ETV Bharat / state

ಕೆಪಿಟಿಸಿಎಲ್ ಅಕ್ರಮ ನೇಮಕಾತಿ ಪ್ರಕರಣ: ಮತ್ತೆ ಇಬ್ಬರ ಬಂಧನ.. ಆರೋಪಿಗಳ ಸಂಖ್ಯೆ 22ಕ್ಕೆ ಏರಿಕೆ

author img

By

Published : Oct 19, 2022, 6:39 AM IST

ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ, ವಿಚಾರಣೆ ಮುಂದುವರೆಸಿದ್ದಾರೆ.

ಕೆಪಿಟಿಸಿಎಲ್
kptcl

ಬೆಳಗಾವಿ: ಕೆಪಿಟಿಸಿಎಲ್ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್​ ತಾಲೂಕಿನ ಲೋಳಸೂರ ಗ್ರಾಮದ ಯಲ್ಲಪ್ಪ‌ ಮಹದೇವಪ್ಪ ರಕ್ಷಿ (26), ಚಿಕ್ಕೋಡಿ ತಾಲೂಕಿನ ಜಾಗನೂರ ಗ್ರಾಮದ ನಾಗಪ್ಪ ದೊಡ್ಡಮನಿ (27) ಬಂಧಿತರು.

ಇದನ್ನೂ ಓದಿ: ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್ ನೇಮಕಾತಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಿಸಿಟಿವಿಯಿಂದ ಕೃತ್ಯ ಬಯಲು

ಈ ಇಬ್ಬರು ಆರೋಪಿಗಳು ಕೆಪಿಟಿಸಿಎಲ್ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪ ಕೇಳಿಬಂದಿದ್ದು, ಮಲ್ಲಪ್ಪ ರಕ್ಷಿ ಎಲೆಕ್ಟ್ರಾನಿಕ್ ಡಿವೈಸ್​ಗಳನ್ನು ತೆಗೆದುಕೊಂಡು ಹೋಗಿ ಪರೀಕ್ಷಾ ಅಭ್ಯರ್ಥಿಗಳಿಗೆ ಕೊಟ್ಟಿದ್ದಲ್ಲದೇ, ಉತ್ತರ ಹೇಳಿದ ಆರೋಪವಿದೆ. ಆತನ ಬಳಿಯಿದ್ದ ಒಂದು ಮೊಬೈಲ್, ಕಾರು ಜಪ್ತಿ ಮಾಡಿಕೊಳ್ಳಲಾಗಿದೆ. ಇನ್ನು ನಾಗೇಶ ದೊಡ್ಡಮನಿ ಎಲೆಕ್ಟ್ರಾನಿಕ್ ಡಿವೈಸ್​ಗಳನ್ನು ತೆಗೆದುಕೊಂಡು ಹೋಗಿ ಪರೀಕ್ಷೆ ಬರೆದ ಆರೋಪವಿದೆ.

ಇದನ್ನೂ ಓದಿ: ಕೆಪಿಟಿಸಿಎಲ್ ನೇಮಕಾತಿ ಅಕ್ರಮ: 20 ಆರೋಪಿಗಳಿಗೆ ಷರತ್ತುಬದ್ದ ಜಾಮೀನು ಮಂಜೂರು

ಜಾಮೀನು ಸಿಕ್ಕು ಹೊರಬರುತ್ತಿದ್ದಂತೆ ಮತ್ತೊಂದು ಕೇಸ್​ನಲ್ಲಿ ಅರೆಸ್ಟ್: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಅಕ್ರಮ ಪ್ರಕರಣದ ಕಿಂಗ್‌ಪಿನ್ ಸಂಜೀವ ಲಕ್ಷ್ಮಣ ಭಂಡಾರಿ ಸೇರಿದಂತೆ 20 ಆರೋಪಿಗಳಿಗೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಜೆಎಂಎಫ್‌ಸಿ ಎರಡನೇ ಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿತ್ತು. ಈ ನಡುವೆ ಸಂಜೀವ ಭಂಡಾರಿ ಜಾಮೀನು ಪಡೆದು ಕೋರ್ಟ್‌ನಿಂದ ಹೊರಬರುತ್ತಿದ್ದಂತೆಯೇ ಆತನನ್ನು ಇನ್ನೊಂದು ಪ್ರಕರಣದಲ್ಲಿ ಬಂಧಿಸಲಾಗಿದೆ.

ಇದನ್ನೂ ಓದಿ: ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ : ಮತ್ತೆ ಮೂವರು ಆರೋಪಿಗಳ ಬಂಧನ

ಕೆಪಿಟಿಸಿಎಲ್ ಅಕ್ರಮದ ಪ್ರಮುಖ ಆರೋಪಿಯಾಗಿರುವ ಬೆಳಗಾವಿ ಮೂಲದ ಸಂಜೀವ್ ಲಕ್ಷ್ಮಣ ಭಂಡಾರಿ ಜಾಮೀನು ಸಿಕ್ಕು ಹೊರಬರುತ್ತಿದ್ದಂತೆ ಪೊಲೀಸ್ ಕಾನ್ಸ್​ಟೇಬಲ್ ನೇಮಕಾತಿ ಅಕ್ರಮದಲ್ಲಿ ಮತ್ತೆ ಅರೆಸ್ಟ್ ಆಗಿದ್ದಾನೆ. ಬೆಳಗಾವಿಯ ಹಿಂಡಲಗಾ ಜೈಲು ಮುಂದೆಯೇ ಸಿಐಡಿ ಅಧಿಕಾರಿಗಳು ಆತನಿಗೆ ಬಲೆ ಹಾಕಿದ್ದಾರೆ. ಈತನ ಮೇಲೆ 2021ರಲ್ಲಿ ನಡೆದಿದ್ದ ಪೊಲೀಸ್ ಕಾನ್ಸ್​ಟೇಬಲ್​ ನೇಮಕಾತಿಯಲ್ಲೂ ಅಕ್ರಮ ಎಸಗಿರುವ ಆರೋಪವಿದೆ. ಇದೀಗ ಸಂಜೀವ ಭಂಡಾರಿಯನ್ನು ಬೆಳಗಾವಿಯ ಐದನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಲಾಗಿದೆ‌.

ಬೆಳಗಾವಿ: ಕೆಪಿಟಿಸಿಎಲ್ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್​ ತಾಲೂಕಿನ ಲೋಳಸೂರ ಗ್ರಾಮದ ಯಲ್ಲಪ್ಪ‌ ಮಹದೇವಪ್ಪ ರಕ್ಷಿ (26), ಚಿಕ್ಕೋಡಿ ತಾಲೂಕಿನ ಜಾಗನೂರ ಗ್ರಾಮದ ನಾಗಪ್ಪ ದೊಡ್ಡಮನಿ (27) ಬಂಧಿತರು.

ಇದನ್ನೂ ಓದಿ: ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್ ನೇಮಕಾತಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಿಸಿಟಿವಿಯಿಂದ ಕೃತ್ಯ ಬಯಲು

ಈ ಇಬ್ಬರು ಆರೋಪಿಗಳು ಕೆಪಿಟಿಸಿಎಲ್ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪ ಕೇಳಿಬಂದಿದ್ದು, ಮಲ್ಲಪ್ಪ ರಕ್ಷಿ ಎಲೆಕ್ಟ್ರಾನಿಕ್ ಡಿವೈಸ್​ಗಳನ್ನು ತೆಗೆದುಕೊಂಡು ಹೋಗಿ ಪರೀಕ್ಷಾ ಅಭ್ಯರ್ಥಿಗಳಿಗೆ ಕೊಟ್ಟಿದ್ದಲ್ಲದೇ, ಉತ್ತರ ಹೇಳಿದ ಆರೋಪವಿದೆ. ಆತನ ಬಳಿಯಿದ್ದ ಒಂದು ಮೊಬೈಲ್, ಕಾರು ಜಪ್ತಿ ಮಾಡಿಕೊಳ್ಳಲಾಗಿದೆ. ಇನ್ನು ನಾಗೇಶ ದೊಡ್ಡಮನಿ ಎಲೆಕ್ಟ್ರಾನಿಕ್ ಡಿವೈಸ್​ಗಳನ್ನು ತೆಗೆದುಕೊಂಡು ಹೋಗಿ ಪರೀಕ್ಷೆ ಬರೆದ ಆರೋಪವಿದೆ.

ಇದನ್ನೂ ಓದಿ: ಕೆಪಿಟಿಸಿಎಲ್ ನೇಮಕಾತಿ ಅಕ್ರಮ: 20 ಆರೋಪಿಗಳಿಗೆ ಷರತ್ತುಬದ್ದ ಜಾಮೀನು ಮಂಜೂರು

ಜಾಮೀನು ಸಿಕ್ಕು ಹೊರಬರುತ್ತಿದ್ದಂತೆ ಮತ್ತೊಂದು ಕೇಸ್​ನಲ್ಲಿ ಅರೆಸ್ಟ್: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಅಕ್ರಮ ಪ್ರಕರಣದ ಕಿಂಗ್‌ಪಿನ್ ಸಂಜೀವ ಲಕ್ಷ್ಮಣ ಭಂಡಾರಿ ಸೇರಿದಂತೆ 20 ಆರೋಪಿಗಳಿಗೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಜೆಎಂಎಫ್‌ಸಿ ಎರಡನೇ ಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿತ್ತು. ಈ ನಡುವೆ ಸಂಜೀವ ಭಂಡಾರಿ ಜಾಮೀನು ಪಡೆದು ಕೋರ್ಟ್‌ನಿಂದ ಹೊರಬರುತ್ತಿದ್ದಂತೆಯೇ ಆತನನ್ನು ಇನ್ನೊಂದು ಪ್ರಕರಣದಲ್ಲಿ ಬಂಧಿಸಲಾಗಿದೆ.

ಇದನ್ನೂ ಓದಿ: ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ : ಮತ್ತೆ ಮೂವರು ಆರೋಪಿಗಳ ಬಂಧನ

ಕೆಪಿಟಿಸಿಎಲ್ ಅಕ್ರಮದ ಪ್ರಮುಖ ಆರೋಪಿಯಾಗಿರುವ ಬೆಳಗಾವಿ ಮೂಲದ ಸಂಜೀವ್ ಲಕ್ಷ್ಮಣ ಭಂಡಾರಿ ಜಾಮೀನು ಸಿಕ್ಕು ಹೊರಬರುತ್ತಿದ್ದಂತೆ ಪೊಲೀಸ್ ಕಾನ್ಸ್​ಟೇಬಲ್ ನೇಮಕಾತಿ ಅಕ್ರಮದಲ್ಲಿ ಮತ್ತೆ ಅರೆಸ್ಟ್ ಆಗಿದ್ದಾನೆ. ಬೆಳಗಾವಿಯ ಹಿಂಡಲಗಾ ಜೈಲು ಮುಂದೆಯೇ ಸಿಐಡಿ ಅಧಿಕಾರಿಗಳು ಆತನಿಗೆ ಬಲೆ ಹಾಕಿದ್ದಾರೆ. ಈತನ ಮೇಲೆ 2021ರಲ್ಲಿ ನಡೆದಿದ್ದ ಪೊಲೀಸ್ ಕಾನ್ಸ್​ಟೇಬಲ್​ ನೇಮಕಾತಿಯಲ್ಲೂ ಅಕ್ರಮ ಎಸಗಿರುವ ಆರೋಪವಿದೆ. ಇದೀಗ ಸಂಜೀವ ಭಂಡಾರಿಯನ್ನು ಬೆಳಗಾವಿಯ ಐದನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಲಾಗಿದೆ‌.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.