ETV Bharat / state

2 ವರ್ಷದ ಮಗುವಿನ ಮೇಲೆ ಹರಿದ ಬಸ್, ಮಗು ಸಾವು; ಗ್ರಾಮಸ್ಥರ ಆಕ್ರೋಶಕ್ಕೆ ಬಸ್ಸಿನ ಗಾಜು ಪುಡಿ ಪುಡಿ

author img

By

Published : Apr 8, 2023, 4:24 PM IST

Updated : Apr 8, 2023, 5:06 PM IST

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಸರ್ಕಾರಿ ಬಸ್ 2 ವರ್ಷದ ಬಾಲಕನ ಮೇಲೆ ಹರಿದು ಸಾವನ್ನಪ್ಪಿರುವ ಘಟನೆ ನಡೆದಿದೆ.

belagvi
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ

ಚಿಕ್ಕೋಡಿ(ಬೆಳಗಾವಿ): ಎರಡು ವರ್ಷದ ಮಗುವಿನ ಮೇಲೆ ಸರ್ಕಾರಿ ಬಸ್ ಒಂದು ಹರಿದು ಸ್ಥಳದಲ್ಲೇ ಮಗು ಮೃತಪಟ್ಟಿರುವ ಧಾರಣ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಪರಮಾನಂದವಾಡಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಮೃತ ಮಗುವನ್ನು ಗ್ರಾಮದ ಶ್ಲೋಕ ಅಶೋಕ ತುಳಸಿಗೇರಿ (2) ಎಂದು ಗುರುತಿಸಲಾಗಿದೆ.

ಪರಮಾನಂದವಾಡಿಯಿಂದ ರಾಯಬಾಗ ಪಟ್ಟಣಕ್ಕೆ ತೆರಳುತ್ತಿದ್ದ ಬಸ್​ ಇದಾಗಿದ್ದು, ಮಗು ರಸ್ತೆ ದಾಟುವಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿ ಸ್ಥಳೀಯರು ಸರ್ಕಾರಿ ಬಸ್ಸಿನ ಗಾಜುಗಳನ್ನು ಪುಡಿಪುಡಿ ಮಾಡಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಸ್ಥಳಕ್ಕೆ ಕುಡಚಿ ಪೊಲೀಸರು ಆಗಮಿಸಿ ಪ್ರತಿಭಟನಕಾರರನ್ನು ಸಮಾಧಾನಪಡಿಸಿದರು. ಅಪಘಾತ ಸಂಭವಿಸುತ್ತಿದ್ದಂತೆ ಚಾಲಕ ಅಲ್ಲಿಂದ ಪರಾರಿಯಾಗಿದ್ದು ಈ ಕುರಿತು ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಹುಬ್ಬಳ್ಳಿ) ರಸ್ತೆ ದಾಟುತ್ತಿದ್ದ ವ್ಯಕ್ತಿ ಮೇಲೆ ಹರಿದ ವಾಹನ: ಹುಬ್ಬಳ್ಳಿ ತಾಲ್ಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ನಿನ್ನೆ ರಸ್ತೆ ದಾಟುತ್ತಿದ್ದ ವ್ಯಕ್ತಿಯ ಮೇಲೆ ವಾಹನಗಳು ಹರಿದು ದೇಹ ಸಂಪೂರ್ಣವಾಗಿ ಛಿದ್ರವಾದ ಘಟನೆ ನಡೆದಿದೆ. ಶಿರಗುಪ್ಪಿಯ ನೆಹರು ಪ್ರೌಢಶಾಲೆಯ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಸುಮಾರು 40-45 ವರ್ಷದ ವ್ಯಕ್ತಿ ಮೇಲೆ ತಡರಾತ್ರಿ ವಾಹನಗಳು ಹರಿದಿದ್ದು, ಮೃತನ ಗುರುತು ಪತ್ತೆಯಾಗಿಲ್ಲ. ಘಟನೆ ಮಾಹಿತಿ ನಂತರ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರಿನಲ್ಲೂ ನಡೆದಿತ್ತು ಇಂತಹದೇ ಅಪಘಾತ: ಮಾರ್ಚ್​ 30 ರಂದು ಐರಿನ್​ ಡಿಸೋಜ ಎಂಬ ಮಹಿಳೆ ಮಧ್ಯಾಹ್ನ 12ರ ಸುಮಾರಿಗೆ ಆ್ಯಗ್ನೇಸ್ ಸರ್ಕಲ್ ನಿಂದ ಬೆಂದೂರು ವೆಲ್ ಸರ್ಕಲ್​ಗೆ ಬಂದ ಖಾಸಗಿ ಬಸ್​ನಲ್ಲಿ ಪ್ರಯಾಣಿಕರ ಜೊತೆಗೆ ಐರಿನ್ ಡಿಸೋಜ ಅವರು ಇಳಿದಿದ್ದಾರೆ. ನಂತರ ಬಸ್ ಮುಂಭಾಗದಿಂದ ರಸ್ತೆಯನ್ನು ದಾಟುತ್ತಿದ್ದ ವೇಳೆ ಬಸ್ ಚಾಲಕ ಏಕಾಏಕಿ ನಿರ್ಲಕ್ಷ್ಯದಿಂದ ಬಸ್​ ಅನ್ನು ಮುಂದಕ್ಕೆ ಚಲಾಯಿಸಿದ್ದಾನೆ. ಪರಿಣಾಮ ಖಾಸಗಿ ಬಸ್ ಐರಿನ್ ಡಿಸೋಜ ಅವರ ಮೇಲೆಯೇ ಹರಿದು ಹೋಗಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದರು.

ಯಶವಂಥಪುರದಲ್ಲಿ ಮಹಿಳೆಯ ತಲೆ ಮೇಲೆ ಹರಿದ ಬಸ್​: ಜನವರಿ 24 ರಂದು ದ್ವಿಚಕ್ರ ವಾಹನದಲ್ಲಿ ವಿನುತಾ ಎನ್ನುವ ಮಹಿಳೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ವಿನುತಾ ಕೆಳಕ್ಕೆ ಬಿದ್ದಿದ್ದರು. ಆಗ ವಿನುತಾ ತಲೆಯ ಮೇಲೆ ಬಸ್ ಹರಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದರು.

ಇದನ್ನೂ ಓದಿ: ಸಂಚಾರ ನಿಯಮ ಉಲ್ಲಂಘಿಸಿ ಅಪಘಾತ; ಪ್ರಶ್ನಿಸಿದವನಿಗೆ ಚಾಕು ತೋರಿಸಿ ಆವಾಜ್​

ಚಿಕ್ಕೋಡಿ(ಬೆಳಗಾವಿ): ಎರಡು ವರ್ಷದ ಮಗುವಿನ ಮೇಲೆ ಸರ್ಕಾರಿ ಬಸ್ ಒಂದು ಹರಿದು ಸ್ಥಳದಲ್ಲೇ ಮಗು ಮೃತಪಟ್ಟಿರುವ ಧಾರಣ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಪರಮಾನಂದವಾಡಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಮೃತ ಮಗುವನ್ನು ಗ್ರಾಮದ ಶ್ಲೋಕ ಅಶೋಕ ತುಳಸಿಗೇರಿ (2) ಎಂದು ಗುರುತಿಸಲಾಗಿದೆ.

ಪರಮಾನಂದವಾಡಿಯಿಂದ ರಾಯಬಾಗ ಪಟ್ಟಣಕ್ಕೆ ತೆರಳುತ್ತಿದ್ದ ಬಸ್​ ಇದಾಗಿದ್ದು, ಮಗು ರಸ್ತೆ ದಾಟುವಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿ ಸ್ಥಳೀಯರು ಸರ್ಕಾರಿ ಬಸ್ಸಿನ ಗಾಜುಗಳನ್ನು ಪುಡಿಪುಡಿ ಮಾಡಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಸ್ಥಳಕ್ಕೆ ಕುಡಚಿ ಪೊಲೀಸರು ಆಗಮಿಸಿ ಪ್ರತಿಭಟನಕಾರರನ್ನು ಸಮಾಧಾನಪಡಿಸಿದರು. ಅಪಘಾತ ಸಂಭವಿಸುತ್ತಿದ್ದಂತೆ ಚಾಲಕ ಅಲ್ಲಿಂದ ಪರಾರಿಯಾಗಿದ್ದು ಈ ಕುರಿತು ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಹುಬ್ಬಳ್ಳಿ) ರಸ್ತೆ ದಾಟುತ್ತಿದ್ದ ವ್ಯಕ್ತಿ ಮೇಲೆ ಹರಿದ ವಾಹನ: ಹುಬ್ಬಳ್ಳಿ ತಾಲ್ಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ನಿನ್ನೆ ರಸ್ತೆ ದಾಟುತ್ತಿದ್ದ ವ್ಯಕ್ತಿಯ ಮೇಲೆ ವಾಹನಗಳು ಹರಿದು ದೇಹ ಸಂಪೂರ್ಣವಾಗಿ ಛಿದ್ರವಾದ ಘಟನೆ ನಡೆದಿದೆ. ಶಿರಗುಪ್ಪಿಯ ನೆಹರು ಪ್ರೌಢಶಾಲೆಯ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಸುಮಾರು 40-45 ವರ್ಷದ ವ್ಯಕ್ತಿ ಮೇಲೆ ತಡರಾತ್ರಿ ವಾಹನಗಳು ಹರಿದಿದ್ದು, ಮೃತನ ಗುರುತು ಪತ್ತೆಯಾಗಿಲ್ಲ. ಘಟನೆ ಮಾಹಿತಿ ನಂತರ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರಿನಲ್ಲೂ ನಡೆದಿತ್ತು ಇಂತಹದೇ ಅಪಘಾತ: ಮಾರ್ಚ್​ 30 ರಂದು ಐರಿನ್​ ಡಿಸೋಜ ಎಂಬ ಮಹಿಳೆ ಮಧ್ಯಾಹ್ನ 12ರ ಸುಮಾರಿಗೆ ಆ್ಯಗ್ನೇಸ್ ಸರ್ಕಲ್ ನಿಂದ ಬೆಂದೂರು ವೆಲ್ ಸರ್ಕಲ್​ಗೆ ಬಂದ ಖಾಸಗಿ ಬಸ್​ನಲ್ಲಿ ಪ್ರಯಾಣಿಕರ ಜೊತೆಗೆ ಐರಿನ್ ಡಿಸೋಜ ಅವರು ಇಳಿದಿದ್ದಾರೆ. ನಂತರ ಬಸ್ ಮುಂಭಾಗದಿಂದ ರಸ್ತೆಯನ್ನು ದಾಟುತ್ತಿದ್ದ ವೇಳೆ ಬಸ್ ಚಾಲಕ ಏಕಾಏಕಿ ನಿರ್ಲಕ್ಷ್ಯದಿಂದ ಬಸ್​ ಅನ್ನು ಮುಂದಕ್ಕೆ ಚಲಾಯಿಸಿದ್ದಾನೆ. ಪರಿಣಾಮ ಖಾಸಗಿ ಬಸ್ ಐರಿನ್ ಡಿಸೋಜ ಅವರ ಮೇಲೆಯೇ ಹರಿದು ಹೋಗಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದರು.

ಯಶವಂಥಪುರದಲ್ಲಿ ಮಹಿಳೆಯ ತಲೆ ಮೇಲೆ ಹರಿದ ಬಸ್​: ಜನವರಿ 24 ರಂದು ದ್ವಿಚಕ್ರ ವಾಹನದಲ್ಲಿ ವಿನುತಾ ಎನ್ನುವ ಮಹಿಳೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ವಿನುತಾ ಕೆಳಕ್ಕೆ ಬಿದ್ದಿದ್ದರು. ಆಗ ವಿನುತಾ ತಲೆಯ ಮೇಲೆ ಬಸ್ ಹರಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದರು.

ಇದನ್ನೂ ಓದಿ: ಸಂಚಾರ ನಿಯಮ ಉಲ್ಲಂಘಿಸಿ ಅಪಘಾತ; ಪ್ರಶ್ನಿಸಿದವನಿಗೆ ಚಾಕು ತೋರಿಸಿ ಆವಾಜ್​

Last Updated : Apr 8, 2023, 5:06 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.