ETV Bharat / state

ಗಾಳಿಪಟ ತಂದ ಆಪತ್ತು; ಪ್ರಾಣಾಪಾಯದಿಂದ ಪಾರಾದ ಬೈಕ್ ಸವಾರ

author img

By

Published : Oct 12, 2020, 8:04 PM IST

ಏಕಾಏಕಿ ಗಾಳಿಪಟವೊಂದು ಹಾರಿ ಬೈಕ್​ ಸವಾರನೋರ್ವನ ಕುತ್ತಿಗೆಗೆ ಸುತ್ತಿಕೊಂಡ ಘಟನೆ ಅಥಣಿಯಲ್ಲಿ ನಡೆದಿದೆ. ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಬೈಕ್​ ಸವಾರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

A bike rider who has escaped from danger incident
ಪ್ರಾಣಾಪಾಯದಿಂದ ಪಾರಾದ ಬೈಕ್ ಸವಾರ

ಅಥಣಿ: ಚಲಿಸುತ್ತಿದ್ದ ಬೈಕ್​ ಸವಾರನೋರ್ವನ ಕುತ್ತಿಗೆಗೆ ಗಾಳಿಪಟ ಸುತ್ತಿಕೊಂಡು ಅವಾಂತರ ಸೃಷ್ಟಿಸಿದ ಘಟನೆ ನಗರದಲ್ಲಿ ನಡೆಯಿತು. ಘಟನೆಯಲ್ಲಿ ಬೈಕ್​ ಸವಾರ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

A bike rider who has escaped from danger incident
ಪ್ರಾಣಾಪಾಯದಿಂದ ಪಾರಾದ ಬೈಕ್ ಸವಾರ

ಬುರಾನ್ ಮುಕ್ಬುಲ್ ಜಮಾದಾರ್ ಎಂಬುವವರು ಸಂಕೇಶ್ವರ-ವಿಜಯಪುರ ಮಾರ್ಗವಾಗಿ ಮನೆಗೆ ತೆರಳುತ್ತಿದ್ದರು. ಅವರು ಹೋಗುತ್ತಿದ್ದ ದಾರಿಯಲ್ಲಿಯೇ ಮಕ್ಕಳು ಗಾಳಿಪಟದೊಂದಿಗೆ ಆಟವಾಡುತ್ತಿದ್ದರು. ಈ ವೇಳೆ ಏಕಾಏಕಿ ಗಾಳಿಪಟವೊಂದು ಹಾರಿ ಅವರ ಕೊರಳಿಗೆ ಸುತ್ತಿಕೊಂಡಿದೆ. ಪರಿಣಾಮ ನಿಯಂತ್ರಣ ಕಳೆದುಕೊಂಡ ಬೈಕ್​ ಸವಾರ ಬುರಾನ್, ಸ್ಥಳದಲ್ಲೇ ಬಿದ್ದಿದ್ದಾರೆ. ಇನ್ನು ಗಾಳಿಪಟವು ಕತ್ತಿಗೆಗೆ ಸುತ್ತಿಕೊಂಡಿದ್ದರಿಂದ ಕತ್ತಿನ ಭಾಗದಲ್ಲಿ ಗಾಯವಾಗಿದೆ. ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಬುರಾನ್, ಪ್ರಾಥಮಿಕ ಚಿಕಿತ್ಸೆಗಾಗಿ ಅಥಣಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಭವಿಸುತ್ತಿದ್ದಂತೆ ಆಟವಾಡುತ್ತಿದ್ದ ಮಕ್ಕಳು ಓಡಿ ಹೋಗಿದ್ದಾರೆ.

A bike rider who has escaped from danger incident
ಪ್ರಾಣಾಪಾಯದಿಂದ ಪಾರಾದ ಬೈಕ್ ಸವಾರ

ಪ್ರಾಣಾಪಾಯದಿಂದ ಪಾರಾಗಿರುವ ಬುರಾನ್, ಮಕ್ಕಳು ರಸ್ತೆಯ ಸಮೀಪದಲ್ಲಿ ಈ ರೀತಿ ಗಾಳಿಪಟದ ಜೊತೆ ಆಟ ಆಡದಂತೆ ನೋಡಿಕೊಳ್ಳುವಂತೆ ಸ್ಥಳೀಯರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಗಾಳಿಪಟದ ಹಾವಳಿ ಹೆಚ್ಚಾಗಿದ್ದರಿಂದ ಗಾಳಿಪಟ ಹಾರಿಸುವವರ ಮೇಲೆ ನಿಗಾ ಇಡುವಂತೆ ಪಟ್ಟಣದ ಪೊಲೀಸ್​ ಠಾಣೆಗೆ ಭೇಟಿ ನೀಡಿ ಅಲ್ಲಿಯೂ ಮನವಿ ಮಾಡಿಕೊಂಡಿದ್ದಾರೆ.

ಪ್ರಾಣಾಪಾಯದಿಂದ ಪಾರಾದ ಬೈಕ್ ಸವಾರ

ಅಥಣಿ: ಚಲಿಸುತ್ತಿದ್ದ ಬೈಕ್​ ಸವಾರನೋರ್ವನ ಕುತ್ತಿಗೆಗೆ ಗಾಳಿಪಟ ಸುತ್ತಿಕೊಂಡು ಅವಾಂತರ ಸೃಷ್ಟಿಸಿದ ಘಟನೆ ನಗರದಲ್ಲಿ ನಡೆಯಿತು. ಘಟನೆಯಲ್ಲಿ ಬೈಕ್​ ಸವಾರ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

A bike rider who has escaped from danger incident
ಪ್ರಾಣಾಪಾಯದಿಂದ ಪಾರಾದ ಬೈಕ್ ಸವಾರ

ಬುರಾನ್ ಮುಕ್ಬುಲ್ ಜಮಾದಾರ್ ಎಂಬುವವರು ಸಂಕೇಶ್ವರ-ವಿಜಯಪುರ ಮಾರ್ಗವಾಗಿ ಮನೆಗೆ ತೆರಳುತ್ತಿದ್ದರು. ಅವರು ಹೋಗುತ್ತಿದ್ದ ದಾರಿಯಲ್ಲಿಯೇ ಮಕ್ಕಳು ಗಾಳಿಪಟದೊಂದಿಗೆ ಆಟವಾಡುತ್ತಿದ್ದರು. ಈ ವೇಳೆ ಏಕಾಏಕಿ ಗಾಳಿಪಟವೊಂದು ಹಾರಿ ಅವರ ಕೊರಳಿಗೆ ಸುತ್ತಿಕೊಂಡಿದೆ. ಪರಿಣಾಮ ನಿಯಂತ್ರಣ ಕಳೆದುಕೊಂಡ ಬೈಕ್​ ಸವಾರ ಬುರಾನ್, ಸ್ಥಳದಲ್ಲೇ ಬಿದ್ದಿದ್ದಾರೆ. ಇನ್ನು ಗಾಳಿಪಟವು ಕತ್ತಿಗೆಗೆ ಸುತ್ತಿಕೊಂಡಿದ್ದರಿಂದ ಕತ್ತಿನ ಭಾಗದಲ್ಲಿ ಗಾಯವಾಗಿದೆ. ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಬುರಾನ್, ಪ್ರಾಥಮಿಕ ಚಿಕಿತ್ಸೆಗಾಗಿ ಅಥಣಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಭವಿಸುತ್ತಿದ್ದಂತೆ ಆಟವಾಡುತ್ತಿದ್ದ ಮಕ್ಕಳು ಓಡಿ ಹೋಗಿದ್ದಾರೆ.

A bike rider who has escaped from danger incident
ಪ್ರಾಣಾಪಾಯದಿಂದ ಪಾರಾದ ಬೈಕ್ ಸವಾರ

ಪ್ರಾಣಾಪಾಯದಿಂದ ಪಾರಾಗಿರುವ ಬುರಾನ್, ಮಕ್ಕಳು ರಸ್ತೆಯ ಸಮೀಪದಲ್ಲಿ ಈ ರೀತಿ ಗಾಳಿಪಟದ ಜೊತೆ ಆಟ ಆಡದಂತೆ ನೋಡಿಕೊಳ್ಳುವಂತೆ ಸ್ಥಳೀಯರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಗಾಳಿಪಟದ ಹಾವಳಿ ಹೆಚ್ಚಾಗಿದ್ದರಿಂದ ಗಾಳಿಪಟ ಹಾರಿಸುವವರ ಮೇಲೆ ನಿಗಾ ಇಡುವಂತೆ ಪಟ್ಟಣದ ಪೊಲೀಸ್​ ಠಾಣೆಗೆ ಭೇಟಿ ನೀಡಿ ಅಲ್ಲಿಯೂ ಮನವಿ ಮಾಡಿಕೊಂಡಿದ್ದಾರೆ.

ಪ್ರಾಣಾಪಾಯದಿಂದ ಪಾರಾದ ಬೈಕ್ ಸವಾರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.