ETV Bharat / state

ಅತೃಪ್ತ ಶಾಸಕರಿಗೆ‌ ಝೀರೋ ಟ್ರಾಫಿಕ್ ವ್ಯವಸ್ಥೆ: ಸ್ಪೀಕರ್​ಗೆ ವರದಿ ನೀಡಿದ ಡಿಜಿಪಿ

author img

By

Published : Jul 22, 2019, 9:28 PM IST

ಅತೃಪ್ತ ಶಾಸಕರಿಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ ವಿಚಾರದ ಕುರಿತು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ‌ ರಾಜು‌ ವರದಿ ಸಲ್ಲಿಸಿದ್ದಾರೆ.

ಸ್ಪೀಕರ್ ರಮೇಶ್ ಕುಮಾರ್

ಬೆಂಗಳೂರು: ಅತೃಪ್ತ ಶಾಸಕರಿಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ ವಿಚಾರದ ಕುರಿತು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ‌ ರಾಜು‌ ವರದಿ ಸಲ್ಲಿಕೆ ಮಾಡಿದ್ದಾರೆ.

ಖುದ್ದಾಗಿ ಸ್ಪೀಕರ್ ಕಚೇರಿಗೆ ಬಂದು ರಾಜೀನಾಮೆ ಸಲ್ಲಿಕೆ ಮಾಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು. ಅತೃಪ್ತ ಶಾಸಕರು ಮಂಬೈನಿಂದ ವಿಶೇಷ ವಿಮಾನದ ಮೂಲಕ ನಗರದ ಹೆಚ್​ಎಎಲ್ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ‌ ಮಿನಿ ಬಸ್ ಮೂಲಕ ವಿಧಾನಸೌಧಕ್ಕೆ ಬಂದು ರಾಜೀನಾಮೆ‌ ಪತ್ರ ಸಲ್ಲಿಕೆ ಮಾಡಿದ್ದರು. ಸುಪ್ರೀಂಕೋರ್ಟ್ ನೀಡಿದ್ದ ಗಡುವಿಗಿಂತ 10 ನಿಮಿಷ ತಡವಾಗಿ ಆಗಮಿಸಿದ್ದರು. ವಿಮಾನ ನಿಲ್ದಾಣದಿಂದ ವಿಧಾನಸೌಧಕ್ಕೆ ಬರಲು ಶಾಸಕರಿಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.

ಸದನದಲ್ಲಿ ಎ.ಟಿ.ರಾಮಸ್ವಾಮಿ ವಿಷಯ ಪ್ರಸ್ತಾಪಿಸಿ ಝೀರೋ ಟ್ರಾಫಿಕ್ ಸೌಲಭ್ಯ ಕಲ್ಪಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಸಂಬಂಧ ಗೃಹ ಸಚಿವರಿಂದ ವಿವರಣೆ ಪಡೆದುಕೊಂಡಿದ್ದ ಸ್ಪೀಕರ್ ಈ ಸಂಬಂಧ ವರದಿ ನೀಡಿವಂತೆ ಡಿಜಿಪಿಗೆ ಸೂಚನೆ ನೀಡಿದ್ದರು.

ಸಂಜೆ ವಿಧಾನಸೌಧಕ್ಕೆ ಆಗಮಿಸಿದ ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ರಾಜು ಝೀರೋ ಟ್ರಾಫಿಕ್ ಸೌಲಭ್ಯ ಕಲ್ಪಿಸಿದ್ದ ಕುರಿತು ವಿಸ್ತಾರವಾದ ವರದಿ ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಸಲ್ಲಿಕೆ ಮಾಡಿದ್ದಾರೆ.

ಬೆಂಗಳೂರು: ಅತೃಪ್ತ ಶಾಸಕರಿಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ ವಿಚಾರದ ಕುರಿತು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ‌ ರಾಜು‌ ವರದಿ ಸಲ್ಲಿಕೆ ಮಾಡಿದ್ದಾರೆ.

ಖುದ್ದಾಗಿ ಸ್ಪೀಕರ್ ಕಚೇರಿಗೆ ಬಂದು ರಾಜೀನಾಮೆ ಸಲ್ಲಿಕೆ ಮಾಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು. ಅತೃಪ್ತ ಶಾಸಕರು ಮಂಬೈನಿಂದ ವಿಶೇಷ ವಿಮಾನದ ಮೂಲಕ ನಗರದ ಹೆಚ್​ಎಎಲ್ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ‌ ಮಿನಿ ಬಸ್ ಮೂಲಕ ವಿಧಾನಸೌಧಕ್ಕೆ ಬಂದು ರಾಜೀನಾಮೆ‌ ಪತ್ರ ಸಲ್ಲಿಕೆ ಮಾಡಿದ್ದರು. ಸುಪ್ರೀಂಕೋರ್ಟ್ ನೀಡಿದ್ದ ಗಡುವಿಗಿಂತ 10 ನಿಮಿಷ ತಡವಾಗಿ ಆಗಮಿಸಿದ್ದರು. ವಿಮಾನ ನಿಲ್ದಾಣದಿಂದ ವಿಧಾನಸೌಧಕ್ಕೆ ಬರಲು ಶಾಸಕರಿಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.

ಸದನದಲ್ಲಿ ಎ.ಟಿ.ರಾಮಸ್ವಾಮಿ ವಿಷಯ ಪ್ರಸ್ತಾಪಿಸಿ ಝೀರೋ ಟ್ರಾಫಿಕ್ ಸೌಲಭ್ಯ ಕಲ್ಪಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಸಂಬಂಧ ಗೃಹ ಸಚಿವರಿಂದ ವಿವರಣೆ ಪಡೆದುಕೊಂಡಿದ್ದ ಸ್ಪೀಕರ್ ಈ ಸಂಬಂಧ ವರದಿ ನೀಡಿವಂತೆ ಡಿಜಿಪಿಗೆ ಸೂಚನೆ ನೀಡಿದ್ದರು.

ಸಂಜೆ ವಿಧಾನಸೌಧಕ್ಕೆ ಆಗಮಿಸಿದ ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ರಾಜು ಝೀರೋ ಟ್ರಾಫಿಕ್ ಸೌಲಭ್ಯ ಕಲ್ಪಿಸಿದ್ದ ಕುರಿತು ವಿಸ್ತಾರವಾದ ವರದಿ ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಸಲ್ಲಿಕೆ ಮಾಡಿದ್ದಾರೆ.

Intro:Body:

ಅತೃಪ್ತ ಶಾಸಕರಿಗೆ‌ ಝೀರೋ ಟ್ರಾಫಿಕ್ ವ್ಯವಸ್ಥೆ: ಸ್ಪೀಕರ್ ಗೆ ವರದಿ ನೀಡಿದ ಡಿಜಿಪಿ



ಬೆಂಗಳೂರು: ಅತೃಪ್ತ ಶಾಸಕರಿಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದ ಸಂಬಂಧ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ‌ ರಾಜು‌ ವರದಿ ಸಲ್ಲಿಕೆ ಮಾಡಿದ್ದಾರೆ.



ಖುದ್ದಾಗಿ ಸ್ಪೀಕರ್ ಕಚೇರಿಗೆ ಬಂದು ರಾಜೀನಾಮೆ ಸಲ್ಲಿಕೆ ಮಾಡುವಂತೆ ಸುಪ್ರೀಂ ಕೋರ್ಟ್ ನೀಡಿದ್ದ ಸೂಚನೆಯಂತೆ ಅತೃಪ್ತ ಶಾಸಕರು ಮಂಬೈನಿಂದ ವಿಶೇಷ ವಿಮಾನದ ಮೂಲಕ ನಗರದ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ‌ ಮಿನಿ ಬಸ್ ಮೂಲಕ ವಿಧಾನಸೌಧಕ್ಕೆ ಬಂದು ರಾಜೀನಾಮೆ‌ ಪತ್ರ ಸಲ್ಲಿಕೆ ಮಾಡಿದ್ದರು, ಸುಪ್ರೀಂ ಕೋರ್ಟ್ ನೀಡಿದ್ದ ಗಡುವಿಗಿಂತ 10 ನಿಮಿಷ ತಡವಾಗಿ ಆಗಮಿಸಿದ್ದರು ವಿಮಾನ ನಿಲ್ದಾಣದಿಂದ ವಿಧಾನಸೌಧಕ್ಕೆ ಬರಲು ಶಾಸಕರಿಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಲಾಗಿತ್ತು ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.



ಸದನದಲ್ಲಿ ಎ.ಟಿ ರಾಮಸ್ವಾಮಿ ವಿಷಯ ಪ್ರಸ್ತಾಪಿಸಿ ಝೀರೋ ಟ್ರಾಫಿಕ್ ಸೌಲಭ್ಯ ಕಲ್ಪಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು ಈ ಸಂಬಂಧ ಗೃಹ ಸಚಿವರಿಂದ ವಿವರಣೆ ಪಡೆಸುಕೊಂಡಿದ್ದ ಸ್ಪೀಕರ್ ಈ ಸಂಬಂಧ ವರದಿ ನೀಡಿವಂತೆ ಡಿಜಿಪಿಗೆ ಸೂಚನೆ ನೀಡಿದ್ದು ಅದರಂತೆ ಸಂಜೆ ವಿಧಾನಸೌಧಕ್ಕೆ ಆಗಮಿಸಿದ ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ರಾಜು ಝೀರೋ ಟ್ರಾಫಿಕ್ ಸೌಲಭ್ಯ ಕಲ್ಪಿಸಿದ್ದ ಪ್ರಕರಣ ಸಂಬಂಧ ವಿಸ್ತಾರವಾದ ವರದಿ ಹಾಗು ಸಿಸಿಟಿವಿ ದೃಶ್ಯಾವಳಿಗಳನ್ನು ಸಲ್ಲಿಕೆ ಮಾಡಿದ್ದಾರೆ.


Conclusion:

For All Latest Updates

TAGGED:

zero traffic
ETV Bharat Logo

Copyright © 2024 Ushodaya Enterprises Pvt. Ltd., All Rights Reserved.