ETV Bharat / state

ಬಿಜೆಪಿ ತನ್ನ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಡಿಕೆಶಿ ಅವರ ವಿರುದ್ಧ ಅವಹೇಳನ ಮಾಡುತ್ತಿದೆ : ಮನೋಹರ್

ಗೂಂಡಾಗಳು ಯಾರು ಎಂಬುದು ನಳಿನ್ ಕುಮಾರ್ ಕಟೀಲ್‌ಗೆ ಮಾಹಿತಿಯಿದೆ. ಗೂಂಡಾಗಳ ಬಗ್ಗೆ ಭ್ರಷ್ಟಾಚಾರಿಗಳ ಬಗ್ಗೆ ಮಾಹಿತಿ ಬೇಕಾದರೆ ಬಿಜೆಪಿಯ ನಾಯಕರಾದ ಹೆಚ್.ವಿಶ್ವನಾಥ್, ಬಸನಗೌಡ ಪಾಟೀಲ್ ಯತ್ನಾಳ್, ಕೆ ಎಸ್‌ ಈಶ್ವರಪ್ಪನವರನ್ನು ಕೇಳಿದರೆ ಬಿಜೆಪಿಯ ಭ್ರಷ್ಟರ ಬಗ್ಗೆ ಪಟ್ಟಿಯನ್ನು ನೀಡುತ್ತಾರೆ. ಅದನ್ನು ಪಡೆದು ಕ್ರಮಕೈಗೊಳ್ಳುವ ಕೆಲಸವನ್ನು ನಳಿನ್ ಕುಮಾರ್ ಕಟೀಲ್ ಮಾಡಬೇಕು..

author img

By

Published : Jul 12, 2021, 3:33 PM IST

Youth Congress protest in Bengaluru
ಕಾಂಗ್ರೆಸ್ ನಾಯಕರ ಪ್ರತಿಭಟನೆ

ಬೆಂಗಳೂರು : ರಾಜ್ಯ ಬಿಜೆಪಿ ನಾಯಕರು ಅನಗತ್ಯವಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಅವಹೇಳನ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಯುವ ಕಾಂಗ್ರೆಸ್ ನಾಯಕ ಮನೋಹರ್ ನೇತೃತ್ವದಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಪ್ರತಿಭಟನೆ ನಡೆಸಿತು. ನಳಿನ್ ಕುಮಾರ್ ಕಟೀಲ್ ಹಾಗೂ ರವಿಕುಮಾರ್ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಮನೋಹರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಅನವಶ್ಯಕವಾಗಿ ಕೆಪಿಸಿಸಿ ಅಧ್ಯಕ್ಷರ ಹೆಸರನ್ನು ಪ್ರಸ್ತಾಪಿಸಿ ತಮ್ಮ ಬಿಜೆಪಿ ಪಕ್ಷದ ಭ್ರಷ್ಟಾಚಾರ, ಸರ್ಕಾರದ ದುರಾಡಳಿತವನ್ನು ಮರೆಮಾಚಲು ಆಧಾರರಹಿತ ಟೀಕೆಗಳನ್ನು ಮಾಡುತ್ತಿದ್ದಾರೆ.

ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ..

ಬಿಜೆಪಿ ಪಕ್ಷದಲ್ಲಿ ಇತ್ತೀಚೆಗೆ ಅತ್ಯಾಚಾರಿಗಳು ಭ್ರಷ್ಟಾಚಾರಿಗಳು, ಅನಾಚಾರಿಗಳು ಹೆಚ್ಚುತ್ತಿದ್ದಾರೆ. ಅದನ್ನು ತಡೆಯುವ ಪ್ರಯತ್ನವನ್ನು ಮೊದಲು ಬಿಜೆಪಿ ಅಧ್ಯಕ್ಷ ಕಟೀಲ್ ಮಾಡಬೇಕು. ಅದನ್ನು ಹೊರತುಪಡಿಸಿ ಕಾಂಗ್ರೆಸ್ ಪಕ್ಷದ ವಿರುದ್ಧ ಟೀಕೆ ನಡೆಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದರು.

ಗೂಂಡಾಗಳು ಯಾರು ಎಂಬುದು ನಳಿನ್ ಕುಮಾರ್ ಕಟೀಲ್‌ಗೆ ಮಾಹಿತಿಯಿದೆ. ಗೂಂಡಾಗಳ ಬಗ್ಗೆ ಭ್ರಷ್ಟಾಚಾರಿಗಳ ಬಗ್ಗೆ ಮಾಹಿತಿ ಬೇಕಾದರೆ ಬಿಜೆಪಿಯ ನಾಯಕರಾದ ಹೆಚ್.ವಿಶ್ವನಾಥ್, ಬಸನಗೌಡ ಪಾಟೀಲ್ ಯತ್ನಾಳ್, ಕೆ ಎಸ್‌ ಈಶ್ವರಪ್ಪನವರನ್ನು ಕೇಳಿದರೆ ಬಿಜೆಪಿಯ ಭ್ರಷ್ಟರ ಬಗ್ಗೆ ಪಟ್ಟಿಯನ್ನು ನೀಡುತ್ತಾರೆ. ಅದನ್ನು ಪಡೆದು ಕ್ರಮಕೈಗೊಳ್ಳುವ ಕೆಲಸವನ್ನು ನಳಿನ್ ಕುಮಾರ್ ಕಟೀಲ್ ಮಾಡಬೇಕು ಎಂದರು.

ಇನ್ನು, ಬಿಜೆಪಿಯ ವಕ್ತಾರ ರವಿಕುಮಾರ್ ನಿರುದ್ಯೋಗಿಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಪಕ್ಷದ ಭ್ರಷ್ಟಾಚಾರವನ್ನು ಹಾಗೂ ಅನಾಚಾರವನ್ನು ಮರೆಮಾಚಲು ಒಂದಂಶದ ಕಾರ್ಯಕ್ರಮವನ್ನು ರೂಪಿಸಿ ಆಧಾರ ರಹಿತವಾದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮೊದಲು ತಮ್ಮ ಪಕ್ಷದಲ್ಲಿರುವ ಭ್ರಷ್ಟರು ಹಾಗೂ ಅನಾಚಾರಿಗಳ ವಿರುದ್ಧ ಗಮನ ಹರಿಸಿ ಅದನ್ನು ತಡೆಯುವ ಕೆಲಸವನ್ನು ಮೊದಲು ಮಾಡಬೇಕು ಎಂದು ಹೇಳಿದರು.

ಇದನ್ನೂ ಓದಿ : ಚೆಂಡು ಉಮಾಪತಿ ಅಂಗಳದಲ್ಲಿದೆ, ಗೋಲು​ ಹೊಡೆಯುವುದು ಅವರಿಗೆ ಬಿಟ್ಟಿದ್ದು: 25 ಕೋಟಿ ವಂಚನೆ ಕೇಸ್​ಗೆ ದಚ್ಚು ಕಿಡಿ

ಬಿಜೆಪಿಯವರಿಗೆ ಬಸವಣ್ಣನವರ ಹೆಸರು ಹೇಳುವ ಯೋಗ್ಯತೆ ಇಲ್ಲ : ಬಸವಣ್ಣ ಜನಿಸಿದ ನಾಡಿನಲ್ಲಿ ಜೈಲಿಗೆ ಹೋಗಿ ಬಂದವರು ಜೈಲಿಗೆ ಹೋಗುವವರು ಸಾಲಿನಲ್ಲಿ ನಿಂತಿದ್ದಾರೆ. ಅವರೇ ರಾಜ್ಯದಲ್ಲಿ ಚುಕ್ಕಾಣಿ ಹಿಡಿದು ಅಧಿಕಾರ ನಡೆಸುತ್ತಿದ್ದರೆ, ಇಂಥವರಿಂದ ಕರ್ನಾಟಕಕ್ಕೆ ಅಪಕೀರ್ತಿ ಬಂದಿದೆ. ಮೊದಲು ರಾಜೀನಾಮೆ ಕೊಟ್ಟು ರಾಜ್ಯದಿಂದ ತೊಲಗುವ ಕೆಲಸವನ್ನು ಬಿಜೆಪಿಯವರು ಮಾಡಿದರೆ, ರಾಜ್ಯಕ್ಕೆ ಹಾಗೂ ಜನತೆಗೆ ಒಳಿತಾಗುತ್ತದೆ.

ತಮ್ಮ ಮೇಲಿರುವ ಆರೋಪವನ್ನು ಮತ್ತೊಂದು ಪಕ್ಷದ ಮೇಲೆ ಹೊರಿಸುವ ಕುತಂತ್ರವನ್ನು ಬಿಟ್ಟು ಮೊದಲು ತಮ್ಮ ಪಕ್ಷದಲ್ಲಿರುವ ವ್ಯಭಿಚಾರಿಗಳ ಬಗ್ಗೆ ಗಮನ ನೀಡಿ, ಗೌರವ ಕಾಪಾಡಿ ಕೊಳ್ಳುವ ಕೆಲಸ ಮಾಡಬೇಕು. ಪ್ರತಿಭಟನೆ ಮೂಲಕ ಬಿಜೆಪಿ ಅಧ್ಯಕ್ಷರಿಗೆ, ಆ ಪಕ್ಷದ ಮುಖಂಡರಿಗೆ ಎಚ್ಚರಿಕೆ ನೀಡಿ ಮೊದಲು ಬಸವಣ್ಣನವರ ಹೆಸರನ್ನು ಹೇಳಿದ್ದಕ್ಕಾಗಿ ರಾಜ್ಯದ ಜನತೆಯ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.

ಬೆಂಗಳೂರು : ರಾಜ್ಯ ಬಿಜೆಪಿ ನಾಯಕರು ಅನಗತ್ಯವಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಅವಹೇಳನ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಯುವ ಕಾಂಗ್ರೆಸ್ ನಾಯಕ ಮನೋಹರ್ ನೇತೃತ್ವದಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಪ್ರತಿಭಟನೆ ನಡೆಸಿತು. ನಳಿನ್ ಕುಮಾರ್ ಕಟೀಲ್ ಹಾಗೂ ರವಿಕುಮಾರ್ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಮನೋಹರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಅನವಶ್ಯಕವಾಗಿ ಕೆಪಿಸಿಸಿ ಅಧ್ಯಕ್ಷರ ಹೆಸರನ್ನು ಪ್ರಸ್ತಾಪಿಸಿ ತಮ್ಮ ಬಿಜೆಪಿ ಪಕ್ಷದ ಭ್ರಷ್ಟಾಚಾರ, ಸರ್ಕಾರದ ದುರಾಡಳಿತವನ್ನು ಮರೆಮಾಚಲು ಆಧಾರರಹಿತ ಟೀಕೆಗಳನ್ನು ಮಾಡುತ್ತಿದ್ದಾರೆ.

ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ..

ಬಿಜೆಪಿ ಪಕ್ಷದಲ್ಲಿ ಇತ್ತೀಚೆಗೆ ಅತ್ಯಾಚಾರಿಗಳು ಭ್ರಷ್ಟಾಚಾರಿಗಳು, ಅನಾಚಾರಿಗಳು ಹೆಚ್ಚುತ್ತಿದ್ದಾರೆ. ಅದನ್ನು ತಡೆಯುವ ಪ್ರಯತ್ನವನ್ನು ಮೊದಲು ಬಿಜೆಪಿ ಅಧ್ಯಕ್ಷ ಕಟೀಲ್ ಮಾಡಬೇಕು. ಅದನ್ನು ಹೊರತುಪಡಿಸಿ ಕಾಂಗ್ರೆಸ್ ಪಕ್ಷದ ವಿರುದ್ಧ ಟೀಕೆ ನಡೆಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದರು.

ಗೂಂಡಾಗಳು ಯಾರು ಎಂಬುದು ನಳಿನ್ ಕುಮಾರ್ ಕಟೀಲ್‌ಗೆ ಮಾಹಿತಿಯಿದೆ. ಗೂಂಡಾಗಳ ಬಗ್ಗೆ ಭ್ರಷ್ಟಾಚಾರಿಗಳ ಬಗ್ಗೆ ಮಾಹಿತಿ ಬೇಕಾದರೆ ಬಿಜೆಪಿಯ ನಾಯಕರಾದ ಹೆಚ್.ವಿಶ್ವನಾಥ್, ಬಸನಗೌಡ ಪಾಟೀಲ್ ಯತ್ನಾಳ್, ಕೆ ಎಸ್‌ ಈಶ್ವರಪ್ಪನವರನ್ನು ಕೇಳಿದರೆ ಬಿಜೆಪಿಯ ಭ್ರಷ್ಟರ ಬಗ್ಗೆ ಪಟ್ಟಿಯನ್ನು ನೀಡುತ್ತಾರೆ. ಅದನ್ನು ಪಡೆದು ಕ್ರಮಕೈಗೊಳ್ಳುವ ಕೆಲಸವನ್ನು ನಳಿನ್ ಕುಮಾರ್ ಕಟೀಲ್ ಮಾಡಬೇಕು ಎಂದರು.

ಇನ್ನು, ಬಿಜೆಪಿಯ ವಕ್ತಾರ ರವಿಕುಮಾರ್ ನಿರುದ್ಯೋಗಿಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಪಕ್ಷದ ಭ್ರಷ್ಟಾಚಾರವನ್ನು ಹಾಗೂ ಅನಾಚಾರವನ್ನು ಮರೆಮಾಚಲು ಒಂದಂಶದ ಕಾರ್ಯಕ್ರಮವನ್ನು ರೂಪಿಸಿ ಆಧಾರ ರಹಿತವಾದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮೊದಲು ತಮ್ಮ ಪಕ್ಷದಲ್ಲಿರುವ ಭ್ರಷ್ಟರು ಹಾಗೂ ಅನಾಚಾರಿಗಳ ವಿರುದ್ಧ ಗಮನ ಹರಿಸಿ ಅದನ್ನು ತಡೆಯುವ ಕೆಲಸವನ್ನು ಮೊದಲು ಮಾಡಬೇಕು ಎಂದು ಹೇಳಿದರು.

ಇದನ್ನೂ ಓದಿ : ಚೆಂಡು ಉಮಾಪತಿ ಅಂಗಳದಲ್ಲಿದೆ, ಗೋಲು​ ಹೊಡೆಯುವುದು ಅವರಿಗೆ ಬಿಟ್ಟಿದ್ದು: 25 ಕೋಟಿ ವಂಚನೆ ಕೇಸ್​ಗೆ ದಚ್ಚು ಕಿಡಿ

ಬಿಜೆಪಿಯವರಿಗೆ ಬಸವಣ್ಣನವರ ಹೆಸರು ಹೇಳುವ ಯೋಗ್ಯತೆ ಇಲ್ಲ : ಬಸವಣ್ಣ ಜನಿಸಿದ ನಾಡಿನಲ್ಲಿ ಜೈಲಿಗೆ ಹೋಗಿ ಬಂದವರು ಜೈಲಿಗೆ ಹೋಗುವವರು ಸಾಲಿನಲ್ಲಿ ನಿಂತಿದ್ದಾರೆ. ಅವರೇ ರಾಜ್ಯದಲ್ಲಿ ಚುಕ್ಕಾಣಿ ಹಿಡಿದು ಅಧಿಕಾರ ನಡೆಸುತ್ತಿದ್ದರೆ, ಇಂಥವರಿಂದ ಕರ್ನಾಟಕಕ್ಕೆ ಅಪಕೀರ್ತಿ ಬಂದಿದೆ. ಮೊದಲು ರಾಜೀನಾಮೆ ಕೊಟ್ಟು ರಾಜ್ಯದಿಂದ ತೊಲಗುವ ಕೆಲಸವನ್ನು ಬಿಜೆಪಿಯವರು ಮಾಡಿದರೆ, ರಾಜ್ಯಕ್ಕೆ ಹಾಗೂ ಜನತೆಗೆ ಒಳಿತಾಗುತ್ತದೆ.

ತಮ್ಮ ಮೇಲಿರುವ ಆರೋಪವನ್ನು ಮತ್ತೊಂದು ಪಕ್ಷದ ಮೇಲೆ ಹೊರಿಸುವ ಕುತಂತ್ರವನ್ನು ಬಿಟ್ಟು ಮೊದಲು ತಮ್ಮ ಪಕ್ಷದಲ್ಲಿರುವ ವ್ಯಭಿಚಾರಿಗಳ ಬಗ್ಗೆ ಗಮನ ನೀಡಿ, ಗೌರವ ಕಾಪಾಡಿ ಕೊಳ್ಳುವ ಕೆಲಸ ಮಾಡಬೇಕು. ಪ್ರತಿಭಟನೆ ಮೂಲಕ ಬಿಜೆಪಿ ಅಧ್ಯಕ್ಷರಿಗೆ, ಆ ಪಕ್ಷದ ಮುಖಂಡರಿಗೆ ಎಚ್ಚರಿಕೆ ನೀಡಿ ಮೊದಲು ಬಸವಣ್ಣನವರ ಹೆಸರನ್ನು ಹೇಳಿದ್ದಕ್ಕಾಗಿ ರಾಜ್ಯದ ಜನತೆಯ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.