸಮಾಜ ಹಾಗೂ ಆರೋಗ್ಯಕರ ಕುಟುಂಬಕ್ಕೆ ಮಹಿಳೆಯರ ಶ್ರಮ ಬಹುಮುಖ್ಯ ಎಂದರು.

Intro:ಸಂಸಾರ ಹಾಗೂ ಸಮಾಜದಲ್ಲಿ ಸಮಾನ ಪಾತ್ರ ವಹಿಸುವ ಮೂಲಕ ಮಹಿಳಾ ಸಾಧಕಿ ಎಂಬ ಬಿರುದು ಪಡೆದಿದ್ದಾರೆ ಎಂದು ಮೈಸೂರು ರಾಜವಂಶಸ್ಥೆ ಡಾಕ್ಟರ್ ಪ್ರಮೋದಾದೇವಿ ಒಡೆಯರ್ ಅಭಿಪ್ರಾಯಪಟ್ಟಿದ್ದಾರೆ.


Body:ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಏರ್ಪಡಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಿಳೆ ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಲ್ಲಳು. ಕಾಲದಿಂದಲೂ ಮಹಿಳೆಗೆ ಅತ್ಯಂತ ಗೌರವ ಹಾಗೂ ಉನ್ನತ ಸ್ಥಾನ ನೀಡಲಾಗಿದೆ ಸಮಾಜ ಮತ್ತು ಸಂಸಾರ ಎರಡರಲ್ಲೂ ಸಮಾನವಾಗಿ ಕೆಲಸಗಳನ್ನು ನಿರ್ವಹಿಸುವ ಮೂಲಕ ಮುಖ್ಯ ಪಾತ್ರ ವಹಿಸಿದ್ದಾರೆ. ಹೀಗಾಗಿ ಪ್ರತಿದಿನ ಮಹಿಳಾ ದಿನಾಚರಣೆ ಎಂದು ಅಭಿಪ್ರಾಯಪಟ್ಟರು.
ಮಹಿಳೆ ಮೀಸಲಾತಿ ನಂಬಿಕೊಳ್ಳುವ ಹೆಚ್ಚು ಕೆಲಸ ಮಾಡಬೇಕು. ಪ್ರತಿ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆ ಮುಂದುವರೆಯಬೇಕು ಎಂದರು.
ಗೈಡ್ಸ್ ನ ರಾಜ್ಯ ಸಹಾಯಕ ಆಯುಕ್ತ ಭಾಗ್ಯಲಕ್ಷ್ಮಿ ಮಾತನಾಡಿ, ಎಲ್ಲಾ ಕ್ಷೇತ್ರಗಳಲ್ಲಿ ಪುರುಷರಿಗೆ ಸಮಾನವಾಗಿ ಮಹಿಳೆ ಸಾಧನೆ ಮಾಡುತ್ತಿದ್ದಾಳೆ ಉತ್ತಮ ಸಮಾಜ ಹಾಗೂ ಆರೋಗ್ಯಕರ ಕುಟುಂಬಕ್ಕೆ ಮಹಿಳೆಯರ ಶ್ರಮ ಬಹುಮುಖ್ಯ ಎಂದರು.


Conclusion:ಪ್ರಸ್ತುತ ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ 6 ಲಕ್ಷ ವಿದ್ಯಾರ್ಥಿಗಳಿದ್ದು ಮಹಿಳಾ ಸಬಲೀಕರಣಕ್ಕೆ ವಿವಿಧ ಯೋಜನೆಗಳನ್ನು ವತಿಯಿಂದ ಆಯೋಜಿಸಲಾಗಿದೆ ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಉಪಾಧ್ಯಕ್ಷ ಕೊಂಡಜ್ಜಿ ಬ. ಷಣ್ಮುಖಪ್ಪ ತಿಳಿಸಿದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.