ETV Bharat / state

ಸುಮಲತಾ ಪರ ಕೈ ಬಾವುಟ ಹಿಡಿಯುವವರು ಪಕ್ಷ ತೊರೆಯಲಿ: ದಿನೇಶ್​ ಗುಂಡೂರಾವ್​

ನಮ್ಮ ಪಕ್ಷದ ಚಿಹ್ನೆ ಪಕ್ಷೇತರ ಅಭ್ಯರ್ಥಿ ಜೊತೆ ಕಾಣಿಸಿಕೊಳ್ಳಬಾರದು ಎಂದಿದ್ದೇವೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ದೇವೆ. ಸಿಎಂ ಜೊತೆ ಈ ಬಗ್ಗೆ ಚರ್ಚೆ ಮಾಡುತ್ತೇನೆ. ನಮ್ಮ ಪಕ್ಷದ ಧ್ವಜ ಹಿಡಿದು ಕೆಲಸ ಮಾಡಿದ್ರೆ ಪಕ್ಷ ಬಿಟ್ಟು ಹೋಗಲಿ.

author img

By

Published : Apr 4, 2019, 11:00 AM IST

ದಿನೇಶ್​ ಗುಂಡೂರಾವ್​

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್​ ಅವರ ಪ್ರಚಾರ ಕಾರ್ಯದಲ್ಲಿ ಕಾಂಗ್ರೆಸ್​ ಬಾವುಟಗಳು ಪ್ರದರ್ಶನವಾಗುತ್ತಿರುವ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​, ಅಂತಹ ಕಾರ್ಯಕರ್ತರು ಕಾಂಗ್ರೆಸ್​ ತೊರೆಯಲಿ ಎಂದು ಖಡಕ್ಕಾಗಿ ನುಡಿದಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ನಾವು ಯಾವುದೇ ಕಾರಣಕ್ಕೂ ಸುಮಲತಾ ಅವರಿಗೆ ಬೆಂಬಲ ನೀಡಿಲ್ಲ. ಪಕ್ಷದ ಕಾರ್ಯಕರ್ತರು ಅಂತ ದುಸ್ಸಾಹಸಕ್ಕೆ ಕೈ ಹಾಕಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಅಲ್ಲದೇ ಬಾವುಟ ಹಿಡಿದುಕೊಂಡು ತಿರುಗಿದರೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದರು.

ದಿನೇಶ್​ ಗುಂಡೂರಾವ್​

ನಮ್ಮ ಪಕ್ಷದ ಚಿಹ್ನೆ ಪಕ್ಷೇತರ ಅಭ್ಯರ್ಥಿ ಜೊತೆ ಕಾಣಿಸಿಕೊಳ್ಳಬಾರದು ಎಂದಿದ್ದೇವೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ದೇವೆ. ಸಿಎಂ ಜೊತೆ ಈ ಬಗ್ಗೆ ಚರ್ಚೆ ಮಾಡುತ್ತೇನೆ. ನಮ್ಮ ಪಕ್ಷದ ಧ್ವಜ ಹಿಡಿದು ಕೆಲಸ ಮಾಡಿದ್ರೆ ಪಕ್ಷ ಬಿಟ್ಟು ಹೋಗಲಿ. ಒಂದು ವೇಳೆ ಹೋಗದಿದ್ರೆ ನಾವೇ ಶಿಸ್ತಿನ ಕ್ರಮ ತೆಗದುಕೊಳ್ಳುತ್ತೇವೆ. ಈ ಬಗ್ಗೆ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ. ಪಕ್ಷ ವಿರೋಧಿ ಕೆಲಸ ಯಾರೂ ಮಾಡಬಾರದು. ಮಂಡ್ಯದಲ್ಲಿ ನಮ್ಮ ಮೈತ್ರಿ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದರು.

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್​ ಅವರ ಪ್ರಚಾರ ಕಾರ್ಯದಲ್ಲಿ ಕಾಂಗ್ರೆಸ್​ ಬಾವುಟಗಳು ಪ್ರದರ್ಶನವಾಗುತ್ತಿರುವ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​, ಅಂತಹ ಕಾರ್ಯಕರ್ತರು ಕಾಂಗ್ರೆಸ್​ ತೊರೆಯಲಿ ಎಂದು ಖಡಕ್ಕಾಗಿ ನುಡಿದಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ನಾವು ಯಾವುದೇ ಕಾರಣಕ್ಕೂ ಸುಮಲತಾ ಅವರಿಗೆ ಬೆಂಬಲ ನೀಡಿಲ್ಲ. ಪಕ್ಷದ ಕಾರ್ಯಕರ್ತರು ಅಂತ ದುಸ್ಸಾಹಸಕ್ಕೆ ಕೈ ಹಾಕಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಅಲ್ಲದೇ ಬಾವುಟ ಹಿಡಿದುಕೊಂಡು ತಿರುಗಿದರೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದರು.

ದಿನೇಶ್​ ಗುಂಡೂರಾವ್​

ನಮ್ಮ ಪಕ್ಷದ ಚಿಹ್ನೆ ಪಕ್ಷೇತರ ಅಭ್ಯರ್ಥಿ ಜೊತೆ ಕಾಣಿಸಿಕೊಳ್ಳಬಾರದು ಎಂದಿದ್ದೇವೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ದೇವೆ. ಸಿಎಂ ಜೊತೆ ಈ ಬಗ್ಗೆ ಚರ್ಚೆ ಮಾಡುತ್ತೇನೆ. ನಮ್ಮ ಪಕ್ಷದ ಧ್ವಜ ಹಿಡಿದು ಕೆಲಸ ಮಾಡಿದ್ರೆ ಪಕ್ಷ ಬಿಟ್ಟು ಹೋಗಲಿ. ಒಂದು ವೇಳೆ ಹೋಗದಿದ್ರೆ ನಾವೇ ಶಿಸ್ತಿನ ಕ್ರಮ ತೆಗದುಕೊಳ್ಳುತ್ತೇವೆ. ಈ ಬಗ್ಗೆ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ. ಪಕ್ಷ ವಿರೋಧಿ ಕೆಲಸ ಯಾರೂ ಮಾಡಬಾರದು. ಮಂಡ್ಯದಲ್ಲಿ ನಮ್ಮ ಮೈತ್ರಿ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದರು.

Intro:Body:

ಸುಮಲತಾ ಪರ ಕೈ ಬಾವುಟ ಹಿಡಿಯುವವರು ಪಕ್ಷ ತೊರೆಯಲಿ: ದಿನೇಶ್​ ಗುಂಡೂರಾವ್​



ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್​ ಅವರ ಪ್ರಚಾರ ಕಾರ್ಯದಲ್ಲಿ ಕಾಂಗ್ರೆಸ್​ ಬಾವುಟಗಳು ಪ್ರದರ್ಶನವಾಗುತ್ತಿರುವ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​, ಅಂತಹ ಕಾರ್ಯಕರ್ತರು ಕಾಂಗ್ರೆಸ್​ ತೊರೆಯಲಿ ಎಂದು ಖಡಕ್ಕಾಗಿ ನುಡಿದಿದ್ದಾರೆ. 



ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ನಾವು ಯಾವುದೇ ಕಾರಣಕ್ಕೂ ಸುಮಲತಾ ಅವರಿಗೆ ಬೆಂಬಲ ನೀಡಿಲ್ಲ. ಪಕ್ಷದ ಕಾರ್ಯಕರ್ತರು ಅಂತ ದುಸ್ಸಾಹಸಕ್ಕೆ ಕೈ ಹಾಕಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಅಲ್ಲದೇ ಬಾವುಟ ಹಿಡಿದುಕೊಂಡು ತಿರುಗಿದರೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದರು. 



ನಮ್ಮ ಪಕ್ಷದ ಚಿಹ್ನೆ ಪಕ್ಷೇತರ ಅಭ್ಯರ್ಥಿ ಜೊತೆ ಕಾಣಿಸಿಕೊಳ್ಳಬಾರದು ಎಂದಿದ್ದೇವೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ದೇವೆ. ಸಿಎಂ ಜೊತೆ ಈ ಬಗ್ಗೆ ಚರ್ಚೆ ಮಾಡುತ್ತೇನೆ. ನಮ್ಮ ಪಕ್ಷದ ಧ್ವಜ ಹಿಡಿದು ಕೆಲಸ ಮಾಡಿದ್ರೆ ಪಕ್ಷ ಬಿಟ್ಟು ಹೋಗಲಿ. ಒಂದು ವೇಳೆ ಹೋಗದಿದ್ರೆ ನಾವೇ ಶಿಸ್ತಿನ ಕ್ರಮ ತೆಗದುಕೊಳ್ಳುತ್ತೇವೆ. ಈ ಬಗ್ಗೆ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ. ಪಕ್ಷ ವಿರೋಧಿ ಕೆಲಸ ಯಾರೂ ಮಾಡಬಾರದು. ಮಂಡ್ಯದಲ್ಲಿ ನಮ್ಮ ಮೈತ್ರಿ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದರು.


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.