ETV Bharat / state

ಸಿಎಂ ಪರಿಹಾರ ನಿಧಿಗೆ 1 ಕೋಟಿ ಮಂಜೂರು: ರಮೇಶ್​ ಕತ್ತಿ - ಕೊರೊನಾ ವೈರಸ್​

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ದೇಶನಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು. ದೇಶದ ಭವಿಷ್ಯ ನಮ್ಮ ಕೈಲಿದೆ, ಅರ್ಥ ಮಾಡಕೊಳ್ಳಿ. ನಮಗಾಗಿ ಅಧಿಕಾರಿಗಳು ತಮ್ಮ ಮನೆ, ಮಕ್ಕಳನ್ನ ಬಿಟ್ಟು ಹಗಲು -ರಾತ್ರಿ ದುಡಿಯುತ್ತಿದ್ದಾರೆ ಎಂದು ರಮೇಶ್​ ಕತ್ತಿ, ಕೊರೊನಾ ಯೋಧರ ಗುಣಗಾನ ಮಾಡಿದರು.

ರಮೇಶ್​ ಕತ್ತಿ
ರಮೇಶ್​ ಕತ್ತಿ
author img

By

Published : Apr 19, 2020, 12:46 PM IST

Updated : Apr 19, 2020, 2:06 PM IST

ಚಿಕ್ಕೋಡಿ : ಕೊರೊನಾ ವೈರಸ್ ತಡೆಗಟ್ಟಲು ಹಲವಾರು ಸಂಘಟನೆಗಳು, ಸಂಘಸಂಸ್ಥೆಗಳು ಸಹಾಯ ಹಸ್ತ ಚಾಚುತ್ತಿವೆ. ಅದರಂತೆ ಬೆಳಗಾವಿ ಜಿಲ್ಲೆಯ ಮಧ್ಯವರ್ತಿ ಬ್ಯಾಂಕಿನ ಆಡಳಿತ ಮಂಡಳಿಯವರು ಸಿಎಂ ಕೊರೊನಾ ಪರಿಹಾರ ನಿಧಿಗೆ 1 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ಡಿಸಿಸಿ ಬ್ಯಾಂಕ್​ನ ಅಧ್ಯಕ್ಷ ರಮೇಶ್​ ಕತ್ತಿ ಹೇಳಿದರು.

ರಮೇಶ್​ ಕತ್ತಿ

ಹುಕ್ಕೇರಿ ತಾಲೂಕಿನ ಬಾಗೇವಾಡಿ ಕಚೇರಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ದೇಶನಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು. ದೇಶದ ಭವಿಷ್ಯ ನಮ್ಮ ಕೈಲಿದೆ, ಅರ್ಥ ಮಾಡಕೊಳ್ಳಿ. ನಮಗಾಗಿ ಅಧಿಕಾರಿಗಳು ತಮ್ಮ ಮನೆ, ಮಕ್ಕಳನ್ನ ಬಿಟ್ಟು ಹಗಲು -ರಾತ್ರಿ ದುಡಿಯುತ್ತಿದ್ದಾರೆ. ನಾವು ಅರ್ಥ ಮಾಡಿಕೊಳ್ಳದೆ ಇದ್ದರೆ ದೇಶವನ್ನು, ನಮ್ಮನ್ನ ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಧನ್ಯವಾದ ಸಲ್ಲಿಸುತ್ತೇನೆ. ಕೊರೊನಾ ವೈರಸ್ ಕೂಡಲೇ ಪತ್ತೆ ಹಚ್ಚಲು ಮುಂದಾಗಿದೆ. ಅದರಂತೆ ಲ್ಯಾಬ್​ನ್ನು ಬೆಳಗಾವಿ ಜಿಲ್ಲೆಗೆ ಮಂಜೂರು ಮಾಡಿದ್ದಾರೆ.‌ ಇನ್ನೇನು ನಾಲ್ಕಾರು ದಿನಗಳಲ್ಲಿ ಕೆಲಸ ಪ್ರಾರಂಭವಾಗುತ್ತದೆ ಈ ಆಸ್ಪತ್ರೆಗೆ ಏನಾದರೂ ಸಹಾಯ ಸಹಕಾರ ಬೇಕಾದರ ಮಧ್ಯವರ್ತಿ ಬ್ಯಾಂಕ್​ನಿಂದ ಸಹಾಯ ಮಾಡಲು‌ ಸಿದ್ಧರಿದ್ದೇವೆ ಎಂದು ಹೇಳಿದರು.

ಚಿಕ್ಕೋಡಿ : ಕೊರೊನಾ ವೈರಸ್ ತಡೆಗಟ್ಟಲು ಹಲವಾರು ಸಂಘಟನೆಗಳು, ಸಂಘಸಂಸ್ಥೆಗಳು ಸಹಾಯ ಹಸ್ತ ಚಾಚುತ್ತಿವೆ. ಅದರಂತೆ ಬೆಳಗಾವಿ ಜಿಲ್ಲೆಯ ಮಧ್ಯವರ್ತಿ ಬ್ಯಾಂಕಿನ ಆಡಳಿತ ಮಂಡಳಿಯವರು ಸಿಎಂ ಕೊರೊನಾ ಪರಿಹಾರ ನಿಧಿಗೆ 1 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ಡಿಸಿಸಿ ಬ್ಯಾಂಕ್​ನ ಅಧ್ಯಕ್ಷ ರಮೇಶ್​ ಕತ್ತಿ ಹೇಳಿದರು.

ರಮೇಶ್​ ಕತ್ತಿ

ಹುಕ್ಕೇರಿ ತಾಲೂಕಿನ ಬಾಗೇವಾಡಿ ಕಚೇರಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ದೇಶನಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು. ದೇಶದ ಭವಿಷ್ಯ ನಮ್ಮ ಕೈಲಿದೆ, ಅರ್ಥ ಮಾಡಕೊಳ್ಳಿ. ನಮಗಾಗಿ ಅಧಿಕಾರಿಗಳು ತಮ್ಮ ಮನೆ, ಮಕ್ಕಳನ್ನ ಬಿಟ್ಟು ಹಗಲು -ರಾತ್ರಿ ದುಡಿಯುತ್ತಿದ್ದಾರೆ. ನಾವು ಅರ್ಥ ಮಾಡಿಕೊಳ್ಳದೆ ಇದ್ದರೆ ದೇಶವನ್ನು, ನಮ್ಮನ್ನ ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಧನ್ಯವಾದ ಸಲ್ಲಿಸುತ್ತೇನೆ. ಕೊರೊನಾ ವೈರಸ್ ಕೂಡಲೇ ಪತ್ತೆ ಹಚ್ಚಲು ಮುಂದಾಗಿದೆ. ಅದರಂತೆ ಲ್ಯಾಬ್​ನ್ನು ಬೆಳಗಾವಿ ಜಿಲ್ಲೆಗೆ ಮಂಜೂರು ಮಾಡಿದ್ದಾರೆ.‌ ಇನ್ನೇನು ನಾಲ್ಕಾರು ದಿನಗಳಲ್ಲಿ ಕೆಲಸ ಪ್ರಾರಂಭವಾಗುತ್ತದೆ ಈ ಆಸ್ಪತ್ರೆಗೆ ಏನಾದರೂ ಸಹಾಯ ಸಹಕಾರ ಬೇಕಾದರ ಮಧ್ಯವರ್ತಿ ಬ್ಯಾಂಕ್​ನಿಂದ ಸಹಾಯ ಮಾಡಲು‌ ಸಿದ್ಧರಿದ್ದೇವೆ ಎಂದು ಹೇಳಿದರು.

Last Updated : Apr 19, 2020, 2:06 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.