ಚಿಕ್ಕೋಡಿ: ಅಖಿಲ ಕರ್ನಾಟಕ ವೀರಶೈವ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ತಾಲೂಕಿನ ಚಂದೂರ ಟೇಕ ಗ್ರಾಮದ ಪ್ರವಾಹ ಸಂತ್ರಸ್ತ ಕುಟುಂಬಗಳಿಗೆ ಗೃಹೋಪಯೋಗಿ ವಸ್ತುಗಳನ್ನು ನೀಡಲಾಯಿತು.
ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷೆ ರತ್ನಪ್ರಭ ಬೆಲ್ಲದ ಅವರು, ಕೃಷ್ಣಾ ನದಿ ಪ್ರವಾಹದ ಹಿನ್ನೆಲೆಯಲ್ಲಿ ನದಿ ತೀರ ಭಾಗದ ಜನರು ಮನೆಗಳನ್ನು ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾವು ಅವರಿಗೆ ಜೀವನಾವಶ್ಯಕ ವಸ್ತುಗಳನ್ನು ನೀಡುತ್ತಿದ್ದೇವೆ. ಅಷ್ಟೇ ಅಲ್ಲದೆ, ಅವರ ಪರಿಸ್ಥಿತಿಯು ಶೀಘ್ರವೇ ಸುಧಾರಣೆಯಾಗಲೆಂದು ಹಾರೈಸಿದರು.