ETV Bharat / state

ಸದ್ಯದಲ್ಲೇ ದೆಹಲಿಗೆ ಪ್ರಯಾಣ, ರಾಜ್ಯ ರಾಜಕೀಯ ಬಗ್ಗೆ ವರಿಷ್ಠರಿಗೆ ವರದಿ ಸಲ್ಲಿಕೆ: ಬಿಎಸ್​ವೈ

ಕೇಂದ್ರ ಗೃಹ ಸಚಿವ ಅಮಿತ್​ ಶಾ ಮತ್ತು ಪ್ರಧಾನಿಯವರಿಗೆ ರಾಜ್ಯ ರಾಜಕೀಯ ಬೆಳವಣಿಗೆಗಳ ಮಾಹಿತಿ ಒಳಗೊಂಡ ವರದಿ ನೀಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​ ಯಡಿಯೂರಪ್ಪ ಸದ್ಯದಲ್ಲೇ ದೆಹಲಿಗೆ ತೆರಳಲಿದ್ದಾರೆ.

author img

By

Published : Jul 10, 2019, 10:59 PM IST

ಶೀಘ್ರದಲ್ಲೇ ದೆಹಲಿಗೆ ತೆರಳಲಿರುವ ಬಿಎಸ್​ವೈ

ಬೆಂಗಳೂರು:ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲಾ ರಾಜಕೀಯ ಬೆಳವಣಿಗಳ ಬಗ್ಗೆ ಸದ್ಯದಲ್ಲೇ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ, ಹಾಗೂ ಅಮಿತ್ ಶಾ ಅವರಿಗೆ ಮಾಹಿತಿ ನೀಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಇಂದಿನ ರಾಜಕೀಯ ಬೆಳವಣಿಗೆ ಹಿನ್ನೆಲೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಾಳೆಗೆ ಮುಂದೂಡಿದ ಯಡಿಯೂರಪ್ಪ ಕಚೇರಿಗೆ ಆಗಮಿಸಿದ್ದ ಶಾಸಕರನ್ನು ವಿಧಾನಸೌಧಕ್ಕೆ ಕಳುಹಿಸಿಕೊಟ್ಟರು. ನಂತರ ಬಿಜೆಪಿ ಪ್ರಮುಖ ನಾಯಕರ ಸಭೆ ನಡೆಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಜ್ಯ ಉಸ್ತುವಾರಿ ಮುರುಳೀದರ್ ರಾವ್, ಕೆ.ಎಸ್.ಈಶ್ವರಪ್ಪ, ಶ್ರೀರಾಮುಲು, ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ ಸೇರಿ ಪ್ರಮುಖ ನಾಯಕರ ಸಭೆಯಲ್ಲಿ ಭಾಗಿಯಾಗಿದ್ದರು.

ಶೀಘ್ರದಲ್ಲೇ ದೆಹಲಿಗೆ ತೆರಳಲಿರುವ ಬಿಎಸ್​ವೈ

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ,ಕಾಂಗ್ರೆಸ್-ಜೆಡಿಎಸ್ ನಾಯಕರು ಕೊನೆಯ ಹಂತಕ್ಕೆ ಬಂದಿದ್ದಾರೆ. ಏನಾಗಲಿದೆ ಎಂದು ಕಾದು ನೋಡುತ್ತೇವೆ. ಶುಕ್ರವಾರ ಅಧಿವೇಶನ ಇದೆ ನಾಳೆ ಮತ್ತೆ ಶಾಸಕಾಂಗ ಸಭೆ ನಡೆಸಿ, ಮುಂದಿನ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದರು.

ಇವತ್ತು ಸ್ಪೀಕರ್ ಜೊತೆ ಒಂದು ಗಂಟೆ ಕುಳಿತು ರಾಜಕೀಯ ಬೆಳವಣಿಗೆ ಬಗ್ಗೆ ಮಾತನಾಡಿದ್ದೇವೆ. ರಾಜೀನಾಮೆ ಒಪ್ಪಿಕೊಳ್ಳದೆ ವಿಳಂಬ ಮಾಡುತ್ತಿರುವುದು ಸರಿಯಲ್ಲ. ತಕ್ಷಣ ಒಪ್ಪಿಕೊಳ್ಳಿ ಎಂದು ತಿಳಿಸಿದ್ದೇವೆ. ಅವರು ಏನು ಮಾಡುತ್ತಾರೆ ನೋಡೋಣ. ಸುಪ್ರೀಂಕೋರ್ಟ್​​ನಲ್ಲಿ ನಾಳೆ ಅರ್ಜಿ ವಿಚಾರಣೆ ಆಗಲಿದ್ದು, ನಿರ್ಧಾರ ಆಗಬಹುದು ನಂತರ ಏನು ಮಾಡಬೇಕು ಎಂದು ನೋಡುತ್ತೇವೆ ಎಂದರು.

ಬೆಂಗಳೂರು:ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲಾ ರಾಜಕೀಯ ಬೆಳವಣಿಗಳ ಬಗ್ಗೆ ಸದ್ಯದಲ್ಲೇ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ, ಹಾಗೂ ಅಮಿತ್ ಶಾ ಅವರಿಗೆ ಮಾಹಿತಿ ನೀಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಇಂದಿನ ರಾಜಕೀಯ ಬೆಳವಣಿಗೆ ಹಿನ್ನೆಲೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಾಳೆಗೆ ಮುಂದೂಡಿದ ಯಡಿಯೂರಪ್ಪ ಕಚೇರಿಗೆ ಆಗಮಿಸಿದ್ದ ಶಾಸಕರನ್ನು ವಿಧಾನಸೌಧಕ್ಕೆ ಕಳುಹಿಸಿಕೊಟ್ಟರು. ನಂತರ ಬಿಜೆಪಿ ಪ್ರಮುಖ ನಾಯಕರ ಸಭೆ ನಡೆಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಜ್ಯ ಉಸ್ತುವಾರಿ ಮುರುಳೀದರ್ ರಾವ್, ಕೆ.ಎಸ್.ಈಶ್ವರಪ್ಪ, ಶ್ರೀರಾಮುಲು, ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ ಸೇರಿ ಪ್ರಮುಖ ನಾಯಕರ ಸಭೆಯಲ್ಲಿ ಭಾಗಿಯಾಗಿದ್ದರು.

ಶೀಘ್ರದಲ್ಲೇ ದೆಹಲಿಗೆ ತೆರಳಲಿರುವ ಬಿಎಸ್​ವೈ

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ,ಕಾಂಗ್ರೆಸ್-ಜೆಡಿಎಸ್ ನಾಯಕರು ಕೊನೆಯ ಹಂತಕ್ಕೆ ಬಂದಿದ್ದಾರೆ. ಏನಾಗಲಿದೆ ಎಂದು ಕಾದು ನೋಡುತ್ತೇವೆ. ಶುಕ್ರವಾರ ಅಧಿವೇಶನ ಇದೆ ನಾಳೆ ಮತ್ತೆ ಶಾಸಕಾಂಗ ಸಭೆ ನಡೆಸಿ, ಮುಂದಿನ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದರು.

ಇವತ್ತು ಸ್ಪೀಕರ್ ಜೊತೆ ಒಂದು ಗಂಟೆ ಕುಳಿತು ರಾಜಕೀಯ ಬೆಳವಣಿಗೆ ಬಗ್ಗೆ ಮಾತನಾಡಿದ್ದೇವೆ. ರಾಜೀನಾಮೆ ಒಪ್ಪಿಕೊಳ್ಳದೆ ವಿಳಂಬ ಮಾಡುತ್ತಿರುವುದು ಸರಿಯಲ್ಲ. ತಕ್ಷಣ ಒಪ್ಪಿಕೊಳ್ಳಿ ಎಂದು ತಿಳಿಸಿದ್ದೇವೆ. ಅವರು ಏನು ಮಾಡುತ್ತಾರೆ ನೋಡೋಣ. ಸುಪ್ರೀಂಕೋರ್ಟ್​​ನಲ್ಲಿ ನಾಳೆ ಅರ್ಜಿ ವಿಚಾರಣೆ ಆಗಲಿದ್ದು, ನಿರ್ಧಾರ ಆಗಬಹುದು ನಂತರ ಏನು ಮಾಡಬೇಕು ಎಂದು ನೋಡುತ್ತೇವೆ ಎಂದರು.

Intro:



ಬೆಂಗಳೂರು: ಈ ಸರ್ಕಾರದ ಆಯಸ್ಸು ಇನ್ನು ಎರಡು ಮೂರು ದಿನ ಮಾತ್ರ,ರಾಜ್ಯದಲ್ಲಿ ನಡೆಯುತ್ತಿರಯವ ಎಲ್ಲಾ ರಾಜಕೀಯ ಬೆಳವಣಿಗಳೊಂದಿಗೆ ಸಧ್ಯದಲ್ಲೇ ದೆಹಲಿಗೆ ತೆರಳಿ ಮೋದಿ,ಅಮಿತ್ ಶಾ ಅವರಿಗೆ ಮಾಹಿತಿ ನೀಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಇಂದಿನ ರಾಜಕೀಯ ಬೆಳವಣಿಗೆ ಹಿನ್ನಲೆಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಾಳೆಗೆ ಮುಂದೂಡಿದ ಯಡಿಯೂರಪ್ಪ ಕಚೇರಿಗೆ ಆಗಮಿಸಿದ್ದ ಶಾಸಕರನ್ನು ವಿಧಾನಸೌಧಕ್ಕೆ ಕಳಿಸಿಕೊಡಟ್ಟರು. ನಂತರ ಬಿಜೆಪಿ ಪ್ರಮುಖ ನಾಯಕರ ಸಭೆ ನಡೆಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಜ್ಯ ಉಸ್ತುವಾರಿ ಮುರುಳೀದರ್ ರಾವ್, ಕೆ.ಎಸ್.ಈಶ್ವರಪ್ಪ, ಶ್ರೀರಾಮುಲು, ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ ಮತ್ತಿತರು ಪ್ರಮುಖ ನಾಯಕರ ಸಭೆಯಲ್ಲಿ ಭಾಗಿಯಾಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿನ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿ ಮುಂದಿನ ನಿಲುವು ಕುರಿತ ಸಮಾಲೋಚನೆ ನಡೆಸಿದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ,ಕಾಂಗ್ರೆಸ್-ಜೆಡಿಎಸ್ ನಾಯಕರು ಕೊನೆಯ ಹಂತಕ್ಕೆ ಬಂದಿದ್ದಾರೆ,ಏನಾಗಲಿದೆ ಎಂದು ಕಾದು ನೋಡುತ್ತೇವೆ ಶುಕ್ರವಾರ ಅಧಿವೇಶನ ಇದೆ ನಾಳೆ ಮತ್ತೆ ಶಾಸಕಾಂಗ ಸಭೆ ನಡೆಸಲಿದ್ದೇವೆ ಮುಂದಿನ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದರು.

ಈ ಸರ್ಕಾರದ ಆಯಸ್ಸು ಇನ್ನೂ ಎರಡು ಮೂರು ದಿನ ಎಂದು ನಾನು ಅಂದುಕೊಂಡಿದ್ದೇನೆ ಬರುವ ದಿನಗಳಲ್ಲಿನ ರಾಜಕೀಯ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇವೆ ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಿದ್ದೇವೆ, ಈಗ ರಾಜ್ಯ ಉಸ್ತುವಾರಿ ಮುರುಳೀಧರ್ ರಾವ್ ಬಂದಿದ್ದು ಅಗತ್ಯ ಸಲಹೆ ನೀಡಿದ್ದಾರೆ. ಇನ್ನು ಮೂರ್ ನಾಲ್ಕು ದಿನದಲ್ಲಿ ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮತ್ತು ಪ್ರಧಾನಿಗಳಿಗೆ ಎಲ್ಲ ಬೆಳವಣಿಗೆಗಳ ಮಾಹಿತಿಯನ್ನು ಒಳಗೊಂಡ ವರದಿ ನೀಡಲಿದ್ದೇನೆ ಎಂದರು

ರಾಜಿನಾಮೆ ಕೊಟ್ಟ ಶಾಸಕರಿಗೆ ರಕ್ಷಣೆ ಕೊಡಬೇಕು ಅವರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ರಾಜ್ಯಪಾಲರಿಗೆ ದೂರು ಕೊಟ್ಟ ಕೆಲವೇ ಗಂಟೆಗಳಲ್ಲಿ ಸುಧಾಕರ್ ಮತ್ತು ಎಂಟಿಬಿ ನಾಗರಾಜ್ ವಿರುದ್ಧ ನಡೆದಿರುವ ದೌರ್ಜನ್ಯ ಸಚಿವರು ಸೇರಿ ಅವರ ಪಟ್ಟಿ ಹಿಡಿದು ಜಾರ್ಜ್ ರೂಮಿನಲ್ಲಿ ಹೋಗಿ ಕೂಡಿ ಹಾಕಿದ ಘಟನೆ ನಡೆದಿದೆ ಇದು ಕಾನೂನು ಸುವ್ಯವಸ್ಥೆ ಹೇಗಿದೆ ಎನ್ನುವುದಕ್ಕೆ ನಿದರ್ಶನ ಎಂದು ಟೀಕಿಸಿದರು.

ಇವತ್ತು ಸ್ಪೀಕರ್ ಜೊತೆ ಒಂದು ಗಂಟೆ ಕುಳಿತು ರಾಜಕೀಯ ಬೆಳವಣಿಗೆ ಬಗ್ಗೆ ಮಾತನಾಡಿದ್ದೇವೆ, ರಾಜೀನಾಮೆ ಒಪ್ಪಿಕೊಳ್ಳದೆ ವಿಳಂಬ ಮಾಡುತ್ತಿರುವುದು ಸರಿಯಲ್ಲ ತಕ್ಷಣ ಒಪ್ಪಿಕೊಳ್ಳಿ ಎನ್ನುವ ವಿನಂತಿಯನ್ನು ಬಂದಿದ್ದಾರೆ ಅವರು ಏನು ಮಾಡುತ್ತಾರೆ ನೋಡೋಣ ಸುಪ್ರೀಂಕೋರ್ಟ್ನಲ್ಲಿ ನಾಳೆ ಅರ್ಜಿ ವಿಚಾರಣೆ ಆಗಲಿದ್ದು ನಿರ್ಧಾರ ಆಗಬಹುದು ನಂತರ ಏನು ಮಾಡಬೇಕು ಎಂದು ನೋಡುತ್ತೇವೆ ಎಂದರು.

.




Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.